ಅವಳೀ ಶಿಶುಗಳ ತಾಯಿಯ ಆತ್ಮಹತ್ಯೆ! & ಭಟ್ಕಳದಲ್ಲಿ ಸಾರಿಗೆ ನೌಕರರ ಗಲಾಟೆ 5 ಕ್ಕಿಂತ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಮೂರು ತಿಂಗಳ ಅವಳಿ ಶಿಶುಗಳ ತಾಯಿ ಮಾನಸಿಕ ಕ್ಷೋಭೆಗೊಳಗಾಗಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಸಿದ್ಧಾಪುರ ಬೇಡ್ಕಣಿಯಲ್ಲಿ ನಡೆದಿದೆ. ಅಕ್ಷತಾ ಕೋಂ ರಮೇಶ್ ನಾಯ್ಕ ಕೋಲಶಿರ್ಸಿಯ ಮಹಿಳೆಯಾಗಿದ್ದು ತನ್ನ ತವರು ಮನೆ ಬೇಡ್ಕಣಿಯಲ್ಲಿ ಮಂಗಳವಾರ ಸರ್ಕಾರಿ ಬಾವಿಗೆ ಹಾರಿ ಪ್ರಾಣತೆತ್ತ 27 ವರ್ಷದ ದುರ್ದೈವಿಯಾಗಿದ್ದಾಳೆ.

ಹಿಂದಿನ ವರ್ಷ ಮೇ ತಿಂಗಳಲ್ಲಿ ಮದುವೆಯಾಗಿದ್ದ ಈಕೆ ಗಂಡನಮನೆ ಕೋಲಶಿರ್ಸಿಯಿಂದ ತವರು ಮನೆ ಬೇಡ್ಕಣಿಗೆ ತೆರಳಿ 6 ತಿಂಗಳು ಕಳೆದಿದ್ದವು. ಕಳೆದ ಮೂರು ತಿಂಗಳ ಹಿಂದೆ ಅವಳಿ ಮಕ್ಕಳಿಗೆ ಜನ್ಮನೀಡಿದ್ದ ತಾಯಿ ಅಕ್ಷತಾ ಕೆಲವು ದಿವಸಗಳ ಹೊಂದೆ ತಲೆಸುತ್ತಿನ ಕಾರಣಕ್ಕೆ ಖಿನ್ನತೆಗೆ ಒಳಗಾಗಿದ್ದಳು. ಯುಗಾದಿಯ ರಾತ್ರಿ 8ರಿಂದ 9 ಘಂಟೆಯ ಅವಧಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಭಟ್ಕಳದಲ್ಲಿ ಸಾರಿಗೆ ನೌಕರರ ಗಲಾಟೆ 5 ಕ್ಕಿಂತ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು- ಸಾರಿಗೆ ಮುಷ್ಕರದ ಅವಧಿಯಲ್ಲಿ ಸೇವೆಗೆ ಹಾಜರಾದ ಬಗ್ಗೆ ಆಕ್ಷೇಪಿಸಿ ಭಟ್ಕಳ ಘಟಕ ವ್ಯವಸ್ಥಾಪಕ ಜನಾರ್ಧನ್ ಶಂಕರ ದಿವಾಕರ್ ಮೇಲೆ ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿದ ಆರೋಪದ ಮೇಲೆ ಎನ್.ಡಬ್ಲೂ.ಕೆ.ಎಸ್.ಆರ್.ಟಿ.ಸಿ. ಸಿಬ್ಬಂದಿಗಳಾದ 5 ಕ್ಕೂ ಹೆಚ್ಚು ಜನರ ಮೇಲೆ ಭಟ್ಕಳದಲ್ಲಿ ಪ್ರಕರಣ ದಾಖಲಾಗಿದೆ.

ವಿಜಯಕುಮಾರ ಡುಣಗೆ ಆನಂದ ಮತ್ತು ಮಹೇಶ್ ನಾಯ್ಕ, ವಸಂತ ಮತ್ತು ಸತೀಶ್ ನಾಯ್ಕ ಸೇರಿದ ಇತರರು ಯುಗಾದಿಯ ದಿನ ಸಾರಿಗೆ ನೌಕರರ ಸಂಘಟನೆಯ ಮುಷ್ಕರದ ಕರೆ ನಡುವೆಯೂ ಸೇವೆಗೆ ಹಾಜರಾಗಿ ಸಾರಿಗೆ ನೌಕರರ ಸಾಮೂಹಿಕ ತೀರ್ಮಾನಕ್ಕೆ ವಿರುದ್ಧವಾಗಿ ವರ್ತಿಸಿದ ತಮ್ಮ ಹಿರಿಯ ಅಧಿಕಾರಿಯ ಮೇಲೆಯೇ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಬಗ್ಗೆ ಆರೋಪಿಸಿ, ಪ್ರಕರಣ ದಾಖಲಿಸಲಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *