ರಾಜ್ಯ ರೈತರ ಪ್ರತಿಭಟನೆಯನ್ನೇಕೆ ಭೈರಪ್ಪ ನೋಡುತ್ತಿಲ್ಲ

ಖ್ಯಾತ ಸಾಹಿತಿ ದೇವನೂರು ಮಹಾದೇವ ಅವರು ಮಂಗಳವಾರ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. 

Newly elected Gram Panchayat members were felicitated in Mysuru on Tuesday. Writer Devanuru Mahadev and farmer leader Badagalapura Nagendra look on

ಮೈಸೂರು: ಖ್ಯಾತ ಸಾಹಿತಿ ದೇವನೂರು ಮಹಾದೇವ ಅವರು ಮಂಗಳವಾರ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. 

ಮೈಸೂರು ಹುಣಸಲೂರು ರಸ್ತೆಯಲ್ಲಿರುವ ಕೃಷಿ ಅಧ್ಯಯನ ಸಂಸ್ಥೆ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನಯು ಮಂಗಳವಾರ ಆಯೋಜಿಸಿದ್ದ ಸ್ವರಾಜ್ ಇಂಡಿಯಾ, ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ದಲಿತ ಸಂಘರ್ಷ ಸಮಿತಿ ಬೆಂಬಲಿತ ಗ್ರಾಮ ಪಂಚಾಯಿತಿ ಅಭ್ಯರ್ಥಿಗಳಿಗೆ ಅಭಿನಂದನೆ ಹಾಗೂ ಗ್ರಾಮ ಅಭಿವೃದ್ಧಿಯಲ್ಲಿ ಸದಸ್ಯರ ಪಾತ್ರ ಕುರಿತು ವಿಚಾರ ಮಂಡನೆ ಕಾರ್ಯಕ್ರಮದಲ್ಲಿ ಮಾತನಾಡಿದರು. 

ಈ ವೇಳೆ ಭೈರಪ್ಪ ವಿರುದ್ಧ ಕಿಡಿಕಾರಿದ ಅವರು, ದೆಹಲಿ ರೈತರ ಹೋರಾಟದಲ್ಲಿ ಪಂಜಾಬ್ ನವರು ಮಾತ್ರ ಭಾಗಿಯಾಗುತ್ತಿರುವುದಾಗಿ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಹೇಳಿದ್ದಾರೆ. ಪ್ರತಿಭಟನೆಯಲ್ಲಿ ಪಂಜಾಬ್ ಮಾತ್ರವಲ್ಲದೆ, ಉತ್ತರಾಖಂಡ, ಹರಿಯಾಣ ಸೇರಿದಂತೆ ಹಲವು ರಾಜ್ಯದ ಜನರು ಭಾಗಿಯಾಗಿದ್ದಾರೆ. ಎಲ್ಲಾ ರಾಜ್ಯಗಳಲ್ಲೂ ಪ್ರತಿಭಟನೆಗಳು ನಡೆಯುತ್ತಲೇ ಇವೆ. ಈ ಬಗ್ಗೆ ಅವರಿಗೇಕೆ ತಿಳಿದಿಲ್ಲ? ಅವರಿಗೆ ಕಿವಿ ಕೇಳುತ್ತಿಲ್ಲವೇ? ಕಣ್ಣು ಕಾಣುತ್ತಿಲ್ಲವೇ? ಸಂವೇದನೆ ಇಲ್ಲವೇ? ಇದನ್ನೆಲಲಾ ಮಾಧ್ಯಮದವರು ಅವರಿಗೆ ತಿಳಿಸಬೇಕು ಎಂದು ಹೇಳಿದರು. 

ರಾಜ್ಯದಲ್ಲಿ ರೈತರ ಪ್ರತಿಭಟನೆ ಪರಿಣಾಮಕಾರಿಯಾಗದೇ ಇರಬಹುದು. ಆದರೆ, ರೈತರೊಂದಿಗೆ ಕಾರ್ಮಿಕರು, ದಲಿತರು ಹಾಗೂ ಮಹಿಳೆಯರು ಕೈಜೋಡಿಸಿ ಪ್ರತಿಭಟನೆ ನಡೆಸುತ್ತಿರುವುದು ಹೆಚ್ಚಿನ ಮೌಲ್ಯವನ್ನು ನೀಡಿದೆ. ಈ ಪ್ರತಿಭಟನೆಯ ಸುಳ್ಳು, ದ್ವೇಶ ಹಾಗೂ ಅಸಹಿಷ್ಣುತೆಯ ವಿರುದ್ಧವಾಗಿದೆ ಎಂದು ತಿಳಿಸಿದ್ದಾರೆ. 

ಆಪರೇಷನ್ ಕಮಲದ ಮೂಲಕ ಬಿಜೆಪಿಯವರು ನೈತಿಕ ರಾಜಕಾರಣವನ್ನು ಅನೈತಿಕ ಮಾಡಿದ್ದಾರೆ. ರಾಜಕಾರಣದ ನೈತಿಕತೆಗೆ ವಿಷ ಹಾಕಿದ್ದಾರೆಂದ ಕಿಡಿಕಾರಿದ್ದಾರೆ. 

ಸ್ವರಾಜ್ ಇಂಡಿಯಾ, ದಲಿತ ಸಂಘರ್ಷ ಸಮಿತಿ, ರೈತ ಸಂಘದ ಬೆಂಬಲ ಹೊಂದಿದ್ದ ನೂರಕ್ಕೂ ಹೆಚ್ಚು ಅಭ್ಯರ್ಥಿಗಳು ಜಿಲ್ಲೆಯ ಗ್ರಾಮ ಪಂಚಾಯಿತಿ ಚುನಾವಣಯಲ್ಲಿ ಗೆದ್ದಿರುವುದು ನಮಗೇ ಅನಿರೀಕ್ಷಿತ. ಇದು ಬದಲಾವಣೆಯ ಕಡಗೆ ನಮ್ಮ ಮೊದಲ ಹೆಜ್ಜೆಯಾಗಿದೆ. ಇದು ಸ್ವರಾಜ್ ಇಂಡಿಯಾ ಪಕ್ಷದ ಸಮತಾವಾದ, ಮೌಲ್ಯಗಳು, ಸಮಾಜಮುಖಿ ಆಶಗಳಿಗೆ ಸಂದ ಜಯ ಎಂದಿದ್ದಾರೆ. 

ಈಗ ನೀವು ಸಾಧಿಸಿರುವ ಗೆಲುವು ಬಹಿರಂಗದ ಗೆಲುವು. ಇದರಿಂದ ನೀವು ಜವಾಬ್ದಾರಿಯ ನೊಗ ಹೊತ್ತಂತಾಗಿದೆ. ಮುಂದೆ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸುವ ಯೋಚನೆ ಮಾಡಿ. ಇನ್ನು ಬೇರೆ ಪಕ್ಷಗಳು ನೀಡುವ ಆಮಿಷದ ಎದುರು  ನೀವು ಗೆಲ್ಲಬೇಕ. ಅದು ನಿಜವಾದ ಗೆಲುವು. ನಿಷ್ಟೆಯಿಂದ ಒಳ್ಳೆಯ ಕೆಲಸ ಮಾಡಬೇಕು. ಗೆದ್ದವರು ಸೋತವರೊಂದಿಗೆ ವಿಶ್ವಾಸದಿಂದ ಇರಬೇಕೆಂದು ಕಿವಿಮಾತು ಹೇಳಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *