ಕೊರೋನಾ 2ನೇ ಅಲೆಯನ್ನು ಆದಷ್ಟು ಬೇಗ ತಡೆಯಬೇಕು, ಇಲ್ಲದಿದ್ದರೆ ದೇಶಾದ್ಯಂತ ಮಹಾ ಸ್ಫೋಟವಾಗಲಿದೆ: ಪ್ರಧಾನಿ ಮೋದಿ ಎಚ್ಚರಿಕೆ

ಕೊರೋನಾ 2ನೇ ಅಲೆಯನ್ನು ಸಾಧ್ಯವಾದಷ್ಟು ಬೇಗ ತಡೆಯಬೇಕು. ಇಲ್ಲದಿದ್ದರೆ ದೇಶಾದ್ಯಂತ ಮಹಾಮಾರಿ ಮಹಾ ಸ್ಫೋಟವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ.

PM Modi video conferencing

ನವದೆಹಲಿ: ಕೊರೋನಾ 2ನೇ ಅಲೆಯನ್ನು ಸಾಧ್ಯವಾದಷ್ಟು ಬೇಗ ತಡೆಯಬೇಕು. ಇಲ್ಲದಿದ್ದರೆ ದೇಶಾದ್ಯಂತ ಮಹಾಮಾರಿ ಮಹಾ ಸ್ಫೋಟವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ. 

ದೇಶದಲ್ಲಿ ಕೊರೋನಾ ಹೆಚ್ಚಾಗುತ್ತಿರುವುದರಿಂದ ವಿಡಿಯೋ ಕಾನ್ಫೆರನ್ಸ್ ಮೂಲಕ ಸಿಎಂಗಳ ಜೊತೆ ಮಾತನಾಡಿದ ಪ್ರಧಾನಿ ಮೋದಿ ಅವರು, ಮಾಸ್ಕ್ ಕಡ್ಡಾಯ ಮಾಡಬೇಕು. ಅಂತರ ಕಾಯ್ದುಕೊಳ್ಳುವ ವ್ಯವಸ್ಥೆ ಮಾಡಬೇಕು. ಅಲ್ಲದೆ ಕ್ಲಿನಿಕಲ್ ಸೌಲಭ್ಯ ಹೆಚ್ಚು ಮಾಡುವಂತೆ ಮುಖ್ಯಮಂತ್ರಿಗಳಿಗೆ ಸೂಚನೆ ನೀಡಿದ್ದಾರೆ. 

ಮಾಸ್ಕ್ ಧರಿಸುವ ವಿಚಾರದಲ್ಲಿ ಕಠಿಣ ಕ್ರಮ ಅನಿವಾರ್ಯ. ಮಾಸ್ಕ್ ಧರಿಸುವುದನ್ನು ಜನರು ಗಂಭೀರವಾಗಿ ಪರಿಗಣಿಸಿಲ್ಲ. ಇದು ಸ್ಥಳೀಯ ಜಿಲ್ಲಾಡಳಿತದ ವೈಫಲ್ಯವಾಗಿದೆ. ರಾಜ್ಯಗಳಲ್ಲಿ ಮೈಕ್ರೋ ಕಂಟೈನ್ಮೆಂಟ್ ಅಗತ್ಯವಾಗಿದ್ದು ಹಳ್ಳಿಗಳಿಗೆ ಸೋಂಕು ವ್ಯಾಪಿಸಿದರೆ ಕಷ್ಟ. ಹೀಗಾಗಿ ಚಿಕ್ಕ ಚಿಕ್ಕ ಪಟ್ಟಣಗಳಲ್ಲೂ ಪರೀಕ್ಷೆಗಳನ್ನು ಹೆಚ್ಚಿಸಿ ಎಂದು ಸಲಹೆ ನೀಡಿದ್ದಾರೆ. 

ದೇಶದಲ್ಲಿ ಕೊರೋನಾ ಎರಡನೇ ಅಲೆ ಕಂಡು ಬರುತ್ತಿದೆ. ಭಾರತದಲ್ಲಿ ಶೇ. 96 ಹೆಚ್ಚು ಪ್ರಕರಣಗಳು ಚೇತರಿಸಿಕೊಂಡಿವೆ. ಸಾವಿನ ಪ್ರಮಾಣ ಅತ್ಯಂತ ಕಡಿಮೆ ಇರುವ ದೇಶಗಳಲ್ಲಿ ಭಾರತವು ಸಹ ಒಂದು ಎಂದರು. ಸೋಂಕಿತ ವ್ಯಕ್ತಿಯನ್ನು ಶೀಘ್ರದಲ್ಲಿ ಪತ್ತೆ ಹಚ್ಚಬೇಕು. ಆರ್ ಟಿಪಿಸಿಆರ್ ಶೇ. 70ರಷ್ಟು ಹೆಚ್ಚಿಸಬೇಕು. ನಗರಗಳಿಗೆ ಸೋಂಕು ಹೆಚ್ಚು ವ್ಯಾಪಿಸುತ್ತಿದೆ. ಮೊದಲು ಟಿ1 ನಗರಗಳಲ್ಲಿ ಸೋಂಕು ಹೆಚ್ಚಿತ್ತು. ಹೀಗಾಗಿ ಸಣ್ಣ ಊರುಗಳಲ್ಲಿ ಹೆಚ್ಚು ಮಾಡಬೇಕು. ಟೆಸ್ಟಿಂಗ್ ಹೆಚ್ಚಿಸದಿದ್ದರೆ ಪರಿಸ್ಥಿತಿ ಗಂಭೀರವಾಗಿರುತ್ತದೆ ಎಂದರು.

ದೇಶದಲ್ಲಿ ಲಸಿಕೆಗಳು ಪೂರ್ಣ ಪ್ರಮಾಣದಲ್ಲಿ ಬಳಕೆಯಾಗುತ್ತಿಲ್ಲ. ಲಸಿಕೆ ವೇಸ್ಟ್ ಆಗದಂತೆ ಟಾರ್ಗೆಟ್ ಹಾಕಿಕೊಳ್ಳಬೇಕು. ತೆಲಂಗಾಣ, ಆಂಧ್ರಪ್ರದೇಶ ಮತ್ತು ಉತ್ತರಪ್ರದೇಶಗಳಲ್ಲಿ ವ್ಯಾಕ್ಸಿನ್ ವ್ಯರ್ಥವಾಗುತ್ತಿದೆ ಎಂದರು. (kpc)

ಸಿದ್ಧಾಪುರ ತಾಲೂಕಾ ಆಡಳಿತದಿಂದ ಬುಧವಾರ ಕೋವಿಡ್ ಲಸಿಕಾ ಜಾಗೃತಿಜಾಥಾ ನಡೆಸಲಾಯಿತು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *