ಅರಣ್ಯ ಭೂಮಿ ಹಕ್ಕು ಹೋರಾಟ-30 ನೇ ವರ್ಷ ಸ್ಮರಣ ಸಂಚಿಕೆ ಹೊರತರಲು ನಿರ್ಧಾರ

ಸಿದ್ದಾಪುರ: ಅರಣ್ಯ ಭೂಮಿ ಹಕ್ಕಿಗೆ ಸಂಬಂಧಿಸಿ ಹೋರಾಟದ ಪ್ರಮುಖ ಅಂಶಗಳು ಕೂಡಿದ ದಾಖಲೆಗಳೊಂದಿಗೆ ಹಾಗೂ ಅರಣ್ಯ ಹಕ್ಕಿಗೆ ಸಂಬಂಧಿಸಿದ ಕಾನೂನು ಕೇಂದ್ರ ಮತ್ತು ರಾಜ್ಯ ಸರಕಾರದ ಸುತ್ತೋಲೆ ಒಳಗೊಂಡ ‘ ಅರಣ್ಯ ಭೂಮಿ ಹಕ್ಕು ಹೋರಾಟ-30 ನೇ ವರ್ಷ’ ಸ್ಮರಣ ಸಂಚಿಕೆಗಳನ್ನು ಹೊರತರಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.

ಅವರು ಇಂದು ಸಿದ್ಧಾಪುರ ತಾಲೂಕಿನ, ನಿಲ್ಕುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜರುಗಿದ ಸ್ಮರಣ ಸಂಚಿಕೆಯ ಮಾಹಿತಿ ಕರಪತ್ರ ಬಿಡುಗಡೆ ಮಾಡುತ್ತಾ ಹೇಳಿದರು.

30 ವರ್ಷದಲ್ಲಿ ನಿರಂತರ ಸಂಘಟನೆ, ಹೋರಾಟ, ಆಂದೋಲನ, ಕಾನೂನಾತ್ಮಕ ಜಾಗೃತೆ ಅಡಿಯಲ್ಲಿ ಜರುಗಿಸಿದ ಕಾರ್ಯಕ್ರಮ ಐತಿಹಾಸಿಕ ಘಟನೆಗಳ ಸಂಗ್ರಹಗೊಂಡ ಸ್ಮರಣ ಸಂಚಿಕೆಯಲ್ಲಿ ಸೇರಿಸಲಾಗುವುದು ಎಂದು ಅವರು ಹೇಳಿದರು.

ಸ್ಮರಣ ಸಂಚಿಕೆ ತೆಗೆದುಕೊಳ್ಳುವವರು ಮುಂಚಿತವಾಗಿ ಕಾಯ್ದಿರಿಸುವಿಕೆಗೆ ಸ್ಮರಣೆ ಸಂಚಿಕೆಯ ವೆಚ್ಚ ರೂ. 200 (ರೂಪಾಯಿ ಎರಡು ನೂರು ಮಾತ್ರ) ಕೊಟ್ಟು ಕಾಯ್ದಿರಿಸಿಕೊಳ್ಳಲು ಕೋರಿಕೆ.

100 ಪುಟಗಳ 30 ಸಾವಿರ ಸ್ಮರಣ ಸಂಚಿಕೆ:

ಕರ್ನಾಟಕ ಉಚ್ಛ ನ್ಯಾಯಾಲಯದ ವಿಶ್ರಾಂತಿ ನ್ಯಾಯಮೂರ್ತಿ ಮಾನ್ಯ ಶ್ರೀ ನಾಗಮೋಹನ್ ದಾಸ್ ಅವರ ಸಲಹೆಯಂತೆ ಹೋರಾಟದ ಮಹತ್ವ ಹೆಜ್ಜೆಗಳನ್ನು ಗುರುತಿಸುವ ದಿಶೆಯಲ್ಲಿ ಹಳ್ಳಿಯಿಂದ ಪ್ರಾರಂಭವಾದ ಹೋರಾಟ ಸರ್ವೋಚ್ಚ ನ್ಯಾಯಾಲಯ ನ್ಯೂ ಡೆಲ್ಲಿಯವರೆಗೂ ದಾಖಲಿಸಿದ ಸಾರ್ವಜನಿಕ ಹಿತಾಸಕ್ತಿಗಳ ಅರ್ಜಿಗಳ ಸಮಗ್ರ ದಾಖಲೆಗಳ ಸುಮಾರು 100 ಪುಟಗಳ ಸ್ಮರಣ ಸಂಚಿಕೆ ತರಲು ನಿರ್ಧರಿಸಿದ್ದೇವೆ ಎಂದು ಅವರು ಹೇಳಿದರು.

ಸಭೆಯ ಅಧ್ಯಕ್ಷತೆಯನ್ನು ಬೀರಾ ಗೌಡ ತಂಡಾಗುಂಡಿ  ವಹಿಸಿದ್ದರು, ನಾಗುಪತಿ ಗೌಡ ಸ್ವಾಗತಿಸಿದರು, ಕಾರ್ಯಕ್ರಮದಲ್ಲಿ ರವೀಶ್ ಗೌಡ, ಸೀತಾರಾಮ ಗೌಡ ನೀರಗಾನ ಜಿಲ್ಲಾ ಸಂಚಾಲಕರು, ಎಪಿಎಂಸಿ ಸದಸ್ಯರು ಸೀತಾರಾಮ ನಿಂಗಾ ಗೌಡ, ದೇವೆಗೌಡ ಹೆಗ್ಗೆ, ರಮೇಶ ನಾಯ್ಕ, ಮಂಜುನಾಥ ನಾಯ್ಕ ಹೊಂಡಗದ್ದೆ, ಸೀತಾರಾಮ ಗೌಡ ಹುಕ್ಕಳಿ ಮುಂತಾದವರು ಉಪಸ್ಥಿತರಿದ್ದರು.

ಕೃಷ್ಣಲೀಲಾ…..

ಸಿದ್ದಾಪುರ
ತಾಲೂಕಿನ ಗಾಳಿಜಡ್ಡಿ ಶಾಲಾ ಆವಾರದಲ್ಲಿ ಬೆಂಗಳೂರಿನ ಆಭಾರಿ ಟ್ರಸ್ಟ್ ನಿಂದ ಕೃಷ್ಣ ಲೀಲಾ ಯಕ್ಷಗಾನ ಹಾಗೂ ಸಾಧಕರಿಗೆ ಗೌರವ ಸಮರ್ಪಣೆ ಫೆ.13ರಂದು ಸಂಜೆ 6ರಿಂದ ನಡೆಯಲಿದೆ.
ಟಿಎಸ್‍ಎಸ್‍ನ ಮಾಜಿ ನಿರ್ದೇಶಕ ರವೀಂದ್ರ ಹೆಗಡೆ ಹಿರೇಕೈ ಉದ್ಘಾಟಿಸುವರು. ಅಶೋಕ ಹೆಗಡೆ ಹಿರೇಕೈ ಅಧ್ಯಕ್ಷತೆವಹಿಸುವರು. ಎಸ್‍ಡಿಎಂಸಿ ಅಧ್ಯಕ್ಷ ರಘುಪತಿ ಹೆಗಡೆ ಹೂಡೆಹದ್ದ, ಅನಂತ ಶಾನಭಾಗ ಹಾರ್ಸಿಕಟ್ಟಾ, ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ರಮೇಶ ಹೆಗಡೆ ಹಾರ್ಸಿಮನೆ ಉಪಸ್ಥಿತರಿರುತ್ತಾರೆ.
ಪತ್ರಕರ್ತ ಕೆಕ್ಕಾರ ನಾಗರಾಜ ಭಟ್ಟ ಅವರಿಗೆ ಗೌರವ ಸಮರ್ಪಣೆ ನಡೆಯಲಿದೆ.
ನಂತರ ನಡೆಯಲಿರುವ ಕೃಷ್ಣ ಲೀಲಾ ಯಕ್ಷಗಾನದ ಹಿಮ್ಮೇಳದಲ್ಲಿ ಸತೀಶ ಹೆಗಡೆ ದಂಟಕಲ್, ನಂದನ ಹೆಗಡೆ, ಶರತ್ ಹೆಗಡೆ ಜಾನಕೈ, ಭಾರ್ಗವ ಹೆಗ್ಗೋಡ ಸಹಕರಿಸುವರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *