Local news & crime- ಯಾರೂ ಕೇಳದ ಪರೀದ್ ಸಾಬ್ ಮಗನ ಸಾವಿನ ನೋವು

ಫಯಾಜ್ ಇಸ್ಮಾಯಿಲ್ ಗೆ 5 ವರ್ಷ ಶಿಕ್ಷೆ,50 ಸಾವಿರ ದಂಡ

ಈ ಚಿತ್ರದಲ್ಲಿ ಕಾಣುವ ಸುರದ್ರೂಪಿ ಹುಡುಗನ ಹೆಸರು ಹಾಶಮ್ ಪರೀದ್ ಸಾಬ್, ಈತ ಸಾಗರತಾಲೂಕು ಚೂರಿಕಟ್ಟೆಯ ಪರೀದ್ ಸಾಬ್ ರ ಮಗ. ಇವರ ತಂದೆ ಪರೀದ್ ಸಾಬ್ ಸಿದ್ಧಾಪುರದಲ್ಲಿ ಒಂದು ಗುಜರಿ ಅಂಗಡಿ ನಡೆಸುತ್ತಾರೆ. ಮೂರುಜನ ಹೆಣ್ಣುಮಕ್ಕಳ ನಂತರ ಪರೀದ್ ಸಾಬ್ ರಿಗೆ ಹುಟ್ಟಿದ ಏಕೈಕ ಗಂಡುಮಗ ದುಡಿಮೆಗಾಗಿ ಕುವೈತ್ ಗೆ ಹೋಗುತ್ತಾನೆ. ಕೆಲವು ವರ್ಷಗಳಿಂದ ಕುವೈತ್ ನಲ್ಲಿ ದುಡಿಯುತಿದ್ದ ಈ ಹುಡುಗ ಕಳೆದ ವರ್ಷದ ಕೊನೆಯ ದಿನಗಳಲ್ಲಿ ಕುವೈತ್ ನಲ್ಲಿ ಸಮುದ್ರಕ್ಕೆ ಈಜಲು ಹೋಗಿ ಮೃತಪಟ್ಟ ಸುದ್ದಿ ಪರೀದ್ ಸಾಬರ ಕುಟುಂಬಕ್ಕೆ ಬಡಸಿಡಿಲಿನಂತೆ ತಿಳಿಯುತ್ತದೆ.

ಕೆಲವೇ ದಿವಸಗಳ ಹಿಂದೆ ಫೆಬ್ರವರಿ ತಿಂಗಳಲ್ಲಿ ಮನೆಗೆ ಮರಳುತ್ತೇನೆ ಎಂದು ತಂದೆ-ತಾಯಿಗಳಿಗೆ ತಿಳಿಸಿದ್ದ ಹುಡುಗ 15 ದಿವಸಗಳ ಹಿಂದೆ ತೀರಿಹೋದ ಎನ್ನುವ ಆಘಾತಕಾರಿ ಸುದ್ದಿಯ ಜಾಡು ಹಿಡಿದ ಹಾಶಮ್ ಪಾ ಲಕರು,ಸಂಬಂಧಿಗಳಿಗೆ ಈ ಸಾವು ಆಕಸ್ಮಿಕವಲ್ಲ ಕೊಲೆ ಎನ್ನುವ ಮಾಹಿತಿ ತಿಳಿಯುತ್ತದೆ.

ಆಕಸ್ಮಿಕ,ಅವಗಢ ಗಳಾದಾಗ ಮೈ ಕೈ ನಡುಗುವುದು ಸ್ವಾಭಾವಿಕ ಹೀಗೆ ನಡುಗಿ ಹೋದ ಪರೀದ್ ಸಾಬರ ಕುಟುಂಬ ಈ ಬಗ್ಗೆ ವಿಚಾರಣೆ, ತನಿಖೆಗೆ ಬೆಂಗಳೂರಿನ ಭಾರತೀಯ ರಾಯಭಾರಿ ಕಛೇರಿಗೆ ದೂರು ನೀಡಿದೆ. ಆದರೆ ಫಲಶೃತಿ ಶೂನ್ಯ. ಹಾಶಮ್ ಕೊಲೆಯಾಗಿ 15 ದಿವಸ ಕಳೆದರೂ ಶವ ಮರಳಲಿಲ್ಲ. ಮೊದಮೊದಲು ಈಜಲು ಹೋಗಿ ಸಾವಿಗೀಡಾದ ಬಗ್ಗೆ ಮಾಹಿತಿ ತಿಳಿದು ವಿಚಾರಿಸಿದಾಗ ಹಾಶಮ್ ತನ್ನ ಬಾಡಿಗೆ ಮನೆಯಲ್ಲಿ ರಕ್ತಸಿಕ್ತವಾಗಿ ಶವವಾಗಿ ಕಂಡ ಬಗ್ಗೆ ದಾಖಲೆ ದೊರೆತಿದೆ. ಮಗನೂ ಇಲ್ಲ, ಮಗನ ಕಳೆಬರಹವೂ ಬಂದಿಲ್ಲ ಎನ್ನುವ ವೇದನೆಯಲ್ಲಿರುವ ಕುಟುಂಬ ದುಡಿಯಲು ಹೋದ ಮಗ ಮರಳದೆ, ಶವವನ್ನೂ ನೋಡದೆ ಕಂಗಾಲಾಗಿದೆ. ಈ ಬಗ್ಗೆ ಸೂಕ್ತ ಏರ್ಪಾಡಿಗೆ ಸ್ಥಳಿಯರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಫಯಾಜ್ ಇಸ್ಮಾಯಿಲ್ ಗೆ 5 ವರ್ಷ ಶಿಕ್ಷೆ,50 ಸಾವಿರ ದಂಡ

ಸಿದ್ಧಾಪುರ ಕುಣಜಿ ಅರಣ್ಯ ವ್ಯಾಪ್ತಿಯಲ್ಲಿ ಶ್ರೀಗಂಧ ಕಳ್ಳತನ ಸಾಬೀತಾದ ಹಿನ್ನೆಲೆಯಲ್ಲಿ ಸಾಗರ ಎಸ್.ಎನ್. ನಗರದ ಫಯಾಜ್ ಇಸ್ಮಾಯಿಲ್ ಗೆ ಶಿರಸಿ ಜಿಲ್ಲಾ ನ್ಯಾಯಾಲಯ 50 ಸಾವಿರ ದಂಡ,5 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಈ ವ್ಯಕ್ತಿ ಸೆಪ್ಟೆಂಬರ್ 2016 ರಲ್ಲಿ ಸಿದ್ಧಾಪುರ ಅರಣ್ಯಇಲಾಖೆ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿದ್ದ.


ಶ್ರೇಷ್ಠ ಕೃಷಿಕ ಪ್ರಶಸ್ತಿ ಪ್ರದಾನ-

ಸಿದ್ಧಾಪುರ ಕೃಷಿ ಇಲಾಖೆ ಆವರಣದಲ್ಲಿ ರೈತ ದಿನಾಚರಣೆ ಪ್ರಯುಕ್ತ ಪ್ರತಿ ವರ್ಷದಂತೆ ಕೃಷಿ ಕ್ಷೇತ್ರಗಳಲ್ಲಿ ವಿವಿಧ ರೀತಿಯಲ್ಲಿ ಸಾಧನೆ ಮಾಡಿದಂತಹ ರೈತರಿಗೆ ಆತ್ಮ ಯೋಜನೆಯ ತಾಲೂಕು ಮಟ್ಟದ ಮತ್ತು ಜಿಲ್ಲಾ ಮಟ್ಟದ ಶ್ರೇಷ್ಟ ಕೃಷಿಕ ಪ್ರಶಸ್ತಿ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಅದರಂತೆ ತಾಲ್ಲೂಕು ಮಟ್ಟದ ಪ್ರಶಸ್ತಿ ಪುರಸ್ಕೃತರಾದ
1) ಚಾಮರಾಜನ ಗೌಡರ್ -ನೆಜ್ಜುರ್ ಗ್ರಾಮ – ಹೈಟೆಕ್ ಹಸಿರು ಮನೆ ಕೃಷಿ ವಿಭಾಗ
2)ಚಂದ್ರಶೇಖರ್ ಗೊಂಡ -ಡುಗಡಿಕೊಪ್ಪ – ಸಮಗ್ರ ಕೃಷಿ ಪದ್ಧತಿ ವಿಭಾಗ
3) ಸುನೀಲ್ ವೆಂಕಟರಮಣ ನಾಯ್ಕ್ -ಬೇಡ್ಕಣಿ – ಸಮಗ್ರ ಕೃಷಿ ಪದ್ಧತಿ ವಿಭಾಗ
4) ರಮೇಶ್ ಈಶ್ವರ್ ನಾಯ್ಕ್ – ಕಿಲಾರ – ರೇಷ್ಮೆ ಕೃಷಿ ವಿಭಾಗ
5) ರಾಮದಾಸ್ ಹನುಮ ನಾಯ್ಕ್ – ಹುಸೂರ್ – ಸಮಗ್ರ ಕೃಷಿ ಪದ್ಧತಿ ವಿಭಾಗ
6) ಶ್ರೀಧರ್ ಕೃಷ್ಣ ಹೆಗಡೆ – ಸಂಪಗೋಡು – ಸಮಗ್ರ ಸಾವಯವ ಕೃಷಿ ಪದ್ಧತಿ ವಿಭಾಗ (ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ) ಆತ್ಮ ಯೋಜನೆಯಡಿ ಈ ರೈತರನ್ನು ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಪ್ರಶಾಂತ್ ಜಿ ಎಸ್ ಕೃಷಿ ನಿರ್ದೇಶಕರು, ಡಾ // ಶಿವಶಂಕರ್ ಮೂರ್ತಿ ವಿಜ್ಞಾನಿಗಳು, ಕೃಷಿ ವಿಜ್ಞಾನ ಕೇಂದ್ರ ಶಿರಸಿ, ವಿ ಎಂ ಹೆಗಡೆ ತಾಲೂಕು ರೈತ ಸಂಘದ ಕಾರ್ಯದರ್ಶಿ ಹಾಗೂ ಆತ್ಮ ಯೋಜನೆಯ ಸಿಬ್ಬಂದಿಗಳು ಭಾಗಿಯಾಗಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ...

ಕಾಗೇರಿ ವ್ಯಂಗ್ಯಕ್ಕೆ ಕಾಂಗ್ರೆಸ್‌ ಉತ್ತರ……! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-04-

ಬಿ.ಜೆ.ಪಿ. ಮಟ್ಟಿಗೆ ಉತ್ತರ ಕನ್ನಡದ ವರಿಷ್ಠರಾದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಧ್ಯಮಗೋಷ್ಠಿ ನಡೆಸುವುದರಲ್ಲಿ ಮಾಧ್ಯಮಗಳಿಗೆ ಬೇಕಾದಷ್ಟೇ ಚುಟುಕಾಗಿ ಉತ್ತರಿಸುವುದರಲ್ಲಿ ನಿ಼ಷ್ಣಾತರು. ಆಗಾಗ ಮಾಧ್ಯಮಗೋಷ್ಠಿ...

ನಾಯಕರಿಗೆ ಇಂಬು, ಕಾರ್ಯಕರ್ತರಿಗೆ ಚೊಂಬು!!! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-03-

ಬಿ.ಜೆ.ಪಿ. ಸೋಲಿಸಲು ಸಾಧ್ಯವಿಲ್ಲ, ಕಾಂಗ್ರೆಸ್‌ ಗೆ ಅಧಿಕಾರವಿಲ್ಲದೆ ಅಲ್ಲಿಯ ಕಾರ್ಯಕರ್ತರು ಅನಿವಾರ್ಯವಾಗಿ ಬಿ.ಜೆ.ಪಿ. ಸೇರುತ್ತಾರೆ. ಹೀಗಾದರೆ ನೀವೆಲ್ಲಾ ಕಾಂಗ್ರೆಸ್‌ ನಲ್ಲಿದ್ದು ಏನು ಪ್ರಯೋಜನ? ಎಂದು...

ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! part-02- ವೀಶ್ವೇಶ್ವರ ಹೆಗಡೆಗೆ ಮೃಧುವಾಗೇ ತಿವಿಯುತ್ತಿರುವ ಗ್ಯಾರಂಟಿಯಣ್ಣ!

ಮೇಲ್ವರ್ಗದ ಓಲೈಕೆ, ವೈದಿಕ ತುಷ್ಟೀಕರಣಗಳ ಬಿ.ಜೆ.ಪಿ. ಅನಿವಾರ್ಯವಾದಾಗ, ಮೇಲ್ನೋಟಕ್ಕೆ ಪ್ರದರ್ಶನಕ್ಕೆ ಅಹಿಂದ್‌ ಗಳನ್ನು ಬಳಸುವುದನ್ನು ಬಿಟ್ಟರೆ ಅದು ತನ್ನ ಅಜೆಂಡಾ ಉಳ್ಳವರ ಪರ ನೀತಿಯನ್ನು...

don,t do it- ಮಗುವಿನೊಂದಿಗೆ ಪೋಷಕರ ಅಪಾಯಕಾರಿ ಸೆಲ್ಫಿ; ಸ್ಮಾರ್ಟ್ ಸಿಸಿಟಿವಿಯಿಂದ ತಪ್ಪಿದ ಸಂಭಾವ್ಯ ದುರಂತ!

ಗೋಕರ್ಣ: ಪೊಲೀಸರ ಈ ಮುನ್ನೆಚ್ಚರಿಕಾ ಕ್ರಮ ಗೋಕರ್ಣದಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ಪೊಲೀಸರು ತಮ್ಮನ್ನು ಕ್ಯಾಮರಾ ಮೂಲಕ ನೋಡುತ್ತಿದ್ದಾರೆ ಎಂದು ದಂಪತಿಗೆ ತಿಳಿದಿರಲಿಲ್ಲ. ಮಗುವಿನೊಂದಿಗೆ ಪೋಷಕರ...

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ ಮಾತು….. ಬೆoಗಳೂರಿನ ಚಿನ್ನಸ್ವಾಮಿ ಕ್ರೀಡಾoಗಣ ದಲ್ಲಿ ಕಲ್ತುಳಿತಕ್ಕೆ ಒಳಗಾಗಿ ಜೀವತೆತ್ತ ಅಕ್ಷತಾ ಪೈ ಶವ ಸಿದ್ಧಾಪುರಕ್ಕೆ ಆಗಮಿಸಿದೆ. ಮೃತ ಅಕ್ಷತಾ ಪತಿ ಆಶಯ ನಿನ್ನೆ ಅಲ್ಲಿದ್ದರು. ನಿನ್ನೆಯ ಘಟನೆಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *