ಕಲೆ,ಜಾತ್ರೆ, ನಿವೃತ್ತಿ ಇತ್ಯಾದಿ….

ಸಿದ್ದಾಪುರ,
ಗ್ರಾಮೀಣ ಕಲೆಯಾಗಿರುವ ಕಬಡ್ಡಿ ಆಟ ಇಂದು ಮರೆಯಾಗುತ್ತಿದೆ. ಅದರಂತೆ ಹಲವು ಸಸ್ಯ ಪ್ರಬೇಧ ಗಳಿಂದ ಕೂಡಿರುವ ಮಾವಿನಗುಂಡಿ ಸಮೀಪದ ಕತ್ತಲೇಕಾನು ಇಂದು ನಶಿಸುತ್ತಿದೆ. ಇವರೆಡನ್ನು ಉಳಿಸಿ ಬೆಳೆಸುವುದು ನಮ್ಮ ಕೈಲಿದೆ. ಯುವ ಸಮೂಹ ಉತ್ತಮ ಕಾರ್ಯಚಟುವಟಿಕೆ ನಡೆಸುವ ಮೂಲಕ ಗ್ರಾಮೀಣ ಸೊಗಡಿನ ಕಲೆಯನ್ನು ಬೆಂಬಲಿಸುತ್ತಿರುವುದು ಶ್ಲಾಘನೀಯ ಎಂದು ಆರ್‍ಎಫ್‍ಓ ಶಿವಾನಂದ ನಿಂಗಾಣಿ ಹೇಳಿದರು.
ತಾಲೂಕಿನ ಹಲಸಗಾರ ಬಸ್ ನಿಲ್ದಾಣದ ಸಮೀಪ ಭೂತೇಶ್ವರ ಗೆಳೆಯರ ಬಳಗ ಹಲಸಗಾರ ಆಶ್ರಯದಲ್ಲಿ ಗುರುವಾರ ನಡೆದ ಎರಡನೇ ವರ್ಷದ ಮ್ಯಾಟ್ ಮಾದರಿಯ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು.


ಕೃಷಿಕ ಮಹಾಬಲೇಶ್ವರ ಕೆ.ನಾಯ್ಕ ಕಬ್ಬಿನಸರ ಅಧ್ಯಕ್ಷತೆವಹಿಸಿದ್ದರು. ತಾಪಂ ಅಧ್ಯಕ್ಷ ಸುಧೀರ್ ಬಿ.ಗೌಡರ್, ತಾಲೂಕು ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಸೀಮಾ ಎಂ.ಹೆಗಡೆ ಕಲ್ಮನೆ, ವರದರಾಜ ಸ್ವಾಮೀಜಿ ತರಳಿ, ಗ್ರಾಪಂ ಅಧ್ಯಕ್ಷೆ ವಿದ್ಯಾ ಪಿ.ನಾಯ್ಕ, ಸದಸ್ಯ ಅನಂತ ಹೆಗಡೆ ಹೊಸಗದ್ದೆ, ಸಿದ್ದಾರ್ಥ ಗೌಡರ್ ಮುಠ್ಠಳ್ಳಿ,ಜಿಪಂ ಮಾಜಿ ಸದಸ್ಯ ಎಸ್.ಆರ್.ಹೆಗಡೆ ಕುಂಬಾರಕುಳಿ, ಸತೀಶ ನಾಯ್ಕ ತರಳಿ(ಹಲಸಗಾರ), ಪತ್ರಕರ್ತ ರಮೇಶ ಹೆಗಡೆ ಹಾರ್ಸಿಮನೆ, ಶ್ರೀಧರ ಎಂ.ಭಟ್ಟ ಮಾಣಿಕ್ನಮನೆ, ಅಶೋಕ ಎಂ.ನಾಯ್ಕ ಹಳಿಯಾಳ, ರಾಮಚಂದ್ರ ನಾಯ್ಕ ಕಬ್ಬಿನಸರ, ಗ್ರಾಪಂ ಉಪಾಧ್ಯಕ್ಷ ಶಾಂತಕುಮಾರ ಪಾಟೀಲ್, ಸೀತಾರಾಮ ಶೆಟ್ಟಿ, ಹನುಮಕ್ಕ ಆರ್.ಭೋವಿ, ಸರೋಜ ಆರ್.ನಾಯ್ಕ, ಗೋಪಾಲಕೃಷ್ಣ ದೇವಾಡಿಗ,ಕಮಲಾಕರ ನಾಯ್ಕ ಹುಬ್ಬಗೈ,ಲಕ್ಷ್ಮಣ ಆರ್.ನಾಯ್ಕ ಇತರರಿದ್ದರು.
ಸುಮಂತ ನಾಯ್ಕ ಹಲಸಗಾರ.ಮಹೇಶ ಕಾರ್ಯಕ್ರಮ ನಿರ್ವಹಿಸಿದರು.
ಪಂದ್ಯಾವಳಿಯಲ್ಲಿ ಹೊಸೂರ ತಂಡ ಪ್ರಥಮ, ಗಾಣಿಕೊಪ್ಪ ತಂಡ ದ್ವಿತೀಯ, ಐಗೋಡ. ತೃತೀಯ ಹಾಗೂ ಹೊಸಳ್ಳಿ ತಂಡ ನಾಲ್ಕನೆ ಸ್ಥಾನ ಪಡೆದುಕೊಂಡಿದೆ.ಪಂದ್ಯಾವಳಿಯಲ್ಲಿ 37ತಂಡಗಳು ಭಾಗವಹಿಸಿದ್ದವು.

“ಸೇವಾ ನಿವೃತ್ತಿ”
ಪ್ರಮಿಳಾ ನಾರಾಯಣ ಹೆಗಡೆ ಇವರು ಕ್ಯಾದಗಿಯ ಬೊಪ್ಪನಕೇರಿಯಲ್ಲಿ 27-02-1961 ರಲ್ಲಿ ನಾರಾಯಣ, ಯಂಕಿ ದಂಪತಿಗಳ ಮಗಳಾಗಿ ಜನಿಸಿದರು.26.07.1885 ರಂದು ಕಿರಿಯ ಪ್ರಾಥಮಿಕ ಶಾಲೆ ಮಾಸ್ತಿ ಹಕ್ಲು ಇಲ್ಲಿ ಸರ್ಕಾರಿ ಸೇವೆ.1992 ರವರೆಗೆ ಅಲ್ಲಿನ ವಿದ್ಯಾರ್ಥಿಗಳಿಗೆ ಅಕ್ಷರಾಭ್ಯಾಸ.
ನಂತರದಲ್ಲಿ ಗಟ್ಟಿಕೈ, ಶಿರೂರು ಹಾಗೂ ಕೊನೆಯ ಸೇವೆ ಹಿರಿಯ ಪ್ರಾಥಮಿಕ ಶಾಲೆ ಕ್ಯಾದಗಿಯಲ್ಲಿ.

ಒಟ್ಟು 35 ವರ್ಷ, 07 ತಿಂಗಳ ಸುದೀರ್ಘ ಸೇವೆ. ಶ್ರೀಧರ ಭಟ್ ಪತಿ, ಮಕ್ಕಳಾದ ಪ್ರಶಾಂತ, ನಿಶಾಂತ ಇವರೊಂದಿಗೆ ಜೀವನ.ಸೇವಾ ಅವಧಿಯಲ್ಲಿ ಅದೆಷ್ಟೋ ವಿದ್ಯಾರ್ಥಿಗಳಿಗೆ ಅಕ್ಷರ ಹೇಳಿ ಸನ್ನಡತೆಯ ದಾರಿ ತೋರಿ ಎಲ್ಲರ ಪ್ರೀತಿಯ ಅಕ್ಕೋರಾದ ನಿಮ್ಮ ವಿಶ್ರಾಂತಿಯ ಜೀವನ ಸುಖಕರವಾಗಿರಲಿ ಎಂಬ ಹಾರೈಕೆ. ಇಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಸತೀಶ ಹೆಗಡೆ ಹಾಗೂ ಪದಾಧಿಕಾರಿಗಳಿಂದ ಸೇವಾ ನಿವೃತ್ತಿ ದಿನವೇ ಶಾಲೆಯಲ್ಲಿ ಗೌರವ ಸಮರ್ಪಣೆ.ಇಂತಹ ಉತ್ತಮ ಯೋಜನೆ ಇಂದು ನಿನ್ನೆಯದಲ್ಲ. ಅಂದು ಎಂ.ಡಿ.ನಾಯ್ಕ ಹಾಗೂ ಕೆ.ಜಿ.ನಾಯ್ಕ ಎಂಬ ಕ್ರಿಯಾಶೀಲ ಶಿಕ್ಷಕರ ಕನಸಿನ ಯೋಜನೆಗೆ ಇಂದು ಸೇವಾನಿವೃತ್ತಿಯ ದಿನವೇ ಸನ್ಮಾನದ ಫಲ. ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷ ಡಿ.ಆಯ್.ನಾಯ್ಕ,ಅಧ್ಯಕ್ಷ ಸತೀಶ್.ಹೆಗಡೆ,ಉಪಾಧ್ಯಕ್ಷ ನಾಗರಾಜ.ಮಡಿವಾಳ,ಪ್ರಧಾನ ಕಾರ್ಯದರ್ಶಿ ಗುರುರಾಜ.ನಾಯ್ಕ, ಸದಸ್ಯರಾದ ಜಿ.ಜಿ.ಹೆಗಡೆ, ಸಿ.ಆರ್.ಪಿ.ಪರಶುರಾಮ ನಾಯ್ಕ,ಎಸ್.ಡಿ.ಎಂ.ಸಿ ಅಧ್ಯಕ್ಷರು, ಪದಾಧಿಕಾರಿಗಳು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಉತ್ತರ ಕರ್ನಾಟಕದ ಪ್ರಸಿದ್ಧ ಉಳವಿ ಜಾತ್ರೆ ಈ ವರ್ಷ ಸರಳವಾಗಿ ಮುಗಿದಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *