

ಮರೆಯಾಗುತ್ತಿರುವ ಗ್ರಾಮೀಣ ಕಲೆ ಮೂಡಲಪಾಯ ಯಕ್ಷಗಾನ ಕಲಾವಿದನನ್ನು ಸನ್ಮಾನಿಸಿ ಗೌರವಿಸಿದ ಅಪರೂಪದ ಕಾರ್ಯಕ್ರಮ ಸಿದ್ಧಾಪುರ ತಾಲೂಕು ಕುಂಬ್ರಿಗದ್ದೆಯಲ್ಲಿ ನಡೆಯಿತು. ಚೆನ್ನಬಸಪ್ಪ ಶಿವಾಜಿ ಗೌಡ ದೇವಗಿರಿ ತಾಲೂಕಿನ ವಿರಳ ಮೂಡಲಪಾಯ ಕಲಾವಿದರಾಗಿದ್ದು ಅವರನ್ನು ಸನ್ಮಾನಿಸಿ ಅಭಿನಂದಿಸಿದ ಕುಂಬ್ರಗದ್ದೆಯ ಜನರು ತಮ್ಮೂರಿನ ವೀರಭದ್ರೆಶ್ವರ ದೇವರ ವಾರ್ಷಿಕೋತ್ಸವದ ಅಂಗವಾಗಿ ಶನೇಶ್ವರ ಮಹಾತ್ಮೆ ಎನ್ನುವ ಮೂಡಲಪಾಯ ಯಕ್ಷಗಾನವನ್ನೂ ಪ್ರದರ್ಶಿಸಿದರು.

ಇದರ ಅಂಗವಾಗಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಬೇಡ್ಕಣಿ ಗ್ರಾಮ ಪಂಚಾಯತ್ ಸದಸ್ಯ ಗೋವಿಂದ ನಾಯ್ಕ ಪ್ರತಿಭಾವಂತ ಕಲಾವಿದರನ್ನು ಗುರುತಿಸಿ, ಗೌರವಿಸುವುದು ಸಮಾಜದ ಕರ್ತವ್ಯ. ಸಮಾಜ ಪ್ರತಿಭೆಗಳನ್ನು ಗುರುತಿಸಿದರೆ ಕಲೆ, ಕಲಾವಿದರು ಉಳಿಯಲು ಸಾಧ್ಯ ಎಂದರು. ಕಲಾಬಳಗದ ರಾಮಕೃಷ್ಣ ನಾಯ್ಕ ಮತ್ತು ಉಮೇಶ್ ನಾಯ್ಕ ಉಪಸ್ಥಿತರಿದ್ದರು. ಕು. ಚಿಂತನಾ ಪ್ರಾರ್ಥಿಸಿದಳು. ಚಂದ್ರಶೇಖರ್ ನಾಯ್ಕ ಕಾರ್ಯಕ್ರಮಕ್ಕೆ ಸ್ವಾಗತಿಸಿ, ವಂದಿಸಿದರು.


_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
