shivraj,s stand appriciated- ರೈತರ ಕಣ್ಮಣಿ ಕರುನಾಡ ಕಿಂಗ್ ಶಿವಣ್ಣ

ಕನ್ನಡ ಚಿತ್ರರಂಗದ ಕಿಂಗ್ ಶಿವರಾಜ್ ಕುಮಾರ ಈಗ ರೈತರ ಕಣ್ಮಣಿ ಆಗಿ ಅವತರಿಸಿದ್ದಾರೆ. ಶಿವರಾಜ್ ಕುಮಾರ ಸಾಲು ಸಾಲು ಚಿತ್ರಗಳ ಗೆಲುವು, ಮಾನವೀಯತೆಯಿಂದ ಪ್ರಸಿದ್ಧರಾದವರು. ಅವರ ಬಡವ,ರೈತ, ಜನಸಾಮಾನ್ಯರ ಪಾತ್ರದ ಅಭಿನಯ ಎಲ್ಲರಿಗೂ ಪ್ರೀಯ. ಕನ್ನಡದ ಸ್ಯಾಂಡಲ್ ವುಡ್ ಕಿಂಗ್ ಎನಿಸಿಕೊಳ್ಳುತ್ತಿರುವ ಶಿವರಾಜ್ ಕುಮಾರ ರೈತಪರವಾಗಿ ನಿಲ್ಲುವ ಮೂಲಕ ತಾನೂ ರೈತನ ಮಗ ೆಂದು ಸಾಬೀತುಮಾಡಿದ್ದಾರೆ. ಕನ್ನಡದ ನಟರು, ಸೆಲಿಬ್ರಿಟಿಗಳು ರೈತರ ಪರವಾಗಿ ಮಾತನಾಡಲು ಹಿಂಜರಿಯುತ್ತಿರುವ ಸಮಯದಲ್ಲಿ ರೈತರ ಪರವಾಗಿ ನಿಲ್ಲುವ ಮೂಲಕ ಸಹನಟರು, ಚಿತ್ರರಂಗಕ್ಕೆ ಮಾದರಿಯಾಗಿದ್ದಾರೆ. ವಿವಾದ, ರಗಳೆ,ಪ್ರಚಾರಗಳಿಂದ ಕೂಡಾ ಅಂತರ ಕಾಪಾಡಿಕೊಳ್ಳುವ ಶಿವರಾಜ್ ಕುಮಾರ ರೈತಪರ ನಿಲುವು ಕನ್ನಡಿಗರ ಪ್ರಶಂಸೆಗೆ ಪಾತ್ರವಾಗಿದೆ.

ಸಿದ್ದಾಪುರ
ತಾಲೂಕಿನ ಹಾರ್ಸಿಕಟ್ಟಾ ಗ್ರಾಪಂ ವ್ಯಾಪ್ತಿಯ ಮಾದ್ಲಮನೆಯ ಜನಾರ್ಧನ ಕೃಷ್ಣ ಗೌಡ ಹಾಗೂ ಪಾರ್ವತಿ ಜನಾರ್ಧನ ಗೌಡ ಅವರಿಗೆ ಹುಟ್ಟಿದ ಎರಡೂ ಮಕ್ಕಳು ಹುಟ್ಟುವಾಗಲೇ ನಿಶ್ಯಕ್ತರಾಗಿದ್ದಾರೆ. ನಿರಂಜನ(7) ಹಾಗೂ ಪೂರ್ವಿ(3) ಇವರಿಬ್ಬರನ್ನು ನೋಡಿದರೆ ಯಾವುದೋ ಕಾಯಿಲೆಯಿಂದ ಬಳಲುತ್ತಿದ್ದಾರೆ ಎನ್ನುವುದು ಸ್ಪಷ್ಟವಾಗುತ್ತದೆ.
ಎರಡು ಜನ ಮಕ್ಕಳಿದ್ದರೂ ಮಾನಸಿಕವಾಗಿ ನೆಮ್ಮದಿ ಇಲ್ಲ. ಇಬ್ಬರೂ ನಿಶ್ಯಕ್ತರಾಗಿದ್ದು ಅವರ ದಿನ ನಿತ್ಯದ ಎಲ್ಲ ಕೆಸಲಗಳನ್ನು ಹೆತ್ತವರೇ ಮಾಡಬೇಕಾದ ಸ್ಥಿತಿ. ಮಣಿಪಾಲ್, ಮಂಗಳೂರು, ಕುಂದಾಪುರ, ಶಿರಸಿ ಮತ್ತಿತರ ಆಸ್ಪತ್ರೆಗಳಿಗೆ ಕರೆದುಕೊಂಡಿ ಹೋಗಿ ಚಿಕಿತ್ಸೆ ಕೊಡಿಸಿದರೂ ಏನೂ ಪ್ರಯೋಜನವಾಗಿಲ್ಲ. ಚಿಕಿತ್ಸೆ ಮಾಡಿದ ವೈದ್ಯರುಗಳೆಲ್ಲ ಗುಣಮುಖರಾಗುತ್ತಾರೆ. ನರ ದೌರ್ಬಲ್ಯ ಇರುವುದರಿಂದ ಈ ರೀತಿ ಆಗಿದ್ದಾರೆ ಎಂದು ಹೇಳಿದ್ದಾರೆ. ಆದರೂ ಏನೂ ಪ್ರಯೋಜನವಾಗಿಲ್ಲ. ಅಲ್ಲದೇ ಹಿರಿಯರು ಹೇಳಿದಂತೆ ಕೆಲವು ದೇವಸ್ಥಾನಗಳಿಗೆ ಬೇಟಿ ನೀಡಿ ಪೂಜೆ ಸಲ್ಲಿಸಿದ್ದೇವೆ ಅದರಿಂದಲೂ ಗುಣಮುಖರಾಗಿಲ್ಲ ಎಂದು ಹೆತ್ತವರು ಕಂಬನಿ ಇಡುತ್ತ ತಮ್ಮ ಮಕ್ಕಳ ಸ್ಥಿತಿಯನ್ನು ವಿವರಿಸುತ್ತ ಮಕ್ಕಳ ಔಷಧಿಗಾಗಿ ಪ್ರತಿ ತಿಂಗಳು ಎಂಟು ನೂರು ಬೇಕಾಗುತ್ತದೆ. ಮಕ್ಕಳಿಗೆ ಹೊರ ಪ್ರಪಂಚದ ಅರಿವಿಲ್ಲ. ಇದ್ದಲ್ಲಿಯೇ ಆಟ ಆಡುತ್ತಿರುತ್ತಾರೆ ಎಂದು ಹೇಳುತ್ತಾರೆ.


ಎಂಡೋಸಲ್ಪಾನ್ ಶಂಕೆ: ಪಾರ್ವತಿ ಗೌಡ ರ ತವರುಮನೆ ಹೊನ್ನಾವರ ತಾಲೂಕಿನ ಅಪ್ಸರಕೊಂಡ. ಇವಳಿಗೆ 2011ರಲ್ಲಿ ವಿವಾಹವಾಗಿದೆ. ವಿವಾಹ ಆಗುವ ಪೂರ್ವದಲ್ಲಿ ಅಂದರೆ ಮೂರ್ನಾಲ್ಕು ವರ್ಷದ ಮೊದಲು ಹೊನ್ನಾವರ ತಾಲೂಕಿನಲ್ಲಿ ಎಂಡೋಸಲ್ಪಾನ್ ಕಾಣಿಸಿಕೊಂಡಿದ್ದು ಇದರ ಪರಿಣಾಮ ಮಕ್ಕಳ ಮೇಲೂ ಬಿದ್ದಿರಬಹುದೇ ಎಂದು ಹೇಳಲಾಗುತ್ತಿದೆ.
ಕೂಲಿ ಜೀವನ: ನಿತ್ಯ ಕೂಲಿ ಮಾಡಿದರೆ ಮಾತ್ರ ಜನಾರ್ಧನ ಗೌಡ ಅವರ ಕುಟುಂಬದ ಜೀವನ ಸಾಗುತ್ತದೆ. ಇಲ್ಲದಿದ್ದರೆ ನಿತ್ಯದ ಊಟಕ್ಕೂ ತೊಂದರೆ ಅನುಭವಿಸುವ ಸ್ಥಿತಿ. ಒಂದೆಡೆ ಮಕ್ಕಳನ್ನು ನೋಡಿಕೊಳ್ಳಬೇಕು. ಮತ್ತೊಂದೆಡೆ ಕುಟುಂಬ ನಿರ್ವಹಣೆ ಮಾಡುವ ಜವಾಬ್ದಾರಿ. ಇವೆರಡನ್ನು ಸರಿಯಾಗಿ ನಿರ್ವಹಿಸುತ್ತಿರುವ ಜನಾರ್ಧನ ಗೌಡ ತಮ್ಮ ಮನದಾಳದ ನೋವನ್ನು ಯಾರಲ್ಲಿಯೂ ಹೇಳಿಕೊಳ್ಳದೇ ಹಸನ್ಮುಖಿಯಾಗಿಯೇ ಜೀವನ ನಡೆಸುತ್ತಿದ್ದಾರೆ.

ಸಹಕಾರಕ್ಕೆ ಬ್ಯಾಂಕ ಖಾತೆ-ಎಸ್‍ಬಿಐ ಸಿದ್ದಾಪುರ.ಐಎಫ್‍ಎಸ್ ಕೋಡ್ ನಂ-ಎಸ್‍ಬಿಐಎನ್0040131. ಬ್ಯಾಂಕ್ ಖಾತೆ ನಂ:64211090874.

ಮಕ್ಕಳಿಬ್ಬರ ಸ್ಥಿತಿ ಹೀಗಾಗಿದೆ. ನಿತ್ಯ ಇವರ ಕೆಲಸಮಾಡುವುದೇ ಆಗಿದೆ. ಈಗ ಹೇಗೂ ನಡೆಯುತ್ತದೆ. ಮುಂದೆ ದೊಡ್ಡವರಾದ ಮೇಲೆ ಹೇಗೆ? ಎನ್ನುವ ಚಿಂತೆ ಕಾಡುತ್ತಿದೆ. ಮಕ್ಕಳ ಮುಂದಿನ ಜೀವನಕ್ಕೆ ಸರ್ಕಾರ ಹಾಗೂ ಜನತೆ ಆರ್ಥಿಕ ಸಹಕಾರ ನೀಡಿದರೆ ಒಳ್ಳೆಯದು.- ಪಾರ್ವತಿ ಜನಾರ್ಧನ ಗೌಡ ಮಾದ್ಲಮನೆ.ಮಕ್ಕಳ ತಾಯಿ.

ಮಕ್ಕಳ ಆರೋಗ್ಯದ ಕುರಿತು ಶಾಲಾ ಆರೋಗ್ಯ ತಂಡವನ್ನು ಅವರ ಮನೆಗೆ ಕಳುಹಿಸಿ ಸಂಪೂರ್ಣ ವಿವರ ಪಡೆದು ಪರಿಶೀಲಿಸಿ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಕಳುಹಿಸಲಾಗುವುದು. ಎಂಡೋಸಲ್ಪಾನ್ ಇದ್ದರೆ ಆ ಕುರಿತು ಸರ್ಕಾರದ ಗಮನಕ್ಕೂ ತರಲಾಗುವುದು. – ಡಾ.ಲಕ್ಷ್ಮೀಕಾಂತ ನಾಯ್ಕ. ತಾಲೂಕು ಆರೋಗ್ಯಾಧಿಕಾರಿ. ಸಿದ್ದಾಪುರ.

ಸಿದ್ದಾಪುರ
ತಾಲೂಕಿನ ಹಾರ್ಸಿಕಟ್ಟಾ ಸಮೀಪದ ದೇವಾಸದಲ್ಲಿ ಚೌಡೇಶ್ವರಿ ಮತ್ತು ನಾಗದೇವರ ಪ್ರತಿಷ್ಠಾಪನಾ ಮಹೋತ್ಸವ ವೇ.ಮೂ. ಚಂದ್ರಶೇಖರ ಭಟ್ಟ ಗಾಳೀಮನೆ ಹಾಗೂ ವೇ.ಮೂ. ಗಜಾನನ ಭಟ್ಟ ಕವಲಕೊಪ್ಪ ಅವರ ಪೌರೋಹಿತ್ಯದಲ್ಲಿ ಫೆ.11 ಹಾಗೂ 12ರಂದು ವಿವಿಧ ಧಾರ್ಮಿಕ ಕಾರ್ಯಕ್ರಮದೊಂದಿಗೆ ನಡೆಯಲಿದೆ.
ಫೆ.11ರಂದು ನಾಗದೇವರ ಪ್ರತಿಷ್ಠಾಪನೆ,12ರಂದು ಬೆಳಗ್ಗೆ ಚೌಡೇಶ್ವರಿ ದೇವಿಯ ಪ್ರತಿಷ್ಠಾಪನೆ,ಮಧ್ಯಾಹ್ನ ಪ್ರಸಾದ ವಿತರಣೆ,ಅನ್ನಸಂತರ್ಪಣೆ, 3.30ರಿಂದ ಪುರೋಹಿತರಿಂದ ಆಶೀರ್ವಚನ. 4.30ರಿಂದ ಹಾರ್ಸಿಕಟ್ಟಾ ದಿವಾನ್ ಯಕ್ಷಸಮೂಹ ಹಾಗೂ ಅತಿಥಿ ಕಲಾವಿದರಿಂದ ಯಕ್ಷಗಾನ ತಾಳಮದ್ದಲೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *