ಇನ್ನೊಂದು ತಿಂಗಳಲ್ಲಿ ಬಿಎಸ್ ವೈ, ಬಿವೈಆರ್, ಈಶ್ವರಪ್ಪ ಹಗರಣ ಬಯಲು & ಕೋಲಶಿರ್ಸಿ ಮಾರಿಕಾಂಬಾ ದೇವಾಲಯಕ್ಕೆ ಅಡಿಗಲ್ಲು

ಇನ್ನೊಂದು ತಿಂಗಳಲ್ಲಿ ಬಿಎಸ್ ವೈ, ಬಿವೈಆರ್, ಈಶ್ವರಪ್ಪ ಹಗರಣ ಬಯಲು: ಶಾಸಕ ಸಂಗಮೇಶ್

ಇನ್ನೊಂದು ತಿಂಗಳಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅವರ ಪುತ್ರ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹಗರಣ, ಅಕ್ರಮ ಆಸ್ತಿಗಳ ವಿವರಗಳನ್ನು ಬಯಲು ಮಾಡುವುದಾಗಿ…

B.K sangamesh

ಸಿದ್ದಾಪುರ: ತಾಲೂಕಿನ ಕೋಲಶಿರ್ಸಿ ಶ್ರೀ ಮಾರಿಕಾಂಬಾ ದೇವಾಲಯದ ನೂತನ ಕಟ್ಟಡ ಅಡಿಗಲ್ಲು ಕಾರ್ಯಕ್ರಮ ನಡೆಯಿತು.
ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ಶಿರಸಿಯ ಅಭಿಯಂತರ ಮನು ಹೆಗಡೆ ಮಾರ್ಗದರ್ಶನ ದಲ್ಲಿ ಆಡಳಿತ ಮಂಡಳಿಯವರೇ ಕಟ್ಟಡ ನಿರ್ಮಾಣ ಮಾಡಲಿದ್ದಾರೆ.
ಆಡಳಿತ ಮಂಡಳಿ ಅಧ್ಯಕ್ಷ ವಾಸುದೇವ ಸಣ್ಣತಮ್ಮ ನಾಯ್ಕ, ಉಪಾಧ್ಯಕ್ಷ ರಾಮಚಂದ್ರ ಈರಾ ಕೊಠಾರಿ,ಕಾರ್ಯದರ್ಶಿ ಆನಂದ ಹುಲಿಯಾ ನಾಯ್ಕ ಸನ್ನು ಗೌರವಾಧ್ಯಕ್ಷರುಗಳಾದ ಸೋಮನಾಥ ಎಸ್ ಗೌಡರ್, ಗಣಪತಿ ಮಂಜುನಾಥ ಹೆಗಡೆ, ಮಾದೇವ ಲಕ್ಷ್ಮಣ ನಾಯ್ಕ, ಮಂಜುನಾಥ ಎಸ್ ಶೇಟ್, ಫಂಡು ಕರಿಯ ನಾಯ್ಕಸೆರಕ್ಕಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೆ ಆರ್ ವಿನಾಯಕ, ಸದಸ್ಯ ಗೋವಿಂದ ಬಿ ಕೋರೆ, ಆಡಳಿತ ಕಮಿಟಿ ಸದಸ್ಯರು, ಕಟ್ಟಡ ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

ಬೆಂಗಳೂರು: ಇನ್ನೊಂದು ತಿಂಗಳಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅವರ ಪುತ್ರ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹಗರಣ, ಅಕ್ರಮ ಆಸ್ತಿಗಳ ವಿವರಗಳನ್ನು ಬಯಲು ಮಾಡುವುದಾಗಿ ಸದನದಿಂದ ಅಮಾನತಾಗಿರುವ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಂಗಮೇಶ್, ಸಿಎಂ, ರಾಘವೇಂದ್ರ, ಈಶ್ವರಪ್ಪ ಸಣ್ಣತನದ ರಾಜಕೀಯ ಮಾಡುತ್ತಿದ್ದಾರೆ. ಇವರ ವರ್ತನೆ ಕಂಡು ಶಿವಮೊಗ್ಗ ಜಿಲ್ಲೆಯ ಜನರೇ ಅಸಹ್ಯ ಪಡುತ್ತಿದ್ದಾರೆ. ನಮ್ಮ ಮೇಲೆ, ಕುಟುಂಬದ ಮೇಲೆ ಕೇಸ್ ಹಾಕಿದ್ದಾರೆ. ನಮ್ಮ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ಹಾಕಿಸಿದ್ದಾರೆ. ಸ್ಪೀಕರ್ ನಮಗೆ ನ್ಯಾಯ ಕೊಡಿಸಬೇಕು. ಯಡಿಯೂರಪ್ಪ ಸೂಚನೆ ಮೇರೆಗೆ ಸದನದಿಂದ ನನ್ನನ್ನು ಸ್ಪೀಕರ್ ಅಮಾನತು ಮಾಡಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಇವರ ಹಗರಣ ಹೊರಬಂದು ಬಿಜೆಪಿ ಸರ್ಕಾರ ಪತನಗೊಳ್ಳಲಿದೆ. ಬಿಜೆಪಿ ಸರ್ಕಾರ ಪತನಗೊಂಡ ಬಳಿಕ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ ಎಂದರು.

ಬಿಎಸ್ ವೈ, ರಾಘವೇಂದ್ರ, ಈಶ್ವರಪ್ಪ ಹಗರಣ ನನಗೆ ಗೊತ್ತಿದೆ. ಇನ್ನೊಂದು ತಿಂಗಳಿನಲ್ಲಿ ಅವರ ಹಗರಣ ಬಿಡುಗಡೆ ಮಾಡಿ, ಅಕ್ರಮ ಆಸ್ತಿ ದಾಖಲೆ ಬಿಡುಗಡೆ ಮಾಡುತ್ತೇನೆ. ನಾನು ಬ್ಲಾಕ್ಮೇಲ್ ಮಾಡುವ ರಾಜಕಾರಣಿಯಲ್ಲ. ಹಿಂದೆ ಎಷ್ಟು ಆಸ್ತಿಯಿತ್ತು? ಈಗ ಎಷ್ಟು ಆಸ್ತಿಯಿದೆ? ಎಂಬುದೆಲ್ಲವನ್ನೂ ನಾನು ಬಯಲು ಮಾಡುತ್ತೇನೆ. ಇನ್ನೂ ಮೂರು ತಿಂಗಳಷ್ಟೇ ಈ ಸರ್ಕಾರದ ಆಯಸ್ಸು ಎಂದು ಭವಿಷ್ಯ ನುಡಿದರು.

ಈ ಸರ್ಕಾರದಲ್ಲಿ ಕಾಂಗ್ರೆಸ್ ಶಾಸಕರಿಗೆ ಬೆಲೆಯಿಲ್ಲದಂತಾಗಿದೆ. ಸರ್ಕಾರವನ್ನು ಹೆಣ್ಣುಮಕ್ಕಳು ಅನುಮಾನದಿಂದ ನೋಡುವಂತಾಗಿದೆ. ವಿಧಾನಸೌಧದ ಪಾವಿತ್ರ್ಯತೆ ಹಾಳಾಗಿದೆ. ಸತ್ಯವಂತರಾಗಿದ್ದರೆ ಆರು ಸಚಿವರು ನ್ಯಾಯಾಲಯಕ್ಕೆ ಹೋಗುವ ಅವಶ್ಯಕತೆಯೇನಿತ್ತು? ಏಕೆ ಇವರೆಲ್ಲ ಹೆದರಿಕೊಂಡು ಮಾಧ್ಯಮಗಳ ಸುದ್ದಿಪ್ರಸಾರಕ್ಕೆ ತಡೆ ತಂದಿದ್ದಾರೆ. ಇವರುಗಳನ್ನು ಜನರು ತಮ್ಮ ಸೇವೆ ಮಾಡಲಿ ಎಂದು ಆರಿಸಿ ಕಳುಹಿಸಿದ್ದರೆ, ಇವರೆಲ್ಲ ದುಡ್ಡು ಮಾಡುವುದು, ಮಜಾ ಮಾಡುವುದನ್ನು ಮಾಡುತ್ತಿದ್ದಾರೆ. ಭದ್ರಾವತಿಯಲ್ಲಿ ಬಿಜೆಪಿ ಮಾಡಿದ ಅನ್ಯಾಯವನ್ನು ಖಂಡಿಸಿ ಮಂಗಳವಾರ ಎಸ್.ಪಿ.ಕಚೇರಿ ಎದುರು ಪ್ರತಿಭಟಿಸಿ, ಮುತ್ತಿಗೆ ಹಾಕುವುದಾಗಿ ಹೇಳಿದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *