ಸಿದ್ಧಾಪುರ ಮಂಜುಳಾ ಕಾರವಾರಕ್ಕೆ…ದಾವಣಗೆರೆ ತಹಸಿಲ್ಧಾರ್ ಪ್ರಸಾದ್ ಎಸ್.ಎ.ಸಿದ್ಧಾಪುರಕ್ಕೆ

ಕಳೆದ ಒಂದು ವರ್ಷಕ್ಕೂ ಹೆಚ್ಚು ಅವಧಿಯಿಂದ ಸಿದ್ದಾಪುರ ತಹಸಿಲ್ಧಾರರಾಗಿ ಕೆಲಸ ಮಾಡುತಿದ್ದ ಮಂಜುಳಾ ಭಜಂತ್ರಿ ಕಾರವಾರಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ತಹಸಿಲ್ಧಾರ್ ಆಗಿ ವರ್ಗಾವಣೆಯಾಗಿದ್ದರೆ ಅವರ ಜಾಗಕ್ಕೆ ದಾವಣಗೆರೆಯಲ್ಲಿ ಚುನಾವಣಾ ತಹಸಿಲ್ಧಾರ್ ಆಗಿ ಕಾರ್ಯನಿರ್ವಹಿಸುತಿದ್ದ ಪ್ರಸಾದ್ ಎಸ್. ಎ. ಯವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಮಾಡಿದೆ.

ಸಿದ್ದಾಪುರ:ಜೀವನಕ್ಕೆ ಬೆಳಕು ನೀಡುವಗುರುವಿನ ಜನ್ಮೋತ್ಸವವನ್ನು ಪ್ರತಿ ಮನೆಯಿಂದ ದೀಪ ತಂದು ದೀಪೋತ್ಸವದರೀತಿಯಲ್ಲಿ ಆಚರಿಸಿರುವುದು ಒಂದುಅರ್ಥಪೂರ್ಣವಾದಕಾರ್ಯವಾಗಿದೆಎಂದು ನಿವೃತ್ತ ಪ್ರಿನ್ಸಿಪಾಲ್ ಸುರೇಂದ್ರದಫೇ ದಾರಅಭಿಪ್ರಾಯಪಟ್ಟರು.
ಅವರುತಾಲೂಕಿನ ಹೆರವಳ್ಳಿಯಲ್ಲಿ ಮಡಿವಾಳ ಮಾಚಿದೇವರ ಮಂದಿರದಲ್ಲಿಆಚರಿಸಲಾದ ವಚನರಕ್ಷಕ ವೀರ ಮಡಿವಾಳ ಜಯಂತ್ಯೋತ್ಸವದಲ್ಲಿ ಮಾತನಾಡಿದರು. ಪ್ರತಿಯೊಬ್ಬರು ತಮ್ಮೊಳಗೆ ದೇವರನ್ನುಕಾಣಬೇಕು.ಹಿರಿಯರನ್ನುಗೌರವಿಸಬೇಕು.ತಮ್ಮಲ್ಲಿರುವ ಒಣ ಪ್ರತಿಷ್ಠೆಯನ್ನು ಬಿಟ್ಟುಎಲ್ಲರನ್ನು ಸಮಾನವಾಗಿಕಾಣಬೇಕು.ಅವಾಗ ಸಮಾಜದಅಭಿವೃದ್ಧಿಯಾಗುತ್ತದೆಎಂದರು.

ಪತ್ರಕರ್ತಕನ್ನೇಶ ಕೋಲಸಶಿರ್ಸಿ ಮಾತನಾಡಿ ಷೋಷಣೆಗೆ ಒಳಗಾದವರನ್ನು ರಕ್ಷಿಸಲು ಹೋರಾಟ ಮಾಡಿದ ಮಹಾನ್ ವ್ಯಕ್ತಿಗಳು ಶಿವಶರಣರು. ನೇರ ನುಡಿಯ ವ್ಯಕ್ತಿತ್ವದ ಮಾಚಿದೇವರು ಸಮಾಜದಲ್ಲಿನ ಮನಸ್ಸಿನ ಕೊಳೆ ತೊಳೆಯಲು ಅವತಾರ ವೆತ್ತಿದ್ದರು. ಸಮಾಜದಲ್ಲಿ ಸತ್ಯ, ಪ್ರಾಮಾಣಿಕತೆಗೆ ಬೆಲೆ ಇದೆಎಂದು ತೋರಿಸಿಕೊಟ್ಟವರು ಮಾಚಿದೇವರು.ಶರಣರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕುಎಂದರು.
ಪತ್ರಕರ್ತ ದೀವಾಕರ ನಾಯ್ಕ ಶಿವಶರಣರ ವಚನಗಳಲ್ಲಿ ಮನುಕುಲದಉದ್ಧಾರದ ಸಂದೇಶಗಳಿವೆ. ಇಂತಹ ಕಾರ್ಯಕ್ರಮಗಳಿಂದ ಸಮಾಜದ ಸಮ್ಮಿಳಿತವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿಪತ್ರಕರ್ತ ಸುರೇಶ ಮಡಿವಾಳಕಡಕೇರಿ,ಗ್ರಾಮಕಮಿಟಿಅಧ್ಯಕ್ಷ ಕೃಷ್ಣ ಮಡಿವಾಳ ಉಪಸ್ಥಿತರಿದ್ದರು.ಅರ್ಚಕ ಸದಾನಂದಎಸ್‍ಗೌಡ ಸ್ವಾಗತಿಸಿದರು.ಧರ್ಮಪ್ಪ ನಿರೂಪಿಸಿ ವಂದಿಸಿದರು.

ಅವಿರೋಧ ಆಯ್ಕೆ- ಸಿದ್ದಾಪುರ:ತಾಲೂಕಿನ ಹಾರ್ಸಿಕಟ್ಟಾ ವ್ಯವಸಾಯ ಸೇವಾ ಸಹಕಾರಿ ಸಂಘದ ಮುಂದಿನ ಐದು ವರ್ಷದ ಅವಧಿಗೆ ಅಧ್ಯಕ್ಷರಾಗಿ ಮಹಾಬಲೇಶ್ವರ ದೇವರು ಭಟ್ಟ ಅಗ್ಗೆರೆ ಹಾಗೂ ಉಪಾಧ್ಯಕ್ಷರಾಗಿ ಇಂದಿರಾ ಗಜಾನನ ಹೆಗಡೆ ಹಾರ್ಸಿಕಟ್ಟಾ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ಸೋಮವಾರ ಸಂಘದ ಕಚೇರಿಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಆಡಳಿತ ಮಂಡಳಿ ನಿರ್ದೇಶಕ ಅನಂತ ವಿಘ್ನೇಶ್ವರ ಹೆಗಡೆ ಗೊಂಟನಾಳ,ಅನಂತ ಸುಬ್ರಾಯ ಹೆಗಡೆ ಹೊಸಗದ್ದೆ, ಅಶೋಕ ರಾಮಚಂದ್ರ ಹೆಗಡೆ ಹೀನಗಾರ, ನಾಗರಾಜ ಶೇಷಗಿರಿ ಹೆಗಡೆ ಹುಲಿಮನೆ, ಮಂಜುನಾಥ ಕೃಷ್ಣ ನಾಯ್ಕ ತೆಂಗಿನಮನೆ, ವಿಘ್ನೇಶ್ವರ ಹನುಮಂತ ಗೌಡ ಮಾದ್ಲಮನೆ, ಸುಮಾ ಮಂಜುನಾಥ ಹೆಗಡೆ ಹೊನ್ನೆಹದ್ದ, ನಾಗರಾಜ ಬಂಗಾರೇಶ್ವರ ಹೆಗಡೆ ಹೊಲಗದ್ದೆ, ಸುಧಾಕರ ಗಣಪ ಹರಿಜನ ಹೊನ್ನೆಹದ್ದ ಉಪಸ್ಥಿತರಿದ್ದರು. ಚುನಾವಣಾಧಿಕಾರಿ ಆಗಿ ತಾಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಶಿವಕುಮಾರ ಸಿ.ಜಿ. ಕಾರ್ಯನಿರ್ವಹಿಸಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *