![](https://i0.wp.com/samajamukhi.net/wp-content/uploads/2021/01/IMG-20210126-WA0102.jpg?resize=820%2C500&ssl=1)
![](https://i0.wp.com/samajamukhi.net/wp-content/uploads/2021/08/S-scaled.jpg?fit=2560%2C1810&ssl=1)
ಮಲವಂತಿಗೆ ಗ್ರಾಮದ ಬದಮನೆ ಅಬ್ಬಿ ಜಲಪಾತದಲ್ಲಿ ಗುಡ್ಡ ಕುಸಿತದಿಂದಾಗಿ ಮಣ್ಣಿನಡಿ ಸಿಲುಕಿದ್ದ ಉಜಿರೆಯ ವಿದ್ಯಾರ್ಥಿ ಸನತ್ ಶೆಟ್ಟಿ (18) ಮೃತದೇಹ ಶೋಧಕಾರ್ಯ ವಿಫಲವಾಗಿದೆ. ಜಲಪಾತದಲ್ಲಿ ಸೋಮವಾರ ಸಂಭವಿಸಿದ್ದ ಭೂಕುಸಿತದಿಂದಾಗಿ ಸನತ್ ಭಾರೀ ಪ್ರಮಾಣದ ಮಣ್ಣು ಮತ್ತು ಇತರ ಭಗ್ನಾವಶೇಷಗಳಡಿ ಸಿಲುಕಿದ್ದರು.
![ದುರಂತ ನಡೆದ ಸ್ಥಳದಲ್ಲಿ ಪೋಲೀಸರು, ಅಧಿಕಾರಿಗಳ ಪರಿಶೀಲನೆ](https://i0.wp.com/media.kannadaprabha.com/uploads/user/imagelibrary/2021/1/27/w900X450/badamane_abbi.jpg?w=760&ssl=1)
ಕ್ರಿಕೆಟ್ ಪಂದ್ಯಾವಳಿ-
ಗಣರಾಜ್ಯೋತ್ಸವದ ಅಂಗವಾಗಿ ತಾಲೂಕಾ ಆಡಳಿತದ ಸಂಯೋಜನೆ ಹಾಗೂ ತಾಲೂಕಾ ಪತ್ರಕರ್ತರ ಸಂಘದ ಅಯೋಜನೆಯಲ್ಲಿ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಯನ್ನು ಕಡಕೇರಿ ಶಾಲಾ(ಮಹಾತ್ಮಾ ಗಾಂಧಿ) ಮೈದಾನದಲ್ಲಿ ಆಯೋಜಿಸಲಾಗಿತ್ತು.
ಪಂದ್ಯಾವಳಿಯ ನ್ನು ತಹಶೀಲ್ದಾರ್ ಮಂಜುಳ ಭಜಂತ್ರಿ ಉದ್ಘಾಟಿಸಿ ಮಾತನಾಡಿ ಕ್ರೀಡೆ ಸಂತೋಷ ನೀಡುತ್ತದೆ. ಕ್ರೀಡೆಯಲ್ಲಿ ಸಂತೋಷ ದಿಂದ ಪಾಲ್ಗೊಳ್ಳಬೇಕು ಎಂದರು.
ಎಸಿಎಫ್ ಅಜೀಜ್ ಮಾತನಾಡಿ ಗುಂಪು ಕ್ರೀಡೆಗಳಿಂದ ನಾಯಕತ್ವ ಗುಣ ಬೆಳೆಯುತ್ತದೆ. ಮನರಂಜನೆ, ದೈಹಿಕ ಸಾಮರ್ಥ್ಯ ಬೆಳೆಯುತ್ತದೆ. ಸೋಲು ಗೆಲುವು ಮುಖ್ಯ ವಲ್ಲ ಕ್ರೀಡಾ ಮನೋಭಾವದಿಂದ ಆಡಬೇಕು ಎಂದರು.
ಸಿಪಿಐ ಎನ್ ಮಹೇಶ್ ಮಾತನಾಡಿ ಕ್ರೀಡಾ ಮನೋಭಾವದಿಂದ ಆಡೋಣ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ, ಗ್ರಾಮ ಪಂಚಾಯತ್ ಸದಸ್ಯ ಕ್ರಷ್ಣಮೂರ್ತಿ ಮಡಿವಾಳ, ಪ್ರಾಥಮಿಕ ಶಾಲಾ ನೌಕರ ಸಂಘದ ಅಧ್ಯಕ್ಷ ಸತೀಶ ಹೆಗಡೆ, ತಾಲೂಕು ಪತ್ರಕರ್ತ ಸಂಘದ ಅಧ್ಯಕ್ಷ ಗಣೇಶ ಭಟ್ ಮಾತನಾಡಿದರು.
ನಿರ್ಣಾಯಕ ಟಿ ಬಿ ಗೌಡ ಉಪಸ್ಥತರಿದ್ದರು
ಸುರೇಶ ಕಡಕೇರಿ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.
![](https://i0.wp.com/samajamukhi.net/wp-content/uploads/2021/01/IMG-20210126-WA0093.jpg?resize=723%2C1024&ssl=1)
![](https://i0.wp.com/samajamukhi.net/wp-content/uploads/2021/01/IMG-20210125-WA0065.jpg?resize=724%2C1024&ssl=1)
![](https://i0.wp.com/samajamukhi.net/wp-content/uploads/2021/01/IMG-20210125-WA0064.jpg?resize=726%2C1024&ssl=1)
![](https://i0.wp.com/samajamukhi.net/wp-content/uploads/2021/01/IMG-20210125-WA0068.jpg?resize=726%2C1024&ssl=1)
ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಬದಮನೆ ಅಬ್ಬಿ ಜಲಪಾತದಲ್ಲಿ ಗುಡ್ಡ ಕುಸಿತದಿಂದಾಗಿ ಮಣ್ಣಿನಡಿ ಸಿಲುಕಿದ್ದ ಉಜಿರೆಯ ವಿದ್ಯಾರ್ಥಿ ಸನತ್ ಶೆಟ್ಟಿ (18) ಮೃತದೇಹ ಶೋಧಕಾರ್ಯ ವಿಫಲವಾಗಿದೆ. ಜಲಪಾತದಲ್ಲಿ ಸೋಮವಾರ ಸಂಭವಿಸಿದ್ದ ಭೂಕುಸಿತದಿಂದಾಗಿ ಸನತ್ ಭಾರೀ ಪ್ರಮಾಣದ ಮಣ್ಣು ಮತ್ತು ಇತರ ಭಗ್ನಾವಶೇಷಗಳಡಿ ಸಿಲುಕಿದ್ದರು.
ಅಗ್ನಿಶಾಮಕ ದಳ, ರಾಜ್ಯ ವಿಪತ್ತು ನಿರ್ವಹಣಾ ಘಟಕ, ಪೊಲೀಸ್, ಧರ್ಮಸ್ಥಳದ ವಿಪತ್ತು ನಿರ್ವಹಣಾ ತಂಡ ಮತ್ತು 150 ಕ್ಕೂ ಹೆಚ್ಚು ಸ್ಥಳೀಯರು ಮಣ್ಣಿನ ಪದರಗಳನ್ನು ಸರಿಸಲು ಇಡೀ ದಿನ ಮಾಡಿದ ಪ್ರಯತ್ನಗಳು ಯಶಸ್ವಿಯಾಗಿಲ್ಲ. ಸಂಜೆ 6 ಗಂಟೆಗೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ದುರ್ಗಮ ಪ್ರದೇಶವಾದ ಕಾರಣ ಜೆಸಿಬಿಗಳು ಘಟನಾ ಸ್ಥಳ ತಲುಪಲು ಸಾಧ್ಯವಾಗಿಲ್ಲ. ಅಲ್ಲದೆ ಮಣ್ಣಿನ ಪದರವು ಇಡೀ ಜಲಪಾತವನ್ನು ಆವರಿಸಿದೆ.
![](https://i0.wp.com/media.kannadaprabha.com/uploads/user/imagelibrary/2021/1/26/w900X450/falls.jpg?w=760&ssl=1)
ಈ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿದ ಮೊದಲ ಘಟನೆ ಇದಾಗಿದೆ, ಕೆಲವು ಮನೆಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಪೈಪ್ಲೈನ್ನಲ್ಲಿನ ಸೋರಿಕೆ ಭೂಕುಸಿತಕ್ಕೆ ಕಾರಣವಾಗಬಹುದು ಎಂದು ಸ್ಥಳೀಯರು ಹೇಳಿದ್ದಾರೆ. ಶಾಸಕ ಹರೀಶ್ ಪೂಂಜ, ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ,, ಹಂಗಾಮಿ ತಹಶೀಲ್ದಾರ್ ರಮೇಶ್ ಬಾಬು ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಸನತ್ ಅವರ ಸಹೋದರ ಶಮಿತ್ ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
(kpc)
![](https://i0.wp.com/samajamukhi.net/wp-content/uploads/2021/08/1--scaled.jpg?fit=1810%2C2560&ssl=1)