ಸೈನಿಕ ಸಂದೀಪ್ ಪಾರ್ಥಿವ ಶರೀರ ನೋಡದ ಜನಪ್ರತಿನಿಧಿಗಳು:ಸಾರ್ವತ್ರಿಕ ಅಸಮಾಧಾನ, ಆಕ್ರೋಶ.

ಜಾರಕಂಡ ರಾಜ್ಯದ ಹಜಾರಿಭಾಗ್ ಬರಿ ಸಿ.ಆರ್.ಪಿ.ಫ್ ಕೋಬ್ರಾ ಕಮಾಂಡೋ ಪಡೆಯ ಯೋಧ ಸಿದ್ಧಾಪುರ ಹಂಗಾರಖಂಡದ ಸಂದೀಪ್ ನಾರಾಯಣ ನಾಯ್ಕ ಸಾವು ಉತ್ತರ ಕನ್ನಡ ಜಿಲ್ಲೆಯ ಜನರ ಮನಸ್ಸನ್ನು ಘಾಸಿ ಮಾಡಿದೆ. ಈ ಆಕಸ್ಮಿಕ ಸಾವಿನ ಹಿನ್ನೆಲೆಯಲ್ಲಿ ಜಿಲ್ಲೆ, ಪರಜಿಲ್ಲೆಗಳ ಜನರು ಸಾಂತ್ವನ ಹೇಳಿದ್ದಾರೆ. ಆದರೆ ಶಿರಸಿ-ಸಿದ್ದಾಪುರದ ಶಾಸಕ ರಾಜ್ಯ ವಿಧಾನಸಭೆಯ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಕೇಂದ್ರದ ಮಾಜಿ ಸಚಿವ ಸಂಸದ ಅನಂತಕುಮಾರ ಹೆಗಡೆ ಯೋಧನ ಸಾವನ್ನು ಉಪೇಕ್ಷಿಸಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಗುರುವಾರ ಮುಂಜಾನೆ ಜಾರಕಂಡ ಹಜಾರಿಭಾಗನಿಂದ ಹೊರಟ ಯೋಧನ ಶವ ಇಂದು ಮುಂಜಾನೆ ಗೋವಾ ಮೂಲಕ ಕಾರವಾರ ಮಾರ್ಗವಾಗಿ ಶಿರಸಿ ತಲುಪಿ ನಂತರ ಪಾರ್ಥಿವ ಶರೀರದ ಅಂತಿಮ ಮೆರವಣಿಗೆಯೊಂದಿಗೆ ಸ್ವಗ್ರಾಮ ತಲುಪಿತು. ಈ ಅವಧಿಯಲ್ಲಿ ತ್ಯಾಗಲಿ, ಕಾನಸೂರು ಗ್ರಾಮ ಪಂಚಾಯತ್ ಗಳ ಜನಪ್ರತಿನಿಧಿಗಳು ಭೇಟಿ ನೀಡಿದ್ದು ಬಿಟ್ಟರೆ ಈ ಭಾಗದ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಸದಸ್ಯರು, ಅಧ್ಯಕ್ಷರು ಬರಲೇ ಇಲ್ಲ. ಕೆಲವು ಮುಖಂಡರು, ರಾಜಕೀಯ ನಾಯಕರು ಸೌಜನ್ಯದ ಭೇಟಿ ಮಾಡಿ ಯೋಧನ ಶವದ ಅಂತಿಮ ದರ್ಶನ ಮಾಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಇಂದು ಮುಂಜಾನೆ ಎರಡ್ಮೂರು ಘಂಟೆಗಳ ಕಾಲ ಯೋಧನ ಶವದ ಅಂತಿಮ ದರ್ಶನ ನಡೆದರೂ ಸ್ವ ಕ್ಷೇತ್ರ, ಊರಿನಲ್ಲಿದ್ದ ಶಾಸಕ, ಸಂಸದರು ಯೋಧನ ಪಾರ್ಥಿವ ಶರೀರ ದರ್ಶನ ಮಾಡದ ಬಗ್ಗೆ ಸಾರ್ವಜನಿಕ ವಲಯ, ಸಾಮಾಜಿಕ ಜಾಲತಾಣಗಳಲ್ಲಿ ತೀವೃ ವಿರೋಧ ವ್ಯಕ್ತವಾಗಿದೆ. ಶಿರಸಿ ಮೂಲದ ಸಂಸದ ಅನಂತಕುಮಾರ ಹೆಗಡೆ, ಶಾಸಕ ವಿಶ್ವೇಶ್ವರ ಹೆಗಡೆ ಇಂದು ಸ್ವ ಕ್ಷೇತ್ರದಲ್ಲೇ ಇದ್ದು ಸಿದ್ಧಾಪುರದ ಕೊಂಡ್ಲಿ ಜಾತ್ರೆ, ಹಬ್ಬಗಳ ಮೋಜು ಮಸ್ತಿಯಲ್ಲಿ ತೊಡಗಿ ಸೈನಿಕನನ್ನು ಉಪೇಕ್ಷಿಸಿರುವ ಈ ಜನಪ್ರತಿನಿಧಿಗಳ ಉಡಾಫೆ, ಬೇಜವಾಬ್ಧಾರಿತನ ಟೀಕಿಸಿರುವ ಯುವಕರು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿದ್ದಾರೆ.

ಈ ಬಗ್ಗೆ ವಿರೋಧ ವ್ಯಕ್ತಪಡಿಸಿರುವ ಶಿರಸಿ ಅಜ್ಜೀಬಳದ ದಿನೇಶ್ ನಾಯ್ಕ ಶಾಸಕ, ಸಂಸದರು ಹಿಂದತ್ವ, ಕೋಮುವಾದದ ಅಮಲಲ್ಲಿ ತೇಲುತಿದ್ದಾರೆ. ಚುನಾವಣಾ ವೇಳೆ ಕ್ಷೇತ್ರ, ಸೈನಿಕರು, ಹಿಂದುತ್ವದ ಬೂಟಾಟಿಕೆಯ ಬೊಗಳೆ ಬಿಡುವ ನಮ್ಮ ಪ್ರತಿನಿಧಿಗಳು ಸೈನಿಕನ ಸಾವನ್ನು ಉಪೇಕ್ಷಿಸಿ ನಮಗೆ ದ್ರೋಹ ಬಗೆದಿದ್ದಾರೆ ಇವರು ಸಾರ್ವಜನಿಕವಾಗಿ ಕ್ಷಮೆ ಕೇಳದಿದ್ದರೆ ಅವರ ವಿರುದ್ಧ ಸಾರ್ವಜನಿಕ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ.

ಈ ಬಗ್ಗೆ ಆಕ್ರೋಶದ ಮಾತುಗಳನ್ನಾಡಿರುವ ಜಿಲ್ಲಾ ಜನಪರ ವೇದಿಕೆಯ ಸದಸ್ಯ ಕೆ.ಟಿ. ನಾಯ್ಕ ಹೆಗ್ಗೇರಿ 25 ವರ್ಷಗಳಿಂದ ದೇವರು, ಧರ್ಮದ ಕ್ಷುಲ್ಲಕ ರಾಜಕೀಯ ಮಾಡುತ್ತಿರುವ ಈ ಕ್ಷೇತ್ರದ ಶಾಸಕ, ಸಂಸದರು ಜಾತ್ರೆ, ಹಬ್ಬ, ಧರ್ಮದ ನಾಟಕ ಮಾಡುತ್ತಾ ದೇವರ ಪೂಜೆ ಮಾಡುವ ಪುರೋಹಿತರಾಗಲು ಲಾಯಕ್ಕೇ ಹೊರತು ಇವರು ಜನಪ್ರತಿನಿಧಿಗಳಾಗಲು ಅಯೋಗ್ಯರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅತ್ತ ಸೈನಿಕನ ಅಂತಿಮಯಾತ್ರೆ, ಶವಸಂಸ್ಕಾರದ ಕ್ರೀಯಾವಿಧಿ ನಡೆಯುತಿದ್ದರೆ… ಇತ್ತ ಗೌರವಾನ್ವಿತ ಸಭಾಪತಿಗಳು ಜಾತ್ರೆಯಲ್ಲಿ ಪಕ್ಷದ ಲೋಕಲ್ ಮುಖಂಡರ ಜೊತೆ ಪೋಟೋ ಗಳಿಗೆ ಪೋಜ್ ನೀಡುತ್ತಿರುವ ದೃಶ್ಯ
ಸಾಮಾಜಿಕ ಜಾಲತಾಣದಲ್ಲಿ ಸಂಸದ,ಶಾಸಕರಿಗೆ ಶಾಕ್…

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *