ಶ್ರೀರಾಮನ ಬಗ್ಗೆ ಭೈರಪ್ಪ ಮಾತನಾಡಿದರೆ ಸುಮ್ಮನಿರುತ್ತಾರೆ, ಭಗವಾನ್ ಮಾತಾಡಿದರೆ ಮಸಿ ಬಳಿಯುತ್ತಾರೆ: ಹರಿಪ್ರಸಾದ್ ಕಿಡಿ

ರಾಮ,ಕೃಷ್ಣರ ಬಗ್ಗೆ ಸಾಹಿತಿ ಎಸ್.ಎಲ್ ಭೈರಪ್ಪ ಹೇಳಿದರೆ ಸುಮ್ಮನಿರುತ್ತೀರಿ, ಅದೇ ಭಗವಾನ್ ಮಾತನಾಡಿದರೆ ಮಸಿ ಬಳಿಯುತ್ತೀರಿ. ಇಂತಹ ಧೋರಣೆ ಸರಿಯಲ್ಲ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಸದಸ್ಯ ಬಿ.ಕೆ ಹರಿಪ್ರಸಾದ್ ಕಿಡಿಕಾರಿದರು.

SL Bhyrappa

ಬೆಂಗಳೂರು: ರಾಮ,ಕೃಷ್ಣರ ಬಗ್ಗೆ ಸಾಹಿತಿ ಎಸ್.ಎಲ್ ಭೈರಪ್ಪ ಹೇಳಿದರೆ ಸುಮ್ಮನಿರುತ್ತೀರಿ, ಅದೇ ಭಗವಾನ್ ಮಾತನಾಡಿದರೆ ಮಸಿ ಬಳಿಯುತ್ತೀರಿ. ಇಂತಹ ಧೋರಣೆ ಸರಿಯಲ್ಲ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಸದಸ್ಯ ಬಿ.ಕೆ ಹರಿಪ್ರಸಾದ್ ಕಿಡಿಕಾರಿದರು.

ಮೇಲ್ಮನೆಯಲ್ಲಿ ಮಾತನಾಡಿದ ಹರಿಪ್ರಸಾದ್, ಸಾಹಿತಿ ಎಸ್.ಎಲ್ ಭೈರಪ್ಪ ರಾಮ ದೇವರಲ್ಲ, ಕೇವಲ ರಾಜ ಎಂದು ಹೇಳಿದ್ದಾರೆ. ರಾಮ,ಕೃಷ್ಣರ ಬಗ್ಗೆ ಮಾತಾಡುತ್ತಾರೆ. ದ್ರೌಪದಿ ಬಗ್ಗೆ ಬರೆಯುತ್ತಾರೆ. ಅವರು ನಿಮ್ಮವರು ಎಂದು ಸುಮ್ಮನಿರುತ್ತಾರೆ. 

ಅದೇ ಭಗವಾನ್ ಹೇಳಿದರೆ ಮಸಿ ಬಳಿಯುತ್ತಾರೆ. ಇಂತಹ ದ್ವಂದ್ವ ನೀತಿ ಏಕೆ? ಸಂಘ ಪರಿವಾರದವರು ಮಾತನಾಡಿದರೆ ಸುಮ್ಮನಿದ್ದು ಬೇರೆಯವರು ಮಾತನಾಡಿದರೆ ಆಕ್ಷೇಪ‌ ವ್ಯಕ್ತಪಡಿಸುವುದು ಸರಿಯಲ್ಲ. ಭೈರಪ್ಪ ಅವರ ‘ಪರ್ವ’ ಕಾದಂಬರಿಯನ್ನು ನಾಟಕ ಮಾಡಲು 1 ಕೋಟಿ ರೂ. ಕೊಡಲಾಗುತ್ತಿದೆ.

ನಿಮ್ಮ ಸಾಹಿತಿಗೆ ನೀವೇ ಪ್ರಶಸ್ತಿ ಕೊಡಿಸಿ ನಾಟಕ್ಕೂ ಹಣ ಕೊಟ್ಟಿದ್ದೀರಿ ಎಂದಾಗ ಇದಕ್ಕೆ ಸಭಾ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಆಕ್ಷೇಪ ವ್ಯಕ್ತಪಡಿಸಿ, ಭೈರಪ್ಪ ಅವರ ನಾಟಕ ‌ಸರಿಯಿಲ್ಲ‌ ಎನ್ನುವ ಹಕ್ಕು ನಿಮಗಿಲ್ಲ. ಭೈರಪ್ಪ ಜನ ಮಾನ್ಯರ ಬಗ್ಗೆ ಬರೆದಿದ್ದಾರೆ. ಅವರ ಕಾದಂಬರಿ, ಬರಹಕ್ಕೆ ಪ್ರಶಸ್ತಿ ಸಿಕ್ಕಿದೆ. ಅವರ ಒಂದು ಶಬ್ದ ಹಿಡಿದು ಈ ರೀತಿ ಹೇಳಿದರೆ ಸರಿಯಲ್ಲ ಎಂದು ಟೀಕಿಸಿದರು.

ಈ ವೇಳೆ ಜೆಡಿಎಸ್ ಸದಸ್ಯ ಶ್ರೀಕಂಠೇಗೌಡ ಮಾತನಾಡಿ, ವಿಶ್ವಮಾನವ ಸಂದೇಶ ಸಾರಿದ ಕುವೆಂಪು ರಚಿತ ಮಲೆಗಳಲ್ಲಿ ಮದುಮಗಳು ನಾಟಕಕ್ಕೆ ಯಾವ ಸರ್ಕಾರವೂ ನೆರವಿಗೆ ಬರಲಿಲ್ಲ. ಈಗ‌ ಪರ್ವಕ್ಕೆ ಸಹಕಾರ ಏಕೆ? ಈ ತಾರತಮ್ಯ ಸರಿಯಲ್ಲ, ಎಷ್ಟೆಲ್ಲಾ ಬರಹಗಾರರು, ಕಾದಂಬರಿಕಾರರಿದ್ದಾರೆ. ಆದರೆ ಅದೆಲ್ಲಾ ಬಿಟ್ಟು ಭೈರಪ್ಪ ಅವರ ನಾಟಕಕ್ಕೆ ಮಾತ್ರ ಅನುದಾನ ಕೊಟ್ಟಿರುವುದು ನಾಗರಿಕ‌ ಸರ್ಕಾರಕ್ಕೆ ಶೋಭೆ ತರುವುದಿಲ್ಲ. ಬಿಜೆಪಿಗರು ಸಾಹಿತಿಗಳಲ್ಲೇ ಏಕೆ ತಾರತಮ್ಯ ಮಾಡುತ್ತೀರಿ. ಬೈರಪ್ಪ ಕಾದಂಬರಿಯನ್ನು ನಾಟಕ ಮಾಡಲು 1 ಕೋಟಿ ಕೊಟ್ಟಿದ್ದಾರೆ. ಇಂತಹ ತಾರತಮ್ಯ ನಿಲ್ಲಬೇಕು ಎಂದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *