ಭಕ್ತರಿಗೆ ಸಂತಸದ ಸುದ್ದಿ: ಜಾತ್ರೆ, ಧಾರ್ಮಿಕ ಉತ್ಸವಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್!

ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಎಲ್ಲ ದೇವಾಲಯಗಳು ಮತ್ತು ಧಾರ್ಮಿಕ ಸಂಸ್ಥೆಗಳಲ್ಲಿ ಜಾತ್ರೆ, ಉತ್ಸವ, ವಿಶೇಷ ಪೂಜೆ, ಅನ್ನದಾಸೋಹ, ಪ್ರಸಾದ ವಿತರಣೆಗೆ ವಿಧಿಸಿದ್ದ ನಿರ್ಬಂಧಗಳನ್ನು ತೆರವುಗೊಳಿಸಿ ಧಾರ್ಮಿಕ ದತ್ತಿ ಇಲಾಖೆ ಮಂಗಳವಾರ ಆದೇಶ ಹೊರಡಿಸಿದೆ. 

Yediyurappa

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಎಲ್ಲ ದೇವಾಲಯಗಳು ಮತ್ತು ಧಾರ್ಮಿಕ ಸಂಸ್ಥೆಗಳಲ್ಲಿ ಜಾತ್ರೆ, ಉತ್ಸವ, ವಿಶೇಷ ಪೂಜೆ, ಅನ್ನದಾಸೋಹ, ಪ್ರಸಾದ ವಿತರಣೆಗೆ ವಿಧಿಸಿದ್ದ ನಿರ್ಬಂಧಗಳನ್ನು ತೆರವುಗೊಳಿಸಿ ಧಾರ್ಮಿಕ ದತ್ತಿ ಇಲಾಖೆ ಮಂಗಳವಾರ ಆದೇಶ ಹೊರಡಿಸಿದೆ. 

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿನ ಎಲ್ಲ ದೇವಸ್ಥಾನಗಳು ಮತ್ತು ಧಾರ್ಮಿಕ ಸಂಸ್ಥೆಗಳಲ್ಲಿ ಜಾತ್ರೆ ಮತ್ತು ರಥೋತ್ಸವ ಸೇರಿದಂತೆ ಎಲ್ಲ ಧಾರ್ಮಿಕ ಆಚರಣೆಗಳಿಗೆ ಮುಜರಾಯಿ ಇಲಾಖೆ ಅನುಮತಿ ನೀಡಿದ್ದು ಮುಂಜಾಗ್ರತಾ ಕ್ರಮ ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದೆ.

ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಮಂಗಳವಾರ ಹೊರಡಿಸಿರುವ ಆದೇಶದಂತೆ ಜಾತ್ರೆ, ಉತ್ಸವ, ಅನ್ನದಾಸೋಹ, ವಿಶೇಷ ಪೂಜೆ ಮತ್ತು ಪ್ರಸಾದ ವಿತರಣೆಯಂತಹ ಧಾರ್ಮಿಕ ಚಟುವಟಿಕೆಗಳಿಗೆ ವಿಧಿಸಲಾಗಿದ್ದ ನಿರ್ಬಂಧಗಳನ್ನು ತೆರವುಗೊಳಿಸಲಾಗಿದೆ.

2020ರ ಮಾರ್ಚ್ ತಿಂಗಳಿನಿಂದಲೂ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿನ ದೇವಾಲಯಗಳಲ್ಲಿ ಈ ಹಿಂದಿನಂತೆ ಸಂಪ್ರದಾಯಗಳಿಗೆ ಅನುಗುಣವಾಗಿ ಉತ್ಸವ ಮತ್ತು ಪೂಜಾ ಕೈಂಕರ್ಯಗಳು ನಡೆದಿಲ್ಲ.

ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರ, ರಾಜ್ಯ ಸರ್ಕಾರಗಳು, ಜಿಲ್ಲಾಧಿಕಾರಿಗಳು ಹೊರಡಿಸಿರುವ ಮತ್ತು ಹೊರಡಿಸಲಿರುವ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಈ ಎಲ್ಲ ಕಾರ್ಯಗಳನ್ನೂ ನಡೆಸಬೇಕು ಎಂದು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ. ಸೆಪ್ಟೆಂಬರ್ 1ರಂದು ಧಾರ್ಮಿಕ ಕೇಂದ್ರಗಳಲ್ಲಿ ಷರತ್ತು ಬದ್ಧ ಸೇವೆಗಳಿಗೆ ಅವಕಾಶ ನೀಡಲಾಗಿತ್ತು. (kpc)

training programme @ kavalkoppa-

ಸಿದ್ದಾಪುರ: ತಾಲೂಕಿನ ಕವಲಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎಸ್ ಡಿ ಎಮ್ ಸಿ ಯವರಿಗೆ ಒಂದು ದಿನದ ತರಭೇತಿ ಕಾರ್ಯ ಗಾರ ಇಂದು ನಡೆಯಿತು.
ಎಸ ಡಿ ಎಂ ಸಿ ಸದಸ್ಯೆ ಪಾವನ ರಾಘವೇಂದ್ರ ಹೆಗಡೆ ದೀಪ ಬೆಳಗಿಸುವ ಮೂಲಕ ತರಬೇತಿ ಗೆ ಚಾಲನೆ ನೀಡಿದರು
ಪ್ರಾಸ್ತಾ ವಿಕವಾಗಿ ಮುಖ್ಯೋಧ್ಯಾಪಕರಾದ ಮಂಗಲ ಆರ ಮಡಿವಾಳ ಮಾತನಾಡಿದರು . ಸಂಪನ್ಮೂಲ ವ್ಯಕ್ತಿ ಯಾಗಿ ಶಿಕ್ಷಕಿ ವೈಶಾಲಿ ಎಸ್ ಡಿ ಎಮ್ ಸಿ ಕುರಿತಾಗಿ ಮಾಹಿತಿ ನೀಡಿದರು
ಎಲ್ಲಾ ಸದಸ್ಯರುಗಳು ತರಬೇತಿ ಪಡೆದರು. ಮನರಂಜನೆ ಗಾಗಿ ಮ್ಯೂಸಿಕಲ್ ಚೇರ್, ಗುಂಡು ಎಸೆತ ದ ಸ್ಪರ್ಧೆ ಗಳನ್ನು ನಡೆಸಲಾಯಿತು.

ಮ್ಯೂಸಿಕಲ್ ಚೇರ್ ಸ್ಪರ್ಧೆಯಲ್ಲಿ ಪಾವನ ರಾಘವೇಂದ್ರ ಹೆಗಡೆ ಪ್ರಥಮ
ರೇಖಾ ಪ್ರಶಾಂತ್ ನಾಯ್ಕ್ ದ್ವಿತೀಯ ಅನಸೂಯಾ ಪ್ರಕಾಶ್ ನಾಯ್ಕ್ ತೃತೀಯ ಸ್ಥಾನ
ಗುಂಡು ಎಸೆತ ದಲ್ಲಿ ಚಂದ್ರಶೇಖರ ನಾಲಿ ಗಾ ರ್ ಪ್ರಥಮ ರೇಖಾ ಪ್ರಶಾಂತ್ ನಾಯ್ಕ್ ದ್ವಿತೀಯ ನಿರ್ಮಲ ಚಂದ್ರಶೇಖರ ತೃತೀಯ ಸ್ಥಾನ ಪಡೆದರು
ಎಸ್ ಡಿ ಎಮ್ ಸಿ ಯ ಸದಸ್ಯರುಗಳಾದ ರಾಜೇಶ್ವರಿ ಹೆಗಡೆ ಅನಸೂಯಾ ಪ್ರಕಾಶ ನಾಯ್ಕ್ ,ರೇಖಾ ಪ್ರಶಾಂತ್ ನಾಯ್ಕ್, ಉಪಸ್ಥಿತರಿದ್ದರು.

ಶಿಕ್ಷಕ ನಾಗರಾಜ ಟಿ ಸ್ವಾಗತಿಸಿದರು. ಶಿಕ್ಷಕಿ ನಮ್ರತಾ ಪೈ ವಂದಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *