ಒಂದು ತಿಂಗಳೊಳಗೆ ನಿಲ್ಕುಂದ-ಸಂತೆಗುಳಿ ರಸ್ತೆ ಸಿದ್ಧ- ಭರವಸೆ

ಸಿದ್ದಾಪುರ: ಪುರಾತನ ಕಾಲದ ನಿಲ್ಕುಂದ ಹಾಗೂ ಸಂತೆಗುಳಿ ರಸ್ತೆಯ ತಾತ್ಪೂರ್ತಿಕ ರಸ್ತೆಯ ರಿಪೇರಿ ಕಾರ್ಯವನ್ನು ಮುಂದಿನ 8 ದಿನಗಳಲ್ಲಿ ಪ್ರಾರಂಭಿಸಿ ಹೆಚ್ಚುವರಿ ಕಾಮಗಾರಿಯನ್ನು ಸೇರಿಸಿ ಜನಸಾಮಾನ್ಯರಿಗೆ ಓಡಾಡಲು 30 ದಿನಗಳಲ್ಲಿ ಸಿದ್ಧಪಡಿಸಿ ಕೊಡಲಾಗುವುದೆಂದು ಲೋಕೊಪಯೋಗಿ ಅಧಿಕಾರಿ ಸಭೆಯಲ್ಲಿ ಘೋಷಿಸಿದರು.

ರಸ್ತೆಯ ಕಾಮಗಾರಿಗೆ ತುರ್ತು ಕಾರ್ಯಯೋಜನೆ ಮಾಡಲು ಅಗ್ರಹಿಸಿ ಇಂದು ನಿಲ್ಕುಂದದಿಂದ ಕುಮಟ ಗಡಿಯವರೆಗೆ 7 ಕೀ.ಮಿ ಪಾದಯಾತ್ರೆ ಪೂರ್ಣಗೊಂಡು  ಏರ್ಪಡಿಸಿದ ಸಭೆಯಲ್ಲಿ ಅಧಿಕಾರಿಗಳು ಈ ಭರವಸೆ ನೀಡಿದರು.

ಸಂಪೂರ್ಣ ಜೀರ್ಣಾವ್ಯವಸ್ಥೆ ಗಿಡಗಂಟಿಗಳು, ಮಧ್ಯದಲ್ಲಿ ಮಳೆಗಾಲದಲ್ಲಿ ರಸ್ತೆಯ ಮೇಲೆ ಉರುಳಿಬಿದ್ದ ಮರ ದಾಟುತ್ತಾ ಹಿರಿಯ ಕಂದಾಯ, ಫಾರೆಸ್ಟ, ಪೊಲೀಸ್, ಅರಣ್ಯ ಅಧಿಕಾರಿಗಳು ಹೋರಾಟಗಾರರ ಜೊತೆಯಲ್ಲಿ ಪಾದಯಾತ್ರೆಗೆ ಹೆಜ್ಜೆ ಹಾಕಿರುವುದು ವಿಶೇಷವಾಗಿತ್ತು 

ಅರಣ್ಯ ಅಧಿಕಾರಿಗಳಿಗೆ ಛಿಮಾರಿ:

ಸಾರ್ವಜನಿಕ ಹಿತಾಶಕ್ತಿಯ ರಸ್ತೆಯ ನಿರ್ವಹಣೆಯ ಹಿನ್ನೆಲೆಯಲ್ಲಿ ಪದೇ ಪದೇ ಅರಣ್ಯ ಸಿಬ್ಬಂದಿಗಳು ಹಸ್ತಕ್ಷೇಪ ಮಾಡುತ್ತಿರುವ ಹಿನ್ನೆಲೆಯಲ್ಲಿ ಕುಮಟ ಮತ್ತು ಸಿದ್ಧಾಪುರ ವಿಭಾಗದ ಅರಣ್ಯ ಅಧಿಕಾರಿಗಳು ಉಪಸ್ಥಿತರಿರುವಂತೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅವರಿಗೆ ಮುಂಚಿತವಾಗಿ ಪತ್ರ ಬರೆಯಲಾಗಿದ್ದು ಅರಣ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಸಾಮೂಹಿಕವಾಗಿ ಛಿಮಾರಿ ಹಾಕಿದರು.

ಅಧಿಕಾರಿಗಳ ದಂಡು ಹಾಜರ್:

ಪ್ರತಿಷ್ಠೆಯ ಹೋರಾಟದ ಪಾದಯಾತ್ರೆಗೆ ಸಿದ್ಧಾಪುರ ಸಿಪಿಐ ಎನ್ ಮಹೇಶ,     ಶಿರಸಿ ಸಿಪಿಐ ಪ್ರಮೋದ, ಡೆಪ್ಯೂಟಿ ಆರ್‍ಎಫ್‍ಒ ಹರೀಣಾ ಗ್ರೀಷ್, ಸಿದ್ಧಾಪುರ  ಲೋಕೋಪಯೋಗಿ ಸಹಾಯಕ ಇಂಜಿನಿಯರ್ ಮುದಕಣ್ಣನವರ್, ಅಸಿಟೆಂಟ್ ಇಂಜಿನಿಯರ್ ಶಿವಪ್ರಕಾಶ, ಕುಮಟ ಅಸಿಟೆಂಟ್ ಇಂಜಿನಿಯರ್ ಸೋಮನಾಥ ಭಂಡಾರಿ, ಕುಮಟ ಪಿಎಸ್‍ಐ ಆನಂದ ಮೂರ್ತಿ, ಪಿಎನ್ ಜರಮಲ್ ಉಪತಹಶಿಲ್ದಾರ್ ಮುಂತಾದ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದ ನೇತ್ರತ್ವವನ್ನು ಸಾಮಾಜಿಕ ಹೋರಾಟಗಾರ ರವೀಂದ್ರ ನಾಯ್ಕ  ವಹಿಸಿದ್ದು ತುಕಾರಾಮ ಗೌಡ ಹುಕ್ಕಳಿ, ಬೀರಾ ಗೌಡ, ರವೀಶ್ ಹುತ್‍ಗಾರ, ಮಂಜುನಾಥ ನಾಯ್ಕ, ಈಶ್ವರ ಮರಾಠಿ ಬೆಂಗಳೆ, ಕೃಷ್ಣ ಮರಾಠಿ, ಮಾದೇವ ನಾಯ್ಕ, ಹರೀಶ್ ನಾಯ್ಕ, ನಾಗಪತಿ ಗೌಡ ಮಾಜಿ ಎಪಿಎಮ್‍ಸಿ ಸದಸ್ಯರು ಮುಂತಾದವರು ಭಾಗವಹಿಸಿದ್ದರು.


related old news-

ಬ್ರಿಟಿಷ್ ಆಳ್ವಿಕೆ ಅವಧಿಯಲ್ಲಿ ಕರಾವಳಿ ಭಾಗದವರಿಗೆ ಘಟ್ಟದ ಮೇಲಿನ ತಾಲೂಕುಗಳಿಗೆ ಸಂಪರ್ಕ ರಸ್ತೆಯಾಗಿದ್ದು, ಸರಕಾರದ ತೀವ್ರ ನೀರ್ಲಕ್ಷ್ಯದಿಂದ 150 ವರ್ಷಕ್ಕಿಂತ ಹಳೆಯ ರಸ್ತೆ ಇಂದು ಅವಶೇಷದ ಕುರುಹುಗಳಾಗಿ ನಿಂತಿರುವುದು ವಿಷಾದಕರ.

ಶತಮಾನದ ಇತಿಹಾಸದ ರಸ್ತೆ ಪುನರ್ ಸ್ಥಾಪನೆಗೆ ಸ್ಥಳೀಕರು ಸಂಘಟನಾತ್ಮಕವಾಗಿ ಹೋರಾಟಕ್ಕೆ ಧುಮುಕಲು ನಿರ್ಧರಿಸಿರುವುದು ಸಾರ್ವಜನಿಕವಾಗಿ ಉತ್ತಮ ಪ್ರಕ್ರಿಯೇ ದೊರಕುತ್ತಿದೆ.

ಪಾದಯಾತ್ರೆ:

ಸರ್ವಋತು ರಸ್ತೆಗೆ ಅಗ್ರಹಿಸಿ ಫೆಬ್ರವರಿ 18 ಗುರುವಾರ ಮುಂಜಾನೆ 9:30 ಗಂಟೆಗೆ ನಿಲ್ಕುಂದದಿಂದ ಬೃಹತ್ ಪಾದಯಾತ್ರೆ ಪ್ರಾರಂಭವಾಗಿ ಕರ್ಮನಘಟಗಿಯಿಂದ 2 ಕೀ.ಮಿ ದೂರದಲ್ಲಿರುವ ಸಿದ್ಧಾಪುರ-ಕುಮಟ ಗಡಿಯಾದ ಪೆರಲಮಾರಿಯಲ್ಲಿಯವರೆಗೂ 7 ಕೀ.ಮಿ ಪಾದಯಾತ್ರೆಯೂ 11 ಗಂಟೆಗೆ ತಲುಪಿ ಸಭೆಯಾಗಿ ಪರಿವರ್ತನೆಗೊಳ್ಳುವುದು. ಸದ್ರಿ ಸಭೆಗೆ ಕಂದಾಯ, ಪೋಲಿಸ್, ಲೋಕಪಯೋಗಿ ಹಾಗೂ ಅರಣ್ಯ ಇಲಾಖೆಯವರಿಗೆ ಮುಂಚಿತವಾಗಿ ಸಭೆಯಲ್ಲಿ ಉಪಸ್ಥಿತರಿದ್ದು, ರಸ್ತೆ ದುರಸ್ಥಿಗೆ ಮತ್ತು ವಿಳಂಬಕ್ಕೆ  ಕಾರಣದ ಸ್ಪಷ್ಪೀಕರಣ ನೀಡಬೆಕೆಂದು ಸಂಘಟಿಕರು ಜಿಲ್ಲಾಧಿಕಾರಿಗಳಿಗೆ ಇಗಾಗಲೇ ಮನವಿ ನೀಡಿದ್ದಾರೆ. 

ಹಗಲು-ರಾತ್ರಿ ಧರಣಿಗೆ ನಿರ್ಧಾರ:

ಪಾದಯಾತ್ರೆ ಮುಗಿದ ನಂತರ ಕುಮಟ-ಸಿದ್ಧಾಪುರ ಗಡಿಯಲ್ಲಿ ಸಂಬಂಧಿಸಿದ ರಸ್ತೆಯ ಕುರಿತು ಪರಿಶಿಲಿಸದೇ ಸೂಕ್ತ ಮಾಹಿತಿ ಮತ್ತು ದಾಖಲೆ ಕೊಡುವಲ್ಲಿ ಗೈರಾದಲ್ಲಿ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ನಿರಂತರ ಹಗಲು-ರಾತ್ರಿ ನೂರಾರು ಕಾರ್ಯಕರ್ತರ ಧರಣಿ ಸ್ಥಳಿದಲ್ಲಿಯೇ ಜರುಗಿಸಲಾಗುವುದು ಎಂದು ಸಂಘಟಿಕರು ತಿರ್ಮಾನಿಸಿದ್ದಾರೆ. ಅಲ್ಲದೇ ಈ ಸಂದರ್ಭದಲ್ಲಿ ಹೋರಾಟಗಾರರ ಪ್ರಾಣಕ್ಕೆ ತೊಂದರೆ ಉಂಟಾದಲ್ಲಿ ಸಂಬಂಧಿಸಿದ ಇಲಾಖೆಯು ಜವಾಬ್ದಾರಿಯಾಗುವುದು ಎಂದು ಸಂಘಟಿಕರು ಎಚ್ಚರಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *