ಹಕ್ಕುಚ್ಯುತಿ ಕುರಿತು ಚರ್ಚೆಗೆ ಅವಕಾಶ ನೀಡದ ಸ್ಪೀಕರ್‌ ವಿರುದ್ಧ ಕಾಂಗ್ರೆಸ್‌ ಸದಸ್ಯರ ಧರಣಿ

ಹಕ್ಕುಚ್ಯುತಿ ಬಗ್ಗೆ ಪ್ರಸ್ತಾಪಿಸಲು ಪಕ್ಷೇತರ ಶಾಸಕ ಶರತ್‌ ಬಚ್ಚೇಗೌಡ ಅವರಿಗೆ ಅವಕಾಶ ನೀಡದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ನಡೆ ವಿರೋಧಿಸಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸದಸ್ಯರು ವಿಧಾನಸಭೆಯಲ್ಲಿ ಸೋಮವಾರ ಧರಣಿ ನಡೆಸಿದರು.

Assembly session

ಬೆಂಗಳೂರು: ಹಕ್ಕುಚ್ಯುತಿ ಬಗ್ಗೆ ಪ್ರಸ್ತಾಪಿಸಲು ಪಕ್ಷೇತರ ಶಾಸಕ ಶರತ್‌ ಬಚ್ಚೇಗೌಡ ಅವರಿಗೆ ಅವಕಾಶ ನೀಡದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ನಡೆ ವಿರೋಧಿಸಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸದಸ್ಯರು ವಿಧಾನಸಭೆಯಲ್ಲಿ ಸೋಮವಾರ ಧರಣಿ ನಡೆಸಿದರು.

ಪ್ರಶ್ನೋತ್ತರ ಅವಧಿ ಮುಗಿಯುತ್ತಿದ್ದಂತೆ ಹಕ್ಕುಚ್ಯುತಿ ಮಂಡಿಸಲು ಅವಕಾಶ ನೀಡಬೇಕು ಎಂದು ಶರತ್‌ ಬಚ್ಚೇಗೌಡ ಮನವಿ ಮಾಡಿದರು. ಆಗ ಕಾಗೇರಿ, ಕಲಾಪ ಸಲಹಾ ಸಮಿತಿ ನಡೆಯುತ್ತಿದ್ದ ವೇಳೆಯಲ್ಲಿ ಶರತ್‌ ಅವರು ಹಕ್ಕು ಚ್ಯುತಿ ಕುರಿತು ಪತ್ರವೊಂದನ್ನು ನೀಡಿದ್ದಾರೆ. ಅದನ್ನು ನಾನು ಪರಿಶೀಲಿಸಿಲ್ಲ. ಪೂರಕ ಮಾಹಿತಿ ಪಡೆದ ನಂತರ ಅಗತ್ಯ ಕ್ರಮ ಕೈಗೊಳ್ಳುತ್ತೇನೆ ಎಂದರು. 

ಆದರೆ, ಇದಕ್ಕೊಪ್ಪದ ಶರತ್‌, ನನ್ನ ಹಕ್ಕುಚ್ಯುತಿಯಾಗಿದ್ದು, ವಿಷಯ ಪ್ರಸ್ತಾವಕ್ಕೆ ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದರು. ಇದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಧ್ವನಿಗೂಡಿಸಿದರು. ಚರ್ಚೆ ನಂತರ ನಡೆಸಬಹುದು, ಆದರೆ, ಪ್ರಸ್ತಾಪಿಸಲು ಅವಕಾಶ ಕೊಡಿ ಎಂದು ಮನವಿ ಮಾಡಿದರು.

ಕಾಂಗ್ರೆಸ್‌ನ ಕೃಷ್ಣ ಬೈರೇಗೌಡ, ಹಕ್ಕುಚ್ಯುತಿಯಾಗಿದೆ ಎಂದು ಸದಸ್ಯರು ನೋಟಿಸ್‌ ನೀಡಿದ ಬಳಿಕ ವಿಷಯ ಪ್ರಸ್ತಾಪಿಸಲು ಅವಕಾಶ ನೀಡಬೇಕು ಎಂಬುದು ಕಲಾಪದ ನಿಯಮ ಎಂದರು. 

ಇದಕ್ಕೆ ಉತ್ತರಿಸಿದ ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ, ಯಾವಾಗ ಚರ್ಚೆಗೆ ಅವಕಾಶ ನೀಡಬೇಕು ಎಂಬುದನ್ನು ಸಭಾಧ್ಯಕ್ಷರು ನಿರ್ಣಯಿಸುತ್ತಾರೆ ಎಂದರು. 

ಆದರೆ, ಕಾಗೇರಿ ಮಾತ್ರ ಪತ್ರ ನೋಡಿದ ಬಳಿಕ ಅವಕಾಶ ನೀಡುವುದಾಗಿ ಪುನರುಚ್ಚರಿಸಿದರು. ಅದಕ್ಕೆ ಕಾಂಗ್ರೆಸ್‌ ಸದಸ್ಯರು ಒಪ್ಪಲಿಲ್ಲ. ಶರತ್‌ ಬಚ್ಚೇಗೌಡ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸದಸ್ಯರು ಧರಣಿ ನಡೆಸಿದರು. ಈ ಧರಣಿ, ಗದ್ದಲದ ನಡುವೆಯೂ ಸಭಾಧ್ಯಕ್ಷರು ಮೂರು ವಿಧೇಯಕಗಳನ್ನು ಮಂಡನೆಯನ್ನು ಅನುಮೋದಿಸಿದರು. 

ನಂತರ, ಧರಣಿ ನಿರತರನ್ನು ಉದ್ದೇಶಿಸಿ, ನೀವೆಲ್ಲ ಈ ರೀತಿಯಾಗಿ ಒತ್ತಡ ಹೇರುವುದು ಸರಿಯಲ್ಲ’ ಎಂದು ಸಭಾಧ್ಯಕ್ಷರು ಅಸಮಾಧಾನ ವ್ಯಕ್ತಪಡಿಸಿದರು. ಪತ್ರ ನೋಡಿ ಇವತ್ತೇ ಚರ್ಚೆಗೆ ಅವಕಾಶ ನೀಡುವುದಾಗಿ ಭರವಸೆ ನೀಡಿದರು. 
ಆಗ ಸಿದ್ದರಾಮಯ್ಯ, ಧರಣಿ ಕೈಬಿಡಲು ಸದಸ್ಯರಿಗೆ ಸೂಚಿಸಿದರು. 

ನಂತರ ಸ್ಪೀಕರ್‌, ಡಿ.ಕೆ.ಶಿವಕುಮಾರ್ ಅವರೇ, ಯಾವ ಸಂದೇಶ ನೀಡಬೇಕು ಎಂದು ಭಾವಿಸಿದ್ದೀರೋ ಅದನ್ನು ತಲುಪಿಸಿದ್ದೀರಿ ಎಂದರು. ಅದಕ್ಕೆ ಕಾಂಗ್ರೆಸ್‌ ಸದಸ್ಯರು ನಗೆಚಟಾಕಿ ಹಾರಿಸಿದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *