national level achivement- local news- ಕಿರಿಯರ ಸಾಧನೆಗೆ ಹಿರಿಯರ ಮೆಚ್ಚುಗೆ

ಹಾಳದಕಟ್ಟಾದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಮಾಜ ಕಲ್ಯಾಣ ಇಲಾಖೆ,
ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಳದಕಟ್ಟಾ, ಸಹಯಾನ ( ಡಾ ಆರ್.ವಿ. ಭಂಡಾರಿ ನೆನಪಿನ ಸಂಸ್ಕೃತಿ ಅಧ್ಯಯನ ಕೇಂದ್ರ) ಸಹಯೋಗದೊಂದಿಗೆ ತಾಲೂಕ ಮಟ್ಟದ ಅಸ್ಪೃಶ್ಯತೆ ಆಚರಣೆ ವಿರೋಧಿ ಜಾಗೃತಿ “ಪ್ರೀತಿ ಪದಗಳ ಪಯಣ” ನಡೆಯಿತು. ಈ ಕಾರ್ಯಕ್ರಮದಲ್ಲಿ ಎಂಜಿಸಿ ಕಾಲೇಜಿನ ಕನ್ನಡ ವಿಭಾಗದ ಡಾ. ವಿಠ್ಠಲ ಭಂಡಾರಿ ಸಂಪಾದನೆಯ ವೀಸಕ್ಕಾಗಿ ಕಾಯುವ ಜನ ( ಅಂಬೇಡ್ಕರ್ ಅವರ ಅನುಭವ ಕಥನ) ಎಂಬ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ತಾ ಪಂ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ರಾವ್, ಸಿದ್ಧಾಪುರ ಹಿತರಕ್ಷಣಾ ಸಮಿತಿಯ ಎಚ್ಕೆ ಶಿವಾನಂದ, ಅಂಬೇಡ್ಕರ ಶಕ್ತಿ ಯುವಕ ಸಂಘದ ಅಧ್ಯಕ್ಷ ನಂದನ್ ಬೋರ್ಕರ್,ನಿವೃತ್ತ ಇತಿಹಾಸ ಪ್ರಾಧ್ಯಾಪಕ ಡಿ ಆಯ್ ಪರ್ನೇಕರ, ಸಮಾಜ ಕಲ್ಯಾಣ ಇಲಾಖೆಯ ಅಧೀಕ್ಷಕ ಬಸವರಾಜ್ ಬಂಡೆರ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಬಿ ಎಸ್ ಹೆಗಡೆ,ಎಂಜಿಸಿ ಕಾಲೇಜಿನ ಕನ್ನಡ ವಿಭಾಗದ ವಿಠ್ಠಲ ಭಂಡಾರಿ, ಪಿ ಎಸ್ ಐ ಮಹಾಂತಪ್ಪ ಕುಂಬಾರ್ ಇದ್ದರು.

ಸಿದ್ಧಾಪುರ ತಾಲೂಕಿನ ಅವರಗುಪ್ಪಾದ ಎಂ.ಸಿ.ನಾಯ್ಕ ಶಿರಗಳ್ಳೆಯವರ ಮಗಳು ಪ್ರಥ್ವಿ ಮಹಾಬಲೇಶ್ವರ ನಾಯ್ಕ ಬೆಂಗಳೂರಿನ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯಕ್ಕೆ ಮೊದಲ ರ್ಯಾಂಕ್ ಪಡೆದಿದ್ದಾಳೆ. ನಿರ್ಮಾಣ ತಂತ್ರಜ್ಞಾನ ಮತ್ತು ನಿರ್ವಹಣೆ ವಿಷಯದ ಬಿ.ಇ. ಪದವಿಯಲ್ಲಿ ಈ ಸಾಧನೆ ಮಾಡಿರುವ ಪ್ರಥ್ವಿ ನಾಯ್ಕರಿಗೆ ಸ್ಥಳಿಯರು ಅಭಿನಂದಿಸಿದ್ದಾರೆ.

ಮಹ್ಮದ ದಾನಿಶ ಶರೀಪ್ ಸಾಬ್.
ಸಿದ್ದಾಪುರ
ಮಹ್ಮದ ದಾನಿಷ್ ಶರೀಫ್ ಸಾಬ್ ಹಾರ್ಸಿಕಟ್ಟಾ ಏ.5ರಿಂದ ಪಂಜಾಬ ರಾಜ್ಯದ ಚಂಡೀಗಡದಲ್ಲಿ ನಡೆಯಲಿರುವ ರಾಷ್ಟ್ರೀಯಮಟ್ಟದ ರೋಲರ್ ಸ್ಕೆಟಿಂಗ್ ಹಾಕಿ ಪಂದ್ಯಾವಳಿಗೆ 14ವರ್ಷದೊಳಗಿನ ಬಾಲಕರ ಕರ್ನಾಟಕ ರಾಜ್ಯ ರೋಲರ್ ಸ್ಕೆಟಿಂಗ್ ಹಾಕಿ ತಂಡಕ್ಕೆ ಆಯ್ಕೆ ಆಗಿದ್ದಾರೆ.
ಕೈಗಾದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಬಂಗಾರದ ಪದಕ ಪಡೆಯುವುದರ ಮೂಲಕ ರಾಜ್ಯ ತಂಡಕ್ಕೆ ಆಯ್ಕೆ ಆಗಿದ್ದಾರೆ. ಈತ ಯಲ್ಲಾಪುರದ ಮದರ್ ತೆರೆಸಾ ಇಂಗ್ಲೀಷ್ ಮಿಡಿಯಂ ಶಾಲೆಯಲ್ಲಿ 5ನೇ ತರಗತಿಯಲ್ಲಿ ಓದುತ್ತಿದ್ದು ಸ್ಥಳೀಯ ರೊಲರ್ ಸ್ಕೆಟಿಂಗ್ ಕ್ಲಬ್‍ನಲ್ಲಿ ದಿಲಿಪ್ ಹಣಬರ್ ಹಾಗೂ ಅಜಯ ಗಾವಡಾ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.
ಯಲ್ಲಾಪುರದ ತಾಮೀರ್ ಕೋಆಪರೇಟಿವ್ ಬ್ಯಾಂಕ್‍ನ ವ್ಯವಸ್ಥಾಪಕ ಶರೀಫ್ ಹಸನ್ ಸಾಬ್ ಹಾರ್ಸಿಕಟ್ಟಾ ಹಾಗೂ ತೆಲಂಗಾರ ಸಹಿಪ್ರಾ ಶಾಲಾ ಶಿಕ್ಷಕಿ ಶಂಶಾದ ಶರೀಫ್ ಸಾಬ್ ಹಾರ್ಸಿಕಟ್ಟಾ ದಂಪತಿ ಪುತ್ರ.

ಸ.ಹಿ.ಪ್ರಾ.ಶಾಲೆ ಸಿದ್ದಾಪುರ ಶಿರಸಿ ಶೈಕ್ಷಣಿಕ ಜಿಲ್ಲೆ
ಸನ್ಮಾನ ಕಾರ್ಯಕ್ರಮ
ಸಿದ್ದಾಪುರ ಶಾಲೆಯಲ್ಲಿ ವಯೋ ನಿವೃತ್ತಿ ಹೊಂದಿದ ಶ್ರೀಮತಿ ಸವಿತಾ ಶಾನಭಾಗ ದಂಪತಿಗಳಿಗೆ (ಶ್ರೀ ತಮ್ಮಣ್ಣ ಬೀಗಾರ ರಾಷ್ಟ್ರ ಪ್ರಶಸ್ತಿ ಪುರಸ್ಕೃತರು) ಮತ್ತು ಸಾಮಾಜಿಕ ಸೇವಾಕಾರ್ಯ ನಿರ್ವಹಿಸಿದ ಶ್ರೀ ವಿಜಯ್ ಪೋಸ್ಟಮಾಸ್ಟರ್ ಸಿದ್ದಾಪುರರಿಗೆ ಸನ್ಮಾನ ಕಾರ್ಯಕ್ರಮ ನಡೆಸಿದರು. ಶಾಲೆಯ ಮುಖ್ಯಾಧ್ಯಾಪಕಿ ನೇತ್ರಾವತಿ ನಾಯ್ಕರವರು ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಮಹೇಶ ಹೆಗಡೆ ಶಿಕ್ಷಣ ಸಂಯೋಜಕರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಿದ್ದಾಪುರ ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ನೂತನ ಅಧ್ಯಕ್ಷ ಸತೀಶ ಹೆಗಡೆಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಿದ್ದಾಪುರ ಕ್ಲಸ್ಟರಿನ ಅರ್ಜುನ್ ಚೌಹಾಣರವರು ಅತಿಥಿಗಳಾಗಿ ಆಗಮಿಸಿ ಅನಿಸಿಕೆ ವ್ಯಕ್ತಪಡಿಸಿದರು. ಕುಮಾರಿ ಚಿನ್ಮಯಿ ಹಾಗೂ ಕುಮಾರಿ ಸಮಹೀರಾ 6ನೇ ತರಗತಿ ಮಕ್ಕಳು ಶಿಕ್ಷಕರ ಕುರಿತು ಅನಿಸಿಕೆ ವ್ಯಕ್ತಪಡಿಸಿದರು. ಮುಖ್ಯಾಧ್ಯಾಪಕಿ ಸ್ವರ್ಣಲತಾ ಶಾನಭಾಗ ಶಾಲೆಯ ಅಡಿಗೆಯವರು ಭುವನೇಶ್ವರಿ ಹೆಗಡೆಯವರು ಕಾರ್ಯಕ್ರಮ ನಿರ್ವಹಿಸಿದರು. ಸನ್ಮಾನಿತರಾದ ಸವಿತಾ ಶಾನಭಾಗ, ತಮ್ಮಣ್ಣ ಬೀಗಾರ, ವಿಜಯರವರು ಶಾಲೆಯ ಕುರಿತು ತಮ್ಮ ಅನುಭವ ಹಂಚಿಕೊಂಡರು. ಸವಿತಾ ಶಾನಭಾಗ ದಂಪತಿಗಳು ಶಾಲೆಗೆ 10,000/- ಹಾಗೂ ಒಂದು ಕುಕ್ಕರ್ ದೇಣಿಗೆ ನೀಡಿದರು. , ಪಾಲಕರು, ಮಕ್ಕಳು, ಅಂಗನವಾಡಿ ಶಿಕ್ಷಕರು, ಪೋಸ್ಟ್ ಆಫಿಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ,ಸಿದ್ದಾಪುರ(ಉ.ಕ)
ದಿನಾಂಕ : 19-03-2021 ರ ಸಿದ್ದಾಪುರ ಪೇಟೆ ಧಾರಣೆ
ಅ.ನಂ. ಹುಟ್ಟುವಳಿಯ
ಹೆಸರು ಧಾರಣೆಗಳು (ಪ್ರತಿ ಕ್ವಿಂಟಲ್ಲಿಗೆ)
ಕನಿಷ್ಠ ಗರಿಷ್ಠ ಮಾದರಿ
1 ರಾಶಿ 39609 41899 41499
2 ತಟ್ಟಿಬೆಟ್ಟೆ 32109 38189 37869
3 ಕೆಂಪಗೋಟು 26669 29469 28689
4 ಬಿಳಿಗೋಟು 23699 30089 28609
5 ಚಾಲಿ 34689 36899 36601
6 ಕೋಕಾ 21099 28809 26609
7 ಕಾಳುಮೆಣಸು 30089 39039 38366

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *