ಮಿಲಿಟರಿ ಪೊಲೀಸ್ ದಳದಲ್ಲಿ ತರಬೇತಿ ಮುಗಿಸಿದ 100 ಮಹಿಳೆಯರ ಮೊದಲ ತಂಡ

ಸೇನೆಗೆ ಮತ್ತಷ್ಟು ಮಹಿಳೆಯರು:ಮಿಲಿಟರಿ ಪೊಲೀಸರ ದಳ(ಸಿಎಂಪಿ)ಯ 100 ಮಹಿಳೆಯರ ಮೊದಲ ತಂಡದ ತರಬೇತಿ ಸರಿಸುಮಾರು ಮುಗಿದಿದ್ದು ತೀವ್ರ ತರಬೇತಿ ನಂತರ ಮೇ 8ರಂದು ಲ್ಯಾನ್ಸ್ ನಾಯಕ್ಸ್ ಆಗಿ ಪದವಿ ಪಡೆಯಲಿದ್ದಾರೆ.

The first batch of women cadets in the Corps of Military Police (CMP) take part  in a combat training session at the CMP Centre in Bengaluru

ಬೆಂಗಳೂರು: ಮಿಲಿಟರಿ ಪೊಲೀಸರ ದಳ(ಸಿಎಂಪಿ)ಯ 100 ಮಹಿಳೆಯರ ಮೊದಲ ತಂಡದ ತರಬೇತಿ ಸರಿಸುಮಾರು ಮುಗಿದಿದ್ದು ತೀವ್ರ ತರಬೇತಿ ನಂತರ ಮೇ 8ರಂದು ಲ್ಯಾನ್ಸ್ ನಾಯಕ್ಸ್ ಆಗಿ ಪದವಿ ಪಡೆಯಲಿದ್ದಾರೆ.

ಇದೇ ಮೊದಲ ಬಾರಿಗೆ ಮಿಲಿಟರಿ ಪೊಲೀಸ್ ದಳ ಲ್ಯಾನ್ಸ್ ನಾಯಕ್ಸ್ ಹುದ್ದೆಗೆ ಮಹಿಳೆಯರನ್ನು ನೇಮಕಾತಿ ಮಾಡಲಾಗಿದೆ ಎಂದು ಕಾರ್ಪ್ಸ್ ಆರ್ಮಿ ಏರ್ ಡಿಫೆನ್ಸ್ ನ ಲೆಫ್ಟಿನೆಂಟ್ ಕರ್ನಲ್ ಜುಲೀ ಸಿಂಗ್ ತಿಳಿಸಿದ್ದಾರೆ. ಮಹಿಳೆಯರನ್ನು ಮಿಲಿಟರಿ ಪೊಲೀಸ್ ಪಡೆಯಲ್ಲಿ ಸೇರಿಸಿ ಇನ್ನಷ್ಟು ಪಡೆಯನ್ನು ಬಲಿಷ್ಠಗೊಳಿಸುವುದು ಉದ್ದೇಶವಾಗಿದೆ. 

https://imasdk.googleapis.com/js/core/bridge3.448.1_en.html#goog_362681005

ಅವರು ಪದವೀಧರರಾದ ನಂತರ, ಸಿಪಾಯಿಗಳು – ತರಬೇತಿ ಲ್ಯಾನ್ಸ್ ನಾಯ್ಕ್ಸ್ ಎಂದು ಕರೆಯಲ್ಪಡುವಂತೆ – ದೇಶಾದ್ಯಂತ 11 ಸ್ಥಳಗಳಲ್ಲಿ ವಿವಿಧ ಹುದ್ದೆಗಳನ್ನು ಅವರಿಗೆ ನಿಯೋಜಿಸಲಾಗುತ್ತದೆ. ಮಿಲಿಟರಿ ಕಾರ್ಯಾಚರಣೆಗಳು, ಚೆಕ್ ಪೋಸ್ಟ್‌ಗಳಲ್ಲಿ ಮತ್ತು ಶೋಧ ಕಾರ್ಯಾಚರಣೆಯ ಸಮಯದಲ್ಲಿ ಮಹಿಳೆಯರಿಗೆ ಹೊಡೆಯುವುದು, ಲೈಂಗಿಕ ದೌರ್ಜನ್ಯಗಳಾದ ಅತ್ಯಾಚಾರ, ಕಿರುಕುಳ ಮತ್ತು ಕುಟುಂಬ ಕಿರುಕುಳಗಳಲ್ಲಿ ಲೈಂಗಿಕ ಕಿರುಕುಳದ ತನಿಖೆಯನ್ನು ಲ್ಯಾನ್ಸ್ ನಾಯಕ್ಸ್ ಮಾಡಲಿದ್ದಾರೆ.

ನೇಮಕಾತಿಗೊಂಡವರಲ್ಲಿ 8 ಮಂದಿ ಕರ್ನಾಟಕದವರಾಗಿದ್ದು, 26 ಮಂದಿ ಹರ್ಯಾಣ, 27 ಮಂದಿ ಉತ್ತರ ಪ್ರದೇಶ, ಇಬ್ಬರು ಹಿಮಾಚಲ ಪ್ರದೇಶ, 6 ಮಂದಿ ಕೇರಳಿಗರು, ತಲಾ ಒಬ್ಬರು ದೆಹಲಿ, ಪಂಜಾಬ್ ಮತ್ತು ರಾಜಸ್ತಾನ, ಇಬ್ಬರು ಈಶಾನ್ಯ ಭಾರತದಿಂದ ಹಾಗೂ ಒಂದಿಬ್ಬರು ಬೇರೆ ರಾಜ್ಯದವರಾಗಿದ್ದಾರೆ.

ಹೆಚ್ಚಿನ ಸಿಪಾಯಿಗಳು ನ್ಯಾಷನಲ್ ಕ್ಯಾಡೆಟ್ ಕಾರ್ಪ್ಸ್ (ಎನ್‌ಸಿಸಿ)ನ ಹಿನ್ನೆಲೆ ಹೊಂದಿದ್ದು, 19ರಿಂದ 21 ವರ್ಷದ ನಡುವಿನವರಾಗಿದ್ದಾರೆ. ಎಂಭತ್ತು ಮಹಿಳೆಯರು ಇನ್ನೂ ಪದವಿಪೂರ್ವ ಶಿಕ್ಷಣ ವಿದ್ಯಾರ್ಥಿಗಳಾಗಿದ್ದು, ಅವರು ಸಿಎಂಪಿ ಕೇಂದ್ರ ಮತ್ತು ಶಾಲೆಯಿಂದ ಪದವಿ ಪಡೆದ ನಂತರ ತಮ್ಮ ಅಧ್ಯಯನವನ್ನು ಪೂರ್ಣಗೊಳಿಸಲು ಅವರಿಗೆ ಅನುಮತಿ ನೀಡಲಾಗುತ್ತದೆ.

ನನ್ನ ತಂದೆ 130 ವಾಯು ರಕ್ಷಣಾ ರೆಜಿಮೆಂಟ್‌ನಲ್ಲಿ ಸೇವೆ ಸಲ್ಲಿಸಿದರು. ಅದು ನನ್ನನ್ನು ಸೈನ್ಯಕ್ಕೆ ಸೇರಲು ಪ್ರೇರೇಪಿಸಿತು ಎಂದು ದ್ವಿತೀಯ ವರ್ಷದ ಬಿಎಸ್ಸಿ ಪದವಿ ಓದುತ್ತಿರುವ ಜ್ಯೋತಿ ಎಂ ಹಂಚಿನಮನಿ ಹೇಳಿದ್ದಾರೆ. ಇವರು ಬೈಲಹೊಂಗಲದವರಾಗಿದ್ದಾರೆ. ಸೇನೆಯಲ್ಲಿ ನನ್ನ ತಲೆಕೂದಲು ಕತ್ತರಿಸಬೇಕಾಗಿರುವುದರಿಂದ ಊರಿಗೆ ಹೋದಾಗ ಹಲವರು ನನ್ನನ್ನು ಗುರುತು ಹಿಡಿಯುವುದಿಲ್ಲ ಎನ್ನುತ್ತಾರೆ ಜ್ಯೋತಿ.

ಬೆಳಗಾವಿಯ ಕಾಗವಾಡದ ಅರಿತಿ ತಲ್ವರ್ ಕೂಡ ಬಹಳ ಬೇಗನೆ ತರಬೇತಿಗೆ ಸೇರಿದ್ದಾರೆ. ಎನ್ ಸಿಸಿ ತರಬೇತಿಯಿಂದಾಗಿ ನನಗೆ ಶಾರೀರಿಕ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಲು ಸುಲಭವಾಯಿತು ಎನ್ನುತ್ತಾರೆ ಅವರು. ಅಪರಾಧ ತನಿಖಾ ತರಬೇತಿ ತನಗೆ ಇಷ್ಟವಾಯಿತು ಎನ್ನುತ್ತಾರೆ ಅವರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *