ಹಸುರು ಹೋಗಿ ಕೆಂಪಾಗುವವರೆಗೆ ಕಾಯಬಾರದು ಬನ್ನಿ !

(ನಾಳಿನ ಐತಿಹಾಸಿಕ ರೈತ ಜಾಥಾಕ್ಕೆ ಇಲ್ಲಿವೆ ದೊಡ್ಡ ಕಾರಣಗಳು)ಹಿಂದೆಂದೂ ಕಂಡಿರದಷ್ಟುದೊಡ್ಡ ಸಂಖ್ಯೆಯಲ್ಲಿ ನಾಳೆ ರೈತರು ಮುನ್ನೆಲೆಗೆ ಬರಲಿದ್ದಾರೆ. ಹೊಟ್ಟೆಗೆ ಹಿಟ್ಟು/ಅನ್ನ ತಿನ್ನುವವರೆಲ್ಲ ಜಾತಿ/ಧರ್ಮ/ರಾಜಕೀಯ ಪಕ್ಷಭೇದ ಮರೆತು ರೈತರನ್ನು ಬೆಂಬಲಿಸಬೇಕು. ಏಕೆ ಬೆಂಬಲಿಸಬೇಕು ಎಂಬುದಕ್ಕೆ ಮುಖ್ಯ ಕಾರಣಗಳು ಇಂತಿವೆ:

1. ಎಲ್ಲ ಸುಧಾರಿತ ದೇಶಗಳಲ್ಲೂ ರೈತರ ಶ್ರಮಕ್ಕೆ ಸಬ್ಸಿಡಿ ನೀಡಲಾಗುತ್ತದೆ. ಅಮೆರಿಕದಲ್ಲಿ ರೈತರ ಉತ್ಪಾದನಾ ವೆಚ್ಚದ ಶೇ 12ರಷ್ಟು, ಐರೋಪ್ಯ ಸಂಘದವರು ಶೇ. 20ರಷ್ಟು ಮತ್ತು ಜಪಾನ್‌, ದ.ಕೊರಿಯಾ, ನಾರ್ವೆ, ಐಸ್ಲಾಂಡ್‌ ದೇಶಗಳಲ್ಲಿ ಶೇಕಡಾ 40-60ರಷ್ಟು ಸಬ್ಸಿಡಿ ನೀಡಿವೆ (2019ರಲ್ಲಿ). ಆದರೆ ಭಾರತ ದೇಶದಲ್ಲಿ ಶೂನ್ಯಕ್ಕಿಂತ ಶೇ 5ರಷ್ಟು ಕೆಳಗೆ! ಅಂದರೆ ರೈತರೇ ಬಳಕೆದಾರರಿಗೆ ಶೇಕಡಾ 5ರಷ್ಟು ಸಬ್ಸಿಡಿ ಕೊಡುತ್ತಾರೆ. ಜಗತ್ತಿನ ಅತಿ ಬಡ ಕೃಷಿಕರ ಬೆವರಿನ ದುಡಿಮೆಯ ಫಲ ಪಡೆಯುವ ನಾವು ಅದರ ಮೌಲ್ಯದಲ್ಲೂ ವಿನಾಯ್ತಿ ಕೇಳುತ್ತೇವೆ. ಅಷ್ಟೇ ಅಲ್ಲ

;2. ಅನುಕೂಲಸ್ಥ ದೇಶಗಳು ಹೊಸ ಹೊಸ ಮಾರ್ಗಗಳ ಮೂಲಕ ರೈತರಿಗೆ ಇನ್ನಷ್ಟು ವಿನಾಯ್ತಿ ಕೊಡುವ ಯೋಜನೆ ಹಾಕಿವೆ. ಅಂದರೆ ಉತ್ಪಾದನೆಗೆ ಅಷ್ಟೇ ಅಲ್ಲ; ಭೂಮಿಯ ಒಟ್ಟಾರೆ ಒಳಿತಿಗೆ (ಭೂತಾಪವನ್ನು ಕಡಿಮೆ ಮಾಡುವತ್ತ ರೈತರು ನೀಡುವ ಕೊಡುಗೆಗೆ) ಬೆಲೆ ಕಟ್ಟಿ ಅದಕ್ಕೂ ಪರಿಹಾರ ನೀಡತೊಡಗಿವೆ. ಅದನ್ನ ಪರಿಸರ ಕಲ್ಯಾಣ ಕೊಡುಗೆ ಎಂದು ಹೆಸರಿಸಿ ರೈತರ ಕೈಗೆ ಇನ್ನೂ ತುಸು ಹಣ ಸೇರುವಂತೆ ಮಾಡುತ್ತಿದ್ದಾರೆ.

3. ಸುಧಾರಿತ ದೇಶಗಳ ಆ ಅನುಕೂಲಸ್ಥ ರೈತರೊಂದಿಗೆ ನಮ್ಮ ಬಹುತೇಕ ಬಡ, ಹಿಂದುಳಿದ, ಅನಕ್ಷರಸ್ಥ ಕೃಷಿಕರು ಪೈಪೋಟಿ ಮಾಡಬೇಕು. ವಿಶೇಷವಾಗಿ ಬರ, ನೆರೆ ಹಾವಳಿಗೆ ತುತ್ತಾಗಿ ಯಾವುದೇ ಫಸಲಿನ ಬೆಲೆ (ಉದಾ ಈರುಳ್ಳಿಯ ಬೆಲೆ) ಜಾಸ್ತಿಯಾದಾಗ ಅದನ್ನು ತಗ್ಗಿಸಲೆಂದು ಸರಕಾರ ವಿದೇಶದಿಂದ ಅದನ್ನು ಆಮದು ಮಾಡಿಕೊಳ್ಳುತ್ತದೆ. ಮಳೆಯಲ್ಲಿ ನೆನೆದ ಈರುಳ್ಳಿಯನ್ನು ರೈತ ಮಹಿಳೆ ಕಷ್ಟಪಟ್ಟು ಹೆಕ್ಕಿ ಹೇಗೋ ಒಣಗಿಸಿ ಮಾರುಕಟ್ಟೆಗೆ ಸಾಗಿಸಿ, ತುಸು ಜಾಸ್ತಿ ಬೆಲೆ ಕೇಳಿದರೆ “ಇಲ್ಲ! ಈಜಿಪ್ತಿನಿಂದ ಈರುಳ್ಳಿ ಕಮ್ಮಿ ಬೆಲೆಗೆ ಬಂದಿದೆ, ನಿಮ್ಮದು ಬೇಡ” ಎನ್ನುತ್ತಾರೆ ವರ್ತಕರು.

4. ಈ ಕಾರಣಕ್ಕಾಗಿಯೇ ರೈತರು ತಮ್ಮ ಫಸಲಿಗೆ ಕನಿಷ್ಟ ಬೆಂಬಲ ಬೆಲೆಯನ್ನಾದರೂ (ಕಬೆಂಬೆ) ಕೊಡಿ ಎಂದು ಕೇಳುತ್ತಿದ್ದಾರೆ. ಅಂಥ 22 ಬೆಳೆಗಳಿಗೆ ಕಬೆಂಬೆ ಇದೆ ಹೌದು; ಆದರೆ ಅಕ್ಕಿ-ಗೋಧಿ ಬಿಟ್ಟರೆ ಇನ್ನುಳಿದವು ಹೆಸರಿಗಷ್ಟೆ. ಸರಕಾರ ಅವನ್ನು ಖರೀದಿ ಮಾಡುವುದಿಲ್ಲ. ಸರಕಾರದ್ದೇ ದಾಖಲೆಗಳ ಪ್ರಕಾರ ಹತ್ತು ಬೆಳೆಗಳ ಶೇ 70ರಷ್ಟು ಭಾಗ ಕಬೆಂಬೆಗಿಂತ ಕಡಿಮೆ ದರದಲ್ಲಿ ಮಾರಾಟವಾಗಿವೆ. ಅಕ್ಕಿ-ಗೋಧಿಗಿದ್ದ ಕಬೆಂಬೆಯನ್ನೂ ಸರಕಾರ ಹಿಂತೆಗೆದುಕೊಂಡೀತೆಂದು ಪಂಜಾಬ್‌ ರೈತರು ಭೀತರಾಗಿದ್ದಾರೆ.

5. ಕೃಷಿಯ ಕೂಲಿ ವೆಚ್ಚ, ಒಳಸುರಿಗಳ ಬೆಲೆ ವರ್ಷವರ್ಷಕ್ಕೂ ಹೆಚ್ಚುತ್ತಿದೆ. ಜೊತೆಗೆ ಹವಾಗುಣ ಸಂಕಷ್ಟಗಳಿಂದಾಗಿ ರೈತನ ಬೆಳೆ ಪ್ರಮಾಣ ಅನಿಶ್ಚಿತವಾಗುತ್ತಿದೆ. ಸರಕಾರಿ ನೌಕರರ ಸಂಬಳ ಕಳೆದ ಇಪ್ಪತ್ತು ವರ್ಷಗಳಲ್ಲಿ ಆರು ಪಟ್ಟು ಹೆಚ್ಚಾಗಿದೆ. ರೈತರು ಮಾತ್ರ ಮೇಲೇಳುವ ಬದಲು ನಿಂತಲ್ಲೇ ಕುಸಿಯುತ್ತಿದ್ದಾರೆ.

6. ರೈತರು ಅನಿವಾರ್ಯವಾಗಿ ಖಾಸಗಿ ಧನಿಕರಿಂದ ಸಾಲ ಪಡೆಯುತ್ತಾರೆ. ಉದ್ಯಮಿಗಳು ಸರಕಾರಿ ಬ್ಯಾಂಕ್‌ಗಳಿಂದ ಸಾಲ ಪಡೆದು, ಮರುಪಾವ್ತಿ ಮಾಡಲಾಗದಿದ್ದರೆ ಸರಕಾರ ಅಂಥ ಸಾಲವನ್ನು ರೈಟ್‌ ಆಫ್‌ (ಮನ್ನಾ) ಮಾಡಿಬಿಡುತ್ತದೆ. 2019ರಲ್ಲಿ ಉದ್ಯಮಿಗಳು ಪಡೆದ 254 ಸಾವಿರ ಕೋಟಿ ರೂಪಾಯಿಗಳಷ್ಟು ಇಂಥ ಕೆಟ್ಟ ಸಾಲಗಳನ್ನು ಸರಕಾರ ಮನ್ನಾ ಮಾಡಿದೆ.ರೈತರಿಗೆ ಸರಕಾರ ಆಗೊಮ್ಮೆ ಈಗೊಮ್ಮೆ ನೆರವನ್ನು ಘೋಷಿಸುತ್ತದೆ. ಆದರೆ ಅದರ ವೈಖರಿ ಹೇಗಿರುತ್ತದೆ ಎಂದರೆ (ಇಂದಿನ ಡೆಕ್ಕನ್‌ ಹೆರಾಲ್ಡ್‌ ವರದಿಯ ಪ್ರಕಾರ) 2019ರಲ್ಲಿ ಘೋಷಿಸಿದ್ದ ನೆರೆ ಪರಿಹಾರ ಧನದಲ್ಲಿ ಶೇ. 10ಕ್ಕಿಂತ ಕಡಿಮೆ ಹಣವನ್ನು ಸರಕಾರ ಬಿಡುಗಡೆ ಮಾಡಿದೆ. (ಘೋಷಿಸಿದ್ದು 427 ಕೋಟಿ; ಬಿಡುಗಡೆ ಮಾಡಿದ್ದು 41ಕೋಟಿ. ಅದರಲ್ಲೂ ಎಷ್ಟು ಅಂಶ ರೈತರಿಗೆ ತಲುಪಿದೆ ಲೆಕ್ಕಕ್ಕೆ ಸಿಗಲಿಕ್ಕಿಲ್ಲ).

ಇದುವರೆಗಿನ ಎಲ್ಲ ಸರಕಾರಗಳೂ ರೈತರ ಹಿತವನ್ನು ಕಡೆಗಣಿಸಿದ್ದಕ್ಕೇ ಈಗ ಸ್ಫೋಟಕ ಸ್ಥಿತಿ ಬಂದಿದೆ. ದನಿ ಇಲ್ಲದ ಜನರು ಈ ಬಾರಿ ಹೇಗೋ ದೇಶಾದ್ಯಂತ ಒಗ್ಗಟ್ಟಾಗಿ ದನಿ ಎತ್ತಿದ್ದಾರೆ. ಅವರು ಆಹಾರವನ್ನಷ್ಟೇ ಅಲ್ಲ, ತಮ್ಮ ನಿತ್ಯದ ಶ್ರಮದ ಮೂಲಕ ಕ್ಲೈಮೇಟ್‌ ವಿಪತ್ತುಗಳಿಗೆ ಕೈಲಾದ ಪರಿಹಾರವನ್ನೂ ನಮಗಾಗಿ ಕಲ್ಪಿಸುತ್ತಿದ್ದಾರೆ. ಅವರ ದನಿಗೆ ನಮ್ಮ ದನಿಯನ್ನೂ ಸೇರಿಸೋಣ ಬನ್ನಿ. ಅಷ್ಟಾದರೂ ಅನ್ನದ ಋಣ ತೀರಿಸೋಣ. ನಮ್ಮ ಬೆಂಬಲವನ್ನು ತೋರಿಸೋಣ.

*[ಈ ಪೋಸ್ಟ್‌ನ ಮೊದಲರ್ಧದ ಮಾಹಿತಿ ಮೂಲ: ಡೌನ್‌ ಟು ಅರ್ಥ್‌ ಪಾಕ್ಷಿಕ 15-31, ಜನವರಿ 2021 ಸುನಿತಾ ನರೇನ್‌ ಸಂಪಾದಕೀಯ; ಇದರೊಂದಿಗೆ ಜೋಡಿಸಿದ ಚಿತ್ರಗಳು ಹಿಂದಿನವು= ಸಾಂದರ್ಭಿಕ ಅಷ್ಟೆ; ಮೊದಲನೆಯದು ಐಎನ್‌ಎಸ್‌, ಎರಡನೆಯದು ಪಿಟಿಐ ಕೃಪೆ; )

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *