

ಸಹಪಾಠಿಗಳೊಂದಿಗೆ ಹೊಳೆಗೆ ಸ್ನಾನಕ್ಕೆ ತೆರಳಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸಿದ್ಧಾಪುರ ತಾಲೂಕು ಕಿಲವಳ್ಳಿಯಲ್ಲಿ ನಡೆದಿದೆ.

ಸೋವಿನಕೊಪ್ಪ ಗ್ರಾಮ ಪಂಚಾಯತ್ ಕಿಲವಳ್ಳಿಗ್ರಾಮದ ದೀಪಕ ಹನುಮಂತ ಗೌಡ ಮೃತ ಬಾಲಕನಾಗಿದ್ದು ಈತ ಕಿಲವಳ್ಳಿ ಶಾಲೆಯ 4 ನೇ ತರಗತಿಯ ವಿದ್ಯಾರ್ಥಿಯಾಗಿದ್ದ. ಇಂದು ಮಧ್ಯಾಹ್ನ ಸ್ನೇಹಿತರೊಂದಿಗೆ ಸಮೀಪದ ಕಾನಮನೆಗುಂಡಿಗೆ ಸ್ನಾನಕ್ಕೆ ಹೋದಾಗ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಈ ದುರ್ಘಟನೆ ನಡೆದಿದೆ. ಈ ಬಗ್ಗೆ ಈ ವಿದ್ಯಾರ್ಥಿಯ ತಂದೆ ಹನುಮಂತ ವೆಂಕ ಗೌಡ ಸ್ಥಳಿಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕಾಣೆಯಾದಾತನ ಶಿಥಿಲ ಶವ ಪತ್ತೆ-….. ಇದೇ ವಾರದ ಪ್ರಾರಂಭದಲ್ಲಿ ಕಾಣೆಯಾಗಿದ್ದ ಸಿದ್ಧಾಪುರ ಕಾನಗೋಡಿನ ಈರಪ್ಪ ಚಕ್ರಸಾಲಿ ಬುಧವಾರ ಶಿಥಿಲ ಶವವಾಗಿಸ್ವಗ್ರಾಮದ ಕಾಡಿನಲ್ಲಿ ಪತ್ತೆಯಾಗಿದ್ದಾನೆ. ಅನಾರೋಗ್ಯದಿಂದ ಬಳಲುತಿದ್ದ ಈತ ಆತ್ಮಹತ್ಯೆಗೆ ಶರಣಾಗಿರಬಹುದೆಂದು ಶಂಕಿಸಲಾಗಿದೆ.


_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
