ನಿಲ್ಕುಂದ-ಬಡಾಳ ಸರ್ವಋತು ರಸ್ತೆಗಾಗಿ ಫೆ.18 ರಂದು ಪಾದಯಾತ್ರೆ

ಸಿದ್ದಾಪುರ: ಪುರಾತನ ಕಾಲದಿಂದಲೂ ಬ್ರಿಟಷರ ಆಶ್ರಯದಲ್ಲಿಯೂ ಲೋಕೊಪಯೋಗಿ ರಸ್ತೆಯೆಂದು ಸರಕಾರದ ದಾಖಲೆಯಲ್ಲಿ ಪ್ರಸ್ತಾಪಿಸಲ್ಪಟ್ಟ ನಿಲ್ಕುಂದ ಮಾರ್ಗವಾಗಿ ಬಡಾಳ ವರೆಗೂ ಕುಮಟಾ ಸಂಪರ್ಕ ರಸ್ತೆ ಸರಕಾರ ಮತ್ತು ಜನಪ್ರತಿನಿದಿಗಳ ನಿರ್ಲಕ್ಷ್ಯದಿಂದ ಸಂಚಾರಕ್ಕೆ ಸಂಪೂರ್ಣ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಸರ್ವಋತು ರಸ್ತೆಗೆ ಅಗ್ರಹಿಸಿ ದಿನಾಂಕ 18 ಗುರುವಾರ ಬೃಹತ್ ಪಾದಯಾತ್ರೆಯನ್ನು ಸಂಘಟಿಸಲು ತಿರ್ಮಾನಿಸಲಾಗಿದೆ.

ಸಾಮಾಜಿಕ ಹೋರಾಟಗಾರ ರವೀಂದ್ರ ನಾಯ್ಕ ನೇತೃತ್ವದಲ್ಲಿ, ತಂಡಾಗುಂಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಬೀರಾ ಗೌಡ ಅವರ ಅಧ್ಯಕ್ಷತೆಯಲ್ಲಿ ನಿಲ್ಕುಂದದಲ್ಲಿ ದಿನಾಂಕ 12 ಸಾಯಂಕಾಲ ಜರುಗಿದ ಸಾರ್ವಜನಿಕ ಸಭೆಯಲ್ಲಿ ನಿರ್ಣಯಿಸಲಾಗಿದ್ದು ರಸ್ತೆಗಾಗಿ ಬೀದಿಗಿಳಿದು ಹೋರಾಟ ಮಾಡಲು ನಿರ್ಧರಿಸಿರುವುದು ವಿಶೇಷವಾಗಿದೆ.

ಪುರಾತನ ಕಾಲದಿಂದಲೂ ಕರಾವಳಿ ಭಾಗಕ್ಕೆ ಘಟ್ಟದ ಮೇಲಿನ ಪ್ರದೇಶಕ್ಕೆ ಏಕೈಕ ಸಂಪರ್ಕ ರಸ್ತೆ ಇದಾಗಿತ್ತು. ತದನಂತರ ದೇವಿಮನೆ ಘಟ್ಟದ ರಸ್ತೆ ಮಾಡಲ್ಪಟ್ಟಿದ್ದು ವಿಶೇಷವಾಗಿದೆ. ತದನಂತರ ನಿಲ್ಕುಂದ-ಕುಮಟ ಸಂಪರ್ಕದ ರಸ್ತೆ ಸರಕಾರ ಮತ್ತು ಜನಪ್ರತಿನಿಧಿಗಳಿಂದ ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾಗಿರುವುದು ವಿಷಾಧಕರ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಹೋರಾಟ ಅನಿವಾರ್ಯವೆಂದು ಸಭೆಯಲ್ಲಿ ತಿರ್ಮಾನಿಸಲಾಯಿತು. ಈ ರಸ್ತೆಯ ನಂತರ ಸ್ಥಾಪಿತವಾದ ದೇವಿಮನೆ ರಸ್ತೆ ಅಭಿವೃದ್ದಿಗೆ ಸರಕಾರ ಲಕ್ಷ್ಯ ವಹಿಸಿತ್ತೆ ವಿನಹ ನಿಲ್ಕುಂದ-ಬಡಾಳ ರಸ್ತೆ ಸಂಪೂರ್ಣ ನಿರ್ಲಕ್ಷಿಸಲ್ಪಟ್ಟಿದೆ.

ಸಿದ್ಧಾಪುರ ತಾಲೂಕಿನ ನಿಲ್ಕುಂದ, ತಂಡಾಗುಂಡಿ, ಹೆಗ್ಗರಣೆ, ಜಾನ್ಮನೆ ಕೆಲವು ಭಾಗದವರಿಗೆ ಕೇವಲ 30-35 ಕೀ.ಮಿ ಅಂತರದಲ್ಲಿ ಕುಮಟಕ್ಕೆ ತಲುಪಲು ಅವಕಾಶವನ್ನು ಅಸಮರ್ಪಕ ರಸ್ತೆ ನಿರ್ವಹಣೆಯಿಂದ ಈ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಈ ಭಾಗದವರು ಈಗ 55-60 ಕೀಮಿ ದೂರ ಪ್ರಯಾಣಿಸಿ ಕುಮಟಕ್ಕೆ ತಲುಪುವ ಪ್ರಯಾಸ ಮಾಡುತ್ತಿದ್ದಾರೆ. ಹಿಗಾಗಿ ಸಿದ್ಧಾಪುರ ತಾಲೂಕಿನ 7 ಕೀ.ಮಿ, ಕುಮಟ ತಾಲೂಕಿನ 7 ಕೀ.ಮಿ ದುರಸ್ತಿ ಮತ್ತು ಕಾಮಗಾರಿ ಕಾರ್ಯ ಆಗಬೇಕಾಗಿದೆ. ಈ ದಿಶೆಯಲ್ಲಿ ಸರಕಾರದ ಗಮನ ಸೆಳೆಯಲು ಈ ಭಾಗದ ಜನಸಾಮಾನ್ಯರ ಮೂಲಭೂತ ಸೌಕರ್ಯದಲ್ಲಿ ಒಂದಾದ ಈ ಸರ್ವಋತು ರಸ್ತೆಯನ್ನಾಗಿ ಮಾಡಲು ನಿರಂತರ ಹೋರಾಟ ಹಮ್ಮಿಕೊಳ್ಳಲು ತಿರ್ಮಾನಿಸಲಾಗಿದೆ.

ಸಭೆಯಲ್ಲಿ ನಾಗುಪತಿ ಗೌಡ ಸ್ವಾಗತಿಸಿದರು, ಕಾರ್ಯಕ್ರಮದಲ್ಲಿ ರವೀಶ್ ಗೌಡ, ಸೀತಾರಾಮ ಗೌಡ ನೀರಗಾನ ಜಿಲ್ಲಾ ಸಂಚಾಲಕರು, ಎಪಿಎಂಸಿ ಸದಸ್ಯರು ಸೀತಾರಾಮ ನಿಂಗಾ ಗೌಡ, ದೇವೆಗೌಡ ಹೆಗ್ಗೆ, ರಮೇಶ ನಾಯ್ಕ, ಮಂಜುನಾಥ ನಾಯ್ಕ ಹೊಂಡಗದ್ದೆ, ಸೀತಾರಾಮ ಗೌಡ ಹುಕ್ಕಳಿ, ಹರಿಹರ ನಾಯ್ಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. 300 ಕ್ಕೂ ಹೆಚ್ಚು ಗ್ರಾಮಸ್ಥರು ಉಪಸ್ಥಿತರಿದ್ದರು.

ಪಾದಯಾತ್ರೆ:

ಸರ್ವಋತು ರಸ್ತೆಗೆ ಅಗ್ರಹಿಸಿ ಫೆಬ್ರವರಿ 18 ಗುರುವಾರ ಮುಂಜಾನೆ 9:30 ಗಂಟೆಗೆ ನಿಲ್ಕುಂದದಿಂದ ಬೃಹತ್ ಪಾದಯಾತ್ರೆ ಪ್ರಾರಂಭವಾಗಿ ಕರ್ಮನಘಟಗಿಯಿಂದ 2 ಕೀ.ಮಿ ದೂರದಲ್ಲಿರುವ ಸಿದ್ಧಾಪುರ-ಕುಮಟ ಗಡಿಯಾದ ಪೆರಲಮಾರಿಯಲ್ಲಿಯವರೆಗೂ 7 ಕೀ.ಮಿ ಪಾದಯಾತ್ರೆಯೂ 11 ಗಂಟೆಗೆ ತಲುಪಿ ಸಭೆಯಾಗಿ ಪರಿವರ್ತನೆಗೊಳ್ಳುವುದು. ಸದ್ರಿ ಸಭೆಗೆ ಕಂದಾಯ, ಪೋಲಿಸ್, ಲೋಕೊಪಯೋಗಿ ಹಾಗೂ ಅರಣ್ಯ ಇಲಾಖೆಯವರಿಗೆ ಮುಂಚಿತವಾಗಿ ಸಭೆಯಲ್ಲಿ ಉಪಸ್ಥಿತರಿದ್ದು, ರಸ್ತೆ ದುರಸ್ಥಿಗೆ ಮತ್ತು ವಿಳಂಬಕ್ಕೆ  ಕಾರಣದ ಸ್ಪಷ್ಪೀಕರಣ ನೀಡುವಂತೆ ಅಗ್ರಹಿಸಲಾಗುವುದೆಂದು ಸಭೆಯಲ್ಲಿ ತಿರ್ಮಾನಿಸಲಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *