ಕ್ಷಮೆ ಕೇಳದಿದ್ದರೆ ಪ್ರತಿಭಟನೆ, ಬಿ.ಜೆ.ಪಿ.ಯಲ್ಲಿ ಅಸ್ನೋಟಿಕರ್ ರಿಗೆ ಅವಕಾಶವಿಲ್ಲ

ಆತ್ಮೀಯ ಕೆ. ಜಿ. ನಾಯ್ಕರವರಿಗೆ ಅತೀವ ಪ್ರೇಮಾದರಾಭಿನಪೂರ್ವಕ ಹಾರ್ದಿಕ ಅಭಿನಂದನೆಗಳು. ಬಿಡುವಿಲ್ಲದ ರಾಜಕೀಯ ಜವಾಬ್ದಾರಿಗಳು ಮತ್ತು ಚಟುವಟಿಕೆಗಳ ಜೊತೆಗೆ ಕೊಂಡ್ಲಿ ಶ್ರೀ ಮಾರಿಕಾಂಬೆಯ ಜಾತ್ರಾ ಕಮಿಟಿಯ ಎರಡನೆಯ ಬಾರಿಗೆ ಅಧ್ಯಕ್ಷರಾಗಿ ನೀವು ಯಶಸ್ವಿಯಾಗಿ ನಿರ್ವಹಿಸಿದ ಕಾರ್ಯ/ ಜವಾಬ್ದಾರಿಗಳು, ನಿಮ್ಮ ವೈರಿಗಳೂ ಸಹ ಮೆಚ್ಚುವಂತಿತ್ತು. ನಿಜಕ್ಕೂ ಇದೊಂದು ಅತಿ ಸವಾಲಿನ ಕಾರ್ಯ. ಭಿನ್ನ ಭಿನ್ನ ಮನೋಭಾವದ ಜನರು, ಬೇರೆ ಬೇರೆ ಇಲಾಖೆಗಳು. ಕರೋನಾ ಹಾವಳಿ, ಚಿಕ್ಕ ಪುಟ್ಟ ದೋಷ, ನ್ಯೂನತೆಗಳನ್ನೇ ದೊಡ್ಡದು ಮಾಡಿ ಗಲಾಟೆ ಎಬ್ಬಿಸಲು ಸಿದ್ಧರಾಗಿರುವ ವಿಘ್ನ ಸಂತೋಷಿಗಳು, ಲಾಭವನ್ನೆ ಪ್ರಧಾನವಾಗಿಟ್ಟುಕೊಂಡು ಬಂದ ವ್ಯಾಪಾರಿಗಳು, ಶಿಸ್ತು, ಸ್ವಚ್ಛತಾ ವ್ಯವಸ್ಥೆ, ಕಾಲಕಾಲಕ್ಕೆ ಕ್ರಮಬದ್ಧವಾಗಿ ಆಗಲೇಬೇಕಾದ ವಿನಿಯೋಗಗಳು. ಸಂಪ್ರದಾಯಗಳು, ಜನರ ಟೀಕೆ ಟಿಪ್ಪಣೆಗಳು ಇವೇ ಮುಂತಾದ ಎಲ್ಲ ವಿಷಯಗಳಲ್ಲೂ ಸಮರ್ಪಕವಾದ, ದ್ರಢ ಹಾಗೂ ಶೀಘ್ರ ನಿರ್ಣಯಗಳನ್ನು ತೆಗೆದುಕೊಂಡು, ಅಹೋರಾತ್ರಿ ಕಾರ್ಯ ತತ್ಪರರಾಗಿದ್ದುಕೊಂಡು “ಜಾತ್ರೆ ಅತ್ಯುತ್ತಮ ರೀತಿಯಲ್ಲಿ ಸಂಪನ್ನಗೊಂಡಿತು” ಎಂಬ ಸತ್ಕೀರ್ತಿಗೆ ನೀವು ಪಾತ್ರರಾಗಿರುವಿರಿ.

ತನ್ಮೂಲಕ ಈ ಊರಿಗೆ ಊರೇ ಹೆಮ್ಮೆ ಪಡುವಂತೆ ಮಾಡಿರುವಿರಿ. ಈ ಕಾರ್ಯದಲ್ಲಿ ಬಹುಶಃ ಈ ಸಂಘಟನೆಯ ಎಲ್ಲ ಸದಸ್ಯರೂ. ಮಾರಿಕಾಂಬೆ ದೇವಾಲಯದ ಮಾನ್ಯ ಮೊಕ್ತೇಸರರ. ಆದಿಯಾಗಿ ಎಲ್ಲ ಸದಸ್ಯರು, ಉತ್ಸಾಹೀ ಸ್ವಯಂಸೇವಕರು, ಕಾರ್ಯಕರ್ತರು ಎಲ್ಲರೂ ತಮ್ಮೊಂದಿಗೆ ಜಾತ್ರೆಯ ಯಶಸ್ಸಿಗೆ ಶಕ್ತಿಮೀರಿ ಕೈಜೋಡಿಸಿದ್ದಾರೆ, ಶ್ಲಾಘನೀಯ ಸೇವೆ ಮಾಡಿದ್ದಾರೆ. ತಮಗೂ, ಅವರೆಲ್ಲರಿಗೂ ವೈಯಕ್ತಿಕವಾಗಿ ಹಾಗೂ ಸಾರ್ವಜನಿಕರ ಪರವಾಗಿ ಹಾರ್ದಿಕ ಅಭಿನಂದನೆ, ಶುಭಾಶಯಗಳನ್ನು ಈ ಮೂಲಕ ಸಲ್ಲಿಸುತ್ತಿದ್ದೇನೆ. ತಾಯಿ ಮಾರಿಕಾಂಬೆ, ಸರ್ವರ ಇಷ್ಟಾರ್ಥಗಳನ್ನು ಈಡೇರಿಸಿ ಲೋಕಕ್ಕೇ ಮಂಗಳವನ್ನು ಉಂಟು ಮಾಡಲಿ ಎಂದು ಪ್ರಾರ್ಥಿಸುತ್ತೇನೆ. —- ಆರ್. ಜಿ. ಪೈ, ಮಂಜೈನ್

ಆನಂದ ಅಸ್ನೋಟಿಕರ್ ರನ್ನು ಬಿ.ಜೆ.ಪಿ.ಗೆ ತಂದು ಜನಪ್ರತಿನಿಧಿ ಮಾಡುವ ದರ್ದು ಬಿ.ಜೆ.ಪಿ.ಗೆ ಇಲ್ಲ ಎಂದಿರುವ ರಾಜ್ಯ ಬಿ.ಜೆ.ಪಿ. ಕಾರ್ಯಕಾರಿಣಿ ಸದಸ್ಯ ಕೆ.ಜಿ.ನಾಯ್ಕ ಹಣಜಿಬೈಲ್ ಆನಂದ ಅಸ್ನೋಟಿಕರ್ ಸಂಸದರ ಬಗ್ಗೆ ಆಡಿರುವ ಮಾತು ಹಿಂಪಡೆದು ಕ್ಷಮೆ ಯಾಚಿಸದಿದ್ದರೆ ಅವರ ವಿರುದ್ಧ ಬಿ.ಜೆ.ಪಿ.ಯಿಂದ ಪ್ರತಿಭಟಿಸುವುದಾಗಿ ಎಚ್ಚರಿಸಿದ್ದಾರೆ.

ಸಿದ್ಧಾಪುರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಈ ವಿಷಯ ತಿಳಿಸಿರುವ ಅವರು ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಮೇಲೆ ಅವಹೇಳನಕಾರಿ ಮಾತನಾಡಿರುವುದು ಅವರಿಗೆ ಜೀವಬೆದರಿಕೆ ಕರೆ ಬಂದಿರುವುದು ದುರದೃಷ್ಟಕರ ಸರ್ಕಾರ ಕೊಲೆ ಬೆದರಿಕೆ ಹಾಕಿದವರನ್ನು ಪತ್ತೆ ಮಾಡಿ ಸೂಕ್ತಕ್ರಮ ಜರುಗಿಸಬೇಕು. ಆನಂದ ಅಸ್ನೋಟಿಕರ್ ತಮ್ಮ ನಡವಳಿಕೆ ತಿದ್ದಿಕೊಳ್ಳಬೇಕು ಎಂದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ...

ಕಾಗೇರಿ ವ್ಯಂಗ್ಯಕ್ಕೆ ಕಾಂಗ್ರೆಸ್‌ ಉತ್ತರ……! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-04-

ಬಿ.ಜೆ.ಪಿ. ಮಟ್ಟಿಗೆ ಉತ್ತರ ಕನ್ನಡದ ವರಿಷ್ಠರಾದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಧ್ಯಮಗೋಷ್ಠಿ ನಡೆಸುವುದರಲ್ಲಿ ಮಾಧ್ಯಮಗಳಿಗೆ ಬೇಕಾದಷ್ಟೇ ಚುಟುಕಾಗಿ ಉತ್ತರಿಸುವುದರಲ್ಲಿ ನಿ಼ಷ್ಣಾತರು. ಆಗಾಗ ಮಾಧ್ಯಮಗೋಷ್ಠಿ...

ನಾಯಕರಿಗೆ ಇಂಬು, ಕಾರ್ಯಕರ್ತರಿಗೆ ಚೊಂಬು!!! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-03-

ಬಿ.ಜೆ.ಪಿ. ಸೋಲಿಸಲು ಸಾಧ್ಯವಿಲ್ಲ, ಕಾಂಗ್ರೆಸ್‌ ಗೆ ಅಧಿಕಾರವಿಲ್ಲದೆ ಅಲ್ಲಿಯ ಕಾರ್ಯಕರ್ತರು ಅನಿವಾರ್ಯವಾಗಿ ಬಿ.ಜೆ.ಪಿ. ಸೇರುತ್ತಾರೆ. ಹೀಗಾದರೆ ನೀವೆಲ್ಲಾ ಕಾಂಗ್ರೆಸ್‌ ನಲ್ಲಿದ್ದು ಏನು ಪ್ರಯೋಜನ? ಎಂದು...

ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! part-02- ವೀಶ್ವೇಶ್ವರ ಹೆಗಡೆಗೆ ಮೃಧುವಾಗೇ ತಿವಿಯುತ್ತಿರುವ ಗ್ಯಾರಂಟಿಯಣ್ಣ!

ಮೇಲ್ವರ್ಗದ ಓಲೈಕೆ, ವೈದಿಕ ತುಷ್ಟೀಕರಣಗಳ ಬಿ.ಜೆ.ಪಿ. ಅನಿವಾರ್ಯವಾದಾಗ, ಮೇಲ್ನೋಟಕ್ಕೆ ಪ್ರದರ್ಶನಕ್ಕೆ ಅಹಿಂದ್‌ ಗಳನ್ನು ಬಳಸುವುದನ್ನು ಬಿಟ್ಟರೆ ಅದು ತನ್ನ ಅಜೆಂಡಾ ಉಳ್ಳವರ ಪರ ನೀತಿಯನ್ನು...

don,t do it- ಮಗುವಿನೊಂದಿಗೆ ಪೋಷಕರ ಅಪಾಯಕಾರಿ ಸೆಲ್ಫಿ; ಸ್ಮಾರ್ಟ್ ಸಿಸಿಟಿವಿಯಿಂದ ತಪ್ಪಿದ ಸಂಭಾವ್ಯ ದುರಂತ!

ಗೋಕರ್ಣ: ಪೊಲೀಸರ ಈ ಮುನ್ನೆಚ್ಚರಿಕಾ ಕ್ರಮ ಗೋಕರ್ಣದಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ಪೊಲೀಸರು ತಮ್ಮನ್ನು ಕ್ಯಾಮರಾ ಮೂಲಕ ನೋಡುತ್ತಿದ್ದಾರೆ ಎಂದು ದಂಪತಿಗೆ ತಿಳಿದಿರಲಿಲ್ಲ. ಮಗುವಿನೊಂದಿಗೆ ಪೋಷಕರ...

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ ಮಾತು….. ಬೆoಗಳೂರಿನ ಚಿನ್ನಸ್ವಾಮಿ ಕ್ರೀಡಾoಗಣ ದಲ್ಲಿ ಕಲ್ತುಳಿತಕ್ಕೆ ಒಳಗಾಗಿ ಜೀವತೆತ್ತ ಅಕ್ಷತಾ ಪೈ ಶವ ಸಿದ್ಧಾಪುರಕ್ಕೆ ಆಗಮಿಸಿದೆ. ಮೃತ ಅಕ್ಷತಾ ಪತಿ ಆಶಯ ನಿನ್ನೆ ಅಲ್ಲಿದ್ದರು. ನಿನ್ನೆಯ ಘಟನೆಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *