ಕುತೂಹಲ ಮೂಡಿಸಿದ ಹ್ಯಾಟ್ರಿಕ್ ಹೀರೋ ಡಿಕೆಶಿ ಭೇಟಿ; ಗೀತಾ ‘ಕೈ’ ಹಿಡಿಯುವುದು ನಿಚ್ಚಳ!

ಸೊರಬದ ಮಾಜಿ ಶಾಸಕ ಎಸ್.ಮಧುಬಂಗಾರಪ್ಪ ಅವರ ಭಾವ ಚಿತ್ರರಂಗದ ಖ್ಯಾತ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ  ಕುತೂಹಲ ಮೂಡಿಸಿದ್ದಾರೆ.

ಬೆಂಗಳೂರು: ಸೊರಬದ ಮಾಜಿ ಶಾಸಕ ಎಸ್.ಮಧುಬಂಗಾರಪ್ಪ ಕಾಂಗ್ರೆಸ್ ಸೇರುವುದು ಅಧಿಕೃತವಾಗುತ್ತಿದ್ದಂತೆಯೇ ಮುಂದುವರೆದ ಬೆಳವಣಿಗೆ ಎಂಬಂತೆ ಅವರ ಭಾವ ಚಿತ್ರರಂಗದ ಖ್ಯಾತ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಇನ್ನಷ್ಟು ಕುತೂಹಲ ಮೂಡಿಸಿದ್ದಾರೆ.

ಹೌದು, ಮಧುಬಂಗಾರಪ್ಪ ಕಳೆದ ಮೂರು ದಿನಗಳ ಹಿಂದೆ ಡಿಕೆಶಿಯನ್ನು ಭೇಟಿ ಮಾಡಿ ಸಹೋದರಿ ಗೀತಾ ಶಿವರಾಜ್ ಕುಮಾರ್ ಸಹ ತಮ್ಮೊಂದಿಗೆ ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಹೇಳಿದ್ದರು. ಮಧು ಭೇಟಿ ಬೆನ್ನಲ್ಲೇ ಸೋಮವಾರ ಡಿಕೆಶಿಯನ್ನು ಗೀತಾ ಅವರ ಪತಿ ನಟ ಶಿವರಾಜ್ ಕುಮಾರ್ ಭೇಟಿ ಮಾಡಿ ಪತ್ನಿಯ ಕಾಂಗ್ರೆಸ್ ಭೇಟಿ ಕುರಿತು ಚರ್ಚಿಸಿದರು. ಆದರೆ ಈ ಭೇಟಿಯನ್ನು ಸೌಹಾರ್ದಯುತ ಎನ್ನಲಾಗಿದೆ.

ಮಾಜಿ ಮುಖ್ಯಮಂತ್ರಿ ದಿ.ಎಸ್.ಬಂಗಾರಪ್ಪ ಅವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಅವರಿಗೆ ರಾಜಕೀಯ ಎನ್ನುವುದು ಹೊಸತೇನಲ್ಲ. 2014 ರ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಬಿ.ಎಸ್.ಯಡಿಯೂರಪ್ಪ ಎದುರು ಪರಾಜಯಗೊಂಡಿದ್ದರು. ಬಂಗಾರಪ್ಪರ ಮೂವರು ಪುತ್ರಿಯರ ಪೈಕಿ ರಾಜಕೀಯ ಆಸಕ್ತಿ ಇರುವುದು ಗೀತಾಗೆ ಮಾತ್ರ ಎನ್ನಬೇಕು. ಗೀತಾ ಶಿವರಾಜ್ ಕುಮಾರ್ ಗೆ ಸೊರಬದ ಹಾಲಿ ಶಾಸಕ ಇನ್ನೋರ್ವ ಸಹೋದರ ಕುಮಾರ್ ಎಸ್.ಬಂಗಾರಪ್ಪಗಿಂತ ಮಧುಬಂಗಾರಪ್ಪ ಜೊತೆಯಲ್ಲಿಯೇ ಹೆಚ್ಚಿನ ಒಡನಾಟ ಹಾಗೂ ಬಾಂಧವ್ಯವಿದೆ. ಈ ಎಲ್ಲಾ ಕಾರಣಗಳಿಂದ ಹಿಂದಿನಂತೆ ಚುನಾವಣೆ ಸಂದರ್ಭದಲ್ಲಿ ಒಂದೇ ಬಾರಿಗೆ ರಾಜಕೀಯ ಅಖಾಡಕ್ಕೆ ಧುಮುಕುವುದಕ್ಕಿಂತ ಕಾಂಗ್ರೆಸ್ ನಿಂದ ಸದಸ್ಯತ್ವ ಪಡೆದು ಒಂದಿಷ್ಟು ಪಕ್ಷದ ಚಟುವಟಿಕೆಗಳಲ್ಲಿ ಪಾಲ್ಗೊಂಡು ಇನ್ನಷ್ಟು ಪಕ್ವತೆ ಪಡೆಯಲು ಇದೀಗ  ಗೀತಾ ಮುಂದಾಗಿದ್ದಾರೆ.

ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಸೇರಲು  ಅಧಿಕೃತ ಒಪ್ಪಿಗೆಯೂ ಈಗಾಗಲೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಂದ ಸಿಕ್ಕಿದ್ದು, ಈ ಬಗ್ಗೆ ಮಧು ಈಗಾಗಲೇ ಕೈ ನಾಯಕರ ಜೊತೆ ಚರ್ಚೆಯೂ ನಡೆಸಿದ್ದಾರೆ. ಇನ್ನು ಕೆಲವು ದಿನಗಳಲ್ಲಿ ಸೊರಬದಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶವೊಂದನ್ನು ಆಯೋಜಿಸುವ ಮೂಲಕ ಅಧಿಕೃತವಾಗಿ ಮಧು ಹಾಗೂ ಗೀತಾರನ್ನು ಬರಮಾಡಿಕೊಳ್ಳಲಿದೆ. ಅದಕ್ಕೂ ಮುನ್ನ ಒಂದಿಷ್ಟು ರಾಜಕೀಯ ಲಾಭ ನಷ್ಟಗಳ ಕುರಿತು ಚರ್ಚಿಸಲು ಡಿಕೆಶಿಯನ್ನು ಶಿವರಾಜ್ ಕುಮಾರ್ ಭೇಟಿಯಾಗಿದ್ದು, ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಸೇರಿದರೆ ರಾಜ್ ಕುಮಾರ್ ಕುಟುಂಬದ ಬೆಂಬಲ ಸಹಜವಾಗಿಯೇ ಕೈನತ್ತ ವಾಲಲಿದೆ.ಇದು ರಾಜ್ ಬಳಗದ ಅಭಿಮಾನಿಗಳನ್ನು ಆಕರ್ಷಿಸಲಿದೆ ಎನ್ನಲಾಗಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *