ತಾಲೂಕಾ ಮಟ್ಟದ ಯುವಜನಮೇಳ ಯಾಕಿಲ್ಲ? ಗ್ಯಾಸ್ ಬೆಲೆ ಏರಿಕೆ ಯಾಕೆ ನಿಲ್ಲುತ್ತಿಲ್ಲ!

ದಿನಾಂಕ: 24-02-2021

ರಿಗೆ,
ಸನ್ಮಾನ್ಯ ಶ್ರೀ ನಾರಾಯಣ ಗೌಡ
ಯುವಜನ ಹಾಗೂ ಕ್ರೀಡಾ ಇಲಾಖೆ ರಾಜ್ಯ ಸಚಿವರು
ಕರ್ನಾಟಕ ಸರ್ಕಾರವರ ಬಳಿಗೆ

ವಿಷಯ : ತಾಲೂಕ ಮಟ್ಟದ ಯುವಜನಮೇಳ ನಡೆಸುವ ಕುರಿತು.
ಮಾನ್ಯರೇ,
ತಮ್ಮ ಘನ ಸರ್ಕಾರದಲ್ಲಿ ಯುವಜನ ಸೇವಾ ಕ್ರೀಡಾ ಇಲಾಖೆಯನ್ನು ಚುರುಕುಗೊಳಿಸಿ ಬಲತುಂಬುವುದಕ್ಕೆ ಮುಂದಾಗಿರುವುದು ಸ್ವಾಗತಾರ್ಹವಾಗಿದೆ. ಈಗಾಗಲೇ ಯುವಜನ ಇಲಾಖೆಯ ಅಧಿಕಾರಿಗಳ ಸಭೆ ಕರೆದು ಕಾರ್ಯೋನ್ಮುಖವಾಗಿರುವುದು ನಮಗೆಲ್ಲರಿಗೂ ಹರ್ಷವನ್ನುಂಟು ಮಾಡಿದೆ. ಆದರೆ ಆರಂಭದ ದಿನಗಳಿಂದಲೂ ಗ್ರಾಮೀಣ ಭಾಗದ ಜಾನಪದ ಕಲೆ ಸಂಸ್ಕೃತಿಯ ಉಳಿವಿಗಾಗಿ ನಡೆಸಿಕೊಂಡು ಬರುತ್ತಿರುವ ತಾಲೂಕಾ ಮಟ್ಟದ ಯುವಜನಮೇಳಗಳನ್ನು ರದ್ದುಗೊಳಿಸಿರುವುದು ವಿಷಾದಕರ. ನೇರವಾಗಿ ಜಿಲ್ಲಾ ಮಟ್ಟದ ಯುವಜನಮೇಳಗಳನ್ನು ಆಯೋಜನೆ ಮಾಡುವುದು ತೀರಾ ಅವೈಜ್ಞಾನಿಕವಾಗಿದೆ. ತಾಲೂಕಾ ಮಟ್ಟದಲ್ಲಿ ಆಯ್ಕೆಯಾಗದೆ ನೇರವಾಗಿ ಜಿಲ್ಲಾ ಮಟ್ಟದಲ್ಲಿ ಸ್ಫರ್ಧೆ ನಡೆಸುವುದು ನೈಜ ಪ್ರತಿಭೆಗಳಿಗೆ ಅನ್ಯಾಯವಾದಂತಾಗಿದೆ. ಹಲವರು ನೇರವಾಗಿ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಬೇಕಾಗಿರುವುದರಿಂದ ಸ್ಪರ್ದೆಯಲ್ಲಿ ಹಿಂದೆ ಸರಿಯುತ್ತಿದ್ದಾರೆ. ಇದರಿಂದ ಈ ಮೊದಲಿನಂತೆ ತಾಲೂಕಾ ಮಟ್ಟದಲ್ಲಿ ಯುವಜನ ಮೇಳಗಳನ್ನು ನಡೆಸುವುದಕ್ಕೆ ಆದೇಶಿಸಬೇಕಾಗಿ ವಿನಂತಿಸಿಕೊಳ್ಳುತ್ತಿದ್ದೇವೆ.
ಸೊರಗುತ್ತಿರುವ ಯುವಜನ ಮೇಳಗಳನ್ನು ಯಶಸ್ವಿಗೊಳಿಸಲು ಬೇಕಾಗಿರುವ ಕಾರ್ಯಯೋಜನೆಯನ್ನು ರೂಪಿಸುವದರೋಂದಿಗೆ ಹೆಚ್ಚಿನ ಅನುದಾನ ಮೀಸಲಿಡಬೇಕು ತಾಲೂಕಾ ಮಟ್ಟದ ಸ್ಫರ್ಧೆ ಯಲ್ಲಿ ಆಯ್ಕೆಯಾದ ಪ್ರತಿಭೆಗಳಿಗೆ ನಗದು ಬಹುಮಾನ ನೀಡುವಂತಾಗಬೇಕು. ಯುವಜನ ಮೇಳದಲ್ಲಿ ಆಯ್ಕೆಯಾದ ಕಲಾ ತಂಡಗಳಿಗೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅವಕಾಶ ಕಲ್ಪಿಸಬೇಕು. ಸರ್ಕಾರಿ ಕಾರ್ಯಕ್ರಮಗಳಾದ ಕದಂಬ ಉತ್ಸವ, ಹಂಪಿ ಉತ್ಸವ, ಕರಾವಳಿ ಉತ್ಸವ, ದಸರಾದಂತಹ ಕಾರ್ಯಕ್ರಮಗಳಲ್ಲಿ ಅವಕಾಶವನ್ನು ಕಲ್ಪಿಸಬೇಕು. ಸಕ್ರೀಯವಾಗಿ ಪಾಲ್ಗೊಳ್ಳುವ ತಂಡಗಳಿಗೆ ವೇಷ ಭೂಷಣ ಹಾಗೂ ಪರಿಕರಗಳನ್ನು ಒದಗಿಸುವಂತಾಗಬೇಕು. ಈ ಎಲ್ಲಾ ಅಂಶಗಳನ್ನು ಒಳಗೊಂಡು ಯುವಜನಮೇಳನ್ನು ಪುನಶ್ಚೇತನಗೊಳಸಲು ಇಲಾಖೆಗೆ ಆದೇಶಿಸಬೇಕಾಗಿ ಈ ಮೂಲಕ ವಿನಂತಿಸಿಕೊಳ್ಳುತ್ತಿದ್ದೇವೆ.
ಧನ್ಯವಾದಗಳೊಂದಿಗೆ

                                                ತಮ್ಮವಿಶ್ವಾಸಿ ಗಳು   

ಅಣ್ಣಪ್ಪ ನಾರಾಯಣ ನಾಯ್ಕ
ಅಧ್ಯಕ್ಷರು ತಾಲೂಕ ಯುವ ಒಕ್ಕೂಟ ಸಿದ್ದಾಪುರ ( ಉ ಕ )
ಪ್ರತಿಗಳು :
1) ತಹಶೀಲ್ದಾರರು, ಸಿದ್ದಾಪುರ ( ಉ ಕ )
2) ಕಾರ್ಯನಿರ್ವಾಹಣ ಅಧಿಕಾರಿಗಳು ತಾ.ಪಂ.ಸಿದ್ದಾಪುರ ( ಉ ಕ )

ಹಾಜರಿದ್ದವರು ಯುವ ಒಕ್ಕೂಟದ ಅಧ್ಯಕ್ಷರಾದ ಅಣ್ಣಪ್ಪ ನಾರಾಯಣ ನಾಯ್ಕ ಶಿರಳಗಿ, ಬಿ ಡಿ ನಾಯ್ಕ, ಎಮ್ ಜಿ ನಾಯ್ಕ, ಶಂಕರಮೂರ್ತಿ ನಾಯ್ಕ, ಗೋಪಾಲ ಕಾನಳ್ಳಿ. ಕೃಷ್ಣಮೂರ್ತಿ ಐಸೂರ, ನೀಲಮ್ಮ ಕೊಂಡ್ಲಿ, ನೀಲಕಂಠ ಬೇಡ್ಕಣಿ, ಸಿ.ಟಿ. ನಾಯ್ಕ ಹಾಜರಿದ್ದರು

ಸಬ್ಸಿಡಿ, ಸಬ್ಸಿಡಿ ರಹಿತ ಎಲ್‌ಪಿಜಿ ಬೆಲೆ ಮತ್ತೆ 25 ರೂ. ಏರಿಕೆ, ಕಂಗಾಲಾದ ಜನ

ಪೆಟ್ರೋಲ್, ಡೀಸೆಲ್ ಹಾಗೂ ಇತರೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬೇಸತ್ತಿದ್ದ ಜನರಿಗೆ ಕೇಂದ್ರ ಸರ್ಕಾರ ಈಗ ಮತ್ತೊಂದು ದರ ಏರಿಕೆ ಆಘಾತ ನೀಡಿದ್ದು, ಸಬ್ಸಿಡಿ ಹಾಗೂ ಸಬ್ಸಿಡಿ ರಹಿತ ಅಡುಗೆ….

LPG prices cut by up to Rs 65 per cylinder; second cost reduction in two months 

ನವದೆಹಲಿ: ಪೆಟ್ರೋಲ್, ಡೀಸೆಲ್ ಹಾಗೂ ಇತರೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬೇಸತ್ತಿದ್ದ ಜನರಿಗೆ ಕೇಂದ್ರ ಸರ್ಕಾರ ಈಗ ಮತ್ತೊಂದು ದರ ಏರಿಕೆ ಆಘಾತ ನೀಡಿದ್ದು, ಸಬ್ಸಿಡಿ ಹಾಗೂ ಸಬ್ಸಿಡಿ ರಹಿತ ಅಡುಗೆ ಅನಿಲ ಎಲ್‌ಪಿಜಿ ಬೆಲೆಯನ್ನು ಗುರುವಾರ ಪ್ರತಿ ಸಿಲಿಂಡರ್‌ಗೆ 25 ರೂ.ಗೆ ಏರಿಸಲಾಗಿದೆ.

ತೈಲ ಕಂಪನಿಗಳು ಈ ತಿಂಗಳಲ್ಲೇ ಮೂರು ಬಾರಿ ಎಲ್ ಪಿಜಿ ದರ ಏರಿಕೆ ಮಾಡಿದ್ದು, ದೆಹಲಿಯಲ್ಲಿ 14.2 ಕೆಜಿ ಸಿಲಿಂಡರ್​ನ ಬೆಲೆ 794 ರೂಪಾಯಿಗೆ ಮುಟ್ಟಿದೆ.

ಫೆ.4ರಂದು 25 ರೂ. ಫೆ. 15ರಂದು 50 ರೂ. ಹೆಚ್ಚಿಸಲಾಗಿತ್ತು. ಇದೀಗ ಮತ್ತೆ 25 ರೂಪಾಯಿ ಹೆಚ್ಚಿಸಲಾಗಿದ್ದು, ಬೆಂಗಳೂರಿನಲ್ಲಿ ಪ್ರತಿ ಸಿಲಿಂಡರ್​ ಬೆಲೆ 794ಕ್ಕೆ ಏರಿಕೆಯಾಗಿದೆ. ಕೊಲ್ಕತ್ತಾದಲ್ಲಿ 820 ರೂ, ಮುಂಬೈನಲ್ಲಿ 794 ರೂ, ಚೆನ್ನೈನಲ್ಲಿ 810 ರೂ, ಹೈದರಾಬಾದ್​ನಲ್ಲಿ 846.50 ರೂ ಆಗಿದೆ.

ಕಳೆದ ಡಿಸೆಂಬರ್ ನಿಂದ ಇಲ್ಲಿಯವರಿಗೆ ಎಲ್ ಪಿಜಿ ದರ 150 ರೂಪಾಯಿ ಹೆಚ್ಚಾಗಿದ್ದು, ಜನವರಿ ತಿಂಗಳಲ್ಲಿ ಹೆಚ್ಚಳ ಕಂಡಿರಲಿಲ್ಲ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆದ ಏರುಪೇರಿನಿಂದ ಈ ಸಿಲಿಂಡರ್ ಬೆಲೆ ಹೆಚ್ಚಾಗಿದೆ ಎಂದು ವಿಶ್ಲೇಷಕರು ಹೇಳಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *