ಸೈನಿಕನಿಗೆ ಅಗೌರವ: ಶಾಸಕ,ಸಂಸದರ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ಉತ್ತರ ಕನ್ನಡ ಜಿಲ್ಲೆ ಸಿದ್ಧಾಪುರದ ಹಂಗಾರಕಂಡದ ಯುವಕ ಸಂದೀಪ ನಾಯ್ಕ ಸಾವು ಈಗ ಬೇರೆಯದೇ ಕಾರಣಕ್ಕೆ ಚರ್ಚೆಯ ವಿಷಯವಾಗಿದೆ.

ಹಂಗಾರಕಂಡದ ಸಂದೀಪ ನಾರಾಯಣ ನಾಯ್ಕ ಜಾರ್ಕಂಡ ಬರ್ರಿ ಯಲ್ಲಿ ಗುರುವಾರ ಬೆಳಿಗ್ಗೆ ನಿಧನರಾಗಿದ್ದರು. ಅವರ ಪಾರ್ಥಿವ ಶರೀರ ಶುಕ್ರವಾರ ಬೆಳಿಗ್ಗೆ ಸ್ವಗ್ರಾಮಕ್ಕೆ ಬಂದು ಮಧ್ಯಾಹ್ನದ ವೇಳೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.

ಸಂದೀಪನಾಯ್ಕ ಹಿತೈಶಿಗಳು,ಜಿಲ್ಲಾಡಳಿತ, ಸೇನೆಯ ಸಿಬ್ಬಂದಿಗಳು ಉಪಸ್ಥಿತರಿದ್ದು ಅಂತಿಮ ಕ್ರೀಯಾವಿಧಿ ನೆರವೇರಿಸಿದ್ದರು. ಈ ಸಮಯದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಸೇರಿದಂತೆ ಕೆಲವು ಪ್ರಮುಖರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು. ಆದರೆ ಈ ಯೋಧನ ಪಾರ್ಥಿವಶರೀರ ದರ್ಶನ ಮತ್ತು ಅಂತ್ಯ ಸಂಸ್ಕಾರದ ವೇಳೆ ಸ್ಥಳಿಯ ಪ್ರಮುಖ ರಾಜಕೀಯ ನಾಯಕರು ಜನಪ್ರತಿನಿಧಿಗಳಾದ ತಾಲೂಕು ಪಂಚಾಯತ್ ಸದಸ್ಯರು, ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ಸ್ಥಳಿಯ ಶಾಸಕರು ಮತ್ತು ಸಂಸದರು ಬಾರದೆ ಸೇನೆ, ಸೈನಿಕನಿಗೆ ಅವಮಾನ ಮಾಡಿದ್ದಾರೆಂಬ ಬಗ್ಗೆ ವಿರೋಧ ವ್ಯಕ್ತವಾಗಿದೆ.

ಈ ಬಗ್ಗೆ ಪ್ರತಿಕ್ರೀಯಿಸಿರುವ ಕಾಂಗ್ರೆಸ್ ಸೇನೆ ಸೈನಿಕನಿಗೆ ಅವಮಾನ ಮಾಡಿದ ಪ್ರಮುಖ ವ್ಯಕ್ತಿಗಳು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಪೋಸ್ಟ್ ಹರಿಬಿಡುತ್ತಿರುವ ಸ್ಥಳಿಯ ಯುವಕರು ಶಿರಸಿಯಲ್ಲಿದ್ದು ಕೊಂಡ್ಲಿ ಜಾತ್ರೆಗೆ ಬೆಂಬಲಿಗರೊಂದಿಗೆ ಬರುವ ಜನಪ್ರತಿನಿಧಿಗಳಿಗೆ ಮಾರ್ಗ ಮಧ್ಯದಲ್ಲಿ ನಡೆಯುತ್ತಿದ್ದ ಸೈನಿಕನ ಅಂತ್ಯ ಸಂಸ್ಕಾರ ಬೇಡದ ವಿಚಾರವಾಯಿತೆ ಎಂದು ಪ್ರಶ್ನಿಸಿದ್ದಾರೆ.

ಜವಾಬ್ಧಾರಿಯುತ ಜನಪ್ರತಿನಿಧಿಗಳು ಯೋಧರು, ಸೇನೆಯ ಬಗ್ಗೆ ಗೌರವ, ಆದರ ಹೊಂದಿರಬೇಕು ಆದರೆ ವೇದಿಕೆ ಮೇಲೆ ದೇಶಪ್ರೇಮದ ಭಾಷಣ ಮಾಡುವವರು ಸೈನಿಕನ ಪಾರ್ಥಿವ ಶರೀರವನ್ನೂ ನೋಡದೆ ಜಾತ್ರೆ ಮಾಡುವುದೆಂದರೆ…. ಅದು ಯೋಧರಿಗೆ ಸೇನೆಗೆ ಮಾಡುವ ಅವಮಾನ ಸಂಸದ ಶಾಸಕರಿಗೆ ನೈತಿಕ ಜವಾಬ್ಧಾರಿ ಇದ್ದರೆ ಅವರು ಸಾರ್ವಜನಿಕವಾಗಿ ಕ್ಷಮೆ ಕೇಳಿ ರಾಜೀನಾಮೆ ನೀಡಬೇಕು.- ಭೀಮಣ್ಣ ನಾಯ್ಕ (ಡಿ.ಸಿ.ಸಿ. ಅಧ್ಯಕ್ಷರು)

ಸೈನಿಕ ಮೃತನಾಗಿ ಅಂತಿಮ ಯಾತ್ರೆ ನಡೆಯುತಿದ್ದಾಗ ಅದೇ ಮಾರ್ಗದಲ್ಲಿ ಬಂದ ಸಂಸದ ಶಾಸಕರು ಸೌಜನ್ಯಕ್ಕೂ ಮೃತರ ಪಾರ್ಥಿವ ಶರೀರ ದರ್ಶನ ಮಾಡದಿರುವುದು, ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳದಿರುವುದು ಜನಪ್ರತಿನಿಧಿಗಳು, ನಾಯಕತ್ವಕ್ಕೆ ಶೋಭೆಯಲ್ಲ. ಜನಪ್ರತಿನಿಧಿಗಳಾಗಿ ಪಕ್ಷಪಾತ, ಜಾತೀಯತೆ ಮಾಡಿದ ಸಂಸದರು, ಶಾಸಕರು ಇದಕ್ಕೆ ಬೆಲೆ ತೆರಬೇಕಾಗುತ್ತದೆ. ಈಗಲೂ ಕ್ಷಮೆ ಕೇಳಿ, ನೈತಿಕತೆ, ಜವಾಬ್ಧಾರಿ ಇದ್ದರೆ ರಾಜೀನಾಮೆ ನೀಡಿ. – ವಸಂತ ನಾಯ್ಕ ಮಳಲವಳ್ಳಿ ( ಸಿದ್ಧಾಪುರ ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *