pongal spl- ಸಂಕ್ರಾಂತಿಗೆ ‘ಕಬ್ಜ’ ತಂಡದಿಂದ ಸರ್ ಪ್ರೈಸ್! & ಗೋದಿನ, ಆಲೆಮನೆ ಹಬ್ಬ

ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ಪ್ಯಾನ್ ಇಂಡಿಯಾ ಸಿನಿಮಾ ‘ಕಬ್ಜ’ ತಂಡ ಸಂಕ್ರಾತಿಯಂದು ಅಭಿಮಾನಿಗಳಿಗೆ ಸರ್ ಪ್ರೈಸ್ ನೀಡಲಿದೆಯಂತೆ.

ನಾಳೆ ಗೋದಿನ,ಗುರುವಾರದಿಂದಲೇ ಆಲೆಮನೆ ಹಬ್ಬ-

ಸಿದ್ಧಾಪುರ ತಾಲೂಕಿನ ಭಾನ್ಕುಳಿ ರಾಮಚಂದ್ರಪುರಮಠದ ಗೋಸ್ವರ್ಗದಲ್ಲಿ ಗುರುವಾರ ಸಂಕ್ರಾಂತಿ ಅಂಗವಾಗಿ ಗೋದಿನ ಆಚರಣೆ ನಡೆಯಲಿದೆ. ಇದರೊಂದಿಗೆ ಪ್ರಾರಂಭವಾಗಲಿರುವ ಆಲೆಮನೆ ಹಬ್ಬಜ.14 ರಿಂದ 17 ರ ವರೆಗೆ ನಡೆಯಲಿದೆ. ಸಂಕ್ರಾಂತಿಯ ದಿವಸ ಗೋವುಗಳಿಗೆ ವಿರಾಮ,ವಿಶ್ರಾಂತಿಯ ದಿವಸ ಹಾಗಾಗಿ ಮಠದ ರಾಘವೇಶ್ವರಭಾರತಿ ಸ್ವಾಮೀಜಿ ಸಾನಿಧ್ಯದಲ್ಲಿ ಗೋದಿನ ಆಚರಣೆ ನಡೆಯಲಿದೆ. ಮೊದಲ ದಿನ ಧರ್ಮ ಮತ್ತು ಗೋವು ಎನ್ನುವ ವಿಚಾರಗೋಷ್ಠಿ ನಡೆಯಲಿದೆ. ಈ ಕಾರ್ಯಕ್ರಮದಿಂದ ಮೊದಲ್ಗೊಂಡು 4 ದಿವದ ನಾನಾ ಕಾರ್ಯಕ್ರಮಗಳು ನಡೆಯಲಿವೆ ಎಂದು ಗೋದಿನ ಮತ್ತು ಆಲೆಮನೆ ಹಬ್ಬ ಆಚರಣಾ ಸಮೀತಿ ಅಧ್ಯಕ್ಷ ಎಂ.ಜಿ.ರಾಮಚಂದ್ರ ತಿಳಿಸಿದರು. ಗೋಸ್ವರ್ಗ ಆವರಣದಲ್ಲಿ ಸಾಮೂಹಿಕ ಮಾಧ್ಯಮಗೋಷ್ಠಿ ನಡೆಸಿದ ಪ್ರಮುಖರು ಈ ಕಾರ್ಯಕ್ರಮಗಳಿಗೆ ಸಾರ್ವಜನಿಕರನ್ನು ಆಮಂತ್ರಿಸಿದರು. ಈ ಕಾರ್ಯಕ್ರಮದ ಅಂಗವಾಗಿ ಮಹಿಳೆಯರಿಂದ ವಿಭಿನ್ನ ಸಿಹಿತಿಂಡಿಗಳು,ದೇಶೀ ಆಹಾರ ತಯಾರಿಕೆ ಮತ್ತು ಪ್ರದರ್ಶನ-ಮಾರಾಟಗಳೂ ನಡೆಯಲಿವೆ ಎಂದು ವೀಣಾ ಹೆಗಡೆ ತಿಳಿಸಿದರು..

ಗೋಸ್ವರ್ಗದಲ್ಲಿ 700 ಕ್ಕಿಂತ ಹೆಚ್ಚು ಜಾನುವಾರುಗಳಿವೆ. ಗೋಉತ್ಫನ್ನಗಳ ಸಂಶೋಧನಾ ಕೇಂದ್ರದ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಮಠದಿಂದ ದೀಪಾವಳಿಯಲ್ಲಿ ಹೊಸನಗರದಲ್ಲಿ, ಸಿದ್ಧಾಪುರದಲ್ಲಿ ಸಕ್ರಾಂತಿಗೆ ಗೋಪೂಜೆ ನಡೆಯುತ್ತವೆ. ಇದರ ಅಂಗವಾಗಿ ನಾನಾ ಸೇವೆಗಳಿಗೂ ಅವಕಾಶ ನೀಡಲಾಗಿದೆ.- ಆರ್.ಎಸ್. ಹೆಗಡೆ, ಎಂ.ಎಂ. ಹೆಗಡೆ

Kabza poster

ಬೆಂಗಳೂರು: ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ಪ್ಯಾನ್ ಇಂಡಿಯಾ ಸಿನಿಮಾ ‘ಕಬ್ಜ’ ತಂಡ ಸಂಕ್ರಾತಿಯಂದು ಅಭಿಮಾನಿಗಳಿಗೆ ಸರ್ ಪ್ರೈಸ್ ನೀಡಲಿದೆಯಂತೆ.

ಸೂಪರ್ ಸ್ಟಾರ್ ಉಪೇಂದ್ರ ನಾಯಕರಾಗಿ ನಟಿಸುತ್ತಿರುವ ಈ ಚಿತ್ರವನ್ನು ಆರ್ ಚಂದ್ರು ನಿರ್ದೇಶಿಸುತ್ತಿದ್ದಾರೆ. ಆರ್.ಚಂದ್ರು ಅವರ ನಿರ್ದೇಶನ ಅಂದ ಮೇಲೆ ಚಿತ್ರ ಎಲ್ಲದರಲ್ಲೂ ಅದ್ದೂರಿಯಾಗಿ ಮೂಡಿಬರುವುದರಲ್ಲಿ ಯಾವುದೇ ಸಂದೇಹವಿಲ್ಲ.

ಸುಗ್ಗಿ ಹಬ್ಬ ಸಂಕ್ರಾಂತಿ ಸಮೀಪದಲ್ಲಿದ್ದು, ಆ ಸುದಿನದಂದು‌ ‘ಕಬ್ಜ’ ಚಿತ್ರತಂಡ ಸಿನಿರಸಿಕರಿಗೆ ಸರ್ ಪ್ರೈಸ್ ನೀಡಲಿದೆ. ಸಂಕ್ರಾಂತಿ ಹಬ್ಬದ ದಿನ‌ ಬೆಳಗ್ಗೆ 10ಕ್ಕೆ ಆ ಸರ್ ಪ್ರೈಸ್ ಏನೆಂಬುದು ಎಲ್ಲರಿಗೂ ತಿಳಿಯಲಿದೆ. 

ಈಗಾಗಲೇ ಕನ್ನಡದ ಪ್ಯಾನ್ ಇಂಡಿಯಾ ಸಿನಿಮಾಗಳಾದ ಕೆ.ಜಿ.ಎಫ್ 2 ಹಾಗೂ ಕಬ್ಜ ಚಿತ್ರಗಳ ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಬೆಂಗಳೂರು, ಹೈದರಾಬಾದ್ ಮುಂತಾದ ಕಡೆ ನಿರ್ಮಿಸಲಾಗಿರುವ ಅದ್ದೂರಿ ಸೆಟ್ ಗಳಲ್ಲಿ ಚಿತ್ರೀಕರಣ ನಡೆಸಲಾಗಿದ್ದು, ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಮಾಸಾಂತ್ಯಕ್ಕೆ‌ ಮುಂದಿನ ಹಂತದ ಚಿತ್ರೀಕರಣ ಆರಂಭವಾಗಲಿದೆ.

ಉಪೇಂದ್ರ ಅವರು ಈ ಚಿತ್ರಕ್ಕಾಗಿ ನಾಲ್ಕು ಘಂಟೆಗೂ ಹೆಚ್ಚು ಕಾಲ ವ್ಯಾಯಾಮ ಮಾಡಿ, ಚಿತ್ರೀಕರಣಕ್ಕೆ ಬೇಕಾದ ಹಾಗೆ ಸಜ್ಜಾಗಿ, ಬಹಳ ಸುಂದರವಾಗಿ ಕಾಣಿಸಿಕೊಂಡಿದ್ದಾರೆ.
ಅಭಿಮಾನಿಗಳ ನಿರೀಕ್ಷೆಗೆ ತಕ್ಕ ಹಾಗೆ ಕಬ್ಜ ಮೂಡಿಬರುತ್ತಿದೆ ಎನ್ನುತ್ತಾರೆ ಆರ್ ಚಂದ್ರು.

ಎಂ.ಟಿ.ಬಿ ನಾಗರಾಜ್ ಅರ್ಪಿಸುವ, ಶ್ರೀ ಸಿದ್ದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ಆರ್ ಚಂದ್ರು ಅವರೆ ನಿರ್ಮಿಸುತ್ತಿರುವ ಕಬ್ಜ ಚಿತ್ರಕ್ಕೆ ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರು ಸಂಗೀತ ನಿರ್ದೇಶನವಿದೆ. ಕಾರ್ಯಕಾರಿ ನಿರ್ಮಾಪಕರಾಗಿ ಮುನೀಂದ್ರ ಹಾಗೂ ಲೈನ್ ಪ್ರೊಡ್ಯೂಸರ್ ಆಗಿ ರಾಜಶೇಖರ್ ಕಾರ್ಯನಿರ್ವಹಿಸುತ್ತಿದ್ದಾರೆ.

 ಎ.ಜೆ.ಶೆಟ್ಟಿ ಛಾಯಾಗ್ರಹಣ, ಮಹೇಶ್ ಸಂಕಲನ, ರಾಜು ಸುಂದರಂ, ಗಣೇಶ್, ಶೇಖರ್ ನೃತ್ಯ ನಿರ್ದೇಶನ ಹಾಗೂ ರವಿವರ್ಮ, ವಿಕ್ರಂಮೋರ್,ವಿಜಯ್ ಸಾಹಸ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಉಪೇಂದ್ರ, ಕಾಮರಾಜನ್(ಐ ಮೂವಿ ಖ್ಯಾತಿ), ಜಗಪತಿ ಬಾಬು, ರಾಹುಲ್ ಜಗತಪ್, ಅನೂಪ್ ರೇವಣ್ಣ, ಜಾನ್ ಕೊಕ್ಕಿನ್, ರಾಹುಲ್ ದೇವ್, ನವೀನ್, ಕೋಟ ಶ್ರೀನಿವಾಸ್, ಜಯಪ್ರಕಾಶ್, ಕಾಟ್ ರಾಜು, ಸುಬ್ಬರಾಜು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *