bheemanna naik,s speech -ಕಾಂಗ್ರೆಸ್ ನೇತೃತ್ವದ ಜನಾಂದೋಲನಕ್ಕೆ ಕಾಲಪಕ್ವ

ಕೃಷಿ ಕಾನೂನುಗಳ ತಿದ್ದುಪಡಿ, ಪೆಟ್ರೋಲ್,ಡಿಸೈಲ್ ಸೇರಿದಂತೆ ಅವಶ್ಯವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕನ್ನು ದುರ್ಬರ ಮಾಡಿರುವ ಶ್ರೀಮಂತರ ಪಕ್ಷ ಬಿ.ಜೆ.ಪಿ. ಮತ್ತು ಪ್ರಧಾನಿ ಮೋದಿ ವಿರುದ್ಧ ದೇಶದಾದ್ಯಂತ ಜನಾಂದೋಲನ ಮಾಡಬೇಕಾದ ಅನಿವಾರ್ಯತೆ ಇದ್ದು ಈ ಜನಾಂದೋಲನಕ್ಕೆ ಕಾಂಗ್ರೆಸ್ ನೇತೃತ್ವ ವಹಿಸಲಿದೆ ಎಂದು ರಾಜ್ಯ ಕಾಂಗ್ರೆಸ್ ವಕ್ತಾರ ಭೀಮಣ್ಣ ನಾಯ್ಕ ಮಳಲಗಾಂವ್ ಹೇಳಿದ್ದಾರೆ. ಸಿದ್ಧಾಪುರದಲ್ಲಿ ಕಾಂಗ್ರೆಸ್ ಸಂಘಟಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು ದೇಶದ ಬಡವರಿಗಾಗಿ ಭೂಸುಧಾರಣೆ ಕಾನೂನು, ಜನಸಾಮಾನ್ಯರು ಬಡವರಿಗಾಗಿ ಅನೇಕ ಕಾಯಿದೆ ಕಾನೂನುಗಳನ್ನು ಜಾರಿ ಮಾಡಿ ದೇಶಕ್ಕಾಗಿ ಶ್ರಮಿಸಿದ ಕಾಂಗ್ರೆಸ್ ಮತ್ತು ಕಾಂಗ್ರೆಸ್ ನಾಯಕರು ಏನು ಮಾಡಿದ್ದಾರೆ ಎಂದು ಪ್ರಶ್ನಿಸುವ ಮೋದಿ ಬಡವರ ಪರವಾಗಿದ್ದ ಕಾಯಿದೆ ಕಾನೂನುಗಳನ್ನು ತಿರುಚಿ ಕೆಲವರಿಗೆ ಅನುಕೂಲ ಮಾಡುವ ಕೆಲಸ ಮಾಡುತಿದ್ದಾರೆ. ಇಂಥ ಜನವಿರೋಧಿ ಪ್ರಧಾನಿ ಮತ್ತವರ ಸರ್ಕಾರದ ಜನದ್ರೋಹಿ ಆಡಳಿತದ ವಿರುದ್ಧ ಕಾಂಗ್ರೆಸ್ ಜನಾಂದೋಲನ ಮಾಡಲಿದೆ ಎಂದರು.

ಪ್ರತಿಭಟನೆಯ ಅಂಗವಾಗಿ ನಡೆದ ಪಾದಯಾತ್ರೆ ನಗರದ ಹೊಸೂರು ಸಾಗರ ವೃತ್ತದಿಂದ ಪ್ರಾರಂಭವಾಗಿ ತಹಸಿಲ್ಧಾರ ಕಛೇರಿಯ ಎದುರು ಸಮಾವೇಶಗೊಳ್ಳುವ ಮೊದಲು ರಾಮಕೃಷ್ಣ ಹೆಗಡೆ ವೃತ್ತದಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿತು.

ತಹಸಿಲ್ಧಾರರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ ಪ್ರತಿಭಟನಾ ಕಾರರು ದೇಶದಲ್ಲಿ ಬೆಲೆಏರಿಕೆ ನಿಯಂತ್ರಿಸುವುದು ಮತ್ತು ಕೃಷಿ ಕಾನೂನುಗಳ ಹೊಸತಿದ್ದುಪಡಿ ರದ್ದುಪಡಿಸುವಂತೆ ಸರ್ಕಾರಕ್ಕೆ ನಿರ್ಧೇಶನ ಮಾಡಲು ಆಗ್ರಹಿಸಿದರು. ಈ ಸಮಯದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ರಾಜ್ಯ ಹಿಂದುಳಿದ ಘಟಕದ ಉಪಾಧ್ಯಕ್ಷ ವಿ.ಎನ್. ನಾಯ್ಕ ಬೇಡ್ಕಣಿ, ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಮಳಲವಳ್ಳಿ ಹಳ್ಳಿಯಿಂದ ದೆಲ್ಲಿ ಯವರೆಗೆ ಬಿ.ಜೆ.ಪಿ. ಆಡಳಿತ ಪಕ್ಷಪಾತ, ಜನವಿರೋಧಿ ನೀತಿಗಳಿಂದ ಕೂಡಿದ್ದು ಈ ಜನದ್ರೋಹಿ ಆಡಳಿತವನ್ನು ಹಿಮ್ಮೆಟ್ಟಿಸಿ ಜನಪರ ವ್ಯಕ್ತಿ-ಸರ್ಕಾರಗಳನ್ನು ತರಲು ಜನಹೋರಾಟ ಅನಿವಾರ್ಯ ಎಂದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಸ್ಥಳಿಯ ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳೊಂದಿಗೆ ನೂರಾರು ಜನರು ಭಾಗವಹಿಸಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *