ತಾಲೂಕಾ ಮಟ್ಟದ ಯುವಜನಮೇಳ ಯಾಕಿಲ್ಲ? ಗ್ಯಾಸ್ ಬೆಲೆ ಏರಿಕೆ ಯಾಕೆ ನಿಲ್ಲುತ್ತಿಲ್ಲ!

ದಿನಾಂಕ: 24-02-2021

ರಿಗೆ,
ಸನ್ಮಾನ್ಯ ಶ್ರೀ ನಾರಾಯಣ ಗೌಡ
ಯುವಜನ ಹಾಗೂ ಕ್ರೀಡಾ ಇಲಾಖೆ ರಾಜ್ಯ ಸಚಿವರು
ಕರ್ನಾಟಕ ಸರ್ಕಾರವರ ಬಳಿಗೆ

ವಿಷಯ : ತಾಲೂಕ ಮಟ್ಟದ ಯುವಜನಮೇಳ ನಡೆಸುವ ಕುರಿತು.
ಮಾನ್ಯರೇ,
ತಮ್ಮ ಘನ ಸರ್ಕಾರದಲ್ಲಿ ಯುವಜನ ಸೇವಾ ಕ್ರೀಡಾ ಇಲಾಖೆಯನ್ನು ಚುರುಕುಗೊಳಿಸಿ ಬಲತುಂಬುವುದಕ್ಕೆ ಮುಂದಾಗಿರುವುದು ಸ್ವಾಗತಾರ್ಹವಾಗಿದೆ. ಈಗಾಗಲೇ ಯುವಜನ ಇಲಾಖೆಯ ಅಧಿಕಾರಿಗಳ ಸಭೆ ಕರೆದು ಕಾರ್ಯೋನ್ಮುಖವಾಗಿರುವುದು ನಮಗೆಲ್ಲರಿಗೂ ಹರ್ಷವನ್ನುಂಟು ಮಾಡಿದೆ. ಆದರೆ ಆರಂಭದ ದಿನಗಳಿಂದಲೂ ಗ್ರಾಮೀಣ ಭಾಗದ ಜಾನಪದ ಕಲೆ ಸಂಸ್ಕೃತಿಯ ಉಳಿವಿಗಾಗಿ ನಡೆಸಿಕೊಂಡು ಬರುತ್ತಿರುವ ತಾಲೂಕಾ ಮಟ್ಟದ ಯುವಜನಮೇಳಗಳನ್ನು ರದ್ದುಗೊಳಿಸಿರುವುದು ವಿಷಾದಕರ. ನೇರವಾಗಿ ಜಿಲ್ಲಾ ಮಟ್ಟದ ಯುವಜನಮೇಳಗಳನ್ನು ಆಯೋಜನೆ ಮಾಡುವುದು ತೀರಾ ಅವೈಜ್ಞಾನಿಕವಾಗಿದೆ. ತಾಲೂಕಾ ಮಟ್ಟದಲ್ಲಿ ಆಯ್ಕೆಯಾಗದೆ ನೇರವಾಗಿ ಜಿಲ್ಲಾ ಮಟ್ಟದಲ್ಲಿ ಸ್ಫರ್ಧೆ ನಡೆಸುವುದು ನೈಜ ಪ್ರತಿಭೆಗಳಿಗೆ ಅನ್ಯಾಯವಾದಂತಾಗಿದೆ. ಹಲವರು ನೇರವಾಗಿ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಬೇಕಾಗಿರುವುದರಿಂದ ಸ್ಪರ್ದೆಯಲ್ಲಿ ಹಿಂದೆ ಸರಿಯುತ್ತಿದ್ದಾರೆ. ಇದರಿಂದ ಈ ಮೊದಲಿನಂತೆ ತಾಲೂಕಾ ಮಟ್ಟದಲ್ಲಿ ಯುವಜನ ಮೇಳಗಳನ್ನು ನಡೆಸುವುದಕ್ಕೆ ಆದೇಶಿಸಬೇಕಾಗಿ ವಿನಂತಿಸಿಕೊಳ್ಳುತ್ತಿದ್ದೇವೆ.
ಸೊರಗುತ್ತಿರುವ ಯುವಜನ ಮೇಳಗಳನ್ನು ಯಶಸ್ವಿಗೊಳಿಸಲು ಬೇಕಾಗಿರುವ ಕಾರ್ಯಯೋಜನೆಯನ್ನು ರೂಪಿಸುವದರೋಂದಿಗೆ ಹೆಚ್ಚಿನ ಅನುದಾನ ಮೀಸಲಿಡಬೇಕು ತಾಲೂಕಾ ಮಟ್ಟದ ಸ್ಫರ್ಧೆ ಯಲ್ಲಿ ಆಯ್ಕೆಯಾದ ಪ್ರತಿಭೆಗಳಿಗೆ ನಗದು ಬಹುಮಾನ ನೀಡುವಂತಾಗಬೇಕು. ಯುವಜನ ಮೇಳದಲ್ಲಿ ಆಯ್ಕೆಯಾದ ಕಲಾ ತಂಡಗಳಿಗೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅವಕಾಶ ಕಲ್ಪಿಸಬೇಕು. ಸರ್ಕಾರಿ ಕಾರ್ಯಕ್ರಮಗಳಾದ ಕದಂಬ ಉತ್ಸವ, ಹಂಪಿ ಉತ್ಸವ, ಕರಾವಳಿ ಉತ್ಸವ, ದಸರಾದಂತಹ ಕಾರ್ಯಕ್ರಮಗಳಲ್ಲಿ ಅವಕಾಶವನ್ನು ಕಲ್ಪಿಸಬೇಕು. ಸಕ್ರೀಯವಾಗಿ ಪಾಲ್ಗೊಳ್ಳುವ ತಂಡಗಳಿಗೆ ವೇಷ ಭೂಷಣ ಹಾಗೂ ಪರಿಕರಗಳನ್ನು ಒದಗಿಸುವಂತಾಗಬೇಕು. ಈ ಎಲ್ಲಾ ಅಂಶಗಳನ್ನು ಒಳಗೊಂಡು ಯುವಜನಮೇಳನ್ನು ಪುನಶ್ಚೇತನಗೊಳಸಲು ಇಲಾಖೆಗೆ ಆದೇಶಿಸಬೇಕಾಗಿ ಈ ಮೂಲಕ ವಿನಂತಿಸಿಕೊಳ್ಳುತ್ತಿದ್ದೇವೆ.
ಧನ್ಯವಾದಗಳೊಂದಿಗೆ

                                                ತಮ್ಮವಿಶ್ವಾಸಿ ಗಳು   

ಅಣ್ಣಪ್ಪ ನಾರಾಯಣ ನಾಯ್ಕ
ಅಧ್ಯಕ್ಷರು ತಾಲೂಕ ಯುವ ಒಕ್ಕೂಟ ಸಿದ್ದಾಪುರ ( ಉ ಕ )
ಪ್ರತಿಗಳು :
1) ತಹಶೀಲ್ದಾರರು, ಸಿದ್ದಾಪುರ ( ಉ ಕ )
2) ಕಾರ್ಯನಿರ್ವಾಹಣ ಅಧಿಕಾರಿಗಳು ತಾ.ಪಂ.ಸಿದ್ದಾಪುರ ( ಉ ಕ )

ಹಾಜರಿದ್ದವರು ಯುವ ಒಕ್ಕೂಟದ ಅಧ್ಯಕ್ಷರಾದ ಅಣ್ಣಪ್ಪ ನಾರಾಯಣ ನಾಯ್ಕ ಶಿರಳಗಿ, ಬಿ ಡಿ ನಾಯ್ಕ, ಎಮ್ ಜಿ ನಾಯ್ಕ, ಶಂಕರಮೂರ್ತಿ ನಾಯ್ಕ, ಗೋಪಾಲ ಕಾನಳ್ಳಿ. ಕೃಷ್ಣಮೂರ್ತಿ ಐಸೂರ, ನೀಲಮ್ಮ ಕೊಂಡ್ಲಿ, ನೀಲಕಂಠ ಬೇಡ್ಕಣಿ, ಸಿ.ಟಿ. ನಾಯ್ಕ ಹಾಜರಿದ್ದರು

ಸಬ್ಸಿಡಿ, ಸಬ್ಸಿಡಿ ರಹಿತ ಎಲ್‌ಪಿಜಿ ಬೆಲೆ ಮತ್ತೆ 25 ರೂ. ಏರಿಕೆ, ಕಂಗಾಲಾದ ಜನ

ಪೆಟ್ರೋಲ್, ಡೀಸೆಲ್ ಹಾಗೂ ಇತರೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬೇಸತ್ತಿದ್ದ ಜನರಿಗೆ ಕೇಂದ್ರ ಸರ್ಕಾರ ಈಗ ಮತ್ತೊಂದು ದರ ಏರಿಕೆ ಆಘಾತ ನೀಡಿದ್ದು, ಸಬ್ಸಿಡಿ ಹಾಗೂ ಸಬ್ಸಿಡಿ ರಹಿತ ಅಡುಗೆ….

LPG prices cut by up to Rs 65 per cylinder; second cost reduction in two months 

ನವದೆಹಲಿ: ಪೆಟ್ರೋಲ್, ಡೀಸೆಲ್ ಹಾಗೂ ಇತರೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬೇಸತ್ತಿದ್ದ ಜನರಿಗೆ ಕೇಂದ್ರ ಸರ್ಕಾರ ಈಗ ಮತ್ತೊಂದು ದರ ಏರಿಕೆ ಆಘಾತ ನೀಡಿದ್ದು, ಸಬ್ಸಿಡಿ ಹಾಗೂ ಸಬ್ಸಿಡಿ ರಹಿತ ಅಡುಗೆ ಅನಿಲ ಎಲ್‌ಪಿಜಿ ಬೆಲೆಯನ್ನು ಗುರುವಾರ ಪ್ರತಿ ಸಿಲಿಂಡರ್‌ಗೆ 25 ರೂ.ಗೆ ಏರಿಸಲಾಗಿದೆ.

ತೈಲ ಕಂಪನಿಗಳು ಈ ತಿಂಗಳಲ್ಲೇ ಮೂರು ಬಾರಿ ಎಲ್ ಪಿಜಿ ದರ ಏರಿಕೆ ಮಾಡಿದ್ದು, ದೆಹಲಿಯಲ್ಲಿ 14.2 ಕೆಜಿ ಸಿಲಿಂಡರ್​ನ ಬೆಲೆ 794 ರೂಪಾಯಿಗೆ ಮುಟ್ಟಿದೆ.

ಫೆ.4ರಂದು 25 ರೂ. ಫೆ. 15ರಂದು 50 ರೂ. ಹೆಚ್ಚಿಸಲಾಗಿತ್ತು. ಇದೀಗ ಮತ್ತೆ 25 ರೂಪಾಯಿ ಹೆಚ್ಚಿಸಲಾಗಿದ್ದು, ಬೆಂಗಳೂರಿನಲ್ಲಿ ಪ್ರತಿ ಸಿಲಿಂಡರ್​ ಬೆಲೆ 794ಕ್ಕೆ ಏರಿಕೆಯಾಗಿದೆ. ಕೊಲ್ಕತ್ತಾದಲ್ಲಿ 820 ರೂ, ಮುಂಬೈನಲ್ಲಿ 794 ರೂ, ಚೆನ್ನೈನಲ್ಲಿ 810 ರೂ, ಹೈದರಾಬಾದ್​ನಲ್ಲಿ 846.50 ರೂ ಆಗಿದೆ.

ಕಳೆದ ಡಿಸೆಂಬರ್ ನಿಂದ ಇಲ್ಲಿಯವರಿಗೆ ಎಲ್ ಪಿಜಿ ದರ 150 ರೂಪಾಯಿ ಹೆಚ್ಚಾಗಿದ್ದು, ಜನವರಿ ತಿಂಗಳಲ್ಲಿ ಹೆಚ್ಚಳ ಕಂಡಿರಲಿಲ್ಲ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆದ ಏರುಪೇರಿನಿಂದ ಈ ಸಿಲಿಂಡರ್ ಬೆಲೆ ಹೆಚ್ಚಾಗಿದೆ ಎಂದು ವಿಶ್ಲೇಷಕರು ಹೇಳಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *