Bjp ಭೀಮಯಾತ್ರೆ – ಸಹೋದರರಿಬ್ಬರ ರಾಜಕೀಯ ಜೀವನಕ್ಕೆ ಅಂತ್ಯ ಹಾಡಲು ಶ್ರಮಿಸುತ್ತಿದ್ದೀರಾ?

ಸಿದ್ದಾಪುರ: ಅಂಬೇಡ್ಕರ್ ತತ್ವ ಸಿದ್ದಾಂತ ಅಳವಡಿಸಿಕೊಳ್ಳುವಂತೆ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಕೃಷ್ಣಮೂರ್ತಿ ಮಡಿವಾಳ ಕಡಕೇರಿ ಕರೆ ನೀಡಿದರು
ಅವರು ಉತ್ತರ ಕನ್ನಡ ಬಿಜೆಪಿ ಎಸ್ ಸಿ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ಅಂಬೇಡ್ಕರ್ ಬೀಮ ಯಾತ್ರೆ ಉದ್ದೇಶಿಸಿ ರಾಮಕೃಷ್ಣ ಹೆಗಡೆ ವೃತ್ತದಲ್ಲಿ ಮಾತನಾಡಿದರು.

ಅಂಬೇಡ್ಕರ್ ಕೊಡುಗೆಗಳು ನಿರಂತರವಾಗಿ ಉಳಿಯಬೇಕಾದರೆ ಜಯಂತಿಗಳನ್ನು ನಿರಂತರವಾಗಿ ಮಾಡುತ್ತಿರಬೇಕು ವಿನೂತನ ಕಾರ್ಯಕ್ರಮದೊಂದಿಗೆ ಎಸ್ ಸಿ ಮೋರ್ಚಾ ಅಂಬೇಡ್ಕರವರ ನೆನಪನ್ನ ಹಸಿರಾಗಿಸಿದೆ .ಇಂದು ಮೋದಿ ಇಡೀ ಜಗತ್ತು ಭಾರತವನ್ನು ನೋಡುವ ರೀತಿ ಮಾಡಿದ್ದಾರೆ ಅದೇ ರೀತಿ 130 ವರ್ಷಗಳ ಹಿಂದೆ ಜಗತ್ತು ಭಾರತದತ್ತ ನೋಡುವಂತೆ ಅಂಬೇಡ್ಕರ್ ಅವರು ಮಾಡಿದ್ದಾರೆ ಇದು ಪ್ರೇರಣಾದಾಯಕ ಎಂದರು
ಪಟ್ಟಣ ಪಂಚಾಯತಿ ಸದಸ್ಯ ಗುರು ಶಾನಬಾಗ ಮಾತನಾಡಿದರು.
ಬಿಜೆಪಿ ಉತ್ತರ ಕನ್ನಡ ಎಸ್ ಸಿ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ಅಂಬೇಡ್ಕರ್ ಭೀಮಯಾತ್ರೆ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮೂಲಕ ಸಿದ್ದಾಪುರ ದಿ. ರಾಮಕೃಷ್ಣ ವ್ರತ್ತಕ್ಕೆ ಆಗಮಿಸಿತು. , ಬಿಜೆಪಿ ಎಸ್ ಸಿ ಮೋರ್ಚಾ ಅಧ್ಯಕ್ಷ ಉದಯ ಬಶೆಟ್ಟಿ, ಕಾರ್ಯದರ್ಶಿ ನಂದನ ಬೋರಕರ, ಎಸ್ ಕೆ ಮೇಸ್ತ, ಪಟ್ಟಣ ಪಂಚಾಯತ ಅಧ್ಯಕ್ಷೆ,ಚಂದ್ರಕಲಾ ನಾಯ್ಕ, ಉಪಾಧ್ಯಕ್ಷ ರವಿಕುಮಾರ್ ನಾಯ್ಕ,ಸ್ಥಾಯಿ ಸಮಿತಿ ಅಧ್ಯಕ್ಷ ವಿನಯ ಹೊನ್ನೇಗುಂಡಿ,ಸದಸ್ಯರಾದ ಮಾರುತಿ ನಾಯ್ಕ,ಯಶೋದಾ ನಾಯ್ಕ,ಮಾಜಿ ಅಧ್ಯಕ್ಷೆ ಸುಮನಾ ಕಾಮತ್ ಉಪಸ್ಥಿತರಿದ್ದರು.

ಕನಕಪುರದ ಸಹೋದರರಿಬ್ಬರ ರಾಜಕೀಯ ಜೀವನಕ್ಕೆ ಅಂತ್ಯ ಹಾಡಲು ಶ್ರಮಿಸುತ್ತಿದ್ದೀರಾ?’

ವಲಸೆ ನಾಯಕ ಸಿದ್ದರಾಮಯ್ಯ ಅವರ ಬಣದೊಂದಿಗೆ ನೀವೂ ಸೇರಿಕೊಂಡು ಕನಕಪುರದ ಸಹೋದರರಿಬ್ಬರ ರಾಜಕೀಯ ಜೀವನಕ್ಕೆ ಅಂತ್ಯ ಹಾಡಲು ಶ್ರಮಿಸುತ್ತಿದ್ದೀರಾ? ಎಂದು ರಣದೀಪ್ ಸುರ್ಜೇವಾಲಾ ಗೆ ಬಿಜೆಪಿ ಟಾಂಗ್ ನೀಡಿದೆ.

Dk suresh and dk shivakumar

ಬೆಂಗಳೂರು: ವಲಸೆ ನಾಯಕ ಸಿದ್ದರಾಮಯ್ಯ ಅವರ ಬಣದೊಂದಿಗೆ ನೀವೂ ಸೇರಿಕೊಂಡು ಕನಕಪುರದ ಸಹೋದರರಿಬ್ಬರ ರಾಜಕೀಯ ಜೀವನಕ್ಕೆ ಅಂತ್ಯ ಹಾಡಲು ಶ್ರಮಿಸುತ್ತಿದ್ದೀರಾ? ಎಂದು ರಣದೀಪ್ ಸುರ್ಜೇವಾಲಾ ಗೆ ಬಿಜೆಪಿ ಟಾಂಗ್ ನೀಡಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ  ಸಂಸದ ಡಿಕೆ ಸುರೇಶ್‌ ಸಾಮರ್ಥ್ಯದ ಮೇಲೆ ನಿಮಗೆ ಅನುಮಾನ ಬರಲು ಕಾರಣವೇನು? ಎಂದು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಪ್ರಶ್ನಿಸಿದೆ.

ಸತೀಶ್ ಜಾರಕಿಹೊಳಿ ಬೆಳಗಾವಿಯಲ್ಲಿ ಗೆದ್ದು ಸಂಸದರಾದರೆ ಬಿಜೆಪಿ ಸಂಸದರಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುಂದೆ ತಲೆಭಾಗಿ ಬೇಡುವುದಿಲ್ಲ ಎಂದು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಸುರ್ಜೇವಾಲ ಹೇಳಿಕೆ ನೀಡಿದ್ದರು.

ಇದಕ್ಕೆ ಟ್ವಿಟ್ಟರ್‌ನಲ್ಲಿ ಟಾಂಗ್ ನೀಡಿರುವ ಬಿಜೆಪಿ, ನಿಮ್ಮ ಮಾತಿನ ಪ್ರಕಾರ ಕನಕಪುರದ ಮಹಾನಾಯಕನ ಸಹೋದರ ಡಿಕೆ ಸುರೇಶ್ ಅಸಮರ್ಥರೇ!? ಡಿಕೆ ಸುರೇಶ್‌ ಅವರ ಸಾಮರ್ಥ್ಯದ ಮೇಲೆ ನಿಮಗೆ ಅನುಮಾನ ಬರಲು ಕಾರಣವೇನು? ಎಂದು ಲೇವಡಿ ಮಾಡಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *