today,s spl news- ಸಿದ್ಧಾಪುರದ ಉತ್ತಮ ಕೆಲಸ & ಸರ್ಕಾರ ರೈತರನ್ನು ನಾಶ ಮಾಡಲು ಪಿತೂರಿ ರೂಪಿಸುತ್ತಿದೆ- ರಾಹುಲ್ ಗಾಂಧಿ

ಕೃಷಿ ಕಾನೂನು: ಸರ್ಕಾರ ರೈತರನ್ನು ನಾಶ ಮಾಡಲು ಪಿತೂರಿ ರೂಪಿಸುತ್ತಿದೆ- ರಾಹುಲ್ ಗಾಂಧಿ 

ಸಂಕ್ರಾಂತಿ ಹಬ್ಬದಂದು ತಮಿಳುನಾಡಿಗೆ ಭೇಟಿ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ, ಕೃಷಿ ಕಾನೂನುಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಉತ್ತಮ ಕೆಲಸ-

ಸಿದ್ದಾಪುರ
ಅಡಕೆ ಮರದಿಂದ ಬಿದ್ದು ಸಿದ್ದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಕಿಲವಳ್ಳಿಯ ಉಮೇಶ ನಾರಾಯಣ ಗೌಡ ಅವರಿಗೆ ತಾಲೂಕು ಗ್ರಾಮ ಒಕ್ಕಲಿಗರ ಯುವ ಬಳಗದವರು ದಾನಿಗಳಿಂದ ಸಂಗ್ರಹಿಸಿದ 40ಸಾವಿರ ರೂಗಳ ಚೆಕ್‍ನ್ನು ಮಂಗಳವಾರ ಬಳಗದ ಅಧ್ಯಕ್ಷ ವಿ.ಆರ್.ಗೌಡ ಹೇರೂರು ವಿತರಿಸಿದರು.
ಹಣ ಸಂಗ್ರಹಿಸಲು ಸಿದ್ದಾಪುರ ಎಂಜಿಸಿ ಕಾಲೇಜಿನ ವಿದ್ಯಾರ್ಥಿ ನಾಗರಾಜ ಗೌಡ ಹಲಸಿನಮನೆ,ನಯನಾ ಗೌಡ ಹಲಸಿನಮನೆ ಇವರು ಹೆಚ್ಚು ಮುತುವರ್ಜಿವಹಿಸಿದ್ದರು. ಮುಂದಿನ ದಿನದಲ್ಲಿ ಮತ್ತಷ್ಟು ಹಣ ಸಂಗ್ರಹಿಸಿ ಉಮೇಶ ಗೌಡ ಅವರ ಚಿಕಿತ್ಸೆಗೆ ಸಹಕರಿಸಲಾಗವುದು ಎಂದು ವಿ.ಆರ್.ಗೌಡ ಹೇಳಿದರು.ಬಳಗದ ಪದಾಧಿಕಾರಿಗಳಾದ ಜಗನ್ನಾಥ ಗೌಡ, ಪ್ರಸನ್ನ ಗೌಡ, ಸುರೇಶ ಗೌಡ, ಮಂಜುನಾಥ ಗೌಡ,ನಯನಾ ಗೌಡ,ನಾಗರಾಜ ಗೌಡ ಇತರರಿದ್ದರು.

ವಿವೇಕಾನಂದ ಜಯಂತಿ ಆಚರಣೆ-

ದಿ.12.01.21 ರ ಮಂಗಳವಾರ ಕಾಲೇಜಿನ ಸಭಾಂಗಣದಲ್ಲಿ ಸ್ವಾಮಿ ವಿವೇಕಾನಂದರ 158 ನೇ ಜನ್ಮ ದಿನದ ಪ್ರಯುಕ್ತ ಪುಷ್ಪನಮನವನ್ನು ಸಲ್ಲಿಸುವುದರ ಮೂಲಕ ರಾಷ್ತ್ರೀಯ ಯುವ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಜೆ.ಎಸ್.ಹೆಗಡೆರವರು ಸ್ವಾಮಿ ವಿವೇಕಾನಂದರಿಂದ ಪ್ರೇರಣೆ ಪಡೆದು ದೇಶದ ಉನ್ನತಿಗಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು. ಭಾರತವು ಯುವ ಶಕ್ತಿಯ ದೇಶವಾಗಿದ್ದು ಯುವಕರು ಪ್ರಯತ್ನಪಟ್ಟಲ್ಲಿ ದೇಶದ ದಿಕ್ಕನ್ನೆ ಬದಲಾಯಿಸಬಹುದೆಂದು ಅಭಿಪ್ರಾಯಪಟ್ಟರು

ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಅಧ್ಯಾಪಕ ಮತ್ತು ಅಧ್ಯಾಪಕೇತರ ಸಿಬ್ಬಂದಿ ಹಾಜರಿದ್ದರು.

Farm laws: Govt conspiring to destroy farmers, says Rahul Gandhi in Tamil Nadu

ಮಧುರೈ: ಸಂಕ್ರಾಂತಿ ಹಬ್ಬದಂದು ತಮಿಳುನಾಡಿಗೆ ಭೇಟಿ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ, ಕೃಷಿ ಕಾನೂನುಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಸರ್ಕಾರ ರೈತರನ್ನು ನಾಶ ಮಾಡುವುದಕ್ಕಾಗಿ ಹೊಸ ಕೃಷಿ ಕಾನೂನುಗಳ ಮೂಲಕ ಪಿತೂರಿ ನಡೆಸಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಅಷ್ಟೇ ಅಲ್ಲದೇ ತಮ್ಮ ಪಕ್ಷ ರೈತರ ಜೊತೆ ನಿಲ್ಲಲಿದೆ ಎಂದು ಹೇಳಿದ್ದಾರೆ.

https://imasdk.googleapis.com/js/core/bridge3.433.1_debug_en.html#goog_1037571697

ಪತ್ರಕರ್ತರೊಂದಿಗೆ ಮಾತನಾಡಿರುವ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ ಕೃಷಿ ಕಾನೂನುಗಳ ಮೂಲಕ ತನ್ನ ಇಬ್ಬರು ಅಥವಾ ಮೂವರು ಸ್ನೇಹಿತರಿಗೆ ಲಾಭ ಮಾಡಿಕೊಡಲು ಯತ್ನಿಸುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. 

ಕೇಂದ್ರ ಸರ್ಕಾರ ರೈತರನ್ನು ಕೇವಲ ನಿರ್ಲಕ್ಷಿಸುತ್ತಿಲ್ಲ, ಆದರೆ ನಾಶ ಮಾಡಲು ಯತ್ನಿಸುತ್ತಿದೆ, ನಿರ್ಲಕ್ಷ್ಯ ಮಾಡುವುದಕ್ಕೂ ನಾಶ ಮಾಡುವುದಕ್ಕೂ ವ್ಯತ್ಯಾಸವಿದೆ, ಕೇಂದ್ರ ಸರ್ಕಾರ ರೈತರದ್ದೆಲ್ಲವನ್ನೂ ಅವರ ಮೂವರು ಸ್ನೇಹಿತರಿಗೆ ನೀಡಲು ಯತ್ನಿಸುತ್ತಿದೆ ಎಂದು ರಾಹುಲ್ ಗಾಂಧಿ ಪತ್ರಕರ್ತರೊಬ್ಬರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *