jaarkiholi & hebbaar story-ಮುಂದಿನ ಟಾರ್ಗೆಟ್ ನಾನೇ……!

ಮುಂದಿನ ಟಾರ್ಗೆಟ್ ನಾನೇ ಆಗಿರಬಹುದು: ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್

ನೀವು ಗಂಟೆಗಟ್ಟಲೆ ವಿಡಿಯೋ ಹಾಕಿ, ಪಂಚ್ ಮಾಡ್ತೀರಿ. ನಮ್ಮ ಸೇಫ್ಟಿಗೋಸ್ಕರ ಕೋರ್ಟ್ ಮೊರೆ ಹೋಗಿದ್ದೇವೆ. ನಮ್ಮ ತೇಜೋವಧೆ ಮಾಡಿದರೆ ನಮಗೆ ಗತಿಯಾರು?

ಸೆಕ್ಸ್ ಸಿಡಿಯಲ್ಲಿರುವ ಮಹಿಳೆಗಾಗಿ ಪೊಲೀಸರ ಭೇಟೆ: ಆಕೆಯ ಬಗ್ಗೆ ಮಾಹಿತಿ ನೀಡಲು ಜಾರಕಿಹೊಳಿ ನಿರಾಕರಣೆ

ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಜೊತೆ ರಾಸಲೀಲೆಯಲ್ಲಿ ತೊಡಗಿದ್ದ ಮಹಿಳೆ ಬಗ್ಗೆ ಕಬ್ಬನ್ ಪಾರ್ಕ್ ಪೊಲೀಸರು ಶೋಧ ನಡೆಸಿದ್ದಾರೆ.

Ramesh jarkiholi

ಬೆಂಗಳೂರು: ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಜೊತೆ ರಾಸಲೀಲೆಯಲ್ಲಿ ತೊಡಗಿದ್ದ ಮಹಿಳೆ ಬಗ್ಗೆ ಕಬ್ಬನ್ ಪಾರ್ಕ್ ಪೊಲೀಸರು ಶೋಧ ನಡೆಸಿದ್ದಾರೆ.  ಮಹಿಳೆ ಬಗ್ಗೆ ವಿವರಣೆ ಕೇಳಲು ಪೊಲೀಸರು ರಮೇಶ್ ಜಾರಕಿಹೊಳಿಯನ್ನು ಭೇಟಿ ಮಾಡಿದ್ದಾರೆ, ಆದರೆ ಅವರು ಯಾವುದೇ ಮಾಹಿತಿ ನೀಡಲಿಲ್ಲ.

ಬಿಜೆಪಿ ನಾಯಕನ ಜೊತೆಗಿನ ದೂರವಾಣಿ ಕರೆಗಳು, ಕಾಲ್ ರೆಕಾರ್ಡ್ ಮುಂತಾದವುಗಳ ಆಧಾರದ ಮೇಲೆ, ಸೆಕ್ಸ್ ಟೇಪ್ ನಲ್ಲಿರುವ ಮಹಿಳೆ ಆರ್ ಟಿ ನಗರದಲ್ಲಿರುವ ಮಹಿಳೆಯರ ವಸತಿ ಗೃಹದಲ್ಲಿದ್ದಳು ಎಂದು ತಿಳಿದು ಬಂದಿದೆ.

https://imasdk.googleapis.com/js/core/bridge3.445.1_en.html#goog_2082563047

2018 ರಲ್ಲಿ ಪಿಜಿಗೆ ಸೇರಿದ್ದ ಆಕೆ ರಾಜಾಜಿನಗರದ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುವುದಾಗಿ ಹೇಳಿದ್ದಳು, ಆದರೆ ಯಾವ ಕಂಪನಿ ಎಂದು ತಿಳಿಸಿರಲಿಲ್ಲ. ಸೋಮವಾರ ಸೆಕ್ಸ್ ವಿಡಿಯೋ ವೈರಲ್ ಆಗುವುದಕ್ಕೂ ಮೊದಲು ಆಕೆ ಪಿಜಿ ಖಾಲಿ ಮಾಡಿದ್ದಾಳೆ. ಆಕೆಯ ಇಬ್ಬರು ಸ್ನೇಹಿತೆಯರಿಗೂ ಕೂಡ ಅವಳ ಬಗ್ಗೆ ಮಾಹಿತಿಯಿಲ್ಲ, ಸೋಮವಾರ ಕೊನೆಯದಾಗಿ ಆಕೆಯನ್ನು ನೋಡಿದ್ದಾಗಿ ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇನ್ನೂ ಮಹಿಳಾ ಹೋರಾಟಗಾರ್ತಿ ಕೆಎಚ್ ಇಂದಿರಾ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ  ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ, ದಿನೇಶ್ ಕಲ್ಲಹಳ್ಳಿ ಮತ್ತು ರಾಜಶೇಖರ್ ಮುಲಾಲಿ ವಿರುದ್ದ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ.

Shivaram hebbar

ಕಾರವಾರ: ನೀವು ಗಂಟೆಗಟ್ಟಲೆ ವಿಡಿಯೋ ಹಾಕಿ, ಪಂಚ್ ಮಾಡ್ತೀರಿ. ನಮ್ಮ ಸೇಫ್ಟಿಗೋಸ್ಕರ ಕೋರ್ಟ್ ಮೊರೆ ಹೋಗಿದ್ದೇವೆ. ನಮ್ಮ ತೇಜೋವಧೆ ಮಾಡಿದರೆ ನಮಗೆ ಗತಿಯಾರು? ಇದೇ ಕಾರಣದಿಂದಾಗಿ ನಮ್ಮ ವಿರುದ್ಧದ ಯಾವುದೇ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ನ್ಯಾಯಾಲಯದ ಮೊರೆ ಹೋಗಿರುವುದಾಗಿ ಸಚಿವ ಶಿವರಾಂ ಹೆಬ್ಬಾರ್ ತಿಳಿಸಿದರು.

ಕಾರವಾರದಲ್ಲಿ ಮಾತನಾಡಿದ ಸಚಿವ ಶಿವರಾಮ್ ಹೆಬ್ಬಾರ್, ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ರಾಜಕೀಯ ಪಿತೂರಿಯಾಗಿದೆ, ಬಿಜೆಪಿ ಸರ್ಕಾರ ಬರಲು ಕಾರಣರಾದವರನ್ನು ಟಾರ್ಗೆಟ್ ಮಾಡಲಾಗುತ್ತಿದೆ.

https://imasdk.googleapis.com/js/core/bridge3.445.1_en.html#goog_188719171

ರಾಜಿನಾಮೆ ನೀಡಿ ಮುಂಬಯಿಗೆ ತೆರಳಿದ್ದ ಶಾಸಕರನ್ನು ಟಾರ್ಗೆಟ್ ಮಾಡಲಾಗಿದೆ, ಮುಂದಿನ ಬಲಿಪಶು ನಾನೇ ಆಗಿರಬಹುದು, ಹೀಗಾಗಿ ನಮ್ಮ ಸೇಫ್ಟಿಗೆ ನಾವು ಕೋರ್ಟ್ ಮೊರೆ ಹೋಗಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡಿದರೆ ಜನರು ನಮಗೆ  ಗೌರವ ನೀಡುತ್ತಾರೆಯೇ ಎಂದು ಪ್ರಶ್ನಿಸಿದರು, .
 (kpc)

https://www.youtube.com/watch?v=x6ritbquAZo&t=3s

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *