ಸೈನಿಕನಿಗೆ ಅಗೌರವ: ಶಾಸಕ,ಸಂಸದರ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ಉತ್ತರ ಕನ್ನಡ ಜಿಲ್ಲೆ ಸಿದ್ಧಾಪುರದ ಹಂಗಾರಕಂಡದ ಯುವಕ ಸಂದೀಪ ನಾಯ್ಕ ಸಾವು ಈಗ ಬೇರೆಯದೇ ಕಾರಣಕ್ಕೆ ಚರ್ಚೆಯ ವಿಷಯವಾಗಿದೆ.

ಹಂಗಾರಕಂಡದ ಸಂದೀಪ ನಾರಾಯಣ ನಾಯ್ಕ ಜಾರ್ಕಂಡ ಬರ್ರಿ ಯಲ್ಲಿ ಗುರುವಾರ ಬೆಳಿಗ್ಗೆ ನಿಧನರಾಗಿದ್ದರು. ಅವರ ಪಾರ್ಥಿವ ಶರೀರ ಶುಕ್ರವಾರ ಬೆಳಿಗ್ಗೆ ಸ್ವಗ್ರಾಮಕ್ಕೆ ಬಂದು ಮಧ್ಯಾಹ್ನದ ವೇಳೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.

ಸಂದೀಪನಾಯ್ಕ ಹಿತೈಶಿಗಳು,ಜಿಲ್ಲಾಡಳಿತ, ಸೇನೆಯ ಸಿಬ್ಬಂದಿಗಳು ಉಪಸ್ಥಿತರಿದ್ದು ಅಂತಿಮ ಕ್ರೀಯಾವಿಧಿ ನೆರವೇರಿಸಿದ್ದರು. ಈ ಸಮಯದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಸೇರಿದಂತೆ ಕೆಲವು ಪ್ರಮುಖರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು. ಆದರೆ ಈ ಯೋಧನ ಪಾರ್ಥಿವಶರೀರ ದರ್ಶನ ಮತ್ತು ಅಂತ್ಯ ಸಂಸ್ಕಾರದ ವೇಳೆ ಸ್ಥಳಿಯ ಪ್ರಮುಖ ರಾಜಕೀಯ ನಾಯಕರು ಜನಪ್ರತಿನಿಧಿಗಳಾದ ತಾಲೂಕು ಪಂಚಾಯತ್ ಸದಸ್ಯರು, ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ಸ್ಥಳಿಯ ಶಾಸಕರು ಮತ್ತು ಸಂಸದರು ಬಾರದೆ ಸೇನೆ, ಸೈನಿಕನಿಗೆ ಅವಮಾನ ಮಾಡಿದ್ದಾರೆಂಬ ಬಗ್ಗೆ ವಿರೋಧ ವ್ಯಕ್ತವಾಗಿದೆ.

ಈ ಬಗ್ಗೆ ಪ್ರತಿಕ್ರೀಯಿಸಿರುವ ಕಾಂಗ್ರೆಸ್ ಸೇನೆ ಸೈನಿಕನಿಗೆ ಅವಮಾನ ಮಾಡಿದ ಪ್ರಮುಖ ವ್ಯಕ್ತಿಗಳು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಪೋಸ್ಟ್ ಹರಿಬಿಡುತ್ತಿರುವ ಸ್ಥಳಿಯ ಯುವಕರು ಶಿರಸಿಯಲ್ಲಿದ್ದು ಕೊಂಡ್ಲಿ ಜಾತ್ರೆಗೆ ಬೆಂಬಲಿಗರೊಂದಿಗೆ ಬರುವ ಜನಪ್ರತಿನಿಧಿಗಳಿಗೆ ಮಾರ್ಗ ಮಧ್ಯದಲ್ಲಿ ನಡೆಯುತ್ತಿದ್ದ ಸೈನಿಕನ ಅಂತ್ಯ ಸಂಸ್ಕಾರ ಬೇಡದ ವಿಚಾರವಾಯಿತೆ ಎಂದು ಪ್ರಶ್ನಿಸಿದ್ದಾರೆ.

ಜವಾಬ್ಧಾರಿಯುತ ಜನಪ್ರತಿನಿಧಿಗಳು ಯೋಧರು, ಸೇನೆಯ ಬಗ್ಗೆ ಗೌರವ, ಆದರ ಹೊಂದಿರಬೇಕು ಆದರೆ ವೇದಿಕೆ ಮೇಲೆ ದೇಶಪ್ರೇಮದ ಭಾಷಣ ಮಾಡುವವರು ಸೈನಿಕನ ಪಾರ್ಥಿವ ಶರೀರವನ್ನೂ ನೋಡದೆ ಜಾತ್ರೆ ಮಾಡುವುದೆಂದರೆ…. ಅದು ಯೋಧರಿಗೆ ಸೇನೆಗೆ ಮಾಡುವ ಅವಮಾನ ಸಂಸದ ಶಾಸಕರಿಗೆ ನೈತಿಕ ಜವಾಬ್ಧಾರಿ ಇದ್ದರೆ ಅವರು ಸಾರ್ವಜನಿಕವಾಗಿ ಕ್ಷಮೆ ಕೇಳಿ ರಾಜೀನಾಮೆ ನೀಡಬೇಕು.- ಭೀಮಣ್ಣ ನಾಯ್ಕ (ಡಿ.ಸಿ.ಸಿ. ಅಧ್ಯಕ್ಷರು)

ಸೈನಿಕ ಮೃತನಾಗಿ ಅಂತಿಮ ಯಾತ್ರೆ ನಡೆಯುತಿದ್ದಾಗ ಅದೇ ಮಾರ್ಗದಲ್ಲಿ ಬಂದ ಸಂಸದ ಶಾಸಕರು ಸೌಜನ್ಯಕ್ಕೂ ಮೃತರ ಪಾರ್ಥಿವ ಶರೀರ ದರ್ಶನ ಮಾಡದಿರುವುದು, ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳದಿರುವುದು ಜನಪ್ರತಿನಿಧಿಗಳು, ನಾಯಕತ್ವಕ್ಕೆ ಶೋಭೆಯಲ್ಲ. ಜನಪ್ರತಿನಿಧಿಗಳಾಗಿ ಪಕ್ಷಪಾತ, ಜಾತೀಯತೆ ಮಾಡಿದ ಸಂಸದರು, ಶಾಸಕರು ಇದಕ್ಕೆ ಬೆಲೆ ತೆರಬೇಕಾಗುತ್ತದೆ. ಈಗಲೂ ಕ್ಷಮೆ ಕೇಳಿ, ನೈತಿಕತೆ, ಜವಾಬ್ಧಾರಿ ಇದ್ದರೆ ರಾಜೀನಾಮೆ ನೀಡಿ. – ವಸಂತ ನಾಯ್ಕ ಮಳಲವಳ್ಳಿ ( ಸಿದ್ಧಾಪುರ ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *