60 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ವಿತರಣೆಗೆ ನೋಂದಣಿಯಾಗುವುದು ಹೇಗೆ? ಇಲ್ಲಿದೆ ಸಂಪೂರ್ಣ ಪ್ರಕ್ರಿಯೆಯ ಮಾಹಿತಿ

ಮಾರಕ ಕೊರೋನಾ ವೈರಸ್ ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಆರಂಭಿಸಿರುವ ಕೋವಿಡ್ ಲಸಿಕೆ ವಿತರಣಾ ಕಾರ್ಯಾಕ್ರಮದ ಮುಂದಿನ ಹಂತ ಇಂದಿನಿಂದ ಆರಂಭವಾಗಿದ್ದು, 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ವಿತರಣೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಈ ನೋಂದಣಿ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ.

COVID-19 vaccine

ನವದೆಹಲಿ: ಮಾರಕ ಕೊರೋನಾ ವೈರಸ್ ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಆರಂಭಿಸಿರುವ ಕೋವಿಡ್ ಲಸಿಕೆ ವಿತರಣಾ ಕಾರ್ಯಾಕ್ರಮದ ಮುಂದಿನ ಹಂತ ಇಂದಿನಿಂದ ಆರಂಭವಾಗಿದ್ದು, 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ವಿತರಣೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಈ ನೋಂದಣಿ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ.

ಲಸಿಕೆ ಅಭಿಯಾನದ ಮುಂದಿನ ಹಂತದಲ್ಲಿ 60 ವರ್ಷ ದಾಟಿದವರು ಮತ್ತು 2022ರ ಜನವರಿ 1ಕ್ಕೆ 60 ವರ್ಷ ತುಂಬುವವರು ಲಸಿಕೆಗಾಗಿ ನೋಂದಣಿ ಮಾಡಿಕೊಳ್ಳಲು ಅರ್ಹರಾಗಿದ್ದಾರೆ. ಬೇರೆ ರೋಗಗಳನ್ನು ಹೊಂದಿರುವ, 2022ರ ಜನವರಿ 1ಕ್ಕೆ 45 ವರ್ಷ ತುಂಬುವವರು ಮತ್ತು ಈಗಾಗಲೇ 45 ದಾಟಿದವರು ಕೂಡ ನೋಂದಣಿಗೆ ಅರ್ಹರು. ಈ ಪೈಕಿ 20 ಅನಾರೋಗ್ಯಗಳನ್ನು ಆರೋಗ್ಯ ಸಚಿವಾಲಯವು ಪಟ್ಟಿ ಮಾಡಿದೆ. 

ನೋಂದಣಿ ಹೇಗೆ?
ಇನ್ನು ಕೊರೊನಾ ಲಸಿಕೆ ಪಡೆಯಲು ಮೊಬೈಲ್‌ ಮೂಲಕ ಮನೆಯಲ್ಲಿಯೇ ದಿನಾಂಕ ಮತ್ತು ಸಮಯ ನಿಗದಿಪಡಿಸಿಕೊಳ್ಳಬಹುದು. ಮೊದಲಾಗಿ www.cowin.gov.in ಗೆ ಹೋಗಿ ಲಸಿಕೆ ಪಡೆಯಲು ನೋಂದಣಿ ಮಾಡಿಕೊಳ್ಳಬೇಕು. ಮೇಲೆ ತಿಳಿಸಿದ ಕೊವಿನ್‌ ವೆಬ್‌ಸೈಟ್‌ಗೆ ಹೋದಾಗ ಅಲ್ಲಿ ರಿಜಿಸ್ಟರ್‌ ಫಾರ್‌ ವ್ಯಾಕ್ಸಿನೇಶನ್‌ ಎಂಬ ಆಯ್ಕೆ ಕಾಣಿಸಿಕೊಳ್ಳುತ್ತದೆ. ಅಲ್ಲಿ ನಿಮ್ಮ ಮೊಬೈಲ್‌ ಸಂಖ್ಯೆಯನ್ನು ನಮೂದಿಸಿ ‘ಗೆಟ್‌ ಒಟಿಪಿ’ ಪಟ್ಟಿ ಮೇಲೆ ಕ್ಲಿಕ್‌ ಮಾಡಬೇಕು. ಆ ಕೂಡಲೇ ನಿಮ್ಮ ಮೊಬೈಲ್‌ಗೆ ಎಸ್‌ಎಂಎಸ್‌ ಮೂಲಕ ಒಟಿಪಿ ಸಂಖ್ಯೆ ಬರುತ್ತದೆ. 

ಅದನ್ನು ದಾಖಲಿಸಿ ಅಲ್ಲಿ ಕಾಣಿಸುವ ‘ವೆರಿಫೈ ಬಟನ್‌’ ಕ್ಲಿಕ್‌ ಮಾಡಬೇಕು. ಒಟಿಪಿ ಸರಿಯಾಗಿ ನಮೂದಿಸಿದ ಬಳಿಕ ನೋಂದಣಿ ಪುಟ ತೆರೆದುಕೊಳ್ಳುತ್ತದೆ. ಬಳಿಕ ಅಲ್ಲಿ ನಿಮ್ಮ ಕುರಿತು ಕೇಳಿರುವ ಮಾಹಿತಿಗಳನ್ನು ಭರ್ತಿ ಮಾಡಬೇಕು. (ಮೊದಲಾಗಿ ಯಾವ ಫೋಟೊ ಐಡಿ ಪ್ರೂಫ್ ಎಂಬುದನ್ನು ತಿಳಿಸಬೇಕು. ಉದಾ: ಡ್ರೈವಿಂಗ್‌ ಲೈಸನ್ಸ್‌, ಆಧಾರ್‌ ಕಾರ್ಡ್‌, ಮತದಾರರ ಗುರುತಿನ ಚೀಟಿ ಇತ್ಯಾದಿ. ಅನಂತರ ಕಾರ್ಡ್‌ನ ಸಂಖ್ಯೆ ನಮೂದಿಸಬೇಕು.

ಬಳಿಕ ಕಾರ್ಡ್‌ನಲ್ಲಿ ಇರುವ ರೀತಿಯಲ್ಲಿಯೇ ಹೆಸರು, ಹುಟ್ಟಿದ ದಿನಾಂಕ, ಲಿಂಗ, ಈಗ ಲಸಿಕೆ ಪಡೆಯಲು ಅರ್ಹತೆಯ ಕುರಿತು ಮಾಹಿತಿ ನೀಡಬೇಕು. ಅಂದರೆ 60 ವರ್ಷ ಮೇಲ್ಪಟ್ಟವರು, ಜತೆಗೆ ಗಂಭೀರ ಅನಾರೋಗ್ಯ ಸಮಸ್ಯೆ ಹೊಂದಿರುವ 45ರಿಂದ 59 ವರ್ಷದೊಳಗಿನ ನಾಗರಿಕರು, ಪಟ್ಟಿ ಮಾಡಿರುವ 20 ರೀತಿಯ ಅನಾರೋಗ್ಯ ಸಮಸ್ಯೆ ಇರುವವರು. ಹೃದಯ ಸಮಸ್ಯೆ, ತೀವ್ರ ರಕ್ತದೊತ್ತಡ ಮತ್ತು ಮಧುಮೇಹ ಸಮಸ್ಯೆಗೆ ಒಟ್ಟಾಗಿ ಚಿಕಿತ್ಸೆ ಪಡೆಯುತ್ತಿರುವವರು, ಪಾರ್ಶ್ವವಾಯು ಸಂಬಂಧಿ ಕಾಯಿಲೆ ಉಳ್ಳವರು, 10 ವರ್ಷಕ್ಕಿಂತ ಹೆಚ್ಚು ಕಾಲದಿಂದ ಮಧುಮೇಹದಿಂದ ಬಳಲುತ್ತಿರುವವರು, ಕಿಡ್ನಿ, ಲಿವರ್‌, ಇತರ ಕ್ಯಾನ್ಸರ್‌ ಕಾಯಿಲೆ ಉಳ್ಳವರು, ಎಚ್‌ಐವಿ ಸೋಂಕಿತರು ತಮ್ಮ ಮಾಹಿತಿ ನೀಡಬೇಕು. ಇದಾದ ಬಳಿಕ ಕೆಳಬದಿಯಲ್ಲಿರುವ ರಿಜಿಸ್ಟರ್‌ ಬಟನ್‌ ಕ್ಲಿಕ್‌ ಮಾಡಿದಾಗ ನಿಮ್ಮ ನೋಂದಣಿ ಖಚಿತವಾಗಿರುವ ಕುರಿತು ಮಾಹಿತಿ ಬರುತ್ತದೆ.

ಒಂದು ಮೊಬೈಲ್‌ನಿಂದ ನಾಲ್ಕು ಸದಸ್ಯರ ನೋಂದಣಿ ಸಾಧ್ಯ
ಒಂದು ಬಾರಿ ಓರ್ವ ಮೊಬೈಲ್‌ನಲ್ಲಿ ನೋಂದಣಿ ಮಾಡಿಸಿದ ಬಳಿಕ ಇತರ ಮೂವರನ್ನು ಇದೇ ಮೊಬೈಲ್‌ನಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದು. ಅಲ್ಲಿ ಅಕೌಂಟ್‌ ಡಿಟೇಲ್ಸ್‌ ಎಂಬ ಪಟ್ಟಿ ಕಾಣಿಸುವುದು. ಅದರಲ್ಲಿ ಇತರೆ ಮೂವರ ಮಾಹಿತಿ (ಈ ಮೊದಲು ನೀಡಿದಂತೆಯೇ ಎಲ್ಲ ಮಾಹಿತಿಗಳನ್ನು ನೀಡಬೇಕಾಗುತ್ತದೆ. ಮೊಬೈಲ್‌ ನಂಬರ್‌ ಹೊರತುಪಡಿಸಿ ಇತರ ಎಲ್ಲ ಮಾಹಿತಿಗಳು ಪ್ರತ್ಯೇಕವಾಗಿರುತ್ತದೆ) ನೀಡಿ ಹೆಸರು ನೋಂದಾಯಿಸಬಹುದು. ಇಷ್ಟು ಮಾಹಿತಿ ನೀಡಿದ ಬಳಿಕ ಮತ್ತೂಮ್ಮೆ ನೋಂದಣಿ ಖಚಿತವಾದ ಮಾಹಿತಿ ಬರುತ್ತದೆ. ಅಗತ್ಯ ಬಿದ್ದರೆ ನೋಂದಣಿಯನ್ನು ಲಸಿಕೆ ಪಡೆಯುವ ಹಿಂದಿನ ದಿನದೊಳಗೆ ಡಿಲೀಟ್‌ ಮಾಡುವುದಕ್ಕೂ ಅವಕಾಶವಿರುತ್ತದೆ.

ದಿನಾಂಕ ಮತ್ತು ಸಮಯ ನಿಗದಿ
ಅಕೌಂಟ್‌ ಡಿಟೇಲ್‌ ಪೇಜ್‌ಗೆ ಹೋಗಿ ಅಲ್ಲಿ ನಿಮ್ಮ ಹೆಸರಿನ ಎದುರು ಇರುವ ಶೆಡ್ನೂಲ್‌ ಕೊಂಡಿಗೆ ಕ್ಲಿಕ್‌ ಮಾಡಿದಾಗ ಬುಕ್‌ ಅಪಾಯಿಂಟ್‌ಮೆಂಟ್‌ ಪುಟ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ರಾಜ್ಯ, ಜಿಲ್ಲೆ, ತಾಲೂಕು, ಬ್ಲಾಕ್‌, ಪಿನ್‌ಕೋಡ್‌ ನಮೂದಿಸಿದಾಗ ನಿಮ್ಮ ಹತ್ತಿರದ ಕೇಂದ್ರಗಳಿರುವ ಪುಟ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಹತ್ತಿರದ ಕೇಂದ್ರವನ್ನು ಆಯ್ಕೆ ಮಾಡಿದಾಗ ಅಲ್ಲಿ ಲಭ್ಯವಿರುವ ದಿನಾಂಕ ಕಾಣಿಸುತ್ತದೆ. ಇವುಗಳಲ್ಲಿ ನಿಮಗೆ ಅನುಕೂಲವಾದ ದಿನಾಂಕವನ್ನು ಆಯ್ಕೆ ಮಾಡಿಕೊಂಡು “ಬುಕ್‌’ ಬಟನ್‌ ಕ್ಲಿಕ್‌ ಮಾಡಿದರೆ ನೋಂದಣಿ ಪೂರ್ಣವಾದ ಮಾಹಿತಿ ಲಭ್ಯವಾಗುವುದು. 

ಅಲ್ಲಿರುವ ನಿಮ್ಮ ಹೆಸರು, ಕೇಂದ್ರ ಮೊದಲಾದ ಮಾಹಿತಿಗಳನ್ನು ಗಮನಿಸಿ ಎಲ್ಲವೂ ಸರಿಯಾಗಿದ್ದಲ್ಲಿ ಕನ್ಫರ್ಮ್ ಬಟನ್‌ ಕ್ಲಿಕ್‌ ಮಾಡಿದರೆ “ಅಪಾಯಿಂಟ್‌ಮೆಂಟ್‌ ಸಕ್ಸಸ್‌ಫುಲ್‌’ ಎಂಬ ಸಂದೇಶ ಕಾಣಿಸಿಕೊಳ್ಳುತ್ತದೆ. ಇದನ್ನು ಡೌನ್‌ಲೋಡ್‌ ಮಾಡಿಟ್ಟು ಲಸಿಕೆ ಪಡೆಯುವ ದಿನ ನೀವು ನೋಂದಾಯಿಸಿದ ಕೇಂದ್ರಕ್ಕೆ ಹೋಗಿ ತೋರಿಸಿದರೆ ನಿಮಗೆ ಲಸಿಕೆ ನೀಡಲಾಗುತ್ತದೆ.  (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *