ರಾಜ್ಯ ಬಜೆಟ್ ಹಿನ್ನೆಲೆ; ಬೇಡಿಕೆ ಈಡೇರಿಸುವಂತೆ ಸಿಎಂ ಗೆ ಆಶಾ ಕಾರ್ಯಕರ್ತೆಯರ ಮನವಿ

ಮಾರ್ಚ್ ಮೊದಲ ವಾರದಲ್ಲಿ ರಾಜ್ಯ ಬಜೆಟ್ ಮಂಡನೆಯಾಗುತ್ತಿದ್ದು ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳ ಪಟ್ಟಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಲ್ಲಿಸಿದ್ದಾರೆ.

Representational image

ಬೆಂಗಳೂರು: ಮಾರ್ಚ್ ಮೊದಲ ವಾರದಲ್ಲಿ ರಾಜ್ಯ ಬಜೆಟ್ ಮಂಡನೆಯಾಗುತ್ತಿದ್ದು ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳ ಪಟ್ಟಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಲ್ಲಿಸಿದ್ದಾರೆ.

ತಮ್ಮ ಗೌರವ ಧನವನ್ನು 12,000 ರೂಗಳಿಗೆ ಹೆಚ್ಚಿಸುವುದು ಬೇಡಿಕೆಗಳಲ್ಲಿ ಸೇರಿದೆ. ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅಡಿಯಲ್ಲಿ ನಿರ್ದಿಷ್ಟ ಕರ್ತವ್ಯ ಪೂರ್ಣಗೊಳಿಸಿದ್ದಕ್ಕಾಗಿ ರಾಜ್ಯ ಸರ್ಕಾರದಿಂದ 4,000 ರೂ. ಮತ್ತು ಕೇಂದ್ರ ಸರ್ಕಾರದಿಂದ ಪ್ರೋತ್ಸಾಹ ಧನ ಪಡೆಯುತ್ತಿದ್ದಾರೆ.

https://imasdk.googleapis.com/js/core/bridge3.439.0_debug_en.html#goog_1784046539

ಆನ್‌ಲೈನ್ ಪೋರ್ಟಲ್‌ನಲ್ಲಿನ ತಾಂತ್ರಿಕ ಸಮಸ್ಯೆಗಳಿಂದಾಗಿ ಅವರ ಪೂರ್ಣಗೊಂಡ ಕಾರ್ಯಗಳು ಸಹ ನವೀಕರಿಸಲ್ಪಡುವುದಿಲ್ಲ ಮತ್ತು ಅವರ ಪ್ರೋತ್ಸಾಹ ಧನ ಇನ್ನೂ ಅವರನ್ನು ತಲುಪಿಲ್ಲ್ಲ. ಆದ್ದರಿಂದ, ಅವರ ಬೇಡಿಕೆಗಳಲ್ಲಿ ಪೋರ್ಟಲ್‌ನಲ್ಲಿನ ತಾಂತ್ರಿಕ ತೊಂದರೆಗಳನ್ನು ಸರಿಪಡಿಸುವುದು ಸಹ ಸೇರಿದೆ. ಜುಲೈ ತಿಂಗಳ ಬಾಕಿ ಇರುವ ಪ್ರೋತ್ಸಾಹಕ ಆಧಾರಿತ ವೇತನ ಮತ್ತು ಗೌರವಧನವನ್ನು ತೆರವುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಆಶಾ ಕಾರ್ಯಕರ್ತೆಯರ ಒಕ್ಕೂಟ ಮನವಿ ಮಾಡಿದೆ.

ಡಿ-ಗ್ರೂಪ್ ಸಿಬ್ಬಂದಿಯಂತಹ ಇತರ ಆರೋಗ್ಯ ಕಾರ್ಯಕರ್ತರಿಗೆ ಕೊರೋನಾ ಸಂದರ್ಭದಲ್ಲಿ ಘೋಷಿಸಲಾದ 10,000 ರೂ ಕೋವಿಡ್ ಅಪಾಯ ಪ್ರೋತ್ಸಾಹ ಧನವನ್ನು ಸಹ ಇನ್ನೂ ನೀಡಿಲ್ಲ. ಕೊರೋನಾ ಕರ್ತವ್ಯದಲ್ಲಿರುವ ಆಶಾ ಕಾರ್ಮಿಕರಿಗೆ ರಾಜ್ಯ ಸರ್ಕಾರ ಈ ಹಿಂದೆ 3,000 ರೂ.ಗಳ ಅಪಾಯ ಪ್ರೋತ್ಸಾಹ ಧನ ನೀಡುವುದಾಗಿ ಭರವಸೆ ನೀಡಿತ್ತು, ಆದರೆ ಅದು ಅವರೆಲ್ಲರನ್ನೂ ತಲುಪಲಿಲ್ಲ. ಆ ಹಣವನ್ನು ಸಹ ಬಿಡುಗಡೆ ಮಾಡಬೇಕೆಂದು ಅವರು ಒತ್ತಾಯಿಸಿದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *