Lr act -ಭೂಮಿ ಹಕ್ಕಿನ ಪಯಣ…. ಜಿ.ಟಿ.ಸತ್ಯನಾರಾಯಣ ಬರಹ

ನಮ್ಮವರ ಜತೆ ಭೂಮಿ ಹಕ್ಕಿನ ಪಯಣ….

ಈಗ ಒಂದು ವರ್ಷಕೂ ಹಿಂದೆ 94 ಸಿ ಅಡಿಯಲ್ಲಿ ನಮ್ಮ ಊರಿನ ಹನುಮ ಲಮಾಣಿ ಸೇರಿ 7 ಕುಟುಂಬಗಳು ಅರ್ಜಿ ಸಲ್ಲಿಸಿದ್ದರು. ಅವರಿಗೆ ಹಕ್ಕು ಪತ್ರ ದೊರಕಿರಲಿಲ್ಲ. ಆದರೆ ಈಚೆಗೆ ವಿಲೇವಾರಿಯಾಗದೇ ಉಳಿದಿದ್ದ ಸಾಕಷ್ಟು ಕಡತಗಳನ್ನು ಸಾಗರದ ನೂತನ ತಹಸೀಲ್ದಾರ್ ಚಂದ್ರಶೇಖರ್ ಸಹಿ ಹಾಕಿ ವಿಲೇವಾರಿ ಮಾಡಿದ್ದಾರೆ. ಸಾಗರ ಶಾಸಕರು ಹಕ್ಕು ಪತ್ರ ವಿತರಣೆಗೆ ಕೋವಿಡ್ ಕಾರಣಕ್ಕೆ ಮೊನ್ನೆ ಮೊನ್ನೆ ಸಾಂಕೇತಿಕವಾಗಿ ವಿತರಣೆ ಮಾಡಿದ್ದರು.

ಮಾಹಿತಿ ತಿಳಿದುಕೊಂಡು ನಾನು ನಮ್ಮೂರಿನ ಈ ಕುಟುಂಬಗಳಿಗೆ ಮಾಹಿತಿ ನೀಡಿ ಈ ದಿನ ಸಮಯ ನಿಗದಿ ಮಾಡಿಕೊಂಡು ಅಧಿಕಾರಿಗಳಿಗೆ ಮುನ್ನ ಮಾಹಿತಿ ನೀಡಿ ಈಗ ಹಕ್ಕು ಪತ್ರವನ್ನ ಕಂದಾಯ ಇಲಾಖೆ ಅಧಿಕಾರಿಗಳಿಂದ ಪಡೆದರು. ಈ ಹಕ್ಕು ಪತ್ರ ಪಟ್ಟಿಯಲ್ಲಿ ನನ್ನದೂ ಒಂದು ಇತ್ತು ಎನ್ನುವುದು ಸತ್ಯ.ಒಂದು ಅಡಿ ಭೂಮಿಯ ಒಡೆತನ ಹೊಂದಿರದ ಹನುಮ ಲಮಾಣಿ, ಗಣಪತಿ, ಮಹಾಬಲೇಶ್ವರ, ಜಯಮ್ಮ, ಶಿವರಾಮ, ಫಿಲಿಪ್ ರವರಿಗೆ ತಮ್ಮ ವಾಸದ ಮನೆ ಹಕ್ಕು ಪತ್ರ ಪಡೆದ ಖುಷಿಗೆ ಜತೆಯಾದ ಸಾಕ್ಷಿಯಾದ ಕ್ಷಣ ಇದು. ನಮ್ಮ ಕಂದಾಯ ಅಧಿಕಾರಿ ಮಂಜುನಾಥ್, ಗ್ರಾಮ ಲೆಕ್ಕಿಗರಾದ ರಾಘವೇಂದ್ರ ಮತ್ತು ಸಹಾಯಕರಾದ ಶ್ರೀಕಾಂತ್ ಮತ್ತು ಬಸವರಾಜ ಈ ಸೇವೆಯಲ್ಲಿ ಹೆಚ್ಚು ಮುತುವರ್ಜಿ ವಹಿಸಿರುವುದು ನಮಗೆ ಖುಷಿ ತಂದಿದೆ.

ಮಾನ್ಯ ಶಾಶಕರು ಹಕ್ಕು ಪತ್ರ ಶೀಘ್ರ ವಿಲೇವಾರಿಗೆ ಸೂಚನೆ ನೀಡಿರುವುದು ಇಲ್ಲಿ ಕೆಲಸ ಮಾಡಿದೆ. ಶಾಸಕರನ್ನ ಅಭಿನಂದಿಸುವೆ. ಮಾನ್ಯ ಶಾಸಕರಿಗೆ ನನ್ನದೊಂದು ವಿಶೇಷ ವಿನಂತಿ. ಶರಾವತಿ ನದಿ ದಂಡೆಯ ಬಹುತೇಕ ಗ್ರಾಮಗಳಲ್ಲಿ 94 ಸಿ ಹಕ್ಕು ಪತ್ರ ಕೊಡಲು ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯ ಜಂಟಿ ಸರ್ವೇಯ ಅಗತ್ಯ ಇದೆ. ಉದಾಹರಣೆಗೆ ತುಮರಿ ಗ್ರಾಮ ಪಂಚಾಯಿತಿಯ ವಳಗೆರೆ, ಕಳೂರು, ಚದರವಳ್ಳಿ ಗ್ರಾಮಗಳ ಸುಮಾರು 550 ಅರ್ಜಿ ವಿಲೇವಾರಿ ಆಗದೇ ಉಳಿದಿದೆ. ಇದಕ್ಕೆ ಕಾರಣ 1970 ರಲ್ಲಿ ಮಾಡಿರುವ ವನ್ಯಜೀವಿ ವಲಯ ನೋಟಿಫಿಕೇಶನ್ ತೊಡಕಗಳು. ಒಂದು ಗ್ರಾಮದಲ್ಲಿ ಒಂದಿಷ್ಟು ಭಾಗ ಅರಣ್ಯ ಬಂದರೂ ಜಂಟಿ ಸರ್ವೇ ಕಾರಣ ನೀಡಿ ಕಡತಗಳು ಬಾಕಿ ಉಳಿಸಲಾಗಿದೆ. ಜಂಟಿ ಸರ್ವೇ ಆಗುವುದಿಲ್ಲ. ಇವರಿಗೆ ಹಕ್ಕು ಪತ್ರ ಬರುವುದಿಲ್ಲ ಎನ್ನುವ ಹಾಗಿದೆ ಈ ಸ್ಥಿತಿ. ಜಂಟಿ ಸರ್ವೇ ಮಾಡಿ ಅರ್ಹರಿಗೆ ಹಕ್ಕು ಪತ್ರ ನೀಡಿ ಉಳಿದಂತೆ ಜನವಸತಿ ಪ್ರದೇಶ ಹೊರಗೆ ಇಡುವ ನೋಟಿಫಿಕೇಶನ್ ತಿದ್ದುಪಡಿಯ ಹೆಜ್ಜೆಯನ್ನು ಇಡಲು ಶಾಸಕರು ಮುಂದಾಗಬೇಕು ಎಂದು ವಿನಂತಿಸುವೆ.

ಹಕ್ಕು ಪತ್ರ ಪಡೆದ ಈ ಹೊತ್ತಲಿ
ಮಹತ್ತರ ಕಾನೂನು ಜಾರಿ ಮಾಡಿದ ಮತ್ತು ತಿದ್ದುಪಡಿ ಮಾಡಿದ ಸಿದ್ದರಾಮಯ್ಯ ಮತ್ತು ಕಾಗೋಡು ರವರನ್ನು ನೆನೆಯುತ್ತಾ ವಿರಮಿಸುವೆ. ಚೋಮನಿಗೆ ಇಂದು ಆತನ ವಾಸಿಸುವ ಮನೆಗೆ ಹಕ್ಕು ಬಂತು.

ಅಧಿಕಾರ ಗುರಿಯಲ್ಲ ಮಾರ್ಗ ಮಾತ್ರ
ಅದು ಇರಲಿ ಬಿಡಲಿ ನಾವು ಜನರ ಜತೆ

      -ಜಿ. ಟಿ ಸತ್ಯನಾರಾಯಣ ಕರೂರು.
        16-04-2021

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *