‘ನಾವಿಬ್ಬರು, ನಮ್ಮವರಿಬ್ಬರು’: ಕೃಷಿ ಕಾಯ್ದೆ ವಿರೋಧಿಸುತ್ತಾ ರಾಹುಲ್ ಗಾಂಧಿ ಹೀಗೇಕೆ ಹೇಳಿದ್ದು?

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ, ಲೋಕಸಭೆಯಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ ಈ ಕಾಯ್ದೆಗಳು ಕೈಗಾರಿಕೋದ್ಯಮಿಗಳಿಗೆ ಧಾನ್ಯಗಳನ್ನು ಅನಿಯಮಿತ ಪ್ರಮಾಣದಲ್ಲಿ ಖರೀದಿಸಿ, ಸಂಗ್ರಹಿಸಿಕೊಳ್ಳುವುದಕ್ಕೆ ಅವಕಾಶ ನೀಡಲಿದೆ ಎಂದು ಆರೋಪಿಸಿದ್ದಾರೆ. 

Rahul Gandhi

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ, ಲೋಕಸಭೆಯಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ ಈ ಕಾಯ್ದೆಗಳು ಕೈಗಾರಿಕೋದ್ಯಮಿಗಳಿಗೆ ಧಾನ್ಯಗಳನ್ನು ಅನಿಯಮಿತ ಪ್ರಮಾಣದಲ್ಲಿ ಖರೀದಿಸಿ, ಸಂಗ್ರಹಿಸಿಕೊಳ್ಳುವುದಕ್ಕೆ ಅವಕಾಶ ನೀಡಲಿದೆ ಎಂದು ಆರೋಪಿಸಿದ್ದಾರೆ. 

ಕೃಷಿ ಕಾಯ್ದೆಗಳ ವಿರುದ್ಧದ ಪ್ರತಿಭಟನೆ ಕೇವಲ ರೈತರದ್ದಲ್ಲ, ಇಡೀ ದೇಶದ ಚಳುವಳಿ ಎಂದು ಹೇಳಿರುವ ರಾಹುಲ್ ಗಾಂಧಿ ಸರ್ಕಾರ ಕಾಯ್ದೆಗಳನ್ನು ಹಿಂಪಡೆಯಲೇಬೇಕಾಗುತ್ತದೆ ಎಂದಿದ್ದಾರೆ. 

ಇದೇ ವೇಳೆ ಲೋಕಸಭೆಯಲ್ಲಿ ನಾಟಕೀಯ ಬೆಳವಣಿಗೆ ನಡೆದಿದ್ದು, ಪ್ರತಿಭಟನೆ ವೇಳೆ ಮೃತಪಟ್ಟ 200 ರೈತರಿಗೆ ಸಂತಾಪ ಸೂಚಿಸಲು ರಾಹುಲ್ ಗಾಂಧಿ ತಮ್ಮ ಪಕ್ಷದ ಸದಸ್ಯರು, ಟಿಎಂಸಿ, ಡಿಎಂಕೆ ಸದಸ್ಯರೊಂದಿಗೆ 2 ನಿಮಿಷಗಳ ಕಾಲ ಮೌನಾಚರಣೆ ಮಾಡಿದರು. ಸರ್ಕಾರ ಗೌರವ ನೀಡಿಲ್ಲ ಆದ್ದರಿಂದ ನಾವು ಮಾಡುತ್ತಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. 

ಭಾಷಣವನ್ನು ಮುಂದುವರೆಸಿ ಮಾತನಾಡಿರುವ ರಾಹುಲ್ ಗಾಂಧಿ, ಮೊದಲನೆಯ ಕೃಷಿ ಕಾಯ್ದೆಯ ಉದ್ದೇಶ ಭಾರತದ ಎಲ್ಲಾ ಬೆಳೆಗಳನ್ನೂ ಖರೀದಿಸುವುದಕ್ಕೆ ಓರ್ವ ಸ್ನೇಹಿತನಿಗೆ ಹಕ್ಕು ನೀಡುವುದಾಗಿದೆ. ಇದರಿಂದ ಯಾರಿಗೆ ನಷ್ಟ?  ಗಾಡಿಯಲ್ಲಿ ಮಾರಾಟ ಮಾಡುವವರಿಗೆ, ಸಣ್ಣ ವ್ಯಾಪಾರಸ್ಥರಿಗೆ, ಹಾಗೂ ಮಂಡಿಯಲ್ಲಿ ಕೆಲಸ ಮಾಡುತ್ತಿರುವವರಿಗೆ ಆಗಲಿದೆ. 

ಎರಡನೇ ಕಾಯ್ದೆಯ ಉದ್ದೇಶ 2 ನೇ ಸ್ನೇಹಿತನಿಗೆ ಲಾಭ ಮಾಡಿಕೊಡುವುದಾಗಿದೆ. ಈ ಎರಡನೇ ಸ್ನೇಹಿತ ದೇಶದ ಶೇ.40 ರಷ್ಟು ಬೆಳೆಗಳನ್ನು ತನ್ನ ಬಳಿ ಸಂಗ್ರಹಿಸಿಟ್ಟುಕೊಳ್ಳಲಿದ್ದಾನೆ. ಆಯ್ಕೆಗಳನ್ನು ನೀಡಿರುವುದಾಗಿ ಪ್ರಧಾನಿ ಹೇಳುತ್ತಾರೆ. ಹೌದು, ನೀವು ಮೂರು ಆಯ್ಕೆಗಳನ್ನು ನೀಡಿದ್ದೀರಿ, ಅವು ಹಸಿವು, ನಿರುದ್ಯೋಗ ಹಾಗೂ ಆತ್ಮಹತ್ಯೆ ಎಂದು ಸರ್ಕಾರವನ್ನು ರಾಹುಲ್ ಗಾಂಧಿ ತಿವಿದಿದ್ದಾರೆ. 

ಇದೇ ವೇಳೆ ಹಳೆಯ ಕುಟುಂಬ ಯೋಜನೆಯ ಘೋಷ ವಾಕ್ಯವನ್ನು ಉಲ್ಲೇಖಿಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್, ನಾವಿಬ್ಬರು, ನಮ್ಮವರಿಬ್ಬರು ಎಂಬಂತೆ ಕೇವಲ 4-5 ಜನರು ದೇಶವನ್ನು ನಡೆಸುತ್ತಿದ್ದಾರೆ. ಹೊಸ ಕೃಷಿ ಕಾಯ್ದೆಗಳು ಭಾರತದ ಆಹಾರ ಭದ್ರತೆಯ ವ್ಯವಸ್ಥೆಯನ್ನು ನಾಶ ಮಾಡಲಿದ್ದು, ಗ್ರಾಮೀಣ ಆರ್ಥಿಕತೆಗೆ ಪೆಟ್ಟು ಬೀಳಲಿದೆ ಎಂದು ಹೇಳಿದ್ದಾರೆ. ರೈತರು ಎಲ್ಲಿಗೂ ಹೋಗುವುದಿಲ್ಲ ಆದರೆ ಈ ಸರ್ಕಾರವನ್ನು ಇಳಿಸಲಿದ್ದಾರೆ ಎಂದು ರಾಹುಲ್ ಗಾಂಧಿ ಎಚ್ಚರಿಸಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *