ಮಧು ಬಂಗಾರಪ್ಪನವರ ಮನ ಒಲಿಸುತ್ತೇವೆ- ನಮಗೂ ಸಭಾಪತಿ ಸ್ಥಾನ ಕೊಡಬೇಕು, ನಾವೇನು ಸನ್ಯಾಸಿಗಳಲ್ಲ: ಬಸವರಾಜ್ ಹೊರಟ್ಟಿ

ನಮಗೂ ಸಭಾಪತಿ ಸ್ಥಾನ ಕೊಡಬೇಕು, ನಾವೇನೂ‌ ಸನ್ಯಾಸಿಗಳಲ್ಲ ಎಂದು ಜೆಡಿಎಸ್ ಹಿರಿಯ ಮುಖಂಡ, ವಿಧಾನಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಅವರು ಹೇಳಿದ್ದಾರೆ.

Basavaraj Horatti

ಬೆಂಗಳೂರು: ನಮಗೂ ಸಭಾಪತಿ ಸ್ಥಾನ ಕೊಡಬೇಕು, ನಾವೇನೂ‌ ಸನ್ಯಾಸಿಗಳಲ್ಲ ಎಂದು ಜೆಡಿಎಸ್ ಹಿರಿಯ ಮುಖಂಡ, ವಿಧಾನಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಅವರು ಹೇಳಿದ್ದಾರೆ.

ಇಂದು ವಿಧಾನಸೌಧದಲ್ಲಿ, ವಿಧಾನಪರಿಷತ್ ನಲ್ಲಿ ಸಭಾಪತಿ ವಿರುದ್ಧ ಬಿಜೆಪಿ ಅವಿಶ್ವಾಸ ನಿರ್ಣಯ ಮಂಡನೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಅವಿಶ್ವಾಸ ನಿರ್ಣಯ ಮಂಡನೆಗೆ ನಮ್ಮ ಬೆಂಬಲವೂ ಇದೆ. ನಾವು ಸಹಿ ಹಾಕಿ ಇಟ್ಟುಕೊಂಡಿದ್ದೇವೆ, ವರಿಷ್ಠರು ಹೇಳಿದ ತಕ್ಷಣ ವಿಧಾನಪರಿಷತ್ ಕಾರ್ಯದರ್ಶಿಗೆ ಪತ್ರ ಕೊಡುತ್ತೇವೆ. ಹೊರಟ್ಟಿ ಅವರು ಸಭಾಪತಿ ಆಗಬೇಕು ಎಂದು ಎಚ್.ಡಿ ದೇವೇಗೌಡರು, ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸ್ಪಷ್ಟತೆ ಇದೆ ಎಂದರು.

ಸಭಾಪತಿ ಸ್ಥಾನ ಜೆಡಿಎಸ್ ಗೆ ಸಿಗಲಿದೆ. ಈಗಾಗಲೇ ಹೆಚ್.ಡಿ ದೇವೇಗೌಡರು ನನ್ನನ್ನು ಸಭಾಪತಿ ಮಾಡಲು ತೀರ್ಮಾನ ಮಾಡಿದ್ದಾರೆ. ಈ ವಿಚಾರ ನನ್ನ ಬಳಿ ಚರ್ಚೆ ಮಾಡಿದ ನಂತರ ತೀರ್ಮಾನ ಆಗಬೇಕಿದೆ ಎಂದರು.

ಬಿಜೆಪಿಯಲ್ಲೂ ಸಭಾಪತಿ ಸ್ಥಾನಕ್ಕೆ ಆಕಾಂಕ್ಷಿಗಳಿರಬಹುದು. ನಾವೇನು ರಾಜಕೀಯ ಸನ್ಯಾಸಿಗಳಲ್ಲ. ಸಭಾಪತಿ ವಿಚಾರವನ್ನು ದೇವೇಗೌಡರು, ಕುಮಾರಸ್ವಾಮಿ ತೀರ್ಮಾನ ಮಾಡುತ್ತಾರೆ. ಜೆಡಿಎಸ್ 13 ಸದಸ್ಯರಿದ್ದಾರೆ. ನಾವೂ ನೋಡಿ ಬೆಂಬಲ ನೀಡಬೇಕಲ್ಲ ಎಂದರು. 

ಜನತಾ ಪರಿವಾರ ಒಗ್ಗೂಡಿಸಲು ಮುಂದಾಗಿದ್ದೇವೆ. ಮಧು ಬಂಗಾರಪ್ಪ ಅವರನ್ನು ಮನವೊಲಿಸುತ್ತೇವೆ. ಅದೇ ರೀತಿ ಜಿ.ಟಿ ದೇವೇಗೌಡರನ್ನೂ ಬೇಟಿ ಮಾಡುತ್ತೇವೆ. ಗುಬ್ಬಿ ಶ್ರೀನಿವಾಸ್ ಸೇರಿ ಯಾರು ಯಾರು ಅಸಮಾಧಾನ ಹೊಂದಿರುವವರು ಇದ್ದಾರೋ ಅವರೆಲ್ಲರನ್ನೂ ಮನವೊಲಿಕೆ ಮಾಡುತ್ತೇವೆ ಎಂದರು.

ನಮ್ಮಲ್ಲಿ ಪರಸ್ಪರ ಸಂಪರ್ಕದ ಸಮಸ್ಯೆ ಆಗಿದೆ. ಯಾರು ಏನೇ ಹೇಳಿದರೂ ಅದನ್ನು ನಂಬಿ ಬಿಡುತ್ತಾರೆ. ಬಿಹಾರ ಮಾದರಿಯಲ್ಲಿ ಜನತಾ ಪರಿವಾರ ಒಗ್ಗೂಡಿಸುತ್ತೇವೆ. ಜನತಾ ಪರಿವಾರದಿಂದ ಬೇರೆ ಪಕ್ಷಗಳಿಗೆ ಹೋದವರು ಸೋಲು ಕಂಡಿದ್ದಾರೆ. ಇಬ್ರಾಹಿಂ ಅವರನ್ನು ರಾಜ್ಯಾಧ್ಯಕ್ಷ ಮಾಡಲು ದೇವೇಗೌಡರು ತೀರ್ಮಾನಿಸುತ್ತಾರೆ. 2023ಕ್ಕೆ ಜನತಾ ಪರಿವಾರದ ಸರ್ಕಾರ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. ಕರ್ನಾಟಕ ಸೇರಿ ಎಲ್ಲಾ ಕಡೆ ಪ್ರಾದೇಶಿಕ ಪಕ್ಷಗಳ ಯುಗ ಪ್ರಾರಂಭವಾಗಿದೆ. ಎಲ್ಲರನ್ನೂ ಪಕ್ಷದಲ್ಲಿ ಉಳಿಸಿಕೊಳ್ಳುವ ತೀರ್ಮಾನ ಮಾಡುತ್ತಿದೆ ಎಂದು ಹೇಳಿದರು.

ಪಕ್ಷದ ಹಿರಿಯ ಮುಖಂಡ ಕೋನರೆಡ್ಡಿ ಮಾತನಾಡಿ, ಜೆಡಿಎಸ್ ನಿಂದ ಹೊರ ಹೋದವರು ಬಹಳ ಜನ ಇದ್ದಾರೆ. ಮತ್ತೆ ಎಲ್ಲರನ್ನೂ ಕರೆಯೋ ಪ್ರಯತ್ನ ಮಾಡುತ್ತೇವೆ. ಪಕ್ಷ ಬಿಟ್ಟು ಹೋಗಬೇಡಿ ಎಂದು ಮನವೊಲಿಸುತ್ತೇವೆ. ಜೆಡಿಎಸ್ ಬಿಟ್ಟು ಹೋದವರಿಗೆ ಬೇರೆ ಪಕ್ಷಗಳು ಹೊಂದುವುದಿಲ್ಲ ಎಂದು ತಿಳಿಸಿದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *