

2 ದಿನಗಳ ಹಿಂದಷ್ಟೇ ಕೋವ್ಯಾಕ್ಸಿನ್ ಲಸಿಕೆ ಪಡೆದುಕೊಂಡಿದ್ದ ಶಿವಮೊಗ್ಗ ಜಿಲ್ಲೆಯ ವೈದ್ಯರೊಬ್ಬರು ಸಾವನ್ನಪ್ಪಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ…

ಶ್ರೀಧರ ಗ. ಭಟ್ಟ ಕಡಖಂಡ ನಿಧನ
ಸಿದ್ದಾಪುರ- : ಶ್ರೀಧರ ಗಣಪತಿ ಭಟ್ಟ ಕಡಖಂಡ (65) ಮಂಗಳವಾರ ಸಂಜೆ 6.00 ಘಂಟೆಗೆ ಸ್ವಗೃಹ ಕಡಖಂಡದಲ್ಲಿ ನಿಧನರಾದರು.
ಅವರು ಪ್ರಗತಿಪರ ಕೃಷಿಕರಾಗಿದ್ದರು. ಹಾಗೂ ಯಕ್ಷಗಾನ ಕಲಾ ಪೋಷಕರೂ ಸಹ ಆಗಿದ್ದರು. ಪತ್ನಿ, ಓರ್ವ ಪುತ್ರ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಟಿ.ಎಂ.ಎಸ್. ಅಧ್ಯಕ್ಷ ಆರ್.ಎಮ್. ಹೆಗಡೆ ಬಾಳೇಸರ ಹಾಗೂ ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ ಹೆಗಡೆ ಕಡವಡಿ, ಜಿ.ಜಿ. ಹೆಗಡೆ ಬಾಳಗೋಡ ಮುಂತಾದ ಗಣ್ಯರು ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.

ಶಿವಮೊಗ್ಗ: 2 ದಿನಗಳ ಹಿಂದಷ್ಟೇ ಕೋವ್ಯಾಕ್ಸಿನ್ ಲಸಿಕೆ ಪಡೆದುಕೊಂಡಿದ್ದ ಶಿವಮೊಗ್ಗ ಜಿಲ್ಲೆಯ ವೈದ್ಯರೊಬ್ಬರು ಸಾವನ್ನಪ್ಪಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
ಡಾ.ಟಿ.ಎ.ಜಯಪ್ರಕಾಶ್ ಸಾವನ್ನಪ್ಪಿದ ವೈದ್ಯರಾಗಿದ್ದಾರೆ. ಜಯಪ್ರಕಾಶ್(59) ನಗರದ ಪ್ರಸಿದ್ಧ ವೈದ್ಯರಾಗಿದ್ದು, ತಮ್ಮದೇ ಆಸ್ಪತ್ರೆ ಹೊಂದಿದ್ದರು, ನಗರದ ಸುಬ್ಬಯ್ಯ ಆಸ್ಪತ್ರೆಯಲ್ಲಿ ಮೂಳೆ ಚಿಕಿತ್ಸೆ ಬಗ್ಗೆ ಉಪನ್ಯಾಸ ಮಾಡುತ್ತಿದ್ದರು.
ಎರಡು ದಿನಗಳ ಹಿಂದಷ್ಟೇ ಜಯಪ್ರಕಾಶ್ ಅವರು ಕೊವ್ಯಾಕ್ಸಿನ್ ಲಸಿಕೆ ಹಾಕಿಸಿಕೊಂಡಿದ್ದರು. ಲಸಿಕೆ ಹಾಕಿಸಿಕೊಂಡ ಫೋಟೋ ಎಲ್ಲೆಡೆ ಶೇರ್ ಮಾಡಿಕೊಂಡು ಲಸಿಕೆ ಬಗ್ಗೆ ಅನುಮಾನ ಬೇಡವೆಂದು ಹೇಳಿದ್ದರು.
ಬುಧವಾರ ಬೆಳಿಗ್ಗೆ ವೈದ್ಯರಲ್ಲಿ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಅಷ್ಟರಲ್ಲಾಗಲೇ ವೈದ್ಯರು ಸಾವನ್ನಪ್ಪಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ನಡುವೆ ಪ್ರಕರಣ ಸಂಬಂಧ ಹೇಳಿಕೆ ನೀಡಿರುವ ಜಿಲ್ಲಾ ಆರೋಗ್ಯಾಧಿಕಾರಿ ರಾಜೇಶ್ ಸುರಗಿಹಳ್ಳಿಯವರು, ಜಯಪ್ರಕಾಶ್ ಅವರು ಹೃದಯ ಸ್ತಂಭನದಿಂದಾಗಿ ಸಾವನ್ನಪ್ಪಿದ್ದಾರೆಯೇ ಹೊರತು ಲಸಿಕೆಯ ಅಡ್ಡ ಪರಿಣಾಮಗಳಿಂದಾಗಿ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಡುವೆ ಬುಧವಾರ ಶೇ.55 ಲಷ್ಟು ಜನರು ಆರೋಗ್ಯ ಕಾರ್ಯಕರ್ತರು ಲಸಿಕೆಯನ್ನು ಪಡೆದುಕೊಂಡಿದ್ದು, ಚಿತ್ರದುರ್ಗ, ಧಾರವಾಡ, ಕೊಪ್ಪಳದಲ್ಲಿ ಶೇ.28 ರಷ್ಟು ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
