
ದೇಶದ ಅಗರ್ಭ ಶ್ರೀಮಂತ ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ತುಂಬಿದ್ದ ಕಾರು ಪತ್ತೆಯಾಗಿ ಆತಂಕ ಸೃಷ್ಟಿಸಿತ್ತು. ಈ ಪ್ರಕರಣ ಇದೀಗ ತಿರುವು ಪಡೆದುಕೊಂಡಿದ್ದು ಕಾರಿನ ಮಾಲೀಕನ ಶವ ಪತ್ತೆಯಾಗಿದೆ.


ಮುಂಬೈ: ದೇಶದ ಅಗರ್ಭ ಶ್ರೀಮಂತ ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ತುಂಬಿದ್ದ ಕಾರು ಪತ್ತೆಯಾಗಿ ಆತಂಕ ಸೃಷ್ಟಿಸಿದ್ದ ಪ್ರಕರಣ ಇದೀಗ ತಿರುವು ಪಡೆದುಕೊಂಡಿದ್ದು ಕಾರಿನ ಮಾಲೀಕನ ಶವ ಪತ್ತೆಯಾಗಿದೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ತನಿಖೆ ಕೈಗೊಂಡಿದ್ದರು. ತನಿಖೆ ವೇಳೆ ಕಾರು ಮಾಲೀಕ ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. ಕಾರು ಮಾಲೀಕ ಮನ್ಸುಕ ಹಿರೆನ್ ಶವ ಥಾಣೆಯ ರೈಲ್ವೇ ಕ್ರಿಕ್ ಬಳಿ ಪತ್ತೆಯಾಗಿದೆ. ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾದಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಜಿಲೆಟಿನ್ ಕಡ್ಡಿಗಳನ್ನು ತುಂಬಿದ್ದ ಸ್ಕಾರ್ಪಿಯೋ ಕಾರನ್ನು ಮುಕೇಶ್ ಅಂಬಾನಿ ಮನೆ ಮುಂದೆ ನಿಲ್ಲಿಸಲಾಗಿತ್ತು. ಈ ಮೂಲಕ ದೊಡ್ಡ ಅನಾಹುತ ಸೃಷ್ಟಿಸಲು ಸಂಚು ರೂಪಿಸಲಾಗಿತ್ತು. ಆದರೆ ಪೊಲೀಸರು ಕಾರನ್ನು ಪತ್ತೆ ಹಚ್ಚಿ ದೊಡ್ಡ ಅನಾಹುತ ತಪ್ಪಿಸಿದ್ದರು.

ಇನ್ನು ಇದರ ಬೆನ್ನಲ್ಲೇ ಜೈಶ್ ಉಲ್ ಹಿಂದ್ ಉಗ್ರ ಸಂಘಟನೆ ಇದರ ಹೊಣೆ ಹೊತ್ತುಕೊಂಡಿದ್ದು ಪತ್ರವೊಂದನ್ನು ಪ್ರಕಟಿಸಿರುವುದಾಗಿ ವರದಿಯಾಗಿತ್ತು. ಇದರ ಬೆನ್ನತ್ತಿದ ಪೊಲೀಸರಿಗೆ ತನಿಖೆ ವೇಳೆ ಸಂಘಟನೆಯ ಪತ್ರವೇ ನಕಲಿ ಎಂದು ಗೊತ್ತಾಗಿತ್ತು. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
