old is gold-ಅಗ್ನಿ ಶ್ರೀಧರ್ ಮತ್ತು ಸುಮನಾ ಕಿತ್ತೂರು ಅವರ ‘ಕಳ್ಳರ ಸಂತೆ’

ಅಗ್ನಿ ಶ್ರೀಧರ್ ಮತ್ತು ಸುಮನಾ ಕಿತ್ತೂರು ಅವರ ‘ಕಳ್ಳರ ಸಂತೆ’ ಪ್ರಸ್ತುತ ನಮ್ಮ ಸಮಾಜದ ಲಂಚ ಸಾಮ್ರಾಜ್ಯಕ್ಕೆ ಹಿಡಿದ ಕೈಕನ್ನಡಿ..!’ಒಬ್ಬ ದುಡ್ಡಿಗೆ ನಂದಿ ಬೆಟ್ಟವನ್ನೇ ಮೂರು ತಿಂಗಳು ಬಿಟ್ಟುಕೊಡ್ತಾನೆ. ಇನ್ನೊಬ್ಬ ‘ಲಂಚಾವತಾರ’ದ ತಾಳಕ್ಕೆ ಕುಣಿದು, ವಿಧಾನ ಸೌಧವನ್ನೇ ಕೊಡ್ತೀನಿ ಅಂತಾನೆ. ಮತ್ತೊಬ್ಬ ಎರಡು ಲಕ್ಷ ರೂಪಾಯಿ ಕೊಟ್ರೆ ಮಾತ್ರ ಲೆಕ್ಚರರ್ ಪೋಸ್ಟ್ ಅಂತಾನೆ…’ಅಲ್ಲಿಗೆ ಉದಯವಾಯಿತು ನಮ್ಮ ಚೆಲುವ ಕನ್ನಡ ನಾಡು…!’ ಇಲ್ಲಿ ಇದೆಲ್ಲವೂ ಹೂರಣವಿದೆ.

ನಮ್ಮ ಚೆಲುವ ಕನ್ನಡ ನಾಡು ಬ್ರಷ್ಟರ ಕೈಯಲ್ಲಿ ಸಿಲುಕಿ ಒದ್ದಾಡುತ್ತಿದೆ. ಎಲ್ಲವೂ, ಎಲ್ಲದಕ್ಕೂ ಲಂಚ ತಾಂಡವ ನೃತ್ಯ..!ಪೊಲೀಸರ ದಬ್ಬಾಳಿಕೆ, ರಾಜಕಾರಣಿಗಳ ದೊಂಬರಾಟ, ಭ್ರಷ್ಟ ಅಧಿಕಾರಿಗಳ ಬದುಕು, ಕಷ್ಟ ಪಡುವವರ ಬಯಲಾಟ..! ಹೀಗೆ ಇಡೀ ಕಥೆ ನಮ್ಮನ್ನು ವಿಧ – ವಿಧಾನ – ರೀತಿಯಲ್ಲಿ ಮನರಂಜನೆಗಷ್ಟೇ ಅಲ್ಲ. ನಮ್ಮ ಸಾಮಾಜಿಕ ವಾಸ್ತವ ಬದುಕಿನ ಹೂರಣವೂ ಇದೆ. ನಮ್ಮ ಸಮಾಜದ ಮಧ್ಯೆ ಎಲ್ಲೋ ಒಂದು ಕಡೆ ವಿಡಂಬನೆಯಲ್ಲಿ ವಿಲೀನವಾದ ಅನುಭವ. ಇಡೀ ಪ್ರಪಂಚವನ್ನೇ ಸುತ್ತಿ ಬಂದ ಧಾವಂತ. ಮೋಸ, ವಂಚನೆಗಳು ಅನಾಯಾಸವಾಗಿ ಅನಾವರಣಗೊಳ್ಳುತ್ತವೆ. ಮತ್ತೊಮ್ಮೆ ಮಾಸ್ಟರ್ ಹಿರಣ್ಣಯ್ಯ ನೆನಪಾಗುತ್ತಾರೆ. ಚಿತ್ರಕಥೆ ಇಲ್ಲಿಂದ ಆರಂಭಗೊಂಡು, ಎಲ್ಲ ತತ್ತ್ವದೆಲ್ಲೆ ಮೀರಿ ಮತ್ತೆಲ್ಲೋ ಅಂತ್ಯವಾಗುತ್ತದೆ. ಬಡ, ಜಾಣ ಹುಡುಗನೊಬ್ಬನ ಕರುಣಾಜನಕ ಕಥೆಗೆ ಮುನ್ನುಡಿವೂ ಆಗುತ್ತದೆ. ‘ಲಂಚ ಸಾಮ್ರಾಜ್ಯ’ಕ್ಕೆ ಕನ್ನಡಿ ಹಿಡಿಯುತ್ತದೆ..!

ಚಿತ್ರದ ಪ್ರಧಾನ ಬಿಂದು ಯಶ್. ಕಥೆ ಎಂಬ ಗಾಳಿ ಪಟದ ಸೂತ್ರಧಾರಿಯೇ ಆತ. ‘ಅವನಿಂದಲೇ… ಅವನಿಂದಲೇ… ಕಥೆಯೊಂದು ಶುರುವಾಗಿದೆ…’ ಅವನ ಪಾತ್ರ ಎಳೆ ಎಳೆಯಾಗಿ ಬಿಚ್ಚಿಕೊಳ್ಳುತ್ತಾ ಹೋದಂತೆ ಪ್ರೇಕ್ಷಕ ಆ ಪಾತ್ರದ ಪರಕಾಯ ಪ್ರವೇಶ ಮಾಡುತ್ತಾನೆ. ಇದು ಖಂಡಿತ ಉತ್ಪ್ರೇಕ್ಷೆಯಂತಲೂ ಅಲ್ಲ..! ಸಮಾಜದ ಆಗುಹೋಗುಗಳ ಬಗ್ಗೆ ಅಲ್ಲಲ್ಲಿ ಚರ್ಚೆ, ಮಧ್ಯದಲ್ಲಿ ಒಂದಷ್ಟು ಪ್ರೇಮ ಪರ್ವ. ಹಂತ ಹಂತವಾಗಿ ಆಂಗಲ್ ಬದಲಿಸುತ್ತಾ ಹೋಗುವ ಚಿತ್ರಕಥೆ. ಪಂಚ್ ಕೊಡುವ ಡೈಲಾಗ್ ಗಳು. ಅಲ್ಲೇ ಒಂದಷ್ಟು ವ್ಯಂಗ್ಯ..! ಹೀಗೆಯೇ ಇಡೀ ಸಿನಿಮಾ ಒಂದು ದೂರ ತೀರ ಯಾನ. ಒಬ್ಬ ಮಹಿಳೆಯಾಗಿ ಇಂಥದ್ದೊಂದು ಕಥೆಯನ್ನು ನಿಭಾಯಿಸಿ, ಯಶ ಗಳಿಸುವುದು ಸುಲಭದ ಮಾತಲ್ಲ. ದ್ವಿತಿಯಾರ್ಧದಲ್ಲಿ ಬರುವ ಕ್ಯಾಬಿನೆಟ್ ಮೀಟಿಂಗ್‌ನ ದೃಶ್ಯಗಳಂತೂ ಚಿಂದಿ ಉಡಾಯಿಸು ತ್ತವೆ. ದುಂಡು ಮೇಜಿನ ಸಭೆಯಲ್ಲಿ ಹತ್ತಾರು ರಾಜಕಾರಣಿಗಳು ಕುಳಿತು ವಟವಟ ಎನ್ನುವ ದೃಶ್ಯವೊಂದೇ ಸಾಕು, ಈ ರಾಜಕಾರಣಿಗಳ ಬಯಲಾಟ ಅರಿಯಲು. ಸುಮನಾ ಕಿತ್ತೂರು ಸಾಮರ್ಥ್ಯವನ್ನು ಬಯಲಿಗೆಳೆಯಲು… ಯಶ್ ಅಭಿನಯ ಕೊನೆ ಕೊನೆಗೆ ಅಚ್ಚರಿ ಮೂಡಿಸುತ್ತದೆ. ಶ್ರೀಧರ್ ಸಂಭಾಷಣೆಯನ್ನು ಅರಗಿಸಿಕೊಂಡು, ಮುಲಾಜಿಲ್ಲದೇ ಹೇಳುವುದು ಕಷ್ಟಸಾಧ್ಯ. ಅದರಲ್ಲಿನ ಒಳಾರ್ಥ ಅರಿತಾಗ ಮಾತ್ರ ಹಾಗೆ ನಟಿಸಲು ಸಾಧ್ಯ. ಯಶ್ ಅಲ್ಲಿ ಯಶ ಕಂಡಿದ್ದಾರೆ.

ನಟನೆ, ನೃತ್ಯ, ಹೊಡೆದಾಟ, ಮಾತುಗಾರಿಕೆ ಎಲ್ಲದಕ್ಕೂ ಯಶ್ ಈಸ್ ಎಸ್. ಹಸಿರಿನ ಎಲೆಗಳ ಮಧ್ಯೆ ಅರಳಿದ ಕೆಂದಾವರೆ ಹರಿಪ್ರಿಯಾ. ನಟನೆಯಲ್ಲಿ ಕೊಂಚ ಚೇತರಿಕೆ ಕಂಡರೆ ಹರಿ ಕನ್ನಡದಲ್ಲಿ ನಾಯಕಿಯಾಗಿ ಇನ್ನಷ್ಟು ವರ್ಷ ನಿಲ್ಲುತ್ತಾರೆ ಎನ್ನುವುದನ್ನು ‘ಕಳ್ಳರ ಸಂತೆ’ ನಿರೂಪಿಸಿದೆ. ಸುಂದರನಾಥ ಸುವರ್ಣ ವರ್ಣಮಯ ದೃಶ್ಯಗಳನ್ನು ಹೆಣೆದಿದ್ದಾರೆ. ಕೆಲವು ಕಡೆ ಸೆರೆ ಹಿಡಿದಿರುವ ಸನ್ನಿವೇಶಗಳು, ಮಂದಬೆಳಕಿನಲ್ಲಿ ಮೂಡಿಸಿದ ಚಿತ್ರಾವಳಿಗಳು ಇಷ್ಟವಾಗುತ್ತವೆ. ವಿ.ಮನೋಹರ್ ಯಾವ ಕೆಟಗರಿಯ ಚಿತ್ರಗಳಾದರೂ ಅದರಲ್ಲಿ ಹೊಸತನ ತೋರುತ್ತಾರೆ ಎನ್ನುವುದು ‘ಕಳ್ಳರ ಸಂತೆ’ಯಲ್ಲಿ ಸಾಬೀತಾಗಿದೆ. ಮೂರು ಹಾಡುಗಳು ಮುದ ನೀಡುತ್ತವೆ. ನಿಜಕ್ಕೂ ಎಲ್ಲ ಹಾಡುಗಳು ಸಾಹಿತ್ಯದ ಧೋತಕವಾಗಿವೆ. ‘ಕಳೆದು ಹೋದ ಖಾಲಿ ಪುಟವ ಮರಳಿ ತಂದು ಕಾವ್ಯ ಬರೆದೆ…’ಹಾಡು ಮತ್ತೆ ಮತ್ತೆ ಕಿವಿ ತುಂಬುತ್ತದೆ.

ರೀರೆಕಾರ್ಡಿಂಗ್‌ನಲ್ಲಿನ ವಿಶೇಷತೆ ಎಂದರೆ ನಟರ ಒಂದೊದು ಹಾವಭಾವಕ್ಕೂ ಒಂದೊಂದು ಥರದ ಸಂಗೀತ ಸಾಧನ ಬಳಸಿ ಮ್ಯೂಸಿಕ್ ಕೊಟ್ಟಿರುವುದು. ರಂಗಾಯಣ ರಘು ಸಿಎಮ್ ಪಾತ್ರದಲ್ಲಿ ಮಿಂಚಿಂಗೋ ಮಿಂಚಿಂಗು. ಜೈ ಜಗದೀಶ್, ಶೋಭರಾಜ್, ಕಿಶೋರ್, ಅಚ್ಯುತ, ದತ್ತಣ್ಣ, ಜಿ.ಕೆ.ಗೋವಿಂದರಾಜ್…ಈ ರೀತಿ ತಾರೆಗಳ ತಾಂಡವವೇ ಇದೆ. ಸಂಕಲನದಲ್ಲಿ ಕೊಂಚ ಸುಧಾರಣೆ ಬೇಕಿತ್ತಾದರೂ ಅಷ್ಟೇನೂ ಸಂಕಲನ ಕೆಟ್ಟದಾಗಿಲ್ಲ. ಆಯಾ ಸನ್ನಿವೇಶಕ್ಕೆ ತಕ್ಕಂತೆ ಗಾಂಧೀಜಿ ಹಾಗೂ ಚಾಣಕ್ಯನ ಹೆಸರನ್ನು ಸಂಭಾಷಣೆಯಲ್ಲಿ ಬಳಸಿರುವುದು ಸಮಂಜಸವಾಗಿದೆ. ಅಗ್ನಿ ಶ್ರೀಧರ್ ಅವರು ಇಲ್ಲಿ ಯಾರೊಬ್ಬರನ್ನೂ ಬಿಟ್ಟಿಲ್ಲ… ಸಾಹಿತಿಗಳು, ರಾಜಕಾರಣಿಗಳು(ಅವರ ಗರ್ಲ್ ಫ್ರೆಂಡ್‌ಗಳು) ಪುಡಿ, ಹಿಡಿ ರೌಡಿಗಳು, ಪ್ರೇಮಿಗಳು, ಸ್ವಾರ್ಥಿಗಳು, ಮೋಸಗಾರರು, ವಿಶ್ವ ಭೂಪಟದ ನಾನಾ ಬಗೆಯ ವಿಷಯ ಲಂಪಟರು… ಎಲ್ಲರನ್ನೂ ನೆನಪಿಸುತ್ತಾರೆ. ಒಟ್ಟಾರೆ ಒಂದು ಅಪ್ಪಟ ಸ್ವಮೇಕ್ ಹಾಗೂ ಸವಾಲಿನ ಚಿತ್ರವನ್ನು ತೋರಿಸುತ್ತಾರೆ. ಅಗ್ನಿ ಶ್ರೀಧರ್ ಮತ್ತು ಸುಮನಾ ಕಿತ್ತೂರು ನಮ್ಮ ಮನಸನ್ನು ಕದಡುವಂತೆ ಮಾಡುತ್ತಾರೆ ಅಲ್ಲದೇ ಅದರಲ್ಲಿ ಗೆಲ್ಲುತ್ತಾರೆ ಕೂಡ..! ಅಂತ ಹೇಳಿ ನನ್ನ ಮಾತು ಮುಗಿಸುತ್ತೇನೆ…

# -ಕೆ.ಶಿವು.ಲಕ್ಕಣ್ಣವರ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *