2ಎ ಯಥಾಸ್ಥಿತಿಗೆ ಆಗ್ರಹ: ಭಟ್ಕಳದಲ್ಲಿ ಬೃಹತ್ ಪ್ರತಿಭಟನೆ

ಸರ್ಕಾರ ದಿಟ್ಟತನ ಪ್ರದರ್ಶಿಸುವ ಮೂಲಕ 2ಎ ಮೀಸಲಾತಿಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆಗ್ರಹಿಸಿ 2ಎ ಹಿತರಕ್ಷಣಾ ವೇದಿಕೆಯಿಂದ ಸೋಮವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಿತು.

ಬುಧವಾರ bsndp ಸಭೆ– ಸಿದ್ದಾಪುರ : ತಾಲ್ಲೂಕು BSNDP ಘಟಕದ ಸಭೆಯು ಇಂದು (ಫೆಬ್ರುವರಿ 24) ಬುಧವಾರ ಮದ್ಯಾಹ್ನ 3.00 ಗಂಟೆಗೆ ಲಯನ್ಸ್ ಬಾಲಭವನದ ಸಭಾಭವನದಲ್ಲಿ ನಡೆಯಲಿದೆ. ಸಭೆಯಲ್ಲಿ BSNDP ಸಂಘಟನೆಯ ರಾಜ್ಯಾಧ್ಯಕ್ಷ ಸೈದಪ್ಪ ಗುತ್ತೇದಾರ, ಉಪಾಧ್ಯಕ್ಷ ಪ್ರಕಾಶ್ ಕೋಟ್ಯಾನ್, ಕಾರ್ಯದರ್ಶಿ ಕಾಂತರಾಜ್ ಆರ್ಯ, ಬೆಂಗಳೂರು ನಾರಾಯಣ ಗುರು ಕೋ. ಆಪ್ ಸೊಸೈಟಿಯ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ, ರಾಜ್ಯ ಮುಖಂಡರಾದ ಲೋಹಿತ್ ನಾಯ್ಕ್ ಕಾನ್ಸೂರ್, ಶಿವರಾಜ್ ನಾಯ್ಕ ಕೊಂಡ್ಲಿ, ಜಿಲ್ಲಾಧ್ಯಕ್ಷ ಜಗದೀಶ್ ನಾಯ್ಕ ಅಜ್ಜಿಬಳರು, ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಈ ಸಭೆಗೆ ಸಮಾಜ ಬಾಂಧವರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾಜದ ಅಭಿವೃದ್ಧಿಗೆ ಪೂರಕವಾದ ವಿಷಯ ಕುರಿತು ಚರ್ಚಿಸಲು ಸಲಹೆ ಸೂಚನೆ ನೀಡಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು BSNDP ಸಿದ್ದಾಪುರ ಘಟಕವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Members of backward communities taking out a rally in Bhatkal on Monday.

ಭಟ್ಕಳ: ಸರ್ಕಾರ ದಿಟ್ಟತನ ಪ್ರದರ್ಶಿಸುವ ಮೂಲಕ 2ಎ ಮೀಸಲಾತಿಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆಗ್ರಹಿಸಿ 2ಎ ಹಿತರಕ್ಷಣಾ ವೇದಿಕೆಯಿಂದ ಸೋಮವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಿತು.

ಸಮಾವೇಶದಲ್ಲಿ ಈಡಿಗ ಸಮುದಾಯದ ಉಜಿರೆ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಶಾಸಕ ಸುನಿಲ ನಾಯ್ಕ್, 22ಕ್ಕೂ 2ಎದಲ್ಲಿ ಬರುವ ಸಮುದಾಯದ ಮುಖಂಡರು ಸೇರಿದಂತೆ 10,000ಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು.

ಈ ವೇಳೆ ಮಾತನಾಡಿದ ಉಜಿರೆ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಯಾರೋ ಹೋರಾಟ, ಪಾದಯಾತ್ರೆ ಮಾಡುತ್ತಾರೆಂದು ಮೀಸಲಾತಿ ಕೊಡಲು ಸಾಧ್ಯವೇ? ಮೀಸಲಾತಿಯೆಂದರೆ ಮಕ್ಕಳಾಟವೇ? ಎಂದು ಪ್ರಶ್ನಿಸಿದರು.

ಸರ್ಕಾರ ಎಂದರೆ ರಾಜ ಇದ್ದಂತೆ. ಜನಸಂಖ್ಯೆ ಆಧಾರದಲ್ಲಿ ಓಟಿನ ಲಾಭಕ್ಕೋಸ್ಕರ ಯಾರೋ ಕೇಳಿದರೆಂದು ಮೀಸಲು ಕೊಡುತ್ತೇವೆಂದು ಸುಳ್ಳು ಭರವಸೆ ಕೊಡುವುದು ಸರಿಯಲ್ಲ. ನಾವು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದೇನೆ. ಸರ್ಕಾರ ಪಂಚಮಸಾಲಿ ಆಗ್ರಹಗಳನ್ನು ಕೇಳಿದ್ದೇ ಆದರೆ, ನಮ್ಮ ಪ್ರತಿಭಟನೆ ತೀವ್ರಗೊಳ್ಳಲಿದೆ ಎಂದಿದ್ದಾರೆ

ಮೀಸಲಾತಿಯನ್ನು ನಾವು ಎಂದಿಗೂ ಹಂಚಿಕೊಳ್ಳುವುದ್ಲಿಲ್. ನಮ್ಮ ಭವಿಷ್ಯದ ಪೀಳಿಗೆಯ ಜೀವನವನ್ನು ನಾವು ಹಾಳು ಮಾಡುವುದಿಲ್ಲ ಎಂದು ಸಾಸಕ ಸುನಿಲ ನಾಯ್ಕ್ ಹೇಳಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *