ಶ್ರೀರಾಮನ ಬಗ್ಗೆ ಭೈರಪ್ಪ ಮಾತನಾಡಿದರೆ ಸುಮ್ಮನಿರುತ್ತಾರೆ, ಭಗವಾನ್ ಮಾತಾಡಿದರೆ ಮಸಿ ಬಳಿಯುತ್ತಾರೆ: ಹರಿಪ್ರಸಾದ್ ಕಿಡಿ

ರಾಮ,ಕೃಷ್ಣರ ಬಗ್ಗೆ ಸಾಹಿತಿ ಎಸ್.ಎಲ್ ಭೈರಪ್ಪ ಹೇಳಿದರೆ ಸುಮ್ಮನಿರುತ್ತೀರಿ, ಅದೇ ಭಗವಾನ್ ಮಾತನಾಡಿದರೆ ಮಸಿ ಬಳಿಯುತ್ತೀರಿ. ಇಂತಹ ಧೋರಣೆ ಸರಿಯಲ್ಲ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಸದಸ್ಯ ಬಿ.ಕೆ ಹರಿಪ್ರಸಾದ್ ಕಿಡಿಕಾರಿದರು.

SL Bhyrappa

ಬೆಂಗಳೂರು: ರಾಮ,ಕೃಷ್ಣರ ಬಗ್ಗೆ ಸಾಹಿತಿ ಎಸ್.ಎಲ್ ಭೈರಪ್ಪ ಹೇಳಿದರೆ ಸುಮ್ಮನಿರುತ್ತೀರಿ, ಅದೇ ಭಗವಾನ್ ಮಾತನಾಡಿದರೆ ಮಸಿ ಬಳಿಯುತ್ತೀರಿ. ಇಂತಹ ಧೋರಣೆ ಸರಿಯಲ್ಲ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಸದಸ್ಯ ಬಿ.ಕೆ ಹರಿಪ್ರಸಾದ್ ಕಿಡಿಕಾರಿದರು.

ಮೇಲ್ಮನೆಯಲ್ಲಿ ಮಾತನಾಡಿದ ಹರಿಪ್ರಸಾದ್, ಸಾಹಿತಿ ಎಸ್.ಎಲ್ ಭೈರಪ್ಪ ರಾಮ ದೇವರಲ್ಲ, ಕೇವಲ ರಾಜ ಎಂದು ಹೇಳಿದ್ದಾರೆ. ರಾಮ,ಕೃಷ್ಣರ ಬಗ್ಗೆ ಮಾತಾಡುತ್ತಾರೆ. ದ್ರೌಪದಿ ಬಗ್ಗೆ ಬರೆಯುತ್ತಾರೆ. ಅವರು ನಿಮ್ಮವರು ಎಂದು ಸುಮ್ಮನಿರುತ್ತಾರೆ. 

ಅದೇ ಭಗವಾನ್ ಹೇಳಿದರೆ ಮಸಿ ಬಳಿಯುತ್ತಾರೆ. ಇಂತಹ ದ್ವಂದ್ವ ನೀತಿ ಏಕೆ? ಸಂಘ ಪರಿವಾರದವರು ಮಾತನಾಡಿದರೆ ಸುಮ್ಮನಿದ್ದು ಬೇರೆಯವರು ಮಾತನಾಡಿದರೆ ಆಕ್ಷೇಪ‌ ವ್ಯಕ್ತಪಡಿಸುವುದು ಸರಿಯಲ್ಲ. ಭೈರಪ್ಪ ಅವರ ‘ಪರ್ವ’ ಕಾದಂಬರಿಯನ್ನು ನಾಟಕ ಮಾಡಲು 1 ಕೋಟಿ ರೂ. ಕೊಡಲಾಗುತ್ತಿದೆ.

ನಿಮ್ಮ ಸಾಹಿತಿಗೆ ನೀವೇ ಪ್ರಶಸ್ತಿ ಕೊಡಿಸಿ ನಾಟಕ್ಕೂ ಹಣ ಕೊಟ್ಟಿದ್ದೀರಿ ಎಂದಾಗ ಇದಕ್ಕೆ ಸಭಾ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಆಕ್ಷೇಪ ವ್ಯಕ್ತಪಡಿಸಿ, ಭೈರಪ್ಪ ಅವರ ನಾಟಕ ‌ಸರಿಯಿಲ್ಲ‌ ಎನ್ನುವ ಹಕ್ಕು ನಿಮಗಿಲ್ಲ. ಭೈರಪ್ಪ ಜನ ಮಾನ್ಯರ ಬಗ್ಗೆ ಬರೆದಿದ್ದಾರೆ. ಅವರ ಕಾದಂಬರಿ, ಬರಹಕ್ಕೆ ಪ್ರಶಸ್ತಿ ಸಿಕ್ಕಿದೆ. ಅವರ ಒಂದು ಶಬ್ದ ಹಿಡಿದು ಈ ರೀತಿ ಹೇಳಿದರೆ ಸರಿಯಲ್ಲ ಎಂದು ಟೀಕಿಸಿದರು.

ಈ ವೇಳೆ ಜೆಡಿಎಸ್ ಸದಸ್ಯ ಶ್ರೀಕಂಠೇಗೌಡ ಮಾತನಾಡಿ, ವಿಶ್ವಮಾನವ ಸಂದೇಶ ಸಾರಿದ ಕುವೆಂಪು ರಚಿತ ಮಲೆಗಳಲ್ಲಿ ಮದುಮಗಳು ನಾಟಕಕ್ಕೆ ಯಾವ ಸರ್ಕಾರವೂ ನೆರವಿಗೆ ಬರಲಿಲ್ಲ. ಈಗ‌ ಪರ್ವಕ್ಕೆ ಸಹಕಾರ ಏಕೆ? ಈ ತಾರತಮ್ಯ ಸರಿಯಲ್ಲ, ಎಷ್ಟೆಲ್ಲಾ ಬರಹಗಾರರು, ಕಾದಂಬರಿಕಾರರಿದ್ದಾರೆ. ಆದರೆ ಅದೆಲ್ಲಾ ಬಿಟ್ಟು ಭೈರಪ್ಪ ಅವರ ನಾಟಕಕ್ಕೆ ಮಾತ್ರ ಅನುದಾನ ಕೊಟ್ಟಿರುವುದು ನಾಗರಿಕ‌ ಸರ್ಕಾರಕ್ಕೆ ಶೋಭೆ ತರುವುದಿಲ್ಲ. ಬಿಜೆಪಿಗರು ಸಾಹಿತಿಗಳಲ್ಲೇ ಏಕೆ ತಾರತಮ್ಯ ಮಾಡುತ್ತೀರಿ. ಬೈರಪ್ಪ ಕಾದಂಬರಿಯನ್ನು ನಾಟಕ ಮಾಡಲು 1 ಕೋಟಿ ಕೊಟ್ಟಿದ್ದಾರೆ. ಇಂತಹ ತಾರತಮ್ಯ ನಿಲ್ಲಬೇಕು ಎಂದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *