ಶಿವರಾಜ್‌ಕುಮಾರ್ 125ನೇ ಚಿತ್ರ ‘ವೇದ’

ಶಿವರಾಜ್‌ಕುಮಾರ್ ಮತ್ತು ನಿರ್ದೇಶಕ ಹರ್ಷ ಶಿವಣ್ಣನ 125ನೇ ಸಿನಿಮಾಗಾಗಿ ಒಂದಾಗಲಿದ್ದಾರೆ ಎಂಬ ಸುದ್ದಿ ಈ ಹಿಂದೆಯೇ ತಿಳಿದಿದೆ. ಇಂದಿನ ಹೊಸ ವಿಷಯವೆಂದರೆ ಈ ಸಿನಿಮಾಗೆ ಶೀರ್ಷಿಕೆ ಫಿಕ್ಸ್ ಆಗಿದೆ.

ಶಿವರಾಜ್‌ಕುಮಾರ್ ಮತ್ತು ನಿರ್ದೇಶಕ ಹರ್ಷ ಶಿವಣ್ಣನ 125ನೇ ಸಿನಿಮಾಗಾಗಿ ಒಂದಾಗಲಿದ್ದಾರೆ ಎಂಬ ಸುದ್ದಿ ಈ ಹಿಂದೆಯೇ ತಿಳಿದಿದೆ. ಇಂದಿನ ಹೊಸ ವಿಷಯವೆಂದರೆ ಈ ಸಿನಿಮಾಗೆ ಶೀರ್ಷಿಕೆ ಫಿಕ್ಸ್ ಆಗಿದೆ. ಈ ಚಿತ್ರಕ್ಕೆ “ವೇದ” ಎಂದು ಹೆಸರಿಡಲಾಗಿದೆ ಮತ್ತು “ದಿ ಬ್ರೂಟಲ್ 1960” ಎಂದು ಟ್ಯಾಗ್ ಲೈನ್ ಸಹ ಕೊಡಲಾಗಿದೆ. ಮಹಾಶಿವರಾತ್ರಿಯ ದಿನವಾದ ಗುರುವಾರ ಬೆಳಿಗ್ಗೆ ಈ ಕುರಿತಂತೆ ಅಧಿಕೃತ ಪ್ರಕಟಣೆ ಹೊರಬೀಳಲಿದೆ.

ಶಿವರಾಜ್‌ಕುಮಾರ್ ಹೋಮ್ ಬ್ಯಾನರ್ ನಿರ್ಮಾಣದ ಮೊದಲ ಚಲನಚಿತ್ರ ಇದಾಗಿದ್ದು ಮೂಲವೊಂದರ ಪ್ರಕಾರ, ಶಿವರಾತ್ರಿಯ ಸಂದರ್ಭದಲ್ಲಿ ಸರಳ ಪೂಜೆ ಮತ್ತು ಪೋಸ್ಟರ್ ಬಿಡುಗಡೆಯೊಂದಿಗೆ ಇದರ ಬಗ್ಗೆ ಪ್ರಕಟಣೆ ಹೊರಡಿಸಲಾಗುತ್ತದೆ.

1960 ರ ದಶಕದ ಕಥಾವಸ್ತುವನ್ನು ಈ ಸಿನಿಮಾ ಹೊಂದಿರಲಿದೆ ಎಂದು ಚಿತ್ರದ ಟ್ಯಾಗ್ ಲೈನ್ ಸುಳೀವು ನೀಡುತ್ತಿದೆ. ಹಳ್ಳಿಯ ಕಥಾನಕ ಇದಾಗಿದ್ದು ಈ ಚಿತ್ರದ ಮೂಲಕ ನಟ-ನಿರ್ದೇಶಕ ಜೋಡಿ ನಾಲ್ಕನೇ ಬಾರಿ ಒಟ್ಟಿಗೆ ಸೇರುತ್ತಿದೆ. ಈ ಹಿಂದೆ “ವಜ್ರಕಾಯ”, “ಭಜರಂಗಿ” ಹಾಗೂ ಇನ್ನೂ ಬಿಡುಗಡೆಯಾಗಬೇಕಿರುವ “ಭಜರಂಗಿ 2” ಚಿತ್ರದಲ್ಲಿ ಇವರು ಒಂದಾಗಿ ಕೆಲಸ ಮಾಡಿದ್ದಾರೆ.

Bild

ಸೆಂಚುರಿ ಸ್ಟಾರ್ ಶಿವಣ್ಣ ಸಧ್ಯ “ಶಿವಪ್ಪ” ಸಿನಿಮಾ ಚಿತ್ರೀಕರಣದಲ್ಲಿದ್ದಾರೆ. ವಿಜಯ್ ಮಿಲ್ಟನ್ ನಿರ್ದೇಶನದ ಈ ಚಿತ್ರವು ಪ್ರಸ್ತುತ ಚಿತ್ರೀಕರಣ ಹಂತದಲ್ಲಿದೆ. ತಂಡವು ತಮ್ಮ ಎರಡನೇ ಶೆಡ್ಯೂಲ್ ಚಿತ್ರೀಕರಣವನ್ನು ಪೂರ್ಣಗೊಳಿಸಿದೆ. ಅವರ ಮುಂದಿನ ಮತ್ತು 124 ನೇ ಚಿತ್ರ ಲೇಖಕರೂ ಆದ ನಿರ್ದೇಶಕ ರಾಮ್ ಧುಲಿಪುಡಿ ಅವರದ್ದಾಗಿದ್ದು ಹರ್ಷ ಜತೆಗಿನ ಸಿನಿಮಾ ಈ ವರ್ಷ ಜೂನ್ ಅಥವಾ ಜುಲೈನಲ್ಲಿ ಪ್ರಾರಂಭವಾಗುವ ನಿರೀಕ್ಷೆ ಇದೆ. 

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

senaa sevaa-ಸೈನಿಕನಿಗೆ ಹುಟ್ಟೂರಿನ ಗೌರವ

ಸಿದ್ದಾಪುರ: ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಮರಳಿದ ಸಿದ್ದಾಪುರ ತಾಲೂಕಿನ ಸಂಪೇಕೇರಿಯ(ಮುಗದೂರ) ವಿನಯಕುಮಾರ ನಾಯ್ಕ ರಿಗೆ...

ಕದಂಬಜಿಲ್ಲೆಗಾಗಿ ಸಹಿಸಂಗ್ರಹಣೆ, ಕಾನಳ್ಳಿಯಲ್ಲಿ ಹಸ್ಲರ್‌ ಸಂಘಕ್ಕೆ ಚಾಲನೆ,ಸೋಮುವಾರ ಮಹಿಳಾ ಸಂವೇದನೆ ಕವಿಗೋಷ್ಠಿ‌

ನಿರಂತರ ಹೋರಾಟದಲ್ಲಿರುವ ಶಿರಸಿ ಕೇಂದ್ರಿತ ಪ್ರತ್ಯೇಕ ಕದಂಬ ಜಿಲ್ಲೆ ಹೋರಾಟ ಸಮೀತಿ ಈ ತಿಂಗಳಿಂದ ಸಿದ್ಧಾಪುರದ ಗ್ರಾಮೀಣ ಪ್ರದೇಶಗಳಲ್ಲಿ ಪ್ರತ್ಯೇಕ ಜಿಲ್ಲೆಗಾಗಿ ಸಹಿ ಸಂಗ್ರಹಣೆ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *