ಮಿಲಿಟರಿ ಪೊಲೀಸ್ ದಳದಲ್ಲಿ ತರಬೇತಿ ಮುಗಿಸಿದ 100 ಮಹಿಳೆಯರ ಮೊದಲ ತಂಡ

ಸೇನೆಗೆ ಮತ್ತಷ್ಟು ಮಹಿಳೆಯರು:ಮಿಲಿಟರಿ ಪೊಲೀಸರ ದಳ(ಸಿಎಂಪಿ)ಯ 100 ಮಹಿಳೆಯರ ಮೊದಲ ತಂಡದ ತರಬೇತಿ ಸರಿಸುಮಾರು ಮುಗಿದಿದ್ದು ತೀವ್ರ ತರಬೇತಿ ನಂತರ ಮೇ 8ರಂದು ಲ್ಯಾನ್ಸ್ ನಾಯಕ್ಸ್ ಆಗಿ ಪದವಿ ಪಡೆಯಲಿದ್ದಾರೆ.

The first batch of women cadets in the Corps of Military Police (CMP) take part  in a combat training session at the CMP Centre in Bengaluru

ಬೆಂಗಳೂರು: ಮಿಲಿಟರಿ ಪೊಲೀಸರ ದಳ(ಸಿಎಂಪಿ)ಯ 100 ಮಹಿಳೆಯರ ಮೊದಲ ತಂಡದ ತರಬೇತಿ ಸರಿಸುಮಾರು ಮುಗಿದಿದ್ದು ತೀವ್ರ ತರಬೇತಿ ನಂತರ ಮೇ 8ರಂದು ಲ್ಯಾನ್ಸ್ ನಾಯಕ್ಸ್ ಆಗಿ ಪದವಿ ಪಡೆಯಲಿದ್ದಾರೆ.

ಇದೇ ಮೊದಲ ಬಾರಿಗೆ ಮಿಲಿಟರಿ ಪೊಲೀಸ್ ದಳ ಲ್ಯಾನ್ಸ್ ನಾಯಕ್ಸ್ ಹುದ್ದೆಗೆ ಮಹಿಳೆಯರನ್ನು ನೇಮಕಾತಿ ಮಾಡಲಾಗಿದೆ ಎಂದು ಕಾರ್ಪ್ಸ್ ಆರ್ಮಿ ಏರ್ ಡಿಫೆನ್ಸ್ ನ ಲೆಫ್ಟಿನೆಂಟ್ ಕರ್ನಲ್ ಜುಲೀ ಸಿಂಗ್ ತಿಳಿಸಿದ್ದಾರೆ. ಮಹಿಳೆಯರನ್ನು ಮಿಲಿಟರಿ ಪೊಲೀಸ್ ಪಡೆಯಲ್ಲಿ ಸೇರಿಸಿ ಇನ್ನಷ್ಟು ಪಡೆಯನ್ನು ಬಲಿಷ್ಠಗೊಳಿಸುವುದು ಉದ್ದೇಶವಾಗಿದೆ. 

https://imasdk.googleapis.com/js/core/bridge3.448.1_en.html#goog_362681005

ಅವರು ಪದವೀಧರರಾದ ನಂತರ, ಸಿಪಾಯಿಗಳು – ತರಬೇತಿ ಲ್ಯಾನ್ಸ್ ನಾಯ್ಕ್ಸ್ ಎಂದು ಕರೆಯಲ್ಪಡುವಂತೆ – ದೇಶಾದ್ಯಂತ 11 ಸ್ಥಳಗಳಲ್ಲಿ ವಿವಿಧ ಹುದ್ದೆಗಳನ್ನು ಅವರಿಗೆ ನಿಯೋಜಿಸಲಾಗುತ್ತದೆ. ಮಿಲಿಟರಿ ಕಾರ್ಯಾಚರಣೆಗಳು, ಚೆಕ್ ಪೋಸ್ಟ್‌ಗಳಲ್ಲಿ ಮತ್ತು ಶೋಧ ಕಾರ್ಯಾಚರಣೆಯ ಸಮಯದಲ್ಲಿ ಮಹಿಳೆಯರಿಗೆ ಹೊಡೆಯುವುದು, ಲೈಂಗಿಕ ದೌರ್ಜನ್ಯಗಳಾದ ಅತ್ಯಾಚಾರ, ಕಿರುಕುಳ ಮತ್ತು ಕುಟುಂಬ ಕಿರುಕುಳಗಳಲ್ಲಿ ಲೈಂಗಿಕ ಕಿರುಕುಳದ ತನಿಖೆಯನ್ನು ಲ್ಯಾನ್ಸ್ ನಾಯಕ್ಸ್ ಮಾಡಲಿದ್ದಾರೆ.

ನೇಮಕಾತಿಗೊಂಡವರಲ್ಲಿ 8 ಮಂದಿ ಕರ್ನಾಟಕದವರಾಗಿದ್ದು, 26 ಮಂದಿ ಹರ್ಯಾಣ, 27 ಮಂದಿ ಉತ್ತರ ಪ್ರದೇಶ, ಇಬ್ಬರು ಹಿಮಾಚಲ ಪ್ರದೇಶ, 6 ಮಂದಿ ಕೇರಳಿಗರು, ತಲಾ ಒಬ್ಬರು ದೆಹಲಿ, ಪಂಜಾಬ್ ಮತ್ತು ರಾಜಸ್ತಾನ, ಇಬ್ಬರು ಈಶಾನ್ಯ ಭಾರತದಿಂದ ಹಾಗೂ ಒಂದಿಬ್ಬರು ಬೇರೆ ರಾಜ್ಯದವರಾಗಿದ್ದಾರೆ.

ಹೆಚ್ಚಿನ ಸಿಪಾಯಿಗಳು ನ್ಯಾಷನಲ್ ಕ್ಯಾಡೆಟ್ ಕಾರ್ಪ್ಸ್ (ಎನ್‌ಸಿಸಿ)ನ ಹಿನ್ನೆಲೆ ಹೊಂದಿದ್ದು, 19ರಿಂದ 21 ವರ್ಷದ ನಡುವಿನವರಾಗಿದ್ದಾರೆ. ಎಂಭತ್ತು ಮಹಿಳೆಯರು ಇನ್ನೂ ಪದವಿಪೂರ್ವ ಶಿಕ್ಷಣ ವಿದ್ಯಾರ್ಥಿಗಳಾಗಿದ್ದು, ಅವರು ಸಿಎಂಪಿ ಕೇಂದ್ರ ಮತ್ತು ಶಾಲೆಯಿಂದ ಪದವಿ ಪಡೆದ ನಂತರ ತಮ್ಮ ಅಧ್ಯಯನವನ್ನು ಪೂರ್ಣಗೊಳಿಸಲು ಅವರಿಗೆ ಅನುಮತಿ ನೀಡಲಾಗುತ್ತದೆ.

ನನ್ನ ತಂದೆ 130 ವಾಯು ರಕ್ಷಣಾ ರೆಜಿಮೆಂಟ್‌ನಲ್ಲಿ ಸೇವೆ ಸಲ್ಲಿಸಿದರು. ಅದು ನನ್ನನ್ನು ಸೈನ್ಯಕ್ಕೆ ಸೇರಲು ಪ್ರೇರೇಪಿಸಿತು ಎಂದು ದ್ವಿತೀಯ ವರ್ಷದ ಬಿಎಸ್ಸಿ ಪದವಿ ಓದುತ್ತಿರುವ ಜ್ಯೋತಿ ಎಂ ಹಂಚಿನಮನಿ ಹೇಳಿದ್ದಾರೆ. ಇವರು ಬೈಲಹೊಂಗಲದವರಾಗಿದ್ದಾರೆ. ಸೇನೆಯಲ್ಲಿ ನನ್ನ ತಲೆಕೂದಲು ಕತ್ತರಿಸಬೇಕಾಗಿರುವುದರಿಂದ ಊರಿಗೆ ಹೋದಾಗ ಹಲವರು ನನ್ನನ್ನು ಗುರುತು ಹಿಡಿಯುವುದಿಲ್ಲ ಎನ್ನುತ್ತಾರೆ ಜ್ಯೋತಿ.

ಬೆಳಗಾವಿಯ ಕಾಗವಾಡದ ಅರಿತಿ ತಲ್ವರ್ ಕೂಡ ಬಹಳ ಬೇಗನೆ ತರಬೇತಿಗೆ ಸೇರಿದ್ದಾರೆ. ಎನ್ ಸಿಸಿ ತರಬೇತಿಯಿಂದಾಗಿ ನನಗೆ ಶಾರೀರಿಕ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಲು ಸುಲಭವಾಯಿತು ಎನ್ನುತ್ತಾರೆ ಅವರು. ಅಪರಾಧ ತನಿಖಾ ತರಬೇತಿ ತನಗೆ ಇಷ್ಟವಾಯಿತು ಎನ್ನುತ್ತಾರೆ ಅವರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *