

ಮಾಜಿ ಸಚಿವ ಆರ್.ವಿ.ದೇಶಪಾಂಡೆ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅವರ ಅಭಿಮಾನಿಗಳು ವೃದ್ಧರು,ಹಿರಿಯರಿಗೆ ಹಣ್ಣು-ಸಿಹಿ ನೀಡುವ ಮೂಲಕ ಹುಟ್ಟುಹಬ್ಬ ಆಚರಣೆ ಮಾಡಿದರು. ಹೊನ್ನಾವರದಲ್ಲಿ ಜಗದೀಪ್ ತಂಗೇರಿ,ಶಿರಸಿಯಲ್ಲಿ ಭೀಮಣ್ಣ ನಾಯ್ಕ,ಸಿದ್ಧಾಪುರದಲ್ಲಿ ಕೆ.ಜಿ.ನಾಗರಾಜ್ ಮತ್ತು ವಸಂತ್ ನಾಯ್ಕ ನೇತೃತ್ವದಲ್ಲಿ ಸರಳ ಕಾರ್ಯಕ್ರಮಗಳು ನಡೆದವು.

ಸಿದ್ಧಾಪುರ ತಾಲೂಕಾ ಆಸ್ಫತ್ರೆಯ ರೋಗಿಗಳಿಗೆ ಹಣ್ಣಗಳನ್ನು ವಿತರಿಸಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಜಿ.ನಾಗರಾಜ್ ಉತ್ತರ ಕನ್ನಡ ಜಿಲ್ಲೆ ಸಿದ್ಧಾಪುರ ತಾಲೂಕು ಸೇರಿದಂತೆ ನಾಡಿನ ಅಭಿವೃದ್ಧಿಗೆ ಶ್ರಮಿಸಿದ ದೇಶಪಾಂಡೆಯವರ ಸೇವೆ ನಾಡಿಗೆ ನಿರಂತರವಾಗಿರಬೇಕು ಎಂದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಮಾತನಾಡಿ ದೇಶಪಾಂಡೆಯವರ ಸೇವೆಯಿಂದಾಗಿ ಜಿಲ್ಲೆ ಅಭಿವೃದ್ಧಿಯ ಮೈಲುಗಲ್ಲುಗಳನ್ನು ದಾಖಲಿಸಿದೆ ಎಂದರು.
ತಾಲೂಕಿನ ಮುಗದೂರಿನ ಅನಾಥಾಶ್ರಮಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಧುರೀಣೆ ಸುಶ್ಮಾರೆಡ್ಡಿ ಅನಾಥರಿಗೆ ನೆರವು ನೀಡುವ ಮೂಲಕ ದೇಶಪಾಂಡೆಯವರ ಹುಟ್ಟುಹಬ್ಬ ಆಚರಿಸಿದರು.




_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
