ಕೋವಿಡ್-19 ಲಸಿಕೆಯನ್ನು ಯಾರು ಬಳಸಬಹುದು, ಯಾರು ಬಳಸುವಂತಿಲ್ಲ

ಉತ್ತರ ಕನ್ನಡ ಜಿಲ್ಲೆಗೆ ಬಂದಿದೆ 7000 ಡೋಸ್ ಕೊರೋನಾ ವ್ಯಾಕ್ಸಿನ್

ಬೆಳಗಾವಿಯ ಕೋವ್ಯಾಕ್ಸಿನ್ ಡಿಪೊದಿಂದ ಬುಧವಾರ 7000 ಡೋಸ್ ಕೊರೋನಾ ಲಸಿಕೆಗಳು ಉತ್ತರ ಕನ್ನಡ ಜಿಲ್ಲೆಗೆ ಬಂದು ತಲುಪಿವೆ. ಜ.16 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ವರ್ಚುವಲ್ ವೇದಿಕೆಯಲ್ಲಿ ಲಸಿಕಾ ಅಭಿಯಾನ ಉದ್ಘಾಟಿಸಿದ ಬಳಿಕ ಜಿಲ್ಲೆಯಲ್ಲೂ ಚಾಲನೆ ದೊರಕಲಿದೆ.’ಜಿಲ್ಲೆಯ 11 ಕೇಂದ್ರಗಳನ್ನು ಲಸಿಕೆ ನೀಡಲು ಗುರುತಿಸಲಾಗಿದೆ. ಈ ಕೇಂದ್ರಗಳಲ್ಲಿ ತಲಾ 100 ಮಂದಿಗೆ ಲಸಿಕೆ ನೀಡಲು ಗುರಿ ಹೊಂದಲಾಗಿದೆ. ಮೊದಲ ದಿನ 1,100 ಮಂದಿಗೆ ಲಸಿಕೆ ನೀಡಲಾಗುವುದು’ ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ತಿಳಿಸಿದ್ದಾರೆ.ಮೊದಲ ದಿನ ಆರೋಗ್ಯ ಕಾರ್ಯಕರ್ತರು, ಪೌರ ಕಾರ್ಮಿಕರಿಗೆ ಲಸಿಕೆ ನೀಡಲಾಗುವುದು. ಬಳಿಕ ಹಂತ ಹಂತವಾಗಿ ಎಲ್ಲರಿಗೂ ದೊರಕುವಂತೆ ಮಾಡಲಾಗುತ್ತದೆ.

ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಕೋವಿಡ್-19 ಲಸಿಕೆ ಅಭಿಯಾನ ದೇಶದಲ್ಲಿ ನಾಳೆ ಆರಂಭವಾಗುತ್ತಿದೆ. ಈ ಸಂದರ್ಭದಲ್ಲಿ ಲಸಿಕೆಯನ್ನು ಯಾರು ಬಳಸಬಹುದು, ಯಾರು ಬಳಸಬಾರದು ಎಂಬ ಬಗ್ಗೆ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಹೊರಡಿಸಿದೆ.

Vaccine boxes being taken to different districts from Odisha State Medical Corporation Limited in Bhubaneswar

ನವದೆಹಲಿ: ಕೋವಿಡ್-19 ಲಸಿಕೆ ಅಭಿಯಾನ ದೇಶದಲ್ಲಿ ನಾಳೆ ಆರಂಭವಾಗುತ್ತಿದೆ. ಈ ಸಂದರ್ಭದಲ್ಲಿ ಲಸಿಕೆಯನ್ನು ಯಾರು ಬಳಸಬಹುದು, ಯಾರು ಬಳಸಬಾರದು ಎಂಬ ಬಗ್ಗೆ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಹೊರಡಿಸಿದೆ.

ಕೋವಿಡ್-19 ಲಸಿಕೆಯನ್ನು ಒಬ್ಬರಿಂದ ಮತ್ತೊಬ್ಬರಿಗೆ ಪರಸ್ಪರ ಬದಲಾಯಿಸುವುದು, ಗರ್ಭಿಣಿಯರು, ಮಗುವಿಗೆ ಹಾಲುಣಿಸುವ ತಾಯಂದಿರಿಗೆ ನೀಡುವ ಹಾಗಿಲ್ಲ. ಅವರು ಇದುವರೆಗೆ ಯಾವುದೇ ಕೊರೋನಾ ವೈರಸ್ ತಡೆ ಲಸಿಕೆಯ ಪ್ರಾಯೋಗಿಕ ಪರೀಕ್ಷೆಯ ಭಾಗವಾಗಿಲ್ಲದಿರುವುದರಿಂದ ಲಸಿಕೆ ನೀಡಲು ಸಾಧ್ಯವಿಲ್ಲ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಈ ಸಂಬಂಧ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿರುವ ಆರೋಗ್ಯ ಸಚಿವಾಲಯ, ತುರ್ತು ಪರಿಸ್ಥಿತಿ ಬಳಕೆಯಲ್ಲಿ ಮಾತ್ರ ಸದ್ಯದ ಮಟ್ಟಿಗೆ ಕೊರೋನಾ ವೈರಸ್ ಲಸಿಕೆಯನ್ನು 18 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರಿಗೆ ನೀಡಲು ಶಿಫಾರಸು ಮಾಡಲಾಗಿದೆ ಎಂದು ಹೇಳಿದೆ. 

ಅಗತ್ಯಬಿದ್ದರೆ ಕೋವಿಡ್-19 ಲಸಿಕೆ ಮತ್ತು ಇತರ ಲಸಿಕೆಗಳನ್ನು 14 ದಿನಗಳ ಅಂತರದಲ್ಲಿ ಪ್ರತ್ಯೇಕಿಸಬಹುದು. ಕೋವಿಡ್-19 ಲಸಿಕೆಗಳನ್ನು ಪರಸ್ಪರ ಬದಲಿಸಲು ಅನುಮತಿಯಿಲ್ಲ. ಮೊದಲು ಕೊಟ್ಟ ಡೋಸ್ ನ ಕೋವಿಡ್-19 ಲಸಿಕೆಯನ್ನೇ 14 ದಿನಗಳು ಕಳೆದ ನಂತರ ಎರಡನೇ ಬಾರಿ ನೀಡಬೇಕಾಗುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಮನೋಹರ್ ಅಗ್ನನಿ ತಿಳಿಸಿದ್ದಾರೆ.

ಎಚ್ಚರಿಕೆ ಮತ್ತು ವ್ಯತಿರಿಕ್ತ ಪರಿಣಾಮಗಳು: ಕೋವಿಡ್-19 ಲಸಿಕೆಗಳನ್ನು ನೀಡುವುದರಿಂದ ವ್ಯಕ್ತಿಯ ದೇಹಕ್ಕಾಗುವ ಅಡ್ಡಪರಿಣಾಮಗಳು, ಶಾರೀರಿಕ ಸಮಸ್ಯೆ, ಅವುಗಳ ಡೋಸೇಜ್, ಶೀತಲ ಸಂಗ್ರಹ ಅಗತ್ಯತೆ ಮೊದಲಾದವುಗಳ ಕುರಿತು ಸಹ ಮಾರ್ಗಸೂಚಿಯನ್ನು ಹೊರಡಿಸಿದೆ.

ಕೋವಿಡ್-19 ಲಸಿಕೆಯ ವಿರೋಧಾಭಾಸಗಳನ್ನು ಪಟ್ಟಿಮಾಡಿ, ಲಸಿಕೆಯ ಹಿಂದಿನ ಡೋಸ್‌ಗೆ ಅನಾಫಿಲ್ಯಾಕ್ಟಿಕ್ ಅಥವಾ ಅಲರ್ಜಿ ಸಮಸ್ಯೆ ಹೊಂದಿರುವ ವ್ಯಕ್ತಿಗಳಲ್ಲಿ ಮತ್ತು ಲಸಿಕೆಗಳು ಅಥವಾ ಚುಚ್ಚುಮದ್ದಿನ ಚಿಕಿತ್ಸೆಗಳಿಗೆ ತಕ್ಷಣದ ಅಥವಾ ವಿಳಂಬವಾದ ಅನಾಫಿಲ್ಯಾಕ್ಸಿಸ್ ಅಥವಾ ಅಲರ್ಜಿಯ ಪ್ರತಿಕ್ರಿಯೆಯನ್ನು ಹೊಂದಿರುವ ವ್ಯಕ್ತಿಗಳಲ್ಲಿ ಲಸಿಕೆಯ ಬಳಕೆ ವಿರುದ್ಧ ಆರೋಗ್ಯ ಸಚಿವಾಲಯ ಎಚ್ಚರಿಕೆ ನೀಡಿದೆ.

ಗರ್ಭಿಣಿ ಮತ್ತು ಹಾಲುಣಿಸುವ ಮಹಿಳೆಯರು ಇಲ್ಲಿಯವರೆಗೆ ಯಾವುದೇ ಕೋವಿಡ್-19 ಲಸಿಕೆ ಕ್ಲಿನಿಕಲ್ ಪ್ರಯೋಗದಲ್ಲಿ ಭಾಗವಹಿಸಿಲ್ಲ. ಆದ್ದರಿಂದ, ಗರ್ಭಿಣಿಯರು ಅಥವಾ ಗರ್ಭಧಾರಣೆಯ ಬಗ್ಗೆ ಖಚಿತವಾಗಿರದ ಮತ್ತು ಹಾಲುಣಿಸುವ ಮಹಿಳೆಯರು ಈ ಸಮಯದಲ್ಲಿ ಕೋವಿಡ್-19 ಲಸಿಕೆ ಪಡೆಯಬಾರದು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಯಾವುದೇ ರಕ್ತಸ್ರಾವ ಅಥವಾ ಹೆಪ್ಪುಗಟ್ಟುವಿಕೆಯ ಅಸ್ವಸ್ಥತೆಯ ಸಮಸ್ಯೆ ಹೊಂದಿರುವ ವ್ಯಕ್ತಿಗಳಿಗೆ ಲಸಿಕೆಯನ್ನು ಎಚ್ಚರಿಕೆಯಿಂದ ನೀಡಬೇಕು. 

ಸಾರ್ಸ್ -ಕೋವಿಡ್-2 ಸೋಂಕಿನ ಸಕ್ರಿಯ ರೋಗಲಕ್ಷಣಗಳನ್ನು ಹೊಂದಿರುವ ವ್ಯಕ್ತಿಗಳಲ್ಲಿ, ಕೊರೋನಾ ವೈರಸ್ ಸೋಂಕಿತ ರೋಗಿಗಳಿಗೆ ಸಾರ್ಸ್ ಕೋವಿಡ್-2 ಮೊನೊಕ್ಲೋನಲ್ ಪ್ರತಿಕಾಯಗಳು ಅಥವಾ ಚೇತರಿಸಿಕೊಳ್ಳುವ ಪ್ಲಾಸ್ಮಾವನ್ನು ನೀಡಬಹುದಾಗಿದೆ. ಯಾವುದೇ ಅನಾರೋಗ್ಯದ ಕಾರಣದಿಂದಾಗಿ ತೀವ್ರ ಅಸ್ವಸ್ಥ ಮತ್ತು ಆಸ್ಪತ್ರೆಗೆ ದಾಖಲಾದ ರೋಗಿಗಳು, ಕೋವಿಡ್-19 ಲಸಿಕೆ ನೀಡಿ ಚೇತರಿಸಿಕೊಂಡ ನಂತರ ನಾಲ್ಕರಿಂದ ಎಂಟು ವಾರಗಳವರೆಗೆ ಬೇರೆ ರೋಗಗಳಿಗೆ ಲಸಿಕೆ ನೀಡಲು ಸಾಧ್ಯವಾಗುತ್ತದೆ.

ಈಗಾಗಲೇ ಮೊದಲ ಹಂತದಲ್ಲಿ ನೀಡಲು ಸಾಧ್ಯವಾಗುವಷ್ಟು ಭಾರತ್ ಬಯೋಟೆಕ್ ನ ಕೊವಾಕ್ಸಿನ್ ಮತ್ತು ಸೆರಂ ಇನ್ಸ್ ಟ್ಯೂಟ್ ನ ಕೋವಿಶೀಲ್ಡ್ ಲಸಿಕೆಗಳನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹಂಚಿಕೆ ಮಾಡಲಾಗಿದ್ದು ನಾಳೆಯಿಂದ ಲಸಿಕೆ ಅಭಿಯಾನ ಆರಂಭವಾಗಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. 

ಕೋವಿಡ್-19 ಲಸಿಕೆ ನೀಡಿದ ತಿಂಗಳ ಬಳಿಕ ಕಾಣಿಸಿಕೊಳ್ಳಬಹುದಾದ ಅಡ್ಡಪರಿಣಾಮಗಳಿಗೆ ಪ್ಯಾರೆಸಿಟಮಾಲ್ ತೆಗೆದುಕೊಳ್ಳಬಹುದು ಎಂದು ಆರೋಗ್ಯ ಸಚಿವಾಲಯ ಪತ್ರದಲ್ಲಿ ತಿಳಿಸಿದೆ.  (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *