ಮಾರ್ಚ್ 15 ಮತ್ತು 16 ರಂದು ಬ್ಯಾಂಕ್ ನೌಕರರ ಮುಷ್ಕರ

ಸಾಲು ಸಾಲು ರಜೆ: ಸಾರ್ವಜನಿಕ ವಲಯದ ಬ್ಯಾಂಕ್ ಗಳ ಖಾಸಗೀಕರಣ ವಿರೋಧಿಸಿ ಎಸ್ ಬಿ ಐ ನೇತೃತ್ವದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ ಮಾರ್ಚ್ 15 ಮತ್ತು 16 ರಂದು ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.

ಕಡಕೇರಿ ಹಾಲು ಉತ್ಪಾದಕ ಸಹಕಾರಿ ಸಂಘದ ಸಾಂದ್ರಶೀಥಲಿಕರಣ ಘಟಕದ ನಿರ್ಮಾಣಕ್ಕೆ ಕರ್ನಾಟಕ ಹಾಲು ಮಹಾ ಮಂಡಳಿಯಿಂದ ಬಂದ 3.5 ಲಕ್ಷ ಅನುದಾನವನ್ನು kmf ನಿರ್ದೇಶಕ ಪಿ.ವಿ.ನಾಯ್ಕ ರವರು ಸಂಘಕ್ಕೆ ಧಾರವಾಡ ಸಹಕಾರಿ ಹಾಲು ಒಕ್ಕೂಟದ ಪರವಾಗಿ ವಿತರಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಸಂಘದ ಅಧ್ಯಕ್ಷ ವಿ.ಜಿ.ಹೆಗಡೆ ಸಂಘದ ಆಡಳಿತ ಮಂಡಳಿ ಸದಸ್ಯರು ಮುಖ್ಯಕಾರ್ಯನಿರ್ವಾಹಕರು ಹಾಗೂ ಸಿದ್ದಾಪುರ ತಾಲೂಕಿನ ವಿಸ್ತರಣಾಧಿಕಾರಿಗಳಾದ ಶ್ರೀ ಪ್ರಕಾಶ್.ಕೆ ಭಾಗವಹಿಸಿದ್ದರು…

Representational image

ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕ್ ಗಳ ಖಾಸಗೀಕರಣ ವಿರೋಧಿಸಿ ಎಸ್ ಬಿ ಐ ನೇತೃತ್ವದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ ಮಾರ್ಚ್ 15 ಮತ್ತು 16 ರಂದು ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.

ಬ್ಯಾಂಕಿಂಗ್ ಕೆಲಸ ಕಾರ್ಯಗಳನ್ನು ಮುಗಿಸಿಕೊಳ್ಳುವುದಕ್ಕೆ ಗ್ರಾಹಕರಿಗೆ ಉಳಿದಿರುವುದು ಇನ್ನೊಂದೇ ದಿನವಷ್ಟೇ. ಶುಕ್ರವಾರ ಕೈ ತಪ್ಪಿದರೆ ಇನ್ನೂ ನಾಲ್ಕು ದಿನಗಳ ಕಾಲ ಯಾವುದೇ ಬ್ಯಾಂಕಿಂಗ್ ಸೇವೆಗಳು ಸಿಗುವುದು ಅನುಮಾನವಾಗಿದೆ.

ಇತ್ತೀಚಿಗೆ ನಡೆದ ಸಂಧಾನ ಸಭೆಯಲ್ಲಿ ಯಾವುದೇ ರೀತಿ ಸಕಾರಾತ್ಮಕ ಸ್ಪಂದನೆ ಸಿಕ್ಕಿರಲಿಲ್ಲ. ಈ ಹಿನ್ನೆಲೆ ಮಾರ್ಚ್ 15 ಮತ್ತು 16 ರಂದು ಸುಮಾರು 10 ಲಕ್ಷ ಬ್ಯಾಂಕ್ ನೌಕರರು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ (ಎಐಬಿಇಎ)ತಿಳಿಸಿದೆ. ಇದಲ್ಲದೆ, ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ನಿರ್ಧಾರ ಮರುಪರಿಶೀಲಿಸಲು ಒಂದು ವೇಳೆ ಸರ್ಕಾರವು ಒಪ್ಪಿದರೆ ಮುಷ್ಕರವನ್ನು ಮರುಪರಿಶೀಲಿಸುವುದಾಗಿ ಬ್ಯಾಂಕ್ ನೌಕರರ ಸಂಘಟನೆಗಳು ಹೇಳಿವೆ.

ಮಾರ್ಚ್.15 ಮತ್ತು 16ರಂದು ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಲಾಗಿದೆ. ಆದರೆ ಅದಕ್ಕೂ ಎರಡು ದಿನಕ್ಕೆ ಮೊದಲೇ ಬ್ಯಾಂಕಿಂಗ್ ಸೇವೆಗಳು ಅಲಭ್ಯವಾಗಲಿವೆ. ಏಕೆಂದರೆ ಮಾರ್ಚ್.13 ಎರಡನೇ ಶನಿವಾರವಾಗಿದ್ದು, ಮಾರ್ಚ್.14 ಭಾನುವಾರದ ಕಾರಣ ಬ್ಯಾಂಕ್ ರಜೆ ಇರುತ್ತದೆ. ಅದಾಗಿ ಎರಡು ದಿನಗಳವರೆಗೂ ಬ್ಯಾಂಕ್ ನೌಕರರ ಒಕ್ಕೂಟ ಮುಷ್ಕರಕ್ಕೆ ಕರೆ ಕೊಟ್ಟಿವೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *