Kagodu on modi-ಮೋದಿಯದು ಹುಚ್ಚುತನದ ಪರಮಾವಧಿ -ಕಾಗೋಡು ತಿಮ್ಮಪ್ಪ


ಭಾರತ ಸಮಾಜವಾದಿ ನೆಲೆಗಟ್ಟಿನಲ್ಲಿ ಕಟ್ಟಿದಂತ ದೇಶ. ಇದಕ್ಕೆ ಸಾಕಷ್ಟು ತ್ಯಾಗ ಬಲಿದಾನಗಳು ಆಗಿದೆ. ಇಂತಹ ವ್ಯವಸ್ಥೆಯನ್ನು ಬುಡಮೇಲು ಮಾಡಲು ಹಾರಾಟ ಮಾಡುವ ಮೋದಿಯದು ಹುಚ್ಚುತನದ ಪರಮಾವಧಿ ಎಂದು ಕಾಗೋಡು ತಿಮ್ಮಪ್ಪ ಕಿಡಿಕಾರಿದರು.

ಸಾಗರದ ನೌಕರರ ಭವನದಲ್ಲಿ ನಡೆದ ರೈತ ಮಹಾಪಂಚಾಯತ್ ಶಿವಮೊಗ್ಗದ ಪೂರ್ವಾಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದ ಅವರು. ಸ್ವಾತಂತ್ರ್ಯ ಹೋರಾಟದ ರೀತಿಯಲ್ಲಿ ಹೋರಾಟ ಅಗತ್ಯವಿದೆ ಎಂದರು.

ರಾಜ್ಯ ರೈತ ಸಂಘದ ಕಾರ್ಯದರ್ಶಿ ಎಚ್.ಆರ್. ಬಸವಾರಜಪ್ಪ ಮಾತನಾಡಿ ಗಾಂಧಿ ಅಂಬೇಡ್ಕರ್ ಹಾಕಿಕೊಟ್ಟ ಶಾಂತಿ ಮಾರ್ಗದಲ್ಲಿ ಹೋರಾಟ ಮಾಡಿದವರಿಗೆ ದೇಶದ್ರೋಹದ ಪಟ್ಟ ಕಟ್ಟಲಾಗುತ್ತಿದೆ. ವಿದ್ಯಾರ್ಥಿ ಯುವಜನ ಮತ್ತು ಸಾಮಾನ್ಯ ಜನರ ರಕ್ತದ ಮೇಲೆ ಬಿಜೆಪಿ ಅಧಿಕಾರ ಮಾಡುತ್ತಿದೆ.ದಾಸ್ತಾನು ಮಿತಿಯನ್ನು ತೆಗೆದು ಜನರನ್ನು ಬೀದಿಗೆ ತಳ್ಳುತ್ತಿದೆ.ಇದು ಕೇವಲ ಮೂರು ರೈತರ ಕರಾಳ ಕಾನೂನಿನ ವಿರುದ್ಧ ಮಾತ್ರ ಹೋರಾಟವಲ್ಲ. ಸಂವಿಧಾನ ಬುಡಮೇಲು ಮಾಡಲು ಹೊರಟವರ ವಿರುದ್ದ ಹೋರಾಟ ಆಗಬೇಕಿದೆ ಎಂದು ಕರೆಕೊಟ್ಟರು.


ಇನ್ನೊರ್ವ ರೈತ ನಾಯಕ ಕೆಟಿ ಗಂಗಾಧರ ಮಾತನಾಡಿ ಭೂಮಿ,ಕೃಷಿ ಜ್ಞಾನ, ಕೃಷಿ ಉತ್ಪನ್ನಗಳು,, ಉತ್ಪಾದನೆ, ದಾಸ್ತಾನು,ವಿತರಣೆಯನ್ನು ಬಂಡವಾಳಿಗರಿಗೆ ಕೊಡುವ ಉದ್ದೇಶದಿಂದ ಈ ಕಾನೂನು ಜಾರಿ ಮಾಡಲಾಗಿದೆ. ಇಂತಹ ರೈತ ವಿರೋಧಿ ಕಾನೂನಿನ ಅಡ್ಡ ಪರಿಣಾಮಗಳ ಬಗ್ಗೆ ಜನರು ಪ್ರತಿರೋಧ ಮಾಡಬಾರದು ಎನ್ನುವ ಉದ್ದೇಶದಿಂದ ಜಾತಿ ಧರ್ಮದ ಜನರನ್ನು ಎತ್ತಿಕಟ್ಟಲಾಗುತ್ತಿದೆ. ಆಂದೋಲನ ಅನ್ನೋದು ಸಂಸತ್ತಿನ ಶುದ್ದಿಕರಣದ ಭಾಗ. ಜನ ಹೋರಾಟಗಳು ಮುಕ್ತ ವಿಶ್ವ ವಿದ್ಯಾನಿಲಯಗಳು ಎಂದರು.

ಕರ್ನಾಟಕ ಜನಶಕ್ತಿಯ ಪ್ರಧಾನ ಕಾರ್ಯದರ್ಶಿ ಕೆ.ಎಲ್ . ಅಶೋಕ್ ಮಾತನಾಡಿ ಭಾರತದಲ್ಲಿ ಪ್ಯಾಸಿಸ್ಟರ ಸುನಾಮಿ ಆಡಳಿತವಿದೆ. ಇದನ್ನು ಹಿಮ್ಮೆ ಟ್ಟಿಸಬೇಕಾದರೆ ವಿವಿಧ ಹೋರಾಟದ ಧಾರೆಗಳು ಒಟ್ಟಾಗಿ ದೊಡ್ಡ ಸುನಾಮಿಯಾಗಿ ನುಗ್ಗಬೇಕು ಎಂದರು. ಭಾರತದಲ್ಲಿ ಫ್ಯಾಸಿಸ್ಟ್ ಮತ್ತು ಸರ್ವಾಧಿಕಾರದ ಧೋರಣೆಯನ್ನು ನಾವು ಖಂಡಿಸಬೇಕಿದೆ. ಇಡೀ ಪ್ರಪಂಚದಲ್ಲಿ ಕ್ರಾಂತಿ ನಡೆದದ್ದು ರಷ್ಯಾ ಮತ್ತು ಚೀನಾದಲ್ಲಿ ಆದರೆ ಇದೇ ಮೊದಲ ಬಾರಿ ಭಾರತದ ದೆಹಲಿಯಲ್ಲಿ ಇಂತಹ ಹೋರಾಟ ನಡೆಯುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ರೈತ ಚಳುವಳಿ ದೇಶವನ್ನು ಉಳಿಸುವ ಚಳುವಳಿಯಾಗಿದೆ. ಈ ಕಾರಣದಿಂದ ಉತ್ತರದ ಹೋರಾಟ ದಕ್ಷಿಣಕ್ಕೆ ಬರುತ್ತಿದೆ ಇದಕ್ಕೆ ನಾವುಗಳು ಒಂದಾಗಬೇಕು. ಇದೇ ಮಾರ್ಚ್ 20ರಂದು ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ನಡೆಯಲಿರುವ ರೈತರ ಮಹಾ ಪಂಚಾಯತ್’ನಲ್ಲಿ ಸುಮಾರು ಐವತ್ತು ಸಾವಿರ ಜನತೆ ಸೇರಿಸಿ ನಮ್ಮ ವಿರೋಧವನ್ನು ತೋರಿಸಬೇಕು. ಈಗಲೇ ನಡುಗಿರುವ ಸರಕಾರ ರೈತ ವಿರೋಧಿ ಕಾಯಿದೆಗಳನ್ನು ಹಿಂಪಡೆಯುವವರೆಗೂ ನಾವುಗಳು ವಿರಮಿಸಬಾರದು ಎಂದರು.

ಪ್ರಗತಿಪರ ಚಿಂತಕ ಮತ್ತು ಪತ್ರಕರ್ತ ಹೆಚ್.ಬಿ. ರಾಘವೇಂದ್ರ ಹೋರಾಟದ ಬಗ್ಗೆ ನಾನು ದೆಹಲಿಗೆ ಭೇಟಿ ನೀಡಿ ಅಲ್ಲಿ ವ್ಯವಸ್ಥೆ ವಸ್ತು ಸ್ಥಿತಿಯನ್ನು ನೋಡಿದ್ದೇನೆ. ಈ ಹೋರಾಟ ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮ ಆಗಬೇಕಿದೆ ಎಂದು ಹೇಳಿದರು.

ಪಂಜಾಬಿನ ರೈತರು ತಮ್ಮ ಬಿಡುಗಡೆಗಾಗಿ ಮಾತ್ರ ಹೋರಾಟ ಮಾಡುತ್ತಿಲ್ಲ ಇಡೀ ಭಾರತ ರೈತರ ಬಿಡುಗಡೆಗಾಗಿ ಹೋರಾಟ ಮಾಡುತ್ತಿದ್ದಾರೆ ಎಂದರು.
ಮಾಜಿ ಜಿಪಂ ಸದಸ್ಯ ಹೊನಗೋಡು ರತ್ನಾಕರ್ ಮಾತನಾಡಿ ಇಂತಹ ಸರ್ಕಾರವನ್ನು ಕಿತ್ತು ಹಾಕದಿದ್ದರೆ ಭಾರತದ ಬಡವರಿಗೆ,ಸಣ್ಣ ಉದ್ದಿಮೆದಾರರಿಗೆ,ಸಣ್ಣ ಹಿಡುವಳಿದಾರರಿಗೆ ಉಳಿಗಾಲವಿಲ್ಲ ಎಂದರು.
ಇನ್ನೊರ್ವ ಮಾಜಿ ಜಿ.ಪಂ. ಸದಸ್ಯ ರವಿ ಕುಗ್ವೆ ಮಾತನಾಡಿ ರೈತರ ಹೋರಾಟ ನಮಗೆ ಹೊಸ ಬದುಕು ಕೊಡುತ್ತಿದೆ. ನಾವು ಈ ಹೋರಾಟವನ್ನು ಇನ್ನಷ್ಟು ಮುಂದಕ್ಕೆ ತೆಗೆದುಕೊಂಡು ಹೋಗಬೇಕು ಎಂದರು.

ದಲಿತ ಸಂಘರ್ಷ ಸಮಿತಿಯ ಮುಖಂಡ ಪರಮೇಶ್ವರ್ ದೂಗೂರ್ ಮಾತನಾಡಿ ರೈತರು ಬೆಳೆಯುವ ಗೊಡಂಬಿ ದ್ರಾಕ್ಷಿ ಉತ್ತತ್ತಿ ತಿನ್ನುವ ಸ್ವಾಮಿಗಳು ಬೀದಿ ಬಂದು ರೈತ ಹೋರಾಟಕ್ಕೆ ಬೆಂಬಲಿಸಬೇಕು ಎಂದರು.

ಸಭೆಯಲ್ಲಿ ಎಪಿಎಂಸಿ ಸದಸ್ಯ ಭರ್ಮಪ್ಪ‌ಅಂದಾಸುರ, ಕಾಂಗ್ರೆಸ್ ಮುಖಂಡ ಬಿ.ಆರ್. ಜಯಂತ್, ಕಬಸೆ ಅಶೋಕ ಮೂರ್ತಿ, ಬಸವರಾಜಪ್ಪ ಗೌಡ, ಗುರುಮೂರ್ತಿ, ಚಂದ್ರಶೇಖರ್ ಸಿರಿವಂತೆ, ಸುಧಾಕರ ಕುಗ್ವೆ, ಆರೋಡಿ ಲಿಂಗರಾಜ್, ಅ.ರಾ. ಶ್ರೀನಿವಾಸ, ಚಂದ್ರಶೇಖರ್ ಗೂರಲಕೆರೆ ಎಲ್ ಕೆ ಪುರ್ಣಿಮಾ ನವಿಲೆಮನೆ ಇನ್ನಿತರರು ಹಾಜರಿದ್ದು ಪ್ರಮುಖರು ಈ ಹೋರಾಟದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.
(ಉಮೇಶ್ ಮೊಗವೀರ ,ಸುದ್ದಿ ಸಾಗರ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *