Workshop for childrens -ಸೊರಬಾದಲ್ಲಿ ಮಕ್ಕಳಿಗಾಗಿ ಸೃಜನಶೀಲ ಬರವಣಿಗೆ ಕಾರ್ಯಗಾರ

ಮಕ್ಕಳಲ್ಲಿಯೂ ತಮ್ಮದೇ ಆದ ಕಲ್ಪನೆ, ಪರಿಕಲ್ಪನೆಗಳು, ಕೌಶಲಗಳು ಇರುತ್ತವೆ.ಅವುಗಳನ್ನು ಬರಹರೂಪಕ್ಕೆ ಇಳಿಸಲು ಅವರಿಗೆ ಅಭ್ಯಾಸ ಬೇಕಾಗುತ್ತದೆ. ಅಂತಹ ಅಭ್ಯಾಸದ ಅವಕಾಶ , ಮಾರ್ಗದರ್ಶನ ಸಿಕ್ಕಾಗ ಅವರಲ್ಲಿಯೂ ಸೃಜನಶೀಲ ಬರವಣಿಗೆ ಸಾಧ್ಯವಾಗುತ್ತದೆ.
ಅದಕ್ಕಾಗಿ ಮಕ್ಕಳ ಸಾಹಿತ್ಯ ಪರಿಷತ್ತು ಶಿವಮೊಗ್ಗ, ಮಕ್ಕಳ ಮಂದಾರ ಪತ್ರಿಕಾ ಬಳಗ ವತಿಯಿಂದ ಜಿಲ್ಲೆಯಾದ್ಯಂತ ಸೃಜನಶೀಲ ಬರವಣಿಗೆಯ ಕಾರ್ಯಗಾರ ಏರ್ಪಡಿಸಲಾಗುತ್ತಿದೆ ಎಂದು ಸೊರಬದ ಮೆಟ್ರಿಕ್ ಪೂರ್ವ ಎಸ್ ಸಿ ಎಸ್ಟಿ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಹಮ್ಮಿಕೊಂಡಿದ್ದ ತರಬೇತಿಯಲ್ಲಿ ಮಕ್ಕಳ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷರಾದ ರವಿರಾಜ್ ಮಂಡಗಳಲೆ ಅವರು ಹೇಳಿದರು.

ಮಕ್ಕಳಲ್ಲಿ ಸೃಜನಶೀಲ ಬರವಣಿಗೆ ಸಾಮರ್ಥ್ಯ ಹೆಚ್ಚಿಸಲು ಮಕ್ಕಳ ಸಾಹಿತಿಗಳೂ ಆದ ರವಿರಾಜ್ ಅವರು ರೂಪಿಸಿರುವ ಸಾಹಿತ್ಯ ಅಧ್ಯಯನ ಸಾಮಗ್ರಿಗಳನ್ನು ಮಕ್ಕಳಿಗೆ ನೀಡಿ ಸುಮಾರು 40 ಸಾಹಿತ್ಯ ಆಸಕ್ತ ಪ್ರತಿಭಾವಂತ ಮಕ್ಕಳಿಗೆ ತರಬೇತಿ ನೀಡಿದರು.ಮಕ್ಕಳು ಕ್ರಿಯಾಶೀಲವಾಗಿ ಆರು ತಂಡಗಳಾಗಿ ತೊಡಗಿಕೊಂಡು ಸ್ಥಳದಲ್ಲಿಯೇ ಕಥೆ,ಕವನ,ಕಿರುನಾಟಕ ಸಹ ರಚಿಸಿದರು. ಸಂಜೆ ವೇಳೆಗೆ ಸ್ಥಳದಲ್ಲಿಯೇ ಮಕ್ಕಳ ಮಂದಾರ ಕೈಬರಹ ಪತ್ರಿಕೆ ಸಿದ್ದಪಡಿಸಿ ಗಮನ ಸೆಳೆದರು.
ಉಚಿತವಾಗಿ ಜಿಲ್ಲೆಯಾದ್ಯಂತ ಕಾರ್ಯಾಗಾರ ಏರ್ಪಡಿಸಲು ಸಹಯೋಗಕ್ಕಾಗಿ 9980952630 ಗೆ ಕರೆ ಮಾಡಲು ಕೋರಿದರು.

ತಾಲ್ಲೂಕು ಘಟಕದ ಅಧ್ಯಕ್ಷ ಡಾ.ಉಮೇಶ್ ಭದ್ರಾಪುರ ಅವರು ಉಪನ್ಯಾಸ ನೀಡಿದರು. ನಿಲಯ ಪಾಲಕರಾದ ಉಮೇಶ್ ಮಂಡಗಳಲೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪರಿಷತ್ತಿನ ಖಜಾಂಚಿ ರವೀಂದ್ರ ಕಾರ್ಯಕ್ರಮ ನಿರ್ವಹಿಸಿದರು.ನಿಲಯದ ಸಿಬ್ಬಂದಿ ಸಹ ತರಬೇತಿಯಲ್ಲಿ ಪಾಲ್ಗೊಂಡಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *