ಕ್ಷಮೆ ಕೇಳದಿದ್ದರೆ ಪ್ರತಿಭಟನೆ, ಬಿ.ಜೆ.ಪಿ.ಯಲ್ಲಿ ಅಸ್ನೋಟಿಕರ್ ರಿಗೆ ಅವಕಾಶವಿಲ್ಲ

ಆತ್ಮೀಯ ಕೆ. ಜಿ. ನಾಯ್ಕರವರಿಗೆ ಅತೀವ ಪ್ರೇಮಾದರಾಭಿನಪೂರ್ವಕ ಹಾರ್ದಿಕ ಅಭಿನಂದನೆಗಳು. ಬಿಡುವಿಲ್ಲದ ರಾಜಕೀಯ ಜವಾಬ್ದಾರಿಗಳು ಮತ್ತು ಚಟುವಟಿಕೆಗಳ ಜೊತೆಗೆ ಕೊಂಡ್ಲಿ ಶ್ರೀ ಮಾರಿಕಾಂಬೆಯ ಜಾತ್ರಾ ಕಮಿಟಿಯ ಎರಡನೆಯ ಬಾರಿಗೆ ಅಧ್ಯಕ್ಷರಾಗಿ ನೀವು ಯಶಸ್ವಿಯಾಗಿ ನಿರ್ವಹಿಸಿದ ಕಾರ್ಯ/ ಜವಾಬ್ದಾರಿಗಳು, ನಿಮ್ಮ ವೈರಿಗಳೂ ಸಹ ಮೆಚ್ಚುವಂತಿತ್ತು. ನಿಜಕ್ಕೂ ಇದೊಂದು ಅತಿ ಸವಾಲಿನ ಕಾರ್ಯ. ಭಿನ್ನ ಭಿನ್ನ ಮನೋಭಾವದ ಜನರು, ಬೇರೆ ಬೇರೆ ಇಲಾಖೆಗಳು. ಕರೋನಾ ಹಾವಳಿ, ಚಿಕ್ಕ ಪುಟ್ಟ ದೋಷ, ನ್ಯೂನತೆಗಳನ್ನೇ ದೊಡ್ಡದು ಮಾಡಿ ಗಲಾಟೆ ಎಬ್ಬಿಸಲು ಸಿದ್ಧರಾಗಿರುವ ವಿಘ್ನ ಸಂತೋಷಿಗಳು, ಲಾಭವನ್ನೆ ಪ್ರಧಾನವಾಗಿಟ್ಟುಕೊಂಡು ಬಂದ ವ್ಯಾಪಾರಿಗಳು, ಶಿಸ್ತು, ಸ್ವಚ್ಛತಾ ವ್ಯವಸ್ಥೆ, ಕಾಲಕಾಲಕ್ಕೆ ಕ್ರಮಬದ್ಧವಾಗಿ ಆಗಲೇಬೇಕಾದ ವಿನಿಯೋಗಗಳು. ಸಂಪ್ರದಾಯಗಳು, ಜನರ ಟೀಕೆ ಟಿಪ್ಪಣೆಗಳು ಇವೇ ಮುಂತಾದ ಎಲ್ಲ ವಿಷಯಗಳಲ್ಲೂ ಸಮರ್ಪಕವಾದ, ದ್ರಢ ಹಾಗೂ ಶೀಘ್ರ ನಿರ್ಣಯಗಳನ್ನು ತೆಗೆದುಕೊಂಡು, ಅಹೋರಾತ್ರಿ ಕಾರ್ಯ ತತ್ಪರರಾಗಿದ್ದುಕೊಂಡು “ಜಾತ್ರೆ ಅತ್ಯುತ್ತಮ ರೀತಿಯಲ್ಲಿ ಸಂಪನ್ನಗೊಂಡಿತು” ಎಂಬ ಸತ್ಕೀರ್ತಿಗೆ ನೀವು ಪಾತ್ರರಾಗಿರುವಿರಿ.

ತನ್ಮೂಲಕ ಈ ಊರಿಗೆ ಊರೇ ಹೆಮ್ಮೆ ಪಡುವಂತೆ ಮಾಡಿರುವಿರಿ. ಈ ಕಾರ್ಯದಲ್ಲಿ ಬಹುಶಃ ಈ ಸಂಘಟನೆಯ ಎಲ್ಲ ಸದಸ್ಯರೂ. ಮಾರಿಕಾಂಬೆ ದೇವಾಲಯದ ಮಾನ್ಯ ಮೊಕ್ತೇಸರರ. ಆದಿಯಾಗಿ ಎಲ್ಲ ಸದಸ್ಯರು, ಉತ್ಸಾಹೀ ಸ್ವಯಂಸೇವಕರು, ಕಾರ್ಯಕರ್ತರು ಎಲ್ಲರೂ ತಮ್ಮೊಂದಿಗೆ ಜಾತ್ರೆಯ ಯಶಸ್ಸಿಗೆ ಶಕ್ತಿಮೀರಿ ಕೈಜೋಡಿಸಿದ್ದಾರೆ, ಶ್ಲಾಘನೀಯ ಸೇವೆ ಮಾಡಿದ್ದಾರೆ. ತಮಗೂ, ಅವರೆಲ್ಲರಿಗೂ ವೈಯಕ್ತಿಕವಾಗಿ ಹಾಗೂ ಸಾರ್ವಜನಿಕರ ಪರವಾಗಿ ಹಾರ್ದಿಕ ಅಭಿನಂದನೆ, ಶುಭಾಶಯಗಳನ್ನು ಈ ಮೂಲಕ ಸಲ್ಲಿಸುತ್ತಿದ್ದೇನೆ. ತಾಯಿ ಮಾರಿಕಾಂಬೆ, ಸರ್ವರ ಇಷ್ಟಾರ್ಥಗಳನ್ನು ಈಡೇರಿಸಿ ಲೋಕಕ್ಕೇ ಮಂಗಳವನ್ನು ಉಂಟು ಮಾಡಲಿ ಎಂದು ಪ್ರಾರ್ಥಿಸುತ್ತೇನೆ. —- ಆರ್. ಜಿ. ಪೈ, ಮಂಜೈನ್

ಆನಂದ ಅಸ್ನೋಟಿಕರ್ ರನ್ನು ಬಿ.ಜೆ.ಪಿ.ಗೆ ತಂದು ಜನಪ್ರತಿನಿಧಿ ಮಾಡುವ ದರ್ದು ಬಿ.ಜೆ.ಪಿ.ಗೆ ಇಲ್ಲ ಎಂದಿರುವ ರಾಜ್ಯ ಬಿ.ಜೆ.ಪಿ. ಕಾರ್ಯಕಾರಿಣಿ ಸದಸ್ಯ ಕೆ.ಜಿ.ನಾಯ್ಕ ಹಣಜಿಬೈಲ್ ಆನಂದ ಅಸ್ನೋಟಿಕರ್ ಸಂಸದರ ಬಗ್ಗೆ ಆಡಿರುವ ಮಾತು ಹಿಂಪಡೆದು ಕ್ಷಮೆ ಯಾಚಿಸದಿದ್ದರೆ ಅವರ ವಿರುದ್ಧ ಬಿ.ಜೆ.ಪಿ.ಯಿಂದ ಪ್ರತಿಭಟಿಸುವುದಾಗಿ ಎಚ್ಚರಿಸಿದ್ದಾರೆ.

ಸಿದ್ಧಾಪುರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಈ ವಿಷಯ ತಿಳಿಸಿರುವ ಅವರು ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಮೇಲೆ ಅವಹೇಳನಕಾರಿ ಮಾತನಾಡಿರುವುದು ಅವರಿಗೆ ಜೀವಬೆದರಿಕೆ ಕರೆ ಬಂದಿರುವುದು ದುರದೃಷ್ಟಕರ ಸರ್ಕಾರ ಕೊಲೆ ಬೆದರಿಕೆ ಹಾಕಿದವರನ್ನು ಪತ್ತೆ ಮಾಡಿ ಸೂಕ್ತಕ್ರಮ ಜರುಗಿಸಬೇಕು. ಆನಂದ ಅಸ್ನೋಟಿಕರ್ ತಮ್ಮ ನಡವಳಿಕೆ ತಿದ್ದಿಕೊಳ್ಳಬೇಕು ಎಂದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *